ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ: ಕುಮಾರಸ್ವಾಮಿ

0
Spread the love

ಬೆಂಗಳೂರು: ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Advertisement

ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ. ಕೋರ್ಟ್‌ನಲ್ಲಿ 62 ಕೋಟಿ ಬೆಲೆ ಬಾಳುವ ಜಾಗವದು, ನಮಗೆ 62 ಕೋಟಿ ನೀಡಿ ಜಾಗ ವಾಪಸ್ ಪಡೆಯಿರಿ ಅಂತಾ ಹೇಳಿದ್ದು,

ಈಗ ತನಿಖೆಯ ದಿಕ್ಕು ತಪ್ಪಿಸಲು ಸೈಟ್ ವಾಪಸ್ ಕೊಡೋ ಡ್ರಾಮವನ್ನ ಮಾಡಿದ್ದಾರೆ. ಕೋರ್ಟ್‌ನಲ್ಲಿ ಕೇಸ್ ಇದೆ. ಮೂಡಾ ಆಯುಕ್ತರು ಯಾವ ಆಧಾರದ ಮೇಲೆ ಕೇಸ್ ವಾಪಸ್ ಪಡೆದ್ರು ಅನ್ನೋದು ತನಿಖೆಯಾಗಬೇಕು. ಲೋಕಾಯುಕ್ತದವರು ಮೊದಲು ಮೂಡಾ ಆಯುಕ್ತರನ್ನ ಬಂಧಿಸಬೇಕು, ಜಾರಿ ನಿರ್ದೇಶನಾಲಯವು ಮುಡಾ ವಿಚಾರದಲ್ಲಿ ತನಿಖೆ ಶುರು ಮಾಡ್ತಿದ್ದಂತೆ ಈ ರೀತಿ ಯಾಕೆ ಮಾಡಿದ್ರು ಎಂದು ಪ್ರಶ್ನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here