ಕುಮಾರಸ್ವಾಮಿ ಟ್ವೀಟ್ʼಗಳಿಂದ ನಮ್ಮ ಸರ್ಕಾರದ ನೀತಿಗಳು ಬದಲಾಗಲ್ಲ: ಡಿಕೆ ಶಿವಕುಮಾರ್

0
Spread the love

ಬೆಂಗಳೂರು: ಹಾಲು ಮತ್ತು ಕಸಕ್ಕೆ ತೆರಿಗೆ ವಿಧಿಸುವುದನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸುತ್ತ ಟ್ವೀಟ್ ಮಾಡಿದ್ದಾರೆ. ಇನ್ನೂ ಈ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು,

Advertisement

ಕುಮಾರಸ್ವಾಮಿ ಟ್ವೀಟ್​ಗಳು ರಾಜ್ಯ ಸರ್ಕಾರದ ಕಾರ್ಯವೈಖರಿಯ ಮೇಲೆ ಯಾವುದೇ ಪರಿಣಾಮ ಬೀರಲ್ಲ, ತಮ್ಮ ಸರ್ಕಾರ ರೈತರ ಪರವಾಗಿದೆ, ಅವರಿಗೆ ಅನುಕೂಲ ಆಗಲಿ ಅಂತ್ಲೇ ಹಾಲಿನ ದರವನ್ನು ಹೆಚ್ಚಿಸಿದ್ದು, ಹಾಸನದಲ್ಲಿ ಕುಮಾರಸ್ವಾಮಿ ಅವರ ಅಣ್ಣನೇ ಹಾಲು ಒಕ್ಕೂಟದ ಅಧ್ಯಕ್ಷ, ಅವರಿಗೆ ₹4 ಕಡಿಮೆ ಮಾಡುವಂತೆ ಯಾಕೆ ಕೇಂದ್ರ ಸಚಿವ ಹೇಳಬಾರದು ಎಂದರು.

ಇನ್ನು ಕಸದ ವಿಚಾರವಾಗಿ ಹೇಳುವುದಾದರೆ,  ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಮಾಡಿದ್ದು, ಬಿಜೆಪಿ ಸರ್ಕಾರ 2022ರಲ್ಲೇ ದುಬಾರಿ ಸೆಸ್ ವಿಧಿಸಿದ್ದರು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ನೋವು ನಮಗೂ ಅರಿವಾಗುತ್ತದೆ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here