ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ಊರಿಗೆ ಒಂದು ಪಂಚಾಯತಿ ಇರಬೇಕು, ಒಂದು ಶಾಲೆ ಹಾಗೂ ಒಂದು ಸಹಕಾರ ಸಂಘ ಇರಬೇಕು ಎಂದು ಹೇಳಿದ್ದರು. ಅದರಂತೆ ನಮ್ಮ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮ ಪಂಚಾಯ್ತಿಗೆ ಬಂಧಿಸಿದಂತೆ ವಿವಿಯನ್ನೇ ಸ್ಥಾಪಿಸಲಾಗಿದೆ.
ಸಬರಮತಿ ಆಶ್ರಮದ ಪ್ರತಿರೂಪವನ್ನೇ ಇಲ್ಲಿ ನಿರ್ಮಾಣ ಮಾಡಿದ್ದಾರೆ.ಇದೊಂದು ಪ್ರವಾಸಿ ತಾಣವಾಗಿದೆ. ಗಾಂಧಿಯವರ ಹೆಸರು ಹೇಗೆ ಶಾಶ್ವತವಾಗಿರುತ್ತದೆಯೋ, ಅದೇ ರೀತಿ ಕಾಂಗ್ರೆಸ್ ಪಕ್ಷ ಶಾಶ್ವತವಾಗಿರುತ್ತದೆ. ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಇನ್ನೂ ನಮ್ಮ ಎಲ್ಲಾ ನ್ಯಾಯಾಲಗಳ ಜತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ.
ಅದೇ ಆತ್ಮಶಕ್ತಿಯ ನ್ಯಾಯಾಲಯ. ಈ ನ್ಯಾಯಾಲಯದಂತೆ ನಾವು ನಡೆಯಬೇಕು. ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಜನರ ಬದುಕು ಸುಧಾರಿಸಲು ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.