ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ.ಅಗಡಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದಿಂದ ಸಮೀಪದ ಹೂವಿನಶಿಗ್ಲಿ ಗುರುಕುಲ ಆಶ್ರಮದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
ಈ ವೇಳೆ ಶ್ರೀಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ಮಾತನಾಡಿ, ಶಿಕ್ಷಣ, ಅನ್ನ, ಆಶ್ರಯ ತ್ರಿವಿಧ ಸೇವೆ ಮಾಡುತ್ತಿರುವ ಮಠ-ಮಾನ್ಯಗಳಿಗೆ ಭಕ್ತರ, ಸೇವಾ ಸಂಸ್ಥೆಗಳ ಸಹಾಯ-ಸಹಕಾರ ಅಗತ್ಯವಾಗಿದೆ. ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ ಸೇವೆ ಮಾಡುತ್ತಿರುವ ಲಕ್ಷ್ಮೇಶ್ವರದ ಅಗಡಿ ಮನೆತನದ ಕಾರ್ಯ ಶ್ಲಾಘನೀಯ. ಪ್ರತಿ ವರ್ಷ ಅಗಡಿ ಇಂಜಿನೀಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಮಠದ ಗುರುಕುಲದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದ್ದಾರೆ. ಎನ್ಎಸ್ಎಸ್ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಪರಶುರಾಮ ಬಾರಕಿ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಎನ್.ಹಯವದನ, ಎನ್ಎಸ್ಎಸ್ ಅಧಿಕಾರಿ ಪ್ರೊ. ಸೊಮಶೇಖರ ಕೆರಿಮನಿ, ಡಾ. ಆರ್.ಎಂ. ಪಾಟೀಲ, ಡಾ. ಸಪ್ನಾ ಗೌಡರ, ಡಾ. ಗಿರೀಶ ಯತ್ನಳ್ಳಿ, ಪ್ರೊ. ಎಸ್.ಎಫ್. ಕೊಡ್ಲಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು. ಪ್ರಶಾಂತಗೌಡ ಪಾಟೀಲ, ಆರ್.ವಿ. ಬಡಿಗೇರ, ಹೆಚ್.ಎನ್. ಶರಸೂರಿ ನಿರ್ವಹಿಸಿದರು.