ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಸಮಾಜ ಒಡೆಯೋಕೆ ಮಾತ್ರ ನಮ್ಮ ವಿರೋಧ ಇದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿಗೆ ಬಿಜೆಪಿಯ ವಿರೋಧ ಇಲ್ಲ. ಜಾತಿಗಣತಿ ಹೆಸರಿನಲ್ಲಿ ಸಮಾಜ ಒಡೆಯೋಕೆ ಮಾತ್ರ ನಮ್ಮ ವಿರೋಧ ಇದೆ.
ಜಾತಿ ಒಡೆಯೋದು, ಹೊಸ ಜಾತಿ ಸೃಷ್ಟಿ ಮಾಡೋದು, ಹಿಂದೂ ಜಾತಿಗಳನ್ನ ಕ್ರಿಶ್ಚಿಯನ್ ಜಾತಿಗೆ ಸಮೀಕರಣ ಮಾಡೋದು. ಹಿಂದೂಗಳನ್ನ ಒಡೆಯುವುದು, ಒಳ ಜಾತಿ ಒಡೆಯೋದಕ್ಕೆ ನಮ್ಮ ವಿರೋಧ ಇದೆ. ಸಮೀಕ್ಷೆಗೆ ವಿರೋಧ ಇಲ್ಲ ಎಂದರು. ನಾವು ಸಾಮಾಜಿಕ ನ್ಯಾಯದ ಪರ ಇದ್ದೇವೆ. ನಿಮಗೆ ಅದರ ಬದ್ಧತೆ ಇಲ್ಲ. ಕಾಂಗ್ರೆಸ್ನವರಿಗೆ ಬದ್ಧತೆ ಇಲ್ಲ.
ಕಾಂಗ್ರೆಸ್ನವರಿಗೆ ಬದ್ಧತೆ ಇದ್ದಿದ್ದರೆ ಕಾಂತರಾಜು ವರದಿ ಯಾಕೆ ಕಸದ ಬುಟ್ಟಿಗೆ ಹಾಕುತ್ತಿದ್ದರು? ನಾಗಮೋಹನ್ ದಾಸ್ ವರದಿ ಯಾಕೆ ತಿಪ್ಪೇಗುಂಡಿಗೆ ಸೇರುತ್ತಿತ್ತು? ನಿಮಗೆ ಬದ್ಧತೆ ಇಲ್ಲ. ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳೋದು ಬಿಡೋದು ಅವರಿಗೆ ಬಿಟ್ಟಿದ್ದು. ಆದರೆ ಬಿಜೆಪಿ ನಿರ್ಣಯ ತೆಗೆದುಕೊಂಡಿದೆ, ಜಾತಿಗಣತಿಗೆ ನಮ್ಮ ವಿರೋಧ ಇಲ್ಲ ಎಂದು ತಿಳಿಸಿದರು.