Home Blog Page 10

ಜುಲೈ 3ರಂದು ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು 55ನೇ ವರ್ಷದ ಜನ್ಮದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಬಾಲ್ಯದಲ್ಲಿ ಅಂಧತ್ವಕ್ಕೆ ಶರಣಾಗಿ ಗದುಗಿನ ಸುಕ್ಷೇತ್ರ ಶ್ರೀ ವೀರೇಶ್ವರ ಪುಣ್ಯಾಶ್ರಮದ ಗಾನಯೋಗಿ ಪಂ. ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾಗಿ ಅಭ್ಯಾಸಗೈಯುತ್ತ ಸರಳ ಬದುಕಿನ ವಿದ್ಯಾರ್ಥಿಯಾಗಿ ಇಂದು ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾಗಿ, ಉಭಯ ಗುರುಗಳ ಮಾರ್ಗದರ್ಶನದಂತೆ ಅಂಧ-ಅನಾಥರಿಗೆ ಅಭಯ ಹಸ್ತ ನೀಡಿ ಆಶ್ರಮವನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ಪರಮಪೂಜ್ಯ ಶ್ರೀ ಕಲ್ಲಯ್ಯಜ್ಜನವರ ಜೀವನ ಸಮಾಜಕ್ಕೆ ಮಾದರಿಯಾಗಿದೆ.

ಪೂಜ್ಯಶ್ರೀ ಕಲ್ಲಯ್ಯಜ್ಜನವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದಲ್ಲಿ 1971ರ ಜುಲೈ 3ರಂದು ಶ್ರೀ ವೀರಯ್ಯನವರು ಹಿರೇಮಠ ಹಾಗೂ ಮಾತೋಶ್ರೀ ಬಸಮ್ಮನವರ ಪುತ್ರರಾಗಿ ಜನ್ಮತಾಳಿದರು. ಗಂಗಾವತಿ ತಾಲೂಕಿನ ಉಡಮಕಲ್ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಕಲ್ಲಯ್ಯಜ್ಜನವರು ನಂತರ ಗದುಗಿನ ಕೆ.ಎಚ್. ಪಾಟೀಲ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ ಪಡೆದರು. ಅಲ್ಲಿಂದ ಪಂ. ಪಂಚಾಕ್ಷರ ಗವಾಯಿಗಳವರ ಸಂಗೀತ ಮಹಾವಿದ್ಯಾಲಯದಲ್ಲಿ ಬಿ.ಮ್ಯೂಸಿಕ್ ಪದವಿ ಪಡೆದರು.

ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರಲ್ಲಿ ಜೂನಿಯರ್, ಸೀನಿಯರ್, ವಿದ್ವತ್ ದರ್ಜೆ ಸಂಗೀತ ಅಭ್ಯಾಸವನ್ನು ಪಡೆದರು. ಸಂಸ್ಥೆಯಲ್ಲಿ ಎರಡು ವರ್ಷ ಆಶ್ರಮದ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದರು. ಗುರುವಿನ ಆಶೀರ್ವಾದದಿಂದ ಸ್ವಂತ ಕವಿಗಳಾಗಿ ನಾಟಕ ಹಾಗೂ ಕವನಗಳನ್ನು ಅಲ್ಲದೆ, ತಮ್ಮ ಗುರುಗಳಾದ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಚರಿತಾಮೃತ ಕುರಿತು `ಧರೆಗೆ ಬಂದ ದೇವರು’ ಎಂಬ ಗ್ರಂಥವನ್ನು ರಚಿಸಿದ್ದಾರೆ. ಗುರುವಿನ ಮೇಲೆ ಇಟ್ಟಿರುವ ಭಕ್ತಿ ಪ್ರೇಮದ ಕಾಣಿಕೆಯಾಗಿ ಇವರಿಗೆ ನೂರಾರು ತುಲಾಭಾರ ಸೇವೆಗಳು ಜರುಗಿವೆ.

ಬಡವ-ಬಲ್ಲಿದರ, ದೀನ-ದಲಿತರ ಕಣ್ಮಣಿಗಳು, ಪುಣ್ಯಾಶ್ರಮದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರು, ಅವಳಿ ನಗರದ ಪುಣ್ಯಧಾಮ, ಸಂಗೀತ ಕಾಶಿ ಸುಕ್ಷೇತ್ರ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾಗಿರುವ ಪರಮಪೂಜ್ಯ ಶ್ರೀ ಡಾ.ಕಲ್ಲಯ್ಯಜ್ಜನವರ 55ನೇ ವರ್ಷದ ಜನ್ಮದಿನದ ಸಂಭ್ರಮಾಚರಣೆಯು ಜುಲೈ 3ರಂದು ಸಂಜೆ 6 ಗಂಟೆಗೆ ಶ್ರೀ ವೀರೇಶ್ವರ ಪುಣ್ಯಾಶ್ರಮದ ಶ್ರೀಗುರು ಪುಟ್ಟರಾಜ ಕಲಾಭವನದಲ್ಲಿ ಜರುಗಲಿದೆ.

ಈ ಕಾರ್ಯಕ್ರಮದಲ್ಲಿ ಕಪೋತಗಿರಿ ನಂದಿವೇರಿ ಸಂಸ್ಥಾನ ಮಠದ ಪೂಜ್ಯಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಲಿಂಗಸೂರ ಮಾಣಿಕೇಶ್ವರಿ ಆಶ್ರಮದ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

2001ರ ಸೆಪ್ಟಂಬರ್ 17ರಂದು ಪಂ. ಪುಟ್ಟರಾಜ ಕವಿ ಗುರುಗಳ ಅಪ್ಪಣೆಯ ಮೇರೆಗೆ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ಮರಳಿ ಬಂದು ಹೆಚ್ಚಿನ ಸಂಗೀತ ವಿದ್ಯಾಭ್ಯಾಸ ಪಡೆದರು. ಪೂಜ್ಯಶ್ರೀ ಪಂ. ಪುಟ್ಟರಾಜ ಕವಿ ಗವಾಯಿಗಳವರ ನಂತರ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾಗಿ ಆಶ್ರಮವನ್ನು ಮುನ್ನಡೆಸುತ್ತಿದ್ದಾರೆ.

ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ: ಆರ್ ಅಶೋಕ್!

ಬೆಂಗಳೂರು:- ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೆಲ್ಲ ಅವಕಾಶ ಕೊಟ್ಟರೆ ನಾನೇ ಮುಖ್ಯಮಂತ್ರಿಯಾಗ್ತೀನಿ ಅನ್ನುತ್ತಾರೆ, ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಸಿಎಂ ಹುದ್ದೆಗಾಗಿ ಜೋರಾಗಿ ಲಾಬಿ ನಡೆಸಿದ್ದಾರೆ.

ಏತನ್ಮಧ್ಯೆ ಸಿದ್ದರಾಮಯ್ಯ 5-ವರ್ಷ ಅವಧಿಗೆ ನಾನೇ ಸಿಎಂ ಅನ್ನುತ್ತಾರೆ. ಹೀಗಾಗಿ ಕಾಂಗ್ರೆಸ್ ಮನೆಯೊಂದರ ಬಾಗಿಲು ನೂರೊಂದು ರೀತಿ ಅಗಿದೆ, ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ, ಹಾಗಾಗೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಬೇಕಿರುವುದನ್ನು ತಾವೇ ಹೇಳುತ್ತಾರೆ ಎಂದು ಅಶೋಕ ವ್ಯಂಗ್ಯವಾಡಿದ್ದರು.

ಮುಖ್ಯಮಂತ್ರಿ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ: ಸಂಸದ ರಾಜಶೇಖರ ಹಿಟ್ನಾಳ್!

ಕೊಪ್ಪಳ:- ಮುಖ್ಯಮಂತ್ರಿ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ ಎಂದು ಸಂಸದ ರಾಜಶೇಖರ ಹಿಟ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ, ಯಾರೂ ಒತ್ತಾಯವನ್ನು ಮಾಡಿಲ್ಲ. ಸಿದ್ದರಾಮಯ್ಯ ಸಾಹೇಬರೇ 5 ವರ್ಷ ಸಿಎಂ ಆಗಿ ಮುಂದುವರೆಯತ್ತಾರೆಂದು ನಮ್ಮ ಎಲ್ಲ ಮುಖಂಡರು ಹೇಳಿದ್ದಾರೆ. ನಾನಷ್ಟೇ ಅಲ್ಲ, ಎಲ್ಲ ಮುಖಂಡರು ಹೇಳಿದ್ದಾರೆ. ಯಾರೋ ಒಬ್ಬರು ಹೇಳುತ್ತಾರೆ ಎಂದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಅದನ್ನು ಪಕ್ಷದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲ್ಲ ಎಂದರು.

ಈಗಾಗಲೇ ಇಕ್ಬಾಲ್ ಹುಸೇನ್‌ಗೆ ನೋಟಿಸ್ ಕೊಡಲಾಗಿದೆ. ಕೇವಲ ನೋಟಿಸ್ ಅಲ್ಲ, ಅವರ ಮೇಲೆ ಕ್ರಮ ಆಗುತ್ತದೆ. ಇನ್ನೂ ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ. ಸಿದ್ದರಾಮಯ್ಯ ಸಾಹೇಬರ ಬಗ್ಗೆ ಯಾರೂ ಮಾತಾಡಿಲ್ಲ. ಕ್ಷೇತ್ರದ ಬಗ್ಗೆ ಮಾತಾಡಿದ್ದಾರೆ ಹಾಗೂ ಅನುದಾನ ಎಲ್ಲರಿಗೂ ಸಿಕ್ಕಿದೆ. ನನ್ನ ಪ್ರಕಾರ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದರು.

ಅಮೆರಿಕಾ ಪ್ರವಾಸದಲ್ಲಿ ಯಶ್‌ ಜೋಡಿ: ಪತ್ನಿಯನ್ನು ಎತ್ತಿ ಮುದ್ದಾಡಿದ ರಾಕಿಂಗ್‌ ಸ್ಟಾರ್‌

ಸ್ಯಾಂಡಲ್‌ ವುಡ್‌ ನ ಮುದ್ದಾದ ಜೋಡಿ ಯಶ್‌ ಹಾಗೂ ರಾಧಿಕಾ ಪಂಡಿತ್‌ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಸದ್ಯ ರಾಧಿಕ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮುದ್ದಾದ ಫೋಟೋವೊಂದನ್ನ ಹಂಚಿಕೊಂಡಿದ್ದು ಈ ಪೊಟೋ ನೋಡಿ ಅಭಿಮಾನಿಗಳು ಸಖತ್‌ ಖುಷಿಯಾಗಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ವೆಕೇಶನ್​ಗೆ ಅಮೆರಿಕಾಗೆ ತೆರಳಿದ್ದಾರೆ. ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್‘ ಹಾಗೂ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಈ ಕಾರಣದಿಂದ ಬ್ರೇಕ್ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇಬ್ಬರೂ ಎಲ್ಲಿಯೂ ಹೊರಗೆ ತೆರಳಿ ಸುತ್ತಾಡಲು ಸಾಧ್ಯ ಆಗಿರಲಿಲ್ಲ. ಇದೀಗ ಯಶ್‌ ಬಿಡುವು ಪಡೆದುಕೊಂಡಿದ್ದು ಪತ್ನಿಯೊಂದಿಗೆ ವಿದೇಶಕ್ಕೆ ತೆರಳಿದ್ದಾರೆ.

ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಯಶ್‌ ಹಾಗೂ ರಾಧಿಕಾಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಇವರ ದಾಂಪತ್ಯಕ್ಕೆ 9 ವರ್ಷ ತುಂಬುತ್ತಾ ಬಂದಿದ್ರು ಪ್ರೀತಿ ಮಾತ್ರ ಕೊಂಚವೂ ಕಮ್ಮಿಯಾಗಿಲ್ಲ. ಶೂಟಿಂಗ್‌ ನಲ್ಲಿ ಯಶ್‌ ಎಷ್ಟೇ ಬ್ಯುಸಿಯಾಗಿದ್ರು ಕುಟುಂಬಕ್ಕೆ ಸದಾ ಸಮಯ ನೀಡುತ್ತಾರೆ. ಸಮಯ ಸಿಕ್ಕಾಗೆಲ್ಲ ಹೆಂಡತಿ ಮಕ್ಕಳ ಜೊತೆ ಸಮಯ ಕಳೆಯುತ್ತಾರೆ.

ಗಣೇಶ್‌ ಹುಟ್ಟುಹಬ್ಬಕ್ಕೆ ‘Yours Sincerely Raamʼ ಚಿತ್ರದ ಪೋಸ್ಟರ್‌ ರಿಲೀಸ್‌

ಇಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಖುಷಿಯನ್ನು ಮತ್ತಷ್ಟು ಹೆಚ್ಚಿಸಲು ಗಣೇಶ್‌ ಹಾಗೂ ರಮೇಶ್ ಅರವಿಂದ್ ನಟನೆಯ ‘Yours Sincerely Raamʼ ಚಿತ್ರತಂಡ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದೆ. ಈ ಮೂಲಕ ಗಣೇಶ್‌ ಬರ್ತಡೇಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದೆ.

‘Yours Sincerely Raamʼ ಸಿನಿಮಾದಲ್ಲಿ ಗಣೇಶ್‌ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಂಜನೇಯನ ಅವತಾರದಲ್ಲಿ ಗಣೇಶ್‌ ಕಾಣಿಸಿಕೊಂಡಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಸದ್ಯ ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್‌ ಸಾಕಷ್ಟು ಕುತೂಹಲ ಮೂಡಿಸಿದೆ.

ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳ್ತಿದ್ದಾರೆ. ಇನ್ನೂ ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಪೂಜೆ ಸಲ್ಲಿಸಿ, ಅಣ್ಣಾವ್ರ ಆಶೀರ್ವಾದ ಪಡೆದ ಯಶ್‌ ತಾಯಿ

ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ನಿರ್ಮಾಪಕಿಯಾಗಿ ಈಗಾಗಲೇ ಸ್ಯಾಂಡಲ್‌ ವುಡ್‌ ಗೆ ಎಂಟ್ರಿಕೊಟ್ಟಿದ್ದಾರೆ. ಪುಷ್ಪಾ ಅವರು ನಿರ್ಮಾಣ ಮಾಡಿರುವ ಮೊಟ್ಟ ಮೊದಲ ಸಿನಿಮಾ ಬಿಡುಗಡಗೆ ಸಜ್ಜಾಗಿದ್ದ ಇದೇ ವೇಳೆ ರಾಜ್‌ ರಾಜ್‌ ಕುಮಾರ ಸಮಾಧಿಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಪುಷ್ಪ ಅವರು ನಿರ್ಮಾಣ ಮಾಡಿರುವ ಮೊದಲ ಸಿನಿಮಾ ‘ಕೊತ್ತಲವಾಡಿ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು (ಜುಲೈ 2) ರಾಜ್‌ ಕುಮಾರ್‌ ಹಾಗೂ ಪುನೀತ್ ರಾಜ್​ಕುಮಾರ್ ಸಮಾಧಿಗೆ ಪುಷ್ಪ ಅವರು ಭೇಟಿ ನೀಡಿ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಪುಷ್ಪ ಅವರು, ‘ಇದೇ ನಮ್ಮ ದೇವಸ್ಥಾನ. ಕನ್ನಡ ಚಿತ್ರರಂಗಕ್ಕೆ ಬುನಾದಿ ಹಾಕಿಕೊಟ್ಟು, ನಮ್ಮನ್ನೆಲ್ಲ ಬೆಳೆಸಿ ಹೋದವರು ಅಣ್ಣಾವ್ರು. ಇವತ್ತಿನಿಂದ ನಮ್ಮ ಸಿನಿಮಾದ ಪ್ರಚಾರ ಶುರು. ಮೊದಲು ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿ ಕೆಲಸ ಆರಂಭಿಸೋಣ ಅಂತ ನಮ್ಮ ತಂಡದ ಜೊತೆ ಚರ್ಚೆ ಮಾಡಿದೆ. ಅವರು ಸರಿ ಎಂದರು’ ಎಂದಿದ್ದಾರೆ.

‘ಅಪ್ಪು ಅವರು ಕೂಡ ನಮ್ಮ ಮನೆ ಮಗ ಇದ್ದಂತೆ. ಆದರೆ ದೇವರ ಆಟ, ವಿಧಿ ಏನೂ ಮಾಡೋಕೆ ಆಗಲ್ಲ. ಪಾರ್ವತಮ್ಮನವರ ಆಶೀರ್ವಾದ ಇದೆ. ಯಶ್ 5 ತಿಂಗಳು ಮಗು ಆಗಿದ್ದಾಗ ಅನುರಾಗ ಅರಳಿತು ಸಿನಿಮಾ ತೋರಿಸಿದ್ದೆ. ನಮ್ಮ ಮೊಮ್ಮಗನಿಗೆ ಕಸ್ತೂರಿ ನಿವಾಸ ಹೊಸ ಪ್ರಿಂಟ್ ತೋರಿಸಿದ್ದೇನೆ. ನಮಗೆ ರಾಜ್​ಕುಮಾರ್ ಮೇಲೆ ಅಷ್ಟು ಅಭಿಮಾನ’ ಎಂದು ಪುಷ್ಪ ಹೇಳಿದ್ದಾರೆ.

‘ಕೊತ್ತಲವಾಡಿ ಸಿನಿಮಾಗೆ ನಮ್ಮ ಪ್ರಚಾರದ ಪ್ಲ್ಯಾನ್ ಏನೂ ಇಲ್ಲ. ಜನರೇ ಪ್ರಚಾರ ಮಾಡುತ್ತಾರೆ. ನೀವು ಅಂದುಕೊಂಡ ತಕ್ಷಣ ಪ್ರಚಾರ ಆಗಲ್ಲ. ಇಲ್ಲಿ ನಮ್ಮದು ಏನೂ ನಡೆಯಲ್ಲ. ಇಷ್ಟ ಆಗಲಿಲ್ಲ ಎಂದರೆ ಇಂಥ ನೂರಾರು ಸಿನಿಮಾಗಳನ್ನು ಜನರು ಮೂಲೆಗೆ ಎಸೆಯುತ್ತಾರೆ. ಜನರಿಗೆ ಬುದ್ಧಿ ಇದೆ. ಪ್ರಚಾರ ಮಾಡಿದ ಮಾತ್ರಕ್ಕೆ ಜನರು ಬಂದು ಸಿನಿಮಾ ನೋಡುತ್ತಾರೆ ಅಂದುಕೊಂಡರೆ ನಾವು ತುಂಬಾ ದಡ್ಡರು’ ಎಂದಿದ್ದಾರೆ.

‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಚಿತ್ರಮಂದಿರದಲ್ಲಿ ನೋಡುತ್ತಾರೆ. ಮೊದಲ ಮೂರು ದಿನ ನಮಗೆ ಚಾನ್ಸ್ ಕೊಡುತ್ತಾರೆ. ಸಿನಿಮಾದಲ್ಲಿ ಕಂಟೆಂಟ್ ಇದ್ದರೆ ಜನರು ಬಾಯಿ ಮಾತಿನ ಪ್ರಚಾರ ನೀಡುತ್ತಾರೆ. ಇಲ್ಲದಿದ್ದರೆ, ನೆಗೆಟಿವ್ ಕೂಡ ಅಷ್ಟೇ ಬೇಗ ಮಾಡುತ್ತಾರೆ. ನಮ್ಮ ಮೊದಲ ಸಿನಿಮಾಗೆ ಜನರು ತಪ್ಪು-ಸರಿ ಎರಡನ್ನೂ ಹೇಳಲಿ. ನನ್ನ ಪ್ರಕಾರ ನಮ್ಮ ಡೈರೆಕ್ಟರ್ ಚೆನ್ನಾಗಿ ಮಾಡಿದ್ದಾರೆ. ನೀವೆಲ್ಲ ನೋಡಿ ಹೇಳಿ’ ಎಂದು ಪುಷ್ಪ ಹೇಳಿದ್ದಾರೆ.

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದ ಸಾವು!

ಹಾಸನ; ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮದುವೆಯಾದ ಆರು ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ವಿದ್ಯಾ ಮೃತ ನವವಿವಾಹಿತೆ. ಸೋಮಲಾಪುರ ಗ್ರಾಮದ ಶಿವು ಎಂಬುವವರ ಜೊತೆ ವಿವಾಹವಾಗಿದ್ದರು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು,

ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು. ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಮಂಗಳವಾರ ಸಂಜೆ ಅರಸೀಕೆರೆ ರೈಲ್ವೆ ಟ್ರ‍್ಯಾಕ್ ಬಳಿ ವಿದ್ಯಾ ಶವವಾಗಿ ಪತ್ತೆಯಾಗಿದ್ದಾರೆ.

ಮದುವೆಯಾದ ಆರಂಭದಿಂದಲೂ ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು. ಇದೀಗ ಮಗಳನ್ನು ಅವರೇ ಹತ್ಯೆ ಮಾಡಿದ್ದಾರೆ ಎಂದು ಮೃತ ವಿದ್ಯಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

ನನ್ನ ಹೇಳಿಕೆಗೆ ಈಗಲೂ ಬದ್ಧ: ಶಿವಕುಮಾರ್ ಕೊಟ್ಟಿರುವ ನೋಟಿಸ್’ಗೆ ಉತ್ತರಿಸುತ್ತೇನೆ – ಇಕ್ಬಾಲ್ ಹುಸ್ಸೇನ್!

ರಾಮನಗರ:- ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಡಿಕೆ ಶಿವಕುಮಾರ್ ಹೊರಡಿಸಿರುವ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಇಕ್ಬಾಲ್ ಹುಸ್ಸೇನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಶಿವಕುಮಾರ್​ ನಮ್ಮ ಅಧ್ಯಕ್ಷರು, ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗಿದೆ, ನನಗೆ ನೋಟೀಸ್ ನೀಡಿ 7ದಿನಗೊಳಗೆ ಉತ್ತರ ನೀಡುವಂತೆ ಹೇಳಿದ್ದಾರೆ, ಉತ್ತರ ಕೊಡುತ್ತೇನೆ,

ಅದರೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು. ಬೇರೆ ಶಾಸಕರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಿದ್ದಾರೆ, ಅವರಿಗಿಲ್ಲದ ನೋಟೀಸ್ ನಿಮಗ್ಯಾಕೆ ಅಂತ ಕೇಳಿದರೆ, ಮಾಧ್ಯಮದವರು ಅವರನ್ನೇ ಕೇಳಬೇಕು ಅಂತ ಇಕ್ಬಾಲ್ ಹೇಳಿದರು.

ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ: ಯತ್ನಾಳ್ ಆರೋಪ

ವಿಜಯಪುರ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರಲ್ಲಿ ಮಾತಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ನಮ್ಮ ಹೋರಾಟವನ್ನು ತಡೆಯಲು ಪ್ರಯತ್ನಿಸಿದ್ರೂ,

ನಾವು ಕೋರ್ಟ್ ಮುಖಾಂತರ ಹೋರಾಟ ಮುಂದುವರೆಸಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕಾನೂನು ಹೋರಾಟ ಮಾಡಿದ್ದಕ್ಕೆ ಈಗ ಜಯ ಸಿಕ್ಕಿದೆ ಎಂದ್ರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆನಾನು, ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಕಾನೂನು ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ಫಲವಾಗಿ ಇಂದು ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸರ್ಕಾರದ ಅಮಾನತು ಆದೇಶ ಸರಿ ಇದೆ – ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದೇವೆ,  ಸರ್ಕಾರದ ಅಮಾನತು ಆದೇಶ ಸರಿ ಇದೆ ಅನ್ನೋದು ನಮ್ಮ ವಾದ ಎಂದರು. ಬಳ್ಳಾರಿ ಜೈಲಿನಲ್ಲಿ ಕೈದಿಗಳ ಗದ್ದಲ, ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮತ್ತೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್​ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.

error: Content is protected !!