ಬೆಂಗಳೂರು: ಕರ್ನಾಟಕದ ರೈಲ್ವೆ ಜಾಲದಲ್ಲಿ ನಮ್ಮ ಒಟ್ಟು ಹೂಡಿಕೆ 54,000 ಕೋಟಿ ರೂ.ಗಳಷ್ಟಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಹೇಳಿದ್ದಾರೆ ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ಸೇವೆ ಸೇರಿದಂತೆ ಮೂರು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡುವ ಮುನ್ನ ಮಾತನಾಡಿದ ವೈಷ್ಣವ್,
ಪ್ರಸ್ತುತ, ಕರ್ನಾಟಕದ ರೈಲ್ವೆ ಜಾಲದಲ್ಲಿ ನಮ್ಮ ಒಟ್ಟು ಹೂಡಿಕೆ 54,000 ಕೋಟಿ ರೂ.ಗಳಷ್ಟಿದೆ” ಎಂದು ಅವರು ಹೇಳಿದರು, ಅಮೃತ ಭಾರತ ನಿಲ್ದಾಣ ಕಾರ್ಯಕ್ರಮದಡಿಯಲ್ಲಿ 61 ನಿಲ್ದಾಣಗಳನ್ನು ಪುನರ್ನಿರ್ಮಿಸಲಾಗುತ್ತಿದೆ, 123 ಫ್ಲೈಓವರ್ಗಳು ಮತ್ತು ಅಂಡರ್ಪಾಸ್ಗಳು ನಿರ್ಮಾಣ ಹಂತದಲ್ಲಿವೆ ಮತ್ತು ವಿದ್ಯುದ್ದೀಕರಣ ಕಾರ್ಯಗಳು ವೇಗವಾಗಿ ಪ್ರಗತಿಯಲ್ಲಿವೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ಯೋಜನೆಯನ್ನು ಜನರ ಬಹುದಿನಗಳ ಬೇಡಿಕೆ ಎಂದು ಕರೆದ ವೈಷ್ಣವ್, ಈ ರೈಲು ಉತ್ತರ ಕರ್ನಾಟಕ ಮತ್ತು ಭಾರತದ ಐಟಿ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುತ್ತದೆ ಎಂದು ಹೇಳಿದರು.