ಬೆಂಗಳೂರು: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣವನ್ನು ವಜಾ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಾಗಿದ್ದು, ದೇಶದ್ರೋಹಿಗಳ ಕೇಸ್ ವಾಪಸ್ ಪಡೆದು ಸಿದ್ದರಾಮಯ್ಯ ಅವರಿಗೆ ಪ್ರೋತ್ಸಾಹಿಸಿದ್ದಾರೆ. ಕೇಸ್ ವಾಪಸ್ ಪಡೆದು ಸಂಪುಟದ ಎಲ್ಲ ಸಚಿವರೂ ಭಯೋತ್ಪಾದಕರನ್ನು ಪ್ರೋತ್ಸಾಹಿಸಿದ್ದಾರೆ.
ಸಿದ್ದರಾಮಯ್ಯ ಜೋಶಿಯವರನ್ನು ಭಯೋತ್ಪಾದಕ ಅಂದಿದ್ದಾರೆ, ಇದು ಅವರಿಗೆ ಶೋಭೆ ತರಲ್ಲ ಕೇಸ್ ವಾಪಸ್ ಪಡೆದ ಸಿದ್ದರಾಮಯ್ಯ ನಡೆ ಖಂಡಿಸ್ತೇನೆ, ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕಿಡಿಕಾರಿದ್ದಾರೆ.
ಪ್ರತಿಭಟನೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಅಶ್ವಥ್ ನಾರಾಯಣ, ಶಾಸಕರು, ಸಂಸದ ಗೋವಿಂದ ಕಾರಜೋಳ, ಪರಿಷತ್ ಸದಸ್ಯರು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರು ಸೇರಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.