HomeKarnataka Newsಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ: ಸದನದಲ್ಲೇ ಉತ್ತರ ನೀಡುತ್ತೇವೆ ಎಂದ ಸಚಿವ ಸಂತೋಷ್ ಲಾಡ್

ಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ: ಸದನದಲ್ಲೇ ಉತ್ತರ ನೀಡುತ್ತೇವೆ ಎಂದ ಸಚಿವ ಸಂತೋಷ್ ಲಾಡ್

For Dai;y Updates Join Our whatsapp Group

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ವಿಪಕ್ಷಗಳು ವಿಧಾನಸಭೆಯಲ್ಲಿ ಚರ್ಚೆ ನಡೆಸಲಿ, ಸರ್ಕಾರ ಸೂಕ್ತ ಉತ್ತರ ನೀಡಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ಹೋರಾಟಗಳು ನಡೆಯಬೇಕು. ಜೆಡಿಎಸ್ ಪಾದಯಾತ್ರೆ ನಡೆಸಲಿ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ಅವರ ಕಾಲದಲ್ಲೇ ಆರಂಭವಾಗಿತ್ತು ಎಂದು ಆರೋಪಿಸಿದ ಸಚಿವರು, ಈ ಕುರಿತ ಸಂಪೂರ್ಣ ವಿಚಾರ ಸದನದಲ್ಲಿ ಚರ್ಚೆಯಾಗಲಿ ಎಂದರು.

ವಿಪಕ್ಷಗಳು ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಲಿ. ಸರ್ಕಾರ ಕೂಡ ಸದನದಲ್ಲಿ ಎಲ್ಲವನ್ನೂ ತೆರೆದಿಡುವ ಕೆಲಸ ಮಾಡಲಿದೆ. ವಿಪಕ್ಷಗಳು ಪ್ರಶ್ನೆಗಳನ್ನು ಕೇಳಲಿ, ಅದಕ್ಕೆ ಸರ್ಕಾರ ಸದನದಲ್ಲೇ ಉತ್ತರ ನೀಡಲಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ನಿಯಮಗಳನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಧಾರವಾಡ ಜಿಲ್ಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.96ರಷ್ಟು ಬಿತ್ತನೆಯಾಗಿದ್ದರೂ ನಿರೀಕ್ಷಿತ ಫಸಲು ಸಿಗುತ್ತಿಲ್ಲ. ಕೆಲವು ಪ್ರದೇಶಗಳಲ್ಲಿ ಮಳೆಯಾಗಿಲ್ಲ, ಇನ್ನೂ ಕೆಲವು ಕಡೆ ಮಳೆಯಾಗಿದೆ. ಮೇಲ್ನೋಟಕ್ಕೆ ಹೊಲಗಳಲ್ಲಿ ಹಸಿರು ಕಾಣಿಸುತ್ತಿದ್ದರೂ ವಾಸ್ತವವಾಗಿ ಬೆಳೆ ಇಲ್ಲದ ಪರಿಸ್ಥಿತಿ ಇದೆ. ಇದನ್ನು ‘ಹಸಿರು ಬರ’ ಎಂದು ಘೋಷಿಸಬಹುದಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವರು ಹೇಳಿದರು.

ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಅದರಂತೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲಾಗಿದೆ. ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಸಂತೋಷ್ ಲಾಡ್ ತಿಳಿಸಿದರು.

ರಾಜ್ಯದಲ್ಲಿ ಬರ ಘೋಷಣೆ ಮಾಡಲು ನಿರ್ದಿಷ್ಟ ನಿಯಮಗಳಿವೆ. ಈ ನಿಯಮಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬಂದು ಪರಿಸ್ಥಿತಿಯನ್ನು ಅಧ್ಯಯನ ಮಾಡಬೇಕು. ಬರ ಪರಿಹಾರಕ್ಕೆ ಸಂಬಂಧಿಸಿದಂತೆ NDRF ನಿಯಮಗಳಲ್ಲಿ ಬದಲಾವಣೆ ಅಗತ್ಯವಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ನೀಡಬೇಕಾದ ಅನುದಾನ ಹಾಗೂ ಮುಂದಿನ ಕ್ರಮಗಳ ಕುರಿತು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ. ಬರ ಘೋಷಣೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಯನ್ನು ಸರ್ಕಾರ ನಿಯಮಾನುಸಾರ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img