HomeGadag Newsಮಾರ್ಚ್ 15ರಂದು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಾರ್ಚ್ 15ರಂದು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಬೆಂಗಳೂರು, ಜಿಲ್ಲಾ ಶಾಖೆ ಗದಗ ವತಿಯಿಂದ ಎರಡನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಗದಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾರ್ಚ್ 15ರಂದು ನಗರದ ಭೀಮಸೇನ ಜೋಶಿ ಕಲಾರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಎಸ್. ಷಡಕ್ಷರಿ ಅವರು 2ನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಗದಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹಿಂದಿನ ರಾಜ್ಯಾಧ್ಯಕ್ಷರಿಗಿಂತ ಕ್ರಿಯಾಶಿಲರಾಗಿ ಸೇವೆ ಸಲ್ಲಿಸಿದ ಕೀರ್ತಿ ಸಿ.ಎಸ್. ಷಡಕ್ಷರಿ ಅವರಿಗೆ ಸಲ್ಲುತ್ತದೆ. ರಾಜ್ಯದ ಎಲ್ಲ ನೌಕರರನ್ನು ಮನವೊಲಿಸಿ ಯಶಸ್ವಿಯಾಗಿ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯದ್ಯಕ್ಷ ಸಿ.ಎಸ್. ಷಡಕ್ಷರಿ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ವಹಿಸಿಕೋಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಡಿ.ಟಿ. ವಾಲ್ಮೀಕಿ, ಎಂ.ಎಂ. ನಿಟ್ಟಾಲಿ, ಡಾ. ಬಸವರಾಜ ಬಳ್ಳಾರಿ, ಡಿ.ಎಸ್. ತಳವಾರ, ಸಿದ್ದಪ್ಪ ಲಿಂಗದಾಳ, ಮಾರುತಿ ಮಂಗಳಾಪುರ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ನಗರದ ಮುಳಗುಂದ ನಾಕಾದಿಂದ ಧೋಬಿ ಘಾಟ್, ಟಿಪ್ಪು ಸರ್ಕಲ್ ಮಾರ್ಗವಾಗಿ ಬೈಕ್ ರ‍್ಯಾಲಿ ನಡೆಯಲಿದ್ದು, ವಿವಿಧ ಕಲಾ ತಂಡಗಳು ಭಾಗವಹಿಸಲಿವೆ. ನಂತರ ಜಿಲ್ಲಾಧಿಕಾರಿ ಕಛೇರಿಯಿಂದ ಭೀಮಸೇನ ಜೋಶಿ ರಂಗಮಂದಿರದವರೆಗೆ ಕುಂಭಮೇಳ ನಡೆಯಲಿದೆ. ಜಿಲ್ಲೆಯ ಎಲ್ಲ ಚುನಾಯಿತ ಸದಸ್ಯರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ತಾಲೂಕಿನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ರವಿ ಗುಂಜೀಕರ ಮಾಹಿತಿ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!