ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ: ಸಿ.ಟಿ.ರವಿ

0
Spread the love

ಬೆಂಗಳೂರು: ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಇದೆ. ನಾವು ಯಾವತ್ತೂ ನಮ್ಮ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿಲ್ಲ. ಸೈನಿಕರ ಕ್ರೆಡಿಟ್ ಕಿತ್ತುಕೊಳ್ಳುವ ಕೆಲಸವನ್ನು ಯಾರೂ ಮಾಡಿಲ್ಲ,

Advertisement

ಯುದ್ಧರಂಗಕ್ಕೆ ಹೋದವರು ಸೈನಿಕರೇ ಎಂದರು. ಕಾಂಗ್ರೆಸ್ಸಿನವರು ಹಿಂದೆ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದೀರಲ್ಲವೇ ಎಂದು ಕೇಳಿದರು. ಆಗ ಸೈನಿಕರ ಕುರಿತು ಅಪನಂಬಿಕೆ ವ್ಯಕ್ತಪಡಿಸಿದ್ದೀರಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ನಿಮಗೆ ಆಗ ಸೈನಿಕರ ಬಗ್ಗೆ ನಂಬಿಕೆ ಎಲ್ಲಿ ಹೋಗಿತ್ತು? ಎಂದರಲ್ಲದೆ, ನಾವು ನಮ್ಮ ಸೈನಿಕರನ್ನು ನಂಬುತ್ತೇವೆ; ಅವರ ಬಗ್ಗೆ ನಮಗೆ ಹೆಮ್ಮೆಯೂ ಇದೆ ಎಂದು ನುಡಿದರು. 1962ರ ಭಾರತ- ಚೀನಾ ಯುದ್ಧವನ್ನು ಹೊರತುಪಡಿಸಿ ಇನ್ಯಾವುದೇ ಯುದ್ಧದಲ್ಲಿ ನಮ್ಮ ಸೈನಿಕರು ಯುದ್ಧಭೂಮಿಯಲ್ಲಿ ಸೋತಿಲ್ಲ ಎಂದು ವಿವರಿಸಿದರು.


Spread the love

LEAVE A REPLY

Please enter your comment!
Please enter your name here