ಬೆಂಗಳೂರು: ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವ ಪ್ರಸ್ತಾವವೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ. ನಾನು ಹೇಳುತ್ತೇನೆ, ಮುಖ್ಯಮಂತ್ರಿ ಅವರು ರಾಜೀನಾಮೆ ನೀಡುವ ಪ್ರಸ್ತಾವವೇ ಇಲ್ಲ. ಇದು ಬಿಜೆಪಿ ಜೆಡಿಎಸ್ ಷಡ್ಯಂತ್ರ ಅಷ್ಟೆ.
Advertisement
ಐದು ಗ್ಯಾರಂಟಿ ಯೋಜನೆಗಳು ಹಾಗೂ ಕಾಂಗ್ರೆಸ್ ಬೆಳವಣಿಗೆ ವಿರೋಧ ಪಕ್ಷಗಳಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಮುಖ್ಯಮಂತ್ರಿ ಕಾಂಗ್ರೆಸ್ ಪಕ್ಷದಿಂದ ಇದ್ದಾರೆ. ರಾಜೀನಾಮೆ ನೀಡುವ ಪ್ರಸಂಗ ಬರಲ್ಲ. ದೆಹಲಿಯಿಂದ ಹಳ್ಳಿಯವರೆಗೂ ಸಿಎಂ ಪರ ಇದ್ದೇವೆ. ಪ್ರಧಾನಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಕಳಂಕಿತ ಮಂತ್ರಿಗಳನ್ನು ಕ್ಯಾಬಿನೆಟ್ನಲ್ಲಿ ಯಾಕೆ ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.