ಬೀದರ್: ನಮ್ಮ ಕಾರ್ಯಕರ್ತರೇನು ಬಳೆ ತೊಟ್ಟುಕೊಂಡು ನಿಂತಿಲ್ಲ, ಅಧಿಕಾರ ಶಾಶ್ವತ ಅಲ್ಲ ಎನ್ನುವುದನ್ನು ನೆನಪು ಮಾಡಿಕೊಡಬೇಕು. ದುರಹಂಕಾರದಲ್ಲಿ ಮಾತನಾಡಿದವನಿಗೆ ಮುಂದಿನ ದಿನಗಳಲ್ಲಿ ಉತ್ತರ ಕೊಡೋಣ ಎಂದು ಕಾಂಗ್ರೆಸ್ ಎಮ್ಎಲ್ಸಿ ಚಂದ್ರಶೇಖರ್ ಪಾಟೀಲ್ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಆತ ಅಧಿಕಾರ ಶಾಶ್ವತ ಎನ್ನುವ ದುರಹಂಕಾರದಲ್ಲಿ ಮಾತನಾಡಿದ್ದಾನೆ. ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿದ್ದಂತೆ ಕಾಣಿಸುತ್ತದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸುತ್ತೇನೆ. ನಮ್ಮ ಕಾರ್ಯಕರ್ತರೇನು ಬಳೆ ತೊಟ್ಟುಕೊಂಡು ನಿಂತಿಲ್ಲ. ಅಧಿಕಾರ ಶಾಶ್ವತ ಅಲ್ಲ ಎನ್ನುವುದನ್ನು ನೆನಪು ಮಾಡಿಕೊಡಬೇಕು.
ದುರಹಂಕಾರದಲ್ಲಿ ಮಾತನಾಡಿದವನಿಗೆ ಮುಂದಿನ ದಿನಗಳಲ್ಲಿ ಉತ್ತರ ಕೊಡೋಣ ಎಂದರು. ಅಷ್ಟೇ ಅಲ್ಲ, ಬಿಜೆಪಿ ಕಾರ್ಯಕರ್ತರು ಅಧಿಕಾರ ಇಲ್ಲದೇ ಇರುವಾಗಲೇ ಹೆದರಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಇಂತಹ ಪುಡಾರಿಗಳಿಗೆಲ್ಲ ನಾವು ಹೆದರಲ್ಲ. ಹೆಸರು ಹೇಳದೆ ಕಾಂಗ್ರೆಸ್ ಎಮ್ಎಲ್ಸಿ ಚಂದ್ರಶೇಖರ್ ಪಾಟೀಲ್ ವಿರುದ್ಧ ಕಿಡಿಕಾರಿದರು.