ಬೆಂಗಳೂರು: ದಾಖಲೆ ತಿದ್ದುವಂತ ಪರಿಸ್ಥಿತಿ ನಮಗೆ ಬಂದಿಲ್ಲ. ಅಂತಹ ನೀಚ ಕೆಲಸಕ್ಕೆ ನಾವ್ಯಾರೂ ಇಳಿದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ದಾಖಲೆ ತಿದ್ದುವಂತ ಪರಿಸ್ಥಿತಿ ನಮಗೆ ಬಂದಿಲ್ಲ. ಅಂತಹ ನೀಚ ಕೆಲಸಕ್ಕೆ ನಾವ್ಯಾರೂ ಇಳಿದಿಲ್ಲ. ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಇದೆ.
ಅಲ್ಲಿ ಬೇರೇನೋ ಆಗಿದೆ ಅನ್ನೋದು ಅಲ್ಲ. ಇದು ನಮ್ಮ ಪೋರ್ಟ್ ಪೊಲೀಯೋ ಅಲ್ಲ. ಏನು ತಪ್ಪಾಗೋದೆ ಇಲ್ವಾ? ಜಮೀನಿಗೆ ಪರಿಹಾರ ನೀಡಿಲ್ಲ. ಅಷ್ಟೇ ವಿಸ್ತೀರ್ಣದ ಜಮೀನು ಎಂದು ಹೇಳಿದ್ದಾರೆ. ಅಲ್ಲಿ ವರ್ಷ ತಪ್ಪಾಗಿರಬಹುದು. ಇಲ್ಲವೇ ಸಮಾನಾಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ ಎಂದು ಬಹಳ ಸ್ಪಷ್ಟವಾಗಿಯೇ ಹೇಳಿದ್ದಾರೆ. ವಿಜಯನಗರ ಲೇಔಟ್ ಅಲ್ಲಿ ಅಂತ ಎಲ್ಲಿ ಬರೆದಿದ್ದಾರೆ? ಸಮಾನಾಂತರ ಜಾಗದಲ್ಲಿ ಅಂತ ಬರೆದಿದ್ದಾರೆ. ಮಾಧ್ಯಮಗಳು ಎಲ್ಲವನ್ನು ನೋಡಿ ಹಾಕಬೇಕು ಎಂದು ಮಾಧ್ಯಮಗಳ ಮೇಲೆ ಅನುಮಾನ ವ್ಯಕ್ತಪಡಿಸಿದರು.