Home Karnataka News ರೈತರ ಸಾಲ ಮನ್ನಾ ಇಲ್ಲ: ಸಂಸತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ರೈತರ ಸಾಲ ಮನ್ನಾ ಇಲ್ಲ: ಸಂಸತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

0
ರೈತರ ಸಾಲ ಮನ್ನಾ ಇಲ್ಲ: ಸಂಸತ್ತಿನಲ್ಲಿ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
Spread the love

ನವದೆಹಲಿ: ಕೇಂದ್ರ ಸರ್ಕಾರದ ಮುಂದೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದರು.

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ರೈತರಿಗೆ 3 ಲಕ್ಷ ರೂಪಾಯಿ ವರೆಗೆ ಸಬ್ಸಿಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಈ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದ ರೈತರಿಗೆ ಹೆಚ್ಚುವರಿ ಪ್ರೋತ್ಸಾಹಕಗಳೂ ಲಭ್ಯವಾಗುತ್ತವೆ ಎಂದು ಸಚಿವೆ ಹೇಳಿದರು.

ಇದಲ್ಲದೆ, ಭದ್ರತೆ ರಹಿತ ಅಲ್ಪಾವಧಿ ಕೃಷಿ ಸಾಲದ ಮಿತಿ 1.60 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಈ ಸೌಲಭ್ಯ ಪಶುಸಂಗೋಪನೆ ಸೇರಿದಂತೆ ಕೃಷಿಗೆ ಪೂರಕ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ ಎಂದು ಅವರು ವಿವರಿಸಿದರು.

ಆರ್‌ಬಿಐನ ಆದ್ಯತಾ ಕ್ಷೇತ್ರದ ಸಾಲ ಮಾರ್ಗಸೂಚಿಗಳ ಪ್ರಕಾರ ಕೃಷಿ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಸಮರ್ಪಕ ಹಣದ ಹರಿವು ಖಚಿತಪಡಿಸಲಾಗುತ್ತಿದೆ ಎಂದರು.

ಇದರ ಜೊತೆಗೆ, ಬೆಳೆ ವಿಮೆ ಯೋಜನೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ರೈತರಿಗೆ ನೇರ ಹಣ ವರ್ಗಾವಣೆ ಸೌಲಭ್ಯವೂ ಕಲ್ಪಿಸಲಾಗಿದೆ ಎಂದು ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.


Spread the love

LEAVE A REPLY

Please enter your comment!
Please enter your name here