ಮೈಸೂರು: ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ, ಅಧಿಕಾರ ಹಂಚಿಕೆಯ ಕುರಿತು ಭಾರೀ ಚರ್ಚೆ ಆಗ್ತಿದೆ. ಸೆಪ್ಟೆಂಬರ್ ಸಸ್ಪೆನ್ಸ್ ಬಗ್ಗೆ ಕೈ ಮುಖಂಡರು ನಾನಾ ಹೇಳಿಕೆ ನೀಡುತ್ತಿದ್ದಾರೆ. ಸಚಿವ ಕೆ ಎನ್ ರಾಜಣ್ಣ ಅವರ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲ ಗುಂಪುಗಳು ಮುಖ್ಯಮಂತ್ರಿ ಆಗಬೇಕೆಂದು ಆಕಾಂಕ್ಷೆ ಹೊಂದಿವೆ. ಆದರೆ, ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮತ್ತು ಶಾಸಕರ ಬೆಂಬಲವಿದೆ. ಯಾವುದೇ ಬದಲಾವಣೆಯ ಸೂಚನೆ ಹೈಕಮಾಂಡ್ನಿಂದ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ವಿಪಕ್ಷಗಳ ಮಾತಿಗೆ ಬೆಲೆ ಕೊಡಬೇಕಿಲ್ಲ. ಲೋಕಸಭೆ ಚುನಾವಣೆ ಬಳಿಕ, ಮುಡಾ ಕೇಸ್ನಲ್ಲಿ ಸಿಎಂ ಬದಲಾವಣೆಯಾಗುತ್ತದೆ ಎಂದು ಆರ್. ಅಶೋಕ್ ಹೇಳಿದ್ದರು. ಆದರೆ, ಇವೆಲ್ಲವೂ ಊಹಾಪೋಹಗಳು ಎಂದು ಹೇಳಿದ್ದಾರೆ.