ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯ ಕಾರ್ಯನಿರತ ದಿನಪತ್ರಿಕೆಗಳ ಸಂಘದಿಂದ ಚಿತ್ರದುರ್ಗದ ಜೋಗಿಮಟ್ಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿ ಸಭೆ ಹಾಗೂ ಗದಗ ಜಿಲ್ಲಾ ಶಾಖೆಯ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಜರುಗಿತು.
Advertisement
ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಗದಗ ಜಿಲ್ಲೆಯ ಶಾಖೆಯ ಅಧ್ಯಕ್ಷ ಜಗದೀಶ ಪೂಜಾರ ಅವರನ್ನು ಅನುಮೋದಿಸಿ ಆದೇಶ ಪತ್ರ ನೀಡಿದರು. ಸಂಘದ ಸಮ್ಮೇಳನ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ, ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಲಿಂಗದಾಳ, ಸಂಘದ ಪದಾಧಿಕಾರಿಗಳು ಸ್ಭೆರಿದಂತೆ 40ಕ್ಕೂ ಹೆಚ್ಚು ಸಂಪಾದಕರು ಉಪಸ್ಥಿತರಿದ್ದರು.