ನನ್ನ ಮೇಲೆ, ನಮ್ಮವರ ರೇಡ್ ಮಾಡಿ ಕೊಡಬಾರದ ಹಿಂಸೆ ಕೊಟ್ರು: ಡಿ.ಕೆ. ಶಿವಕುಮಾರ್

0
Spread the love

ಬೆಂಗಳೂರು : ನನಗೆ ಏನು ಗೊತ್ತಿಲ್ಲ, ನಾನೀಗ ಸಮ್ಮಿಟ್ ಅಲ್ಲಿ ಇದ್ದೀನಿ. ಕರ್ನಾಟಕ ಸಮೃದ್ಧ ಮಾಡುವ ಸಲುವಾಗಿ ನಾವೆಲ್ಲರೂ ಪ್ರಯತ್ನ ಪಡುತಿದ್ದೇವೆ. ಸಾವಿರಾರು ಜನ ದೇಶ-ವಿದೇಶದಿಂದ ಇಲ್ಲಿಗೆ ಬಂದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 370 ಜನ ಸಿಆರ್​ಪಿಎಫ್ ಪೊಲೀಸರನ್ನ ಕರೆದುಕೊಂಡು ಬಂದಿದ್ರು. ಈಗಲ್ಟನ್ ನಲ್ಲಿ ನನ್ನ ಮೇಲೆ, ನಮ್ಮವರ ಮೇಲೆ ರೇಡ್ ಮಾಡಿದ್ರು. ನನಗೆ ಕೋರ್ಟ್ ಮೇಲೆ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ. ಈಗಲ್ಟನ್ ರೆಸಾರ್ಟ್​ನಲ್ಲಿ ನಾನು ಪಕ್ಷದ ಕೆಲಸವೇ ಮಾಡಿದ್ದು, ರೇಡ್ ಮಾಡಿ ಕೊಡಬಾರದ ಹಿಂಸೆ ಕೊಟ್ರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನನಗೆ ಏನು ಗೊತ್ತಿಲ್ಲ, ನಾನೀಗ ಸಮ್ಮಿಟ್ ಅಲ್ಲಿ ಇದ್ದೀನಿ. ಕರ್ನಾಟಕ ಸಮೃದ್ಧ ಮಾಡುವ ಸಲುವಾಗಿ ನಾವೆಲ್ಲರೂ ಪ್ರಯತ್ನ ಪಡುತಿದ್ದೇವೆ. ಸಾವಿರಾರು ಜನ ದೇಶ-ವಿದೇಶದಿಂದ ಇಲ್ಲಿಗೆ ಬಂದಿದ್ದಾರೆ. ನ್ಯಾಯಾಲಯದಲ್ಲಿ ಏನಾಗಿದೆ ಅಂತ ಗೊತ್ತಿಲ್ಲ. ಸೋ ನಾನು ಮಾತನಾಡಲ್ಲ. ಎಲ್ಲರ ಮಾತನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ, ಸಮಯ ಬಂದಾಗ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here