ಉಡುಪಿ DC ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ!

0
Spread the love

ಉಡುಪಿ:- ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಲಕ್ಷ್ಮಿ ಅಲಿಯಾಸ್ ತೊಂಬಟ್ಟು ಲಕ್ಷ್ಮಿ ಇಂದು ಉಡುಪಿ ಜಿಲ್ಲಾಧಿಕಾರಿ ಮುಂದೆ ಶರಣಾಗಿದ್ದಾರೆ.

Advertisement

ಮೊದಲಿಗೆ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಲಕ್ಷ್ಮೀ ತೊಂಬಟ್ಟು ಆಗಮಿಸಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದಳು.

ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು. ಅಂತಿಮವಾಗಿ ಡಿಸಿ ಕಚೇರಿಯಲ್ಲಿ ಶರಣಾಗತಿ ಪಕ್ರಿಯೆ ಪೂರ್ಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಡಿವೈಎಸ್ಪಿ ಎಚ್‌ ಡಿ ಕುಲಕರ್ಣಿ, ಉಡುಪಿ ಡಿವೈಎಸ್ಪಿ ಡಿಟಿ ಪ್ರಭು ಹಾಗೂ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಜರಿದ್ದರು.

ಲಕ್ಷ್ಮೀ ಮೇಲೆ ಶಂಕರನಾರಾಯಣ/ಅಮಾಸೆಬೈಲ್ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ ಮೇಲೆ ಪ್ರಕರಣ ಇಲ್ಲ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here