ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ: ವಿಪಕ್ಷ ನಾಯಕ ಆರ್​. ಅಶೋಕ್​ ಸಂತಾಪ

0
Spread the love

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ. ಇನ್ನೂ ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಪಕ್ಷ ನಾಯಕ ಆರ್​. ಅಶೋಕ್​ ಸಂತಾಪ ಸೂಚಿಸಿದ್ದಾರೆ.

Advertisement

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ‘ಮರಗಳೇ ನನ್ನ ಮಕ್ಕಳು’ ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.

ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನ ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ​ ಸಂತಾಪ ಸೂಚಿಸಿದ್ದಾರೆ.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ.

ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


Spread the love

LEAVE A REPLY

Please enter your comment!
Please enter your name here