ಕೇಂದ್ರ ಸರ್ಕಾರ ಈ ಸಾಲಿನ ಪ್ರಶಸ್ತಿಯನ್ನು ಪ್ರಕಟಿಸಿದೆ. ಹಿರಿಯ ನಟ ಅನಂತ್ ನಾಗ್ ಅವರಿಗೆ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಆಯ್ಕೆಯಾಗಿದ್ದಾರೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆದಿದ್ದಾರೆ. ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಒಟ್ಟು ಹತ್ತೊಂಬತ್ತು ಮಂದಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಅದರಲ್ಲಿ ಕಲಾ ವಿಭಾಗದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಆಗಿದೆ.
113 ಮಂದಿಗೆ ಪದ್ಮಶ್ರೀ ಪ್ರಶಸ್ತಿಗಳ ಘೋಷಣೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ, ಮೂರು ಗ್ರ್ಯಾಮಿ ಪ್ರಶಸ್ತಿಗಳ ವಿಜೇತ ರಿಕ್ಕಿ ಕೇಜ್ ಅವರಿಗೂ ಸಹ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇವರ ಕಲಾ ಸೇವೆಯನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕರ್ನಾಟಕದಲ್ಲಿ ನೆಲೆಸಿರುವ ಖ್ಯಾತ ವಯಲಿನ್ ವಾದಕ ಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಖ್ಯಾತ, ಹಾಸನ್ ರಘು, ವೆಂಕಪ್ಪ ಅಂಬಾಜಿ ಅವರುಗಳಿಗೂ ಸಹ ಕಲಾ ವಿಭಾಗದಲ್ಲಿ ಪದ್ಮಶ್ರೀ ಘೋಷಣೆಯಾಗಿದೆ.