ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.15ರಂದು ಸಂಜೆ 6 ಗಂಟೆಗೆ ಕಸಾಪ ಕಾರ್ಯಾಲಯದ ತೋಂಟದ ಸಿದ್ಧಲಿಂಗಶ್ರೀ ಕನ್ನಡ ಭವನದಲ್ಲಿ ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. ಶಿಕ್ಷಣ ಕ್ಷೇತ್ರಕ್ಕೆ ಕೆ.ಎಚ್. ಪಾಟೀಲ ಅವರ ಕೊಡುಗೆ ಕುರಿತು ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿ ಮೂಲಿಮನಿ ಹಾಗೂ ಯುವ ಮುಖಂಡರಾದ ಕೃಷ್ಣಗೌಡ ಪಾಟೀಲ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಪರಿಷತ್ತಿನ ಸದಸ್ಯರು ಪಾಲ್ಗೊಳ್ಳಬೇಕೆಂದು ಕಾರ್ಯದರ್ಶಿಗಳಾದ ಕಿಶೋರಬಾಬು ನಾಗರಕಟ್ಟಿ, ಡಿ.ಎಸ್. ಬಾಪುರಿ, ದತ್ತಪ್ರಸನ್ನ ಪಾಟೀಲ, ಶ್ರೀಕಾಂತ ಬಡ್ಡೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.