HomeGadag Newsನೀರು ಇಲ್ಲ, ಬಿಲ್ ಯಾಕೆ?

ನೀರು ಇಲ್ಲ, ಬಿಲ್ ಯಾಕೆ?

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಲವು ತಿಂಗಳಿಂದ ಸಮರ್ಪಕ ಕುಡಿಯುವ ನೀರು ಸರಬರಾಜಾಗದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ, “ಪಟ್ಟಣದ ಹಲವು ವಾರ್ಡ್‌ಗಳಿಗೆ ತಿಂಗಳಿನಿಂದ ನೀರು ಸರಬರಾಜಾಗಿಲ್ಲ. ಅಧಿಕಾರಿಗಳನ್ನು ಪ್ರಶ್ನಿಸಿದರೆ ಬೇಜವಾಬ್ದಾರಿಯುತ ಉತ್ತರ ನೀಡುತ್ತಿದ್ದಾರೆ. ನೀರು ಕೊಡಲು ಆಗದಿದ್ದರೆ ಜನರಿಂದ ಬಿಲ್ ಏಕೆ ವಸೂಲಿ ಮಾಡುತ್ತಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರು ಹಾಗೂ ಬೋರ್‌ವೆಲ್ ನೀರಿನ ಕೊರತೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಪುರಸಭೆ ಎದುರು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುಮಾರು ಒಂದು ಗಂಟೆ ಕಾಲ ನಡೆದ ಪ್ರತಿಭಟನೆಯ ಬಳಿಕ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ನೀರಿನ ಸಮಸ್ಯೆ ಇರುವ ವಾರ್ಡ್‌ಗಳಿಗೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಹಾಗೂ ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಲೋಕೇಶ ಸುತಾರ, ಗೌರವಾಧ್ಯಕ್ಷ ಪ್ರವೀಣ ಗಾಣಗೇರ, ಬಸವರಾಜ ಮಲ್ಲೂರ, ಅರುಣ ಮೆಕ್ಕಿ, ಗಂಗಾಧರ ಕರ್ಜಕಣ್ಣವರ, ಗಂಗಾಧರ ಕೊಂಚಿಗೇರಿಮಠ, ಮಂಜುನಾಥ ಕೊಡಳ್ಳಿ, ಫಕ್ಕೀರೇಶ ಅಣ್ಣಿಗೇರಿ, ಚನ್ನಬಸಯ್ಯ ಗಡ್ಡದೇವರಮಠ, ಶಂಕರಗೌಡ ಪಾಟೀಲ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಅತ್ತಿಗೇರಿ, ಹುಲಿಗೆಮ್ಮ ಮೇವುಂಡಿ, ಜಯಮ್ಮ ತುಪ್ಪದ, ಲಕ್ಷ್ಮಕ್ಕ ಪಶುಪತಿಹಾಳ, ರೇಷ್ಮಾ ಜಾದವ, ಸಾವಕ್ಕ ಮಳ್ಳೋಳ್ಳಿ, ಕೆಂಚಮ್ಮ ಶೇರಸೂರಿ, ರತ್ನವ್ವ ವಗ್ಗರ, ರಜಿಯಾ ಮಕಾನದಾರ, ರೇಣಕ್ಕ ಮಲ್ಲೂರ, ಲಕ್ಷ್ಮವ್ವ ಗದ್ದಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

“ನೀರು ಸರಬರಾಜು ಮಾಡದಿದ್ದರೆ ಜನರು ನೀರಿನ ಬಿಲ್ ಕಟ್ಟುವುದಿಲ್ಲ. ಮೊದಲು ನೀರು ಬಿಡಿ, ನಂತರ ಬಿಲ್ ಕೇಳಿ.”
ಬಸವರಾಜ ಹೊಗೆಸೊಪ್ಪಿನ

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!