ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ!

0
Spread the love

ಬೆಂಗಳೂರು:- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಬಂಡೀಪುರದಲ್ಲಿ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್‌ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ‌. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here