ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತಾಶ್ರಯದಲ್ಲಿ ಗದಗ ತಾಲೂಕಿನ ಚಿಕ್ಕೊಪ್ಪ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹುಯಿಲಗೋಳ ಗ್ರಾ.ಪಂ ಸದಸ್ಯರಾದ ಮಹೇಶಗೌಡ ಪಾಟೀಲ ಮಾತನಾಡಿ, ಹಿಂದಿನ ಪೀಳಿಗೆಯವರು ಉತ್ತಮ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯು ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇದರಿಂದ ಮಕ್ಕಳ ಮೇಲೆ ನೇರ ಪ್ರಭಾವ ಬೀರಿ ಮೇಲಿಂದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಪೋಷಕರು ಇದರ ಸದುಪಯೋಗಪಡಿಸಿಕೊಂಡು ಸರಿಯಾದ ಆಹಾರ ಪದ್ದತಿಯನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು.
ರವೀಂದ್ರ ಕಳಸಣ್ಣವರ, ಸಮುದಾಯ ಆರೋಗ್ಯ ಅಧಿಕಾರಿ ಡಾ. ಮಹೇಶ ಭಜಂತ್ರಿ, ನೀಲವ್ವ ಕಡೇಯವರ, ಆರೋಗ್ಯ ಸಂರಕ್ಷಣಾಧಿಕಾರಿ ಡಾ. ನಚಿದಾ, ರಮೇಶ ಕಡೇಯವರ, ಕಲ್ಮೇಶ ವಡ್ಡಿನ, ನೀಲನಗೌಡ ಪಾಟೀಲ ಮುಂತಾದವರು ವೇದಿಕೆಯಲ್ಲಿದ್ದರು.
ಗರ್ಭಿಣಿಯರ ಸೀಮಂತ ಕಾರ್ಯಕ್ರಮ, ಪೌಷ್ಠಿಕ ಆಹಾರದ ಪ್ರಾತ್ಯಕ್ಷಿಕೆ, ಮಕ್ಕಳ ಜನ್ಮದಿನ ಆಚರಣೆ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ವಿಶೇಷ ನೊಂದಣಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂರಕ್ಷಣಾಧಿಕಾರಿ ರಾಜೇಶ್ವರಿ ಮೇಟಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಕಮತ್, ವಲಯ ಮೇಲ್ವೀಚಾರಕಿ ಭುವನೇಶ್ವರಿ ಕುಂಬಾರ, ಪೋಷಣ ಅಭಿಯಾನ ಜಿಲ್ಲಾ ಸಂಯೋಜಕಿ ಸಂಗೀತಾ ಹೂಗಾರ, ಜಿಲ್ಲಾ ಸಹಾಯಕ ಪವನ ಕಾಟೀಗರ, ಮಿಶನ್ ಶಕ್ತಿ ಯೋಜನೆಯ ರಾಜೇಶ್ವರಿ ಉಪ್ಪಿನ್, ಮಧುಶ್ರೀ ಉಪ್ಪಾರ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿಜಯಲಕ್ಷ್ಮಿ ಭೋವಿ ಪ್ರಾರ್ಥಿಸಿದರು. ಜಿಲ್ಲಾ ಸಂಯೋಜಕರಾದ ಶ್ರೀಧರ ಪೂಜಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ, ಸೆಪ್ಟೆಂಬರ್ ಮಾಹೆಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದರ ಮೂಲಕ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಉದ್ಘಾಟಿಸಲಾಗಿದೆ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪೌಷ್ಠಿಕ ಕೈತೋಟಗಳನ್ನು ನಿರ್ಮಿಸಿ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯವನ್ನು ನಾವು ಉತ್ತಮವಾಗಿರಿಸಿಕೊಳ್ಳಬಹುದು ಎಂದು ಹೇಳಿದರು.