ಆಪರೇಷನ್ ಸಿಂಧೂರ: ಪಾಕ್‌ ಪ್ರತೀಕಾರ ತೀರಿಸಿಕೊಂಡ್ರೆ ಭಾರತ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ: ಕಿರಣ್ ರಿಜಿಜು

0
Spread the love

ನವದೆಹಲಿ: ಪಾಕಿಸ್ತಾನ ಪ್ರತೀಕಾರ ತೀರಿಸಿಕೊಂಡರೆ ಭಾರತ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ದೇಶವು ಎದುರಿಸುತ್ತಿರುವ ಪ್ರಮುಖ ಸವಾಲನ್ನು ಗುರುತಿಸಿ ಪ್ರತಿಯೊಬ್ಬ ನಾಯಕರು ಜವಾಬ್ದಾರಿ ಮತ್ತು ಪ್ರಬುದ್ಧತೆಯಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

Advertisement

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಂಡರೆ ಭಾರತ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಆದರೆ ಈಗಾಗಲೇ ಆಪರೇಷನ್ ಸಿಂಧೂರಕ್ಕೆ ಪ್ರತಿಯಾಗಿ, ಪಾಕಿಸ್ತಾನಿ ಸೇನೆಯು ಪೂಂಚ್-ರಾಜೌರಿ ಪ್ರದೇಶದ ನಿಯಂತ್ರಣ ರೇಖೆಯುದ್ದಕ್ಕೂ ಫಿರಂಗಿ ದಾಳಿ ನಡೆಸಿ 15 ನಾಗರಿಕರನ್ನು ಬಲಿಪಡೆದುಕೊಂಡಿದೆ ಎಂದರು.

`ಆಪರೇಷನ್ ಸಿಂಧೂರ’ದಲ್ಲಿ ಕನಿಷ್ಠ 100 ಭಯೋತ್ಪಾದಕರ ಹತ್ಯೆಯಾಗಿದೆ. ಈ ಕಾರ್ಯಾಚರಣೆ ಹೀಗೆ ಮುಂದುವರಿಯಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದು, ಅವರು ಹೇಳಿದಂತೆ ಇದು ಒಂದು ನಿರಂತರ ಕಾರ್ಯಾಚರಣೆಯಾಗಿದೆ.

ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ 9 ಭಯೋತ್ಪಾದಕ ಅಡಗುತಾಣಗಳು ಧ್ವಂಸಗೊಂಡಿವೆ. ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪ್ರತಿಪಕ್ಷಗಳು ಭರವಸೆ ನೀಡಿವೆ. `ಆಪರೇಷನ್ ಸಿಂಧೂರ’ ಯಶಸ್ಸಿಗೆ ಪಕ್ಷಾತೀತವಾಗಿ ಎಲ್ಲರೂ ಭಾರತೀಯ ಸೇನೆಯನ್ನು ಅಭಿನಂದಿಸಿದರು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here