HomeKarnataka Newsಬಿ. ನಾಗೇಂದ್ರ ಸಚಿವರಾಗಿರುವವರೆಗೆ ಅಧಿವೇಶನಕ್ಕೆ ಅವಕಾಶವಿಲ್ಲ; ಕೂಡಲೇ ರಾಜೀನಾಮೆ ಪಡೆಯುವಂತೆ ಆರ್‌. ಅಶೋಕ್‌ ಆಗ್ರಹ

ಬಿ. ನಾಗೇಂದ್ರ ಸಚಿವರಾಗಿರುವವರೆಗೆ ಅಧಿವೇಶನಕ್ಕೆ ಅವಕಾಶವಿಲ್ಲ; ಕೂಡಲೇ ರಾಜೀನಾಮೆ ಪಡೆಯುವಂತೆ ಆರ್‌. ಅಶೋಕ್‌ ಆಗ್ರಹ

For Dai;y Updates Join Our whatsapp Group

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರು ಸಚಿವರಾಗಿರುವವರೆಗೆ ವಿಧಾನಸಭೆ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೂಡಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್‌. ಅಶೋಕ್‌, ಸದನದಲ್ಲಿ ಪ್ರತಿಯೊಂದು ವಿಚಾರಕ್ಕೂ ಮುಖ್ಯಮಂತ್ರಿಯೇ ಉತ್ತರ ನೀಡುವುದಾದರೆ ಸಚಿವರು ಏಕೆ ಬೇಕು ಎಂದು ಪ್ರಶ್ನಿಸಿದರು. ಜನರ ತೆರಿಗೆ ಹಣದಲ್ಲಿ ಸಚಿವರಿಗೆ ಕಾರು, ಮನೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತದೆ. ಇದು ಚಕ್ರಾಧಿಪತ್ಯವಲ್ಲ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸಂವಿಧಾನ ನೀಡಿರುವ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿಯೇ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವುದಾದರೆ ಸಚಿವರನ್ನು ಅಧಿವೇಶನದಿಂದ ಹೊರಗಿಡಲಿ ಎಂದು ವ್ಯಂಗ್ಯವಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ವಿಧಾನಸಭೆ ಅಧಿವೇಶನದಲ್ಲಿ ಬಿಡದಿ ಟೌನ್‌ಶಿಪ್‌, ಕೆಪಿಎಸ್‌ಸಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆಯಾಗಬೇಕಿದೆ. ಆದರೆ, ಅದಕ್ಕೂ ಮುನ್ನ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಆರ್‌. ಅಶೋಕ್‌ ಒತ್ತಾಯಿಸಿದರು.

ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಆರಂಭಿಸಲಿದೆ ಎಂದು ಆರ್‌. ಅಶೋಕ್‌ ತಿಳಿಸಿದರು. ಪ್ರತಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಒಳಗೂ ಹಾಗೂ ಹೊರಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಳೆದ ಬಾರಿ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಿದ್ದು ಏಕೆ? ಇದೀಗ ಮತ್ತೆ ಅವರನ್ನು ಸಚಿವರನ್ನಾಗಿ ಮಾಡಿದ್ದು ಏಕೆ? ಎಂಬುದಕ್ಕೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಬಿ. ನಾಗೇಂದ್ರ ಅವರು ಇನ್ನೂ ಆರೋಪಿಯಾಗಿದ್ದಾರೆ ಎಂದು ಹೇಳಿದ ಆರ್‌. ಅಶೋಕ್‌, ಅವರ ವಿರುದ್ಧ ವಿವಿಧ ತನಿಖಾ ಸಂಸ್ಥೆಗಳಲ್ಲಿ ಪ್ರಕರಣಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಸಿಬಿಐನಲ್ಲಿ ಮೂರು ಪ್ರಕರಣಗಳು, ಲೋಕಾಯುಕ್ತದಲ್ಲಿ ಐದು ಪ್ರಕರಣಗಳು, ಎಸ್‌ಐಟಿಯಲ್ಲಿ ಒಂದು ಪ್ರಕರಣ ಹಾಗೂ ಕಾರವಾರದಲ್ಲಿ ಸಿಐಡಿ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳು ವಿಚಾರಣೆಯಲ್ಲಿವೆ ಎಂದು ಅವರು ಹೇಳಿದರು. ಚೆನ್ನೈನಲ್ಲಿಯೂ ಪ್ರಕರಣವೊಂದು ನಡೆಯುತ್ತಿದೆ ಎಂದು ಉಲ್ಲೇಖಿಸಿದ ಆರ್‌. ಅಶೋಕ್‌, ಇಂತಹ ಪರಿಸ್ಥಿತಿಯಲ್ಲಿ ನಾಗೇಂದ್ರ ಅವರು ವಿಧಾನಸೌಧಕ್ಕೆ ಯಾವಾಗ ಬರುತ್ತಾರೆ ಮತ್ತು ಇಲಾಖೆಯ ಕೆಲಸವನ್ನು ಯಾವಾಗ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವನ್ನು ಪ್ರಸ್ತಾಪಿಸಿದ ಆರ್‌. ಅಶೋಕ್‌, ₹187 ಕೋಟಿ ಹಗರಣದಲ್ಲಿ ₹89 ಕೋಟಿ ಅಕ್ರಮ ನಡೆದಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದರು ಎಂದು ಹೇಳಿದರು.

ದಲಿತರ ಹಣಕ್ಕೆ ಸಂಬಂಧಿಸಿದ ಅಕ್ರಮದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಸಚಿವ ಸಂಪುಟದಲ್ಲಿ ಮುಂದುವರಿಸಿದರೆ ಇಡೀ ಸಚಿವ ಸಂಪುಟವೇ ಕಳಂಕಿತವಾಗುತ್ತದೆ ಎಂದು ಆರ್‌. ಅಶೋಕ್‌ ಆರೋಪಿಸಿದರು.

ಬಿ. ನಾಗೇಂದ್ರ ಅವರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಿರಬಹುದು ಎಂಬ ಅನುಮಾನವಿದೆ ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img