Home Blog Page 10

ಬಿಎಲ್‌ಓ ಕೆಲಸದಿಂದ ಬಿಡುಗಡೆಗೊಳಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಓ ಕೆಲಸದಿಂದ ಬಿಡುಗಡೆಗೊಳಿಸುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಎ.ಎನ್. ನಾಯಕ, ಉಪಾಧ್ಯಕ್ಷೆ ವ್ಹಿ.ಬಿ. ಗದಗ, ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕುಗಳಲ್ಲಿಯ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಓ ಕೆಲಸದಿಂದ ಬಿಡುಗಡೆ ಮಾಡಲು ಹಲವಾರು ಬಾರಿ ವಿನಂತಿಸಿದ್ದರೂ ಕ್ರಮವಹಿಸಿಲ್ಲ. ನಮ್ಮ ಇಲಾಖೆಯ ಹೆಚ್ಚಿನ ಕೆಲಸಗಳನ್ನು ಮೊಬೈಲ್ ಮೂಲಕವೇ ಮಾಡುತ್ತಿರುವದರಿಂದ ನಮಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ನಮ್ಮನ್ನು ಬಿಎಲ್‌ಓ ಕೆಲಸದಿಂದ ಬಿಡುಗಡೆ ಮಾಡಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಎಸ್.ಸಿ. ಕಿತ್ತೂರ, ಎಂ.ಎ. ಕಾಂಬಳೆ, ಎಂ.ಎಸ್. ಕಾಳಿ, ಆರ್.ಬಿ. ಮಣ್ಣೂರ, ಎಸ್.ಬಿ. ಬಣಗಾರ, ಎಸ್.ಬಿ. ಪಲ್ಲೇದ, ಎಸ್.ಎಸ್. ಮಣ್ಣೂರ, ಆರ್.ಎಸ್. ವಡವಿ, ಜಿ.ಡಿ. ಪತ್ರದ, ಕೆ.ಎನ್. ಬಡಿಗೇರ, ಎಸ್.ಎಫ್. ಮೊರಬದ, ಎಂ.ಎಚ್. ಹರಿಜನ, ಪಿ.ಎಂ. ಹೊಸಮನಿ, ಜಯಲಕ್ಷ್ಮೀ ಥೋರಾತ, ವಿನೋದಾ ಭಾವನೂರ, ಸುಧಾ ಹೇಮಗಿರಿಮಠ, ಎಂ.ಆರ್. ವಾರದ, ಸ್ನೇಹಾ ಅಂದಾನಪ್ಪನವರ, ಜೆ.ಸಿ. ತೋಟದ, ಜಿ.ಪಿ. ಕೆಂಪಣ್ಣನವರ, ಡಿ.ಕೆ. ಸನದಿ, ಎಸ್.ಎಸ್. ಚಿಲಕವಾಡ ಮುಂತಾದವರು ಉಪಸ್ಥಿತರಿದ್ದರು.

ಡಾ. ಬಳ್ಳಾರಿ ಅಮ್ಮ ಫೌಂಡೇಷನ್ ಬೆನ್ನೆಲುಬು

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ಎಲ್. ಗುಂಜಿಕರ ಸತತ ಮೂರು ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರ ಸೇವಾ ನಿವೃತ್ತಿಯಿಂದ ತೆರವಾಗಿದ್ದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಸರಕಾರಿ ನೌಕರರ ಭವನದಲ್ಲಿ ಚುನಾವಣೆ ನಡೆದು, ಡಾ. ಬಸವರಾಜ ಬಳ್ಳಾರಿ 55 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿರುವುದಕ್ಕೆ ಬೆಂಗಳೂರಿನ ಅಮ್ಮ ಫೌಂಡೇಷನ್ ಅದ್ಯಕ್ಷರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿದರು.

