ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ದುರ್ಮರಣ!

0
Spread the love

ಯಾದಗಿರಿ:- ಜಿಲ್ಲೆಯ ಮಾತಾಮಣಿಕೇಶ್ವರ ನಗರದಲ್ಲಿ ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಈ ದುರಂತಕ್ಕೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿ ಬಂದಿದೆ.

Advertisement

23 ವರ್ಷದ ಕಾಜಾ ಪಟೇಲ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕಾಜಾ ಪಟೇಲ್, ಯಾದಗಿರಿಯ ಸಹೋದರಿ ಮನೆಗೆ ತೆರಳಿ, ವಾಪಸ್ ಆಗುತ್ತಿದ್ದ ವೇಳೆ ತುಂಡರಿಸಿ ಬಿದ್ದಿದ್ದ ಹೈಟೆನ್ಷನ್ ವೈಯರ್ ನೋಡದೇ ಬೈಕ್‌ನಲ್ಲಿ ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ಕಳೆದ ಮೂರು ದಿನದ ಹಿಂದೆ ಬಿರುಗಾಳಿ ಮಳೆಗೆ ಹೈಟೆನ್ಷನ್ ವೈಯರ್ ತುಂಡರಿಸಿ ಬಿದ್ದಿದ್ದು, ತುಂಡರಿಸಿ ಬಿದ್ದಿದ್ದ ವೈಯರನ್ನು ಸರಿಪಡಿಸದೇ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here