ಬೆಂಗಳೂರು: ನಿಖಿಲ್ ನಿಂತರೆ ಮಾತ್ರ ಕುಟುಂಬ ರಾಜಕೀಯ ಎನ್ನುತ್ತಾರೆ. ಇದು ಹೇಗೆ? ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಕಾಂಗ್ರೆಸ್ಗೆ ಪ್ರಶ್ನಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಪಕ್ಷ ಉಳಿಯಬೇಕಾದರೆ ನಿಖಿಲ್ ಸ್ಪರ್ಧೆ ಆಗಬೇಕು ಎಂದು ನಾವು ಹೇಳುತ್ತಿದ್ದೇವೆ. ನಿಖಿಲ್ ನಿಂತರೆ ದೇವೇಗೌಡರ ಕುಟುಂಬ ಮಾತ್ರ ಇರೋದಾ ಎನ್ನುತ್ತಾರೆ. ಅನಿತಾ ಕುಮಾರಸ್ವಾಮಿ ನಿಂತಿದ್ದರೂ ಇದೇ ಹೇಳಿದ್ದರು.
ಈಗ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕೊಡಿ ಎಂದರೆ ನಿಖಿಲ್ಗೆ ಭಯ ಎನ್ನುತ್ತಾರೆ. ವಯನಾಡ್ನಲ್ಲಿ ರಾಜೀನಾಮೆ ಕೊಟ್ಟು ಪ್ರಿಯಾಂಕಾ ನಿಂತರೆ ಅದು ಕುಟುಂಬ ರಾಜಕೀಯ ಅಲ್ಲ. ಇಲ್ಲಿ ಮಾತ್ರ ನಿಖಿಲ್ ನಿಂತರೆ ಕುಟುಂಬ ರಾಜಕೀಯ ಎನ್ನುತ್ತಾರೆ. ಇದು ಹೇಗೆ ಎಂದು ಕಾಂಗ್ರೆಸ್ಗೆ ಪ್ರಶ್ನಿಸಿದರು.
ಜೆಡಿಎಸ್ಗೆ ಇದು ಸಂದಿಗ್ಧ ಪರಿಸ್ಥಿತಿ. ನೋಡೋಣ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಸೋಲು, ಗೆಲುವು ಎರಡೂ ನೋಡಿದ್ದೇವೆ. ಜೆಡಿಎಸ್ ಮುಗಿದೇ ಹೋಯಿತು ಎಂದಾಗಲೂ ಜೆಡಿಎಸ್ ಗೆದ್ದಿದೆ. ಪಕ್ಷದ ಉಳಿವಿಗಾಗಿ ಇಂದು ಸಭೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.