ಡಾ. ಬಸವರಾಜ ಬಳ್ಳಾರಿ ಅವರು ಮೊದಲು ವಸತಿ ನಿಲಯದ ನಿಲಯಪಾಲಕರಾಗಿ ಕಾರ್ಯ ನಿರ್ವಹಿಸಿ, ಸದ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ತಾಲೂಕು ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಅಮ್ಮ ಫೌಂಡೇಷನ್ ಮಾರ್ಗದರ್ಶಕರೂ ಆಗಿ ಫೌಂಡೇಷನ್ ವತಿಯಿಂದ ಹಲವಾರು ಸಾಮಾಜಿಕ, ಶೈಕ್ಷಣಿಕ ಕಾರ್ಯಗಳನ್ನು ಮಾಡುವುದಕ್ಕೆ ಮಾರ್ಗದರ್ಶನ ನೀಡುತ್ತ ನಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

ಅಮ್ಮ ಫೌಂಡೇಷನ್ ಅಧ್ಯಕ್ಷರು ಹಾಗೂ ವಕೀಲರಾದ ಮೈಲಾರಪ್ಪ ಡಿ.ಎಚ್ ಮಾತನಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಅವರು ನೌಕರರ ಕ್ಷೇಮಾಭಿವೃದ್ಧಿ ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ತಮ್ಮ ಹಂತದಲ್ಲಿ ಶ್ರಮಿಸಿ ಮಾದರಿ ಅಧ್ಯಕ್ಷರಾಗುವಲ್ಲಿ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯದರ್ಶಿ ವಿಶ್ವನಾಥ ದಲಾಲಿ ಮಾತನಾಡಿ, ನಮ್ಮ ಅಮ್ಮ ಫೌಂಡೇಷನ್ ವತಿಯಿಂದ ಬಡ ಮಕ್ಕಳಿಗಾಗಿ ಪುಸ್ತಕಗಳು, ಅವಶ್ಯ ಸಾಮಗ್ರಿಗಳನ್ನು ಒದಗಿಸುವುದು, ಆರೋಗ್ಯ ಶಿಬಿರ, ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಅಮ್ಮ ಫೌಂಡೇಷನ್ ಮಾರ್ಗದರ್ಶಕರಾದ ಬಳ್ಳಾರಿ ಅವರು ಸದಾ ಸಹಕಾರ ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಖಜಾಂಚಿ ಮಾರುತಿ ಜಿ.ಎಚ್, ಸಂಘಟನಾ ಕಾರ್ಯದರ್ಶಿ ಸುರೇಶ ಹಾಳಕೇರಿ, ಸಾಂಸ್ಕೃತಿಕ ಕಾರ್ಯದರ್ಶಿ ಪರಶುರಾಮ ತಳವಾರ, ಅಣ್ಣಪ್ಪ ಗುತ್ತೆಮ್ಮನವರ, ಕಿರಣ, ಶಿವು ದೊಡ್ಡಮನಿ ಇತರರು ಇದ್ದರು.


 

ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಬಲ ಹೆಚ್ಚಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಈ ದೇಶಕ್ಕೆ ಯುವಶಕ್ತಿಯ ಕೊಡುಗೆ ಅಪಾರವಾಗಿದೆ. ಅದರಂತೆ ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಆದ್ಯತೆ ಇಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಕಾಂಗ್ರೆಸ್‌ನಲ್ಲಿ ಯುವಕರಿಗೆ ಸದಾ ಹೆಚ್ಚು ಆದ್ಯತೆ ನೀಡುವ ಮೂಲಕ ಉತ್ತರ ಕೊಡುತ್ತಿದೆ. ಯುವ ಶಕ್ತಿ ಇತ್ತೀಚೆಗೆ ಕಾಂಗ್ರೆಸ್ ಕಡೆಗೆ ಹೆಚ್ಚು ವಾಲುತ್ತಿದ್ದಾರೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಪಟ್ಟಣದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರ ನಿವಾಸದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜುಲೈ 12ರಂದು ನಡೆಯುವ ಚುನಾಯಿತ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಯುವ ಶಕ್ತಿಯನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಗದುಗಿನಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಭಾಗವಹಿಸಬೇಕು. ಜಿಲ್ಲೆಯಲ್ಲಿ ಪಕ್ಷದ ಹಿರಿಯರ ಮಾರ್ಗದರ್ಶನಲ್ಲಿ ಯುವಕರು ಪಕ್ಷದ ಬಲ ಹೆಚ್ಚಿಸಬೇಕು. ಜು.12ರಂದು ಗದುಗಿನ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯುವ `ಯುವ ಧ್ವನಿ’ ಕಾರ್ಯಕ್ರಮಕ್ಕೆ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಬಂದು ಯಶಸ್ವಿಗೊಳಿಸಬೇಕು. ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರ.ಕಾರ್ಯದರ್ಶಿ ಅಕ್ಷಯ ಪಾಟೀಲ, ಉದಯಗೌಡ ವೀರನಗೌಡ, ಹಜರೇಸಾಬ ನದಾಫ್, ಲೊಕೇಶ ದೊಡ್ಡಮನಿ, ತಾಲೂಕಾ ಅಧ್ಯಕ್ಷ ರಾಹುಲ್ ಹೊಳಲಾಪುರ, ನಗರ ಅಧ್ಯಕ್ಷ ಅಮರೇಶ ತೆಂಬದಮನಿ, ಜಯಮ್ಮ ಕಳ್ಳಿ, ರಾಜರತ್ನ ಹುಲಗೂರ, ಕಿರಣ ನವಲೆ, ಮಹಾಂತೇಶ ಗುಡಿಸಲಮನಿ, ಪ್ರಕಾಶ ಕೊಂಚಿಗೇರಿಮಠ, ವಾಸಿಂ ಮುಚ್ಚಾಲೆ, ನೀಲಪ್ಪ ಶೇರಸೂರಿ, ದಾದಾಪೀರ ಟಕ್ಕೇದ, ಯಲ್ಲಪ್ಪ ಹಂಜಗಿ, ರಾಜು ಓಲೆಕಾರ, ಶಿದ್ದು ದುರಗಣ್ಣವರ, ಸರ್ಫರಾಜ ಸೂರಣಗಿ, ಮಹಾದೇವ ಹಾದಿಮನಿ, ಬಸವರಾಜ ಬೆಟಗೇರಿ, ರಾಜು ಓಲೇಕಾರ, ರಾಜು ಬೆಂಚಳ್ಳಿ, ಬಾಬು ಅಳವಂಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಮಾತನಾಡಿ, ಪಕ್ಷಕ್ಕೆ ಯುವ ಶಕ್ತಿ ಆನೆಬಲ ಇದ್ದಂತೆ. ಪಕ್ಷವನ್ನು ಹಿರಿಯರು ಕಟ್ಟಿ ಬೆಳೆಸಿದ್ದರೆ, ಅದನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿ ಯುವಕರಿಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಸಮಾವೇಶ ರಾಜ್ಯಕ್ಕೆ ಒಂದು ಸಂದೇಶವನ್ನು ನೀಡಲಿದೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದರು.

ಜು. 6ರಂದು ‘ಕಾಲಿಗೆ ಗಾಲಿ ಕಟ್ಟಿಕೊಂಡು’ ಪುಸ್ತಕ ಬಿಡುಗಡೆ

ವಿಜಯಸಾಕ್ಷಿ ಸುದ್ದಿ, ಗದಗ: ನಿವೃತ್ತ ಉಪನ್ಯಾಸಕ, ಹಿರಿಯ ಸಾಹಿತಿ ರಾಜೂರ(ಗಜೇಂದ್ರಗಡ)ದ ಡಾ. ಮಲ್ಲಿಕಾರ್ಜುನ ಕುಂಬಾರ ಅವರ ‘ಕಾಲಿಗೆ ಗಾಲಿ ಕಟ್ಟಿಕೊಂಡು’ ಪ್ರವಾಸ ಕಥನಗಳ ಪುಸ್ತಕ ಜು. 6ರಂದು ಮುಂಜಾನೆ 10.30 ಗಂಟೆಗೆ ನಗರದ ಗದಗ ರೆಸ್ಟೋರೆಂಟ್ ಸಭಾಂಗಣದಲ್ಲಿ ಗೆಳೆಯರ ಬಳಗದಿಂದ ಬಿಡುಗಡೆಗೊಳ್ಳಲಿದೆ.

ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತ ರಾಜಾರಾಮ ಪವಾರ ಪುಸ್ತಕ ಬಿಡುಗಡೆ ಮಾಡುವರು. ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಸಾಂಸ್ಕೃತಿಕ ಚಿಂತಕರಾದ ಶಿವನಗೌಡ ಗೌಡರ, ಶಶಿಧರ ಮಂಗಳೂರ ಹಾಗೂ ಸಾಹಿತಿ ಐ.ಕೆ. ಕಮ್ಮಾರ ಆಗಮಿಸುವರು. ಗ್ರಂಥಕರ್ತರಾದ ಡಾ. ಮಲ್ಲಿಕಾರ್ಜುನ ಕುಂಬಾರ ಉಪಸ್ಥಿತರಿರುವರು ಎಂದು ಗೆಳೆಯರ ಬಳಗದ ಪ್ರಕಟಣೆ ತಿಳಿಸಿದೆ.

ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ

ವಿಜಯಸಾಕ್ಷಿ ಸುದ್ದಿ, ಗದಗ: ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯದ ಹಳೆಯ ವಿದ್ಯಾರ್ಥಿಗಳ ಸಂಘ ಬೆಂಗಳೂರು, ಕರ್ನಾಟಕ ಪ್ರದೇಶ ಕುರುಬರ ಸಂಘ ಗದಗ ಜಿಲ್ಲಾ ಶಾಖೆ, ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಗದಗ, ಕಾಳಿದಾಸ ಶಿಕ್ಷಣ ಸಮಿತಿ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ `ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ’ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸ್‌ ಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಕಿಟ್ ವಿತರಣೆ, ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಸಮಾರಂಭವು ಜುಲೈ 6ರಂದು ಮದ್ಯಾಹ್ನ 1 ಗಂಟೆಗೆ ನಗರದ ಶ್ರೀ ಕನಕ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಮಾರಂಭದಲ್ಲಿ 2023-24, 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಒಟ್ಟು 30 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, 2023-24, 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ವಿತರಣೆ, 2023-24, 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ವಿತರಣೆ ಸೇರಿದಂತೆ ಒಟ್ಟು ಸಮಾಜದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ ಸಂಕನೂರ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರುಗಳಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಯುವ ಧುರೀಣರಾದ ಕೃಷ್ಣಗೌಡ ಪಾಟೀಲ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ ಜಿ.ಆರ್, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ರಾಜ್ಯ ಸಂಘದ ನಿರ್ದೇಶಕರುಗಳಾದ ಕಳಕನಗೌಡ ಗೌಡರ, ಚನ್ನಮ್ಮ ಹುಳಕಣ್ಣವರ, ಜಿಲ್ಲಾ, ತಾಲೂಕು ಸಂಘದ ಪದಾಧಿಕಾರಿಗಳು, ಸ್ಥಳೀಯ ಮುಖಂಡರುಗಳು ಹಾಗೂ ಸಮಾಜದ ಗಣ್ಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಫಕೀರಪ್ಪ ಹೆಬಸೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಭಾವಿಕಟ್ಟಿ, ವೈ.ಡಿ. ಗುರಿಕಾರ, ಆರ್.ಎಂ. ನಿಂಬನಾಯ್ಕರ, ನಾಗಪ್ಪ ಗುಗ್ಗರಿ, ರಾಮಕೃಷ್ಣ ರೊಳ್ಳಿ, ನೀಲಕಂಠ ಮರಡಿ, ಶಿವಣ್ಣ ಸಿಂಗಟಾಲಕೇರಿ, ವೈ.ಡಿ. ಜಡದೆಲಿ, ಕೆ.ಬಿ. ಕಂಬಳಿ, ಎಸ್.ಎಸ್. ಕರಡಿ, ಬಿ.ಎಚ್. ಹ್ಯಾಟಿ, ಚನ್ನಮ್ಮ ಹುಳಕಣ್ಣವರ, ರೇಖಾ ಜಡಿ, ರವಿ ಹುಡೇದ, ಕುಮಾರ ಮಾರನಬಸರಿ, ರಾಮು ಜಡಿ ಮುಂತಾದವರು ಉಪಸ್ಥಿರಿದ್ದರು.

ಇದೇ ಸಂದರ್ಭದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸ್ಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಆಯ್ದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ/ ಬ್ಯೂಟೀಷಿಯನ್ ಕಿಟ್/ ಕೌಶಲ್ಯಾಧಾರಿತ ಕಿಟ್ ವಿತರಣೆ ಮಾಡಲಾಗುವುದು ಎಂದು ಫಕೀರಪ್ಪ ಹೆಬಸೂರ ಮಾಹಿತಿ ನೀಡಿದರು.

ಎಸ್‌ಸಿ ಜನಗಣತಿ: ಇದು ಸರ್ಕಾರದ ಕಣ್ಣೊರೆಸುವ ತಂತ್ರ ಎಂದ ಛಲವಾದಿ!

ಬೆಂಗಳೂರು:- ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಗಣತಿ ನಡೆಯುತ್ತಿದೆ. ಆಗುತ್ತಿರುವ ಅನಾಹುತಗಳ ಬಗ್ಗೆ ಮಾಧ್ಯಮಗಳು ತಿಳಿಸುತ್ತಿವೆ. ನಮ್ಮ ಮನೆಗೂ ಯಾರೂ ಬಂದಿಲ್ಲ. ಆದರೆ, ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ. ಅದನ್ನು ನಾವು ಒಪ್ಪಬಹುದಿತ್ತು. ಎಲ್ಲ ಮನೆಗಳಿಗೂ ಸ್ಟಿಕ್ಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಆನ್‌ಲೈನ್‌ನಲ್ಲೂ ಅವಕಾಶ ಇದೆ ಎಂದು ಸಿಎಂ ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು. ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ. ಎಲ್ಲರೂ ವಿದ್ಯಾವಂತರಲ್ಲ, ಕೆಲವರಿಗೆ ಸರ್ಟಿಫಿಕೇಟ್ ಇದೆ. ಇನ್ನೂ ಕೆಲವರಿಗೆ ಇಲ್ಲ. ಇದು ಸರ್ಕಾರದ ಕಣ್ಣೊರೆಸುವ ತಂತ್ರವೇ ಹೊರತು, ಇದರಲ್ಲಿ ಸರಿಯಾದ ಅಂಕಿ-ಅಂಶ ಸಿಗಲು ಸಾಧ್ಯವಿಲ್ಲ ಎಂದಿದ್ದಾರೆ.

ನಿಮಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಿ: MLC ರವಿಕುಮಾರ್ ವಿರುದ್ಧ ಹೆಚ್ ಕೆ ಪಾಟೀಲ್ ಕಿಡಿ!

ಹಾವೇರಿ:– ಬಿಜೆಪಿ ಮುಖಂಡ ರವಿಕುಮಾರ್ ಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಸಚಿವ ಹೆಚ್ ಕೆ ಪಾಟೀಲ್ ಆಗ್ರಹಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ MLC ರವಿಕುಮಾರ್ ನೀಡಿದ ಅವಹೇಳನಕಾರಿ ಹೇಳಿಕೆಗೆ ರಾಣೆಬೆನ್ನೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಹೆಚ್ ಕೆ ಪಾಟೀಲ್, ಬಿಜೆಪಿ ಎಂ.ಎಲ್ ಸಿ ರವಿಕುಮಾರ್ ವಿರುದ್ದ ಕಿಡಿಕಾರಿದರು.

ಇದು ಆತ್ಯಂತ ದುರ್ದೈವ. ಶಾಸನ ಸಭೆ ಸದಸ್ಯರು, ಬಿಜೆಪಿ ನಾಯಕರು ಹಿರಿಯ ಅಧಿಕಾರಿಯೊಬ್ಬರ ಮೇಲೆ ಲಘುವಾಗಿ ಮಾತಾಡಿರೋದು ನೀಚ ