Ahmedabad Plane Crash: ಟೇಕಾಫ್’ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ: ಸುಮಿತ್ ಸಭರ್ವಾಲ್ ಕೊನೆ ಕ್ಷಣದ ಆಡಿಯೋ ಲಭ್ಯ

0
Spread the love

ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನದಲ್ಲಿ ಇದ್ದವರಷ್ಟೇ ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಇದ್ದವರು ಮತ್ತು ಸ್ಥಳೀಯ ನಿವಾಸಿಗಳು ಸಹ ಸಾವನ್ನಪ್ಪಿದ್ದಾರೆ. ಸದ್ಯ, ಪೈಲಟ್ ಸುಮಿತ್ ಸಭರ್ವಾಲ್ ಅವರ ಆಡಿಯೋ ಸಂದೇಶ ರಿವೀಲ್ ಆಗಿದೆ. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆಮೇಡೇಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.

Advertisement

ಅಪಘಾತಕ್ಕೀಡಾದ ವಿಮಾನವನ್ನು ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಮತ್ತು ಕಮಾಂಡರ್ ಕ್ಲೈವ್ ಕುಂದರ್ ನಿರ್ವಹಿಸುತ್ತಿದ್ದರು. ವಿಮಾನವು ಅಹಮದಾಬಾದ್ರನ್​​​ವೇ 23 ರಿಂದ ಮಧ್ಯಾಹ್ನ 1:39 ಕ್ಕೆ ಹೊರಟಿತ್ತು. ಕೆಲವೇ ನಿಮಿಷಗಳಲ್ಲಿ ಎಟಿಸಿಗೆಮೇಡೇಸಂದೇಶ ಬಂದಿತು.

ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು ಬದುಕುಳಿಯುವುದಿಲ್ಲಎಂದು ಹೇಳಿದ್ದರು.

ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್​​​ಪೋರ್ಟ್ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು.

 


Spread the love

LEAVE A REPLY

Please enter your comment!
Please enter your name here