ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದೀಗ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ನಗರದಲ್ಲಿ ಒಬ್ಬಂಟಿಯಾಗಿ ಓಡಾಡುವುದು ಅಪಾಯಕಾರಿ ಎಂಬಂತಾಗಿದೆ. ರಾತ್ರಿ ಅಲ್ಲ, ಹಗಲಿನಲ್ಲೇ ಜನಸಾಮಾನ್ಯರು ಓಡಾಡುವುದು ಕಷ್ಟಕರವಾಗಿದೆ. ಹೌದು ಬೆಂಗಳೂರಿನ ಹನುಮಂತನಗರ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಗಲಾಟೆ ನಡೆದಿದ್ದು,
ತಡವಾಗಿ ಬೆಳಕಿಗೆ ಬಂದಿದೆ. ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ ಇಲ್ಲಿಯವರೆಗೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎನ್ನುವುದೆ ವಿಪರ್ಯಾಸವಾಗಿದೆ.



