ನನಗೆ ಎಷ್ಟೇ ಒತ್ತಡ ಇದ್ದರೂ ಮಂಡ್ಯ ಅಭಿವೃದ್ಧಿ ಮುಖ್ಯ: HD ಕುಮಾರಸ್ವಾಮಿ!

0
Spread the love

ಮಂಡ್ಯ:- ನನಗೆ ಎಷ್ಟೇ ಒತ್ತಡ ಇದ್ದರೂ ಮಂಡ್ಯ ಅಭಿವೃದ್ಧಿ ಮುಖ್ಯ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಹೊಡಕಹಳ್ಳಿ ಗ್ರಾಮದ ಬಳಿ ಚನ್ನಪಟ್ಟಣ-ಮೈಸೂರು ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ಅವರು ಮಾತನಾಡಿದರು. ಜನರ ಆರ್ಶೀವಾದದಿಂದ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವನಾಗಿದ್ದೇನೆ. ದೊಡ್ಡ ಮಟ್ಟಿನ ಆಸೆ ಇಟ್ಟುಕೊಂಡು ಮಂಡ್ಯ ಜನರು ನನಗೆ ಆರ್ಶೀವಾದ ಮಾಡಿದ್ದೀರಿ. ಎಷ್ಟೇ ಕೆಲಸದ ಒತ್ತಡ ಇದ್ದರೂ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಿದ್ದೇನೆ, ಜನರ ಆಸೆಯನ್ನು ಈಡೇರಿಸುತ್ತೇನೆ ಎಂದರು.

ಮಂಡ್ಯ ಜನರು ನನ್ನ ಮೇಲೆ‌ ಭರವಸೆ ಇಟ್ಟು ಗೆಲ್ಲಿಸಿದ್ದಾರೆ. ನಾನು ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಯುವ ಜನರಿಗೆ ಕೆಲಸ ರೂಪಿಸಲು ಇಂದು ಸಹ ಸಭೆ ಮಾಡಿದ್ದೇನೆ. ಆ ನಿಟ್ಟಿನಲ್ಲಿ ನನ್ನ‌ ಇಲಾಖೆಯ ಮೂಲಕ ಸುದೀರ್ಘ ಕೆಲಸ ಮಾಡುತ್ತಿದ್ದೇನೆ ಎಂದರು.

ಇನ್ನೂ ರಾಜ್ಯದಲ್ಲಿ ಬಾಣಂತಿಯರ ಸಾವು ನಿರಂತರವಾಗಿ ನಡೆಯುತ್ತಿದೆ, ಮಂಡ್ಯ ಲೋಕಸಭಾ ಕ್ಷೇತ್ರದ 8 ತಾಲೂಕಿನ ಪ್ರತಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಮಾಡಿಸಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಕೂಡ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here