ಡಿಕೆ ಶಿವಕುಮಾರ್ ವಾರ್ನಿಂಗ್’ಗೆ ಯಾರೂ ಹೆದರಿ ಕೂರೋದಿಲ್ಲ: ನಿಖಿಲ್ ಕುಮಾರಸ್ವಾಮಿ

0
Spread the love

ಬೆಂಗಳೂರು: ಡಿಕೆ ಶಿವಕುಮಾರ್ ವಾರ್ನಿಂಗ್‌’ಗೆ ಯಾರೂ ಹೆದರಿ ಕೂರೋದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಸರ್ಕಾರಗಳು ಬಂದು ಹೋಗಿವೆ.

Advertisement

ರಾಜ್ಯದ ಜನ ಅನೇಕ ಸಿಎಂಗಳನ್ನ ನೋಡಿದ್ದಾರೆ. ಆದರೆ ಇಂತಹ ಹೇಳಿಕೆ ಯಾರೂ ಕೊಟ್ಟಿಲ್ಲ. ಹೀಗೆ ಮಾತಾಡಿ ಕಲಾವಿದರನ್ನ ಪ್ರಚೋದನೆ ಮಾಡೋದು ಸರಿಯಲ್ಲ. ಅವರ ವಾರ್ನಿಂಗ್ಗೆ ಯಾರೂ ಹೆದರಿ ಕೂರೋದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸ್ವಾಭಿಮಾನಕ್ಕೆ ಧಕ್ಕೆ ಆದ ಸಮಯದಲ್ಲಿ ಕಲಾವಿದರು ಹೊರಗೆ ಬಂದು ಮುಂದಿನ ದಿನಗಳಲ್ಲಿ ಮಾತನಾಡುತ್ತಾರೆ. ಕಲಾವಿದರು ಗೌರವದ ಬದುಕು ಕಟ್ಟಿಕೊಂಡಿದ್ದಾರೆ. ಕಷ್ಟಪಟ್ಟು ಸಿನಿಮಾ ಮಾಡುತ್ತಾರೆ. ಸಾಲ ಮಾಡಿ ಸಿನಿಮಾ ಮಾಡುತ್ತಾರೆ. ಕಲಾವಿದರ ಮೇಲೆ ದಬ್ಬಾಳಿಕೆ, ದೌರ್ಜನ್ಯದ ಮಾತು ಆಡೋದು ರಾಜ್ಯದ ಜನತೆ ಸಹಿಸೋದಿಲ್ಲ ಎಂದು ಹರಿಹಾಯ್ದರು.


Spread the love

LEAVE A REPLY

Please enter your comment!
Please enter your name here