HomeKarnataka Newsಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

“ಸಾಲಿಗ್ರಾಮ ಮತ್ತು ತಗಡೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 82 ಕೋಟಿ ರೂ. ನೀಡಲಾಗಿದೆ. ಕೊಳ್ಳೆಗಾಲದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 85 ಕೋಟಿ ನೀಡಲಾಗಿದೆ. ಹನೂರು ತಾಲೂಕಿನಲ್ಲಿ ಪ್ರಜಾಸೌಧಕ್ಕೆ 8.60 ಕೋಟಿ ರೂ. ನೀಡಲಾಗಿದೆ. ಬುಡಕಟ್ಟು ಜನರಿಗೆ ವಿದ್ಯುತ್ ಒದಗಿಸಿಕೊಡಲು 50 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಆಮೆಕೆರೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು 100 ರೈತರಿಗೆ 9.75 ಕೋಟಿ ನೀಡಿ ಅವರನ್ನು ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ. ಮೈಸೂರಿನಲ್ಲಿ ಪಾಲಿಟೆಕ್ನಿಕ್ ಕಟ್ಟಡ ನಿರ್ಮಾಣಕ್ಕೆ 70 ಕೋಟಿ ನೀಡಲಾಗಿದೆ. ಮಂಡ್ಯದ ಮಳವಳ್ಳಿಯಲ್ಲಿ ಕುಂತೂರು ಹಾಗೂ ಇತರೆ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 28 ಕೋಟಿ ನೀಡಲಾಗಿದೆ” ಎಂದು ಹೇಳಿದರು.

“ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಹಾಗೂ ಕಡೂರು ತಾಲೂಕಿನ 25 ಕೆರೆಗಳನ್ನು ತುಂಬಿಸಲು 98 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಪಾಂಡವಪುರ ತಾಲೂಕಿನಲ್ಲಿ ಬಳಕಟ್ಟ ಏತ ನೀರಾವರಿ ಯೋಜನೆಗೆ 29 ಕೋಟಿ ನೀಡಲಾಗಿದೆ. ವರುಣ ಕ್ಷೇತ್ರದಲ್ಲಿ 15 ಕೋಟಿ ವೆಚ್ಚದಲ್ಲಿ ಅಂತರ್ಜಲ ಮರುಪೂರಣ ಯೋಜನೆಗಾಗಿ ಚೆಕ್ ಡ್ಯಾಂ ಮಾಡಲು ಯೋಜನೆ ರೂಪಿಸಲಾಗಿದೆ. ವರುಣಾ ಕ್ಷೇತ್ರದ ಕೆಲವು ಗ್ರಾಮಗಳ ಏತ ನೀರಾವರಿಗೆ 41 ಕೋಟಿ ವೆಚ್ಚಕ್ಕೆ ಆಡಳಿತ ಅನುಮೋದನೆ ನೀಡಲಾಗಿದೆ. ಹೆಗ್ಗಡದೇವನ ಕೋಟೆಯಲ್ಲಿ 25 ಕೋಟಿ ಮೊತ್ತದ ಪಿಕ್ ಅಪ್ ಕಾಲುವೆ, ಪಿರಿಯಾಪಟ್ಟಣ ತಾಲೂಕಿನಲ್ಲಿ 12 ಕೋಟಿ ಮೊತ್ತದ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ” ಎಂದರು.

“ಕೆ.ಆರ್ ನಗರ ಹಾಗೂ ಸಾಲಿಗ್ರಾಮದಲ್ಲಿ ಕೆರೆಗಳಿಗೆ ನೀರು ತುಂಬಿಸಲು ಏತ ನೀರಾವರಿಗೆ 50 ಕೋಟಿ ನೀಡಲಾಗಿದೆ. ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ ಬಳಿ ಕಾವೇರಿ ನದಿಯಿಂದ 12 ಕೆರೆ ತುಂಬಿಸಲು 35 ಕೋಟಿ ಅನುದಾನ ನೀಡಲಾಗಿದೆ. ಮದ್ದೂರಿನಲ್ಲಿ ಶಿಂಷಾ ನದಿಗೆ ಅಡ್ಡಲಾಗಿ ಸೇತುವೆ ಹಾಗೂ ಬ್ಯಾರೇಜ್ ಡ್ಯಾಂ ನಿರ್ಮಾಣಕ್ಕೆ 30 ಕೋಟಿ, ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಕೃಷಿ ಸೇತುವೆ ಹಾಗೂ ಚೆಕ್ ಡ್ಯಾಂ ನಿರ್ಮಾಣಕ್ಕೆ 25 ಕೋಟಿ ಮಂಜೂರು ಮಾಡಲಾಗಿದೆ” ಎಂದು ಹೇಳಿದರು.

“ಚಾಮರಾಜನಗರ ಹೊಂಗನೂರು ಕೆರೆಗೆ 14 ಕೋಟಿ, ಅಮಚವಾಡಿ ಕೆರೆಗೆ 11 ಕೋಟಿ, ಮಾಲಂಗಿ ಗ್ರಾಮದ ಬಳಿ ಕಾವೇರಿ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಗೆ 150 ಕೋಟಿ, ದಳವಾಯಿ ಕೆರೆಯಲ್ಲಿ 3 ಎಂಎಲ್ ಡಿ ಕುಡಿಯುವ ನೀರಿನ ಘಟಕಕ್ಕೆ 18 ಕೋಟಿ ನೀಡಲಾಗಿದೆ. ಬೆಂಗಳೂರಿನಂತೆ ಮೈಸೂರು ನಗರದಲ್ಲಿ 391 ಕೋಟಿ ಮೊತ್ತದ ಯೋಜನೆಯಲ್ಲಿ ರಸ್ತೆಗಳ ವೈಟ್ ಟ್ಯಾಪಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ. ಕೊಳ್ಳೆಗಾಲದಲ್ಲಿ ಮಡಿಗುಂಡಿ ಬಳಿ ಸುವರ್ಣಾವತಿ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣಕ್ಕೆ 15 ಕೋಟಿ ಮಾಡಲಾಗಿದೆ. ರೇಷ್ಮೇ ಇಲಾಖೆಯಿಂದ ಪರಿಶಿಷ್ಟರಿಗೆ ಸಹಾಯ ಮಾಡಲು 15 ಕೋಟಿ ನೀಡಲಾಗಿದೆ” ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!