ಗದಗ:- ಆನ್ಲೈನ್ ಗೇಮ್ಗೆ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ಜರುಗಿದೆ.
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿಯ ಲಾಡ್ಜ್ವೊಂದರಲ್ಲಿ ಘಟನೆ ಜರುಗಿದೆ. ದೊಡ್ಡ ವ್ಯಾಪಾರಸ್ಥನಾಗಿದ್ದ ಜಗದೀಶ್ ಹಳೆಮನಿ ಮೃತ ದುರ್ದೈವಿ ಎನ್ನಲಾಗಿದೆ.
ಈತ ಹಲವಾರು ತಿಂಗಳಿಂದ ಆನ್ಲೈನ್ ಗೇಮ್ನಲ್ಲಿ ಮಗ್ನನಾಗಿದ್ದ. ಆನ್ಲೈನ್ ಗೇಮ್ನಲ್ಲಿ ಆಟವಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ನಿನ್ನೆ ರಾತ್ರಿ 10:30ರ ಸುಮಾರಿಗೆ ಶಿರಹಟ್ಟಿಯಿಂದ ಗದಗನಲ್ಲಿರುವ ಲಾಡ್ಜ್ವೊಂದಕ್ಕೆ ಬಂದಿದ್ದ. ಬಳಿಕ ಕಂಠಪೂರ್ತಿ ಕುಡಿದು, ಸ್ವಲ್ಪ ಊಟ ಮಾಡಿದ್ದಾನೆ. ನಂತರ ನಶೆಯಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಡೆತ್ನೋಟ್ನಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದಾನೆ. ಅಲ್ಲದೇ ಆನ್ಲೈನ್ ಗೇಮ್ ಬ್ಯಾನ್ ಮಾಡಬೇಕೆಂದು ಉಲ್ಲೇಖಿಸಿದ್ದಾನೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರು ಅಧಿವೇಶನದಲ್ಲಿ ಚರ್ಚೆ ಮಾಡಬೇಕು. ನನ್ನಂತೆ ಬಹಳ ಜನರು ಹಾಳಾಗಿದ್ದಾರೆ. ದಯವಿಟ್ಟು ಆನ್ಲೈನ್ ಗೇಮ್ ಬ್ಯಾನ್ ಮಾಡುವಂತೆ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಡೆತ್ನೋಟ್ನಲ್ಲಿ ಮನವಿ ಮಾಡಿಕೊಂಡಿದ್ದಾನೆ.