ಬೆಳಗಾವಿ: ನಮ್ಮ ಗ್ಯಾರಂಟಿ ಯೋಜನೆಗಳೂ ಸಹ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳೂ ಸಹ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿವೆ. ವಿರೋಧ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಭಿವೃದ್ಧಿಗಾಗಿ ಎಷ್ಟು ಹಣಕೊಟ್ಟಿದ್ದಾರೆ ಅನ್ನೋದನ್ನು ಇಲಾಖಾವಾರು ಸಚಿವರು ಉತ್ತರ ಕೊಟ್ಟೇ ಕೊಡುತ್ತಾರೆ.
1ಲಕ್ಷ 20 ಸಾವಿರ ಕೋಟಿಗಿಂತಲೂ ಅಧಿಕ ಹಣವನ್ನು ರಾಜ್ಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಅದಾನಿ ಬಹುಕೋಟಿ ವಂಚನೆ ಪ್ರಕರಣ ಮುಚ್ಚಿಹಾಕಲು ಒನ್ ನೇಷನ್, ಒನ್ ಎಲೆಕ್ಷನ್ ಪ್ರಾರಂಭಿಸಲಾಗಿದೆ ಎಂದು ಆರೋಪಿಸಿದ ಲಾಡ್ ಅದಾನಿ ವಂಚನೆಯ ಪ್ರಕರಣವು ಭಾರತದಲ್ಲಿಯೇ ನಡೆದಿದೆ.
ಅಮೆರಿಕ ಮೂಲದ ಕಂಪನಿಗಳ ಜೊತೆ ಭಾರತದಲ್ಲಿ ವ್ಯವಹಾರ ಮಾಡಿರುವುದಕ್ಕೆ ಹೀಗೆ ಆಗಿದೆ. ಈ ರೀತಿಯ ಪ್ರಕರಣಗಳನ್ನು ಮುಚ್ಚಿ ಹಾಕುವ ಸಲುವಾಗಿ ಒನ್ ನೇಷನ್ ಒನ್ ಎಲೆಕ್ಷನ್ ಪ್ರಾರಂಭಿಸಿದ್ದಾರೆಂದು ಕಿಡಿಕಾರಿದ್ದಾರೆ.