ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆ ಸಮುದ್ರ ಮಂಥನ ನಡೆಸಲಿದ್ದಾರೆ. ಈ ವೇಳೆ ನಾಯಕತ್ವ ಬದಲಾವಣೆ, ಪವರ್ ಶೇರಿಂಗ್ ಕುರಿತು ಚರ್ಚೆಗಳು ನಡೆಯುತ್ತಿದ್ದು, ಇದೀಗ ಇದಕ್ಕೆ ಹೈಕಮಾಂಡ್ ಪುಲ್ ಸ್ಟಾಪ್ ಇಟ್ಟಿದೆ. ಹೌದು ರಾಹುಲ್ ಗಾಂಧಿ ಭೇಟಿಗೂ ಮುನ್ನ ನವದೆಹಲಿಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದರು.
ರಾಹುಲ್ ಗಾಂಧಿ ಕೂಡ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಈ ಸಂದೇಶ ಸಿಕ್ಕ ನಂತರವೇ ಸಿದ್ದರಾಮಯ್ಯ ಗಟ್ಟಿ ದನಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಮಾತುಗಳನ್ನಾಡಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗುರುವಾರದ ಭೇಟಿ ವೇಳೆಯೂ ರಾಹುಲ್ ಗಾಂಧಿ ರವಾನಿಸಿದ್ದಾರೆ ಎನ್ನಲಾಗಿದೆ.
ಸದ್ಯದ ಮಟ್ಟಿಗೆ ನಾಯಕತ್ವ ಬದಲಾವಣೆ ಇಲ್ಲ. ಸಂಪುಟ ಪುನರ್ ರಚನೆ ಕೂಡ ಇಲ್ಲ ಎಂಬ ಸಂದೇಶ ಸಿದ್ದರಾಮಯ್ಯಗೆ ಹೈಕಮಾಂಡ್ ನಾಯಕರಿಂದ ಬಂದಿದೆ. ನವಂಬರ್ ಬಳಿಕವೇ ಸಚಿವ ಸಂಪುಟ ಗುಣ ರಚನೆ ಮಾಡಲಾಗುವುದು ಎಂದು ಹೈಕಮಾಂಡ್ ತಿಳಿಸಿದೆ ಎನ್ನಲಾಗಿದೆ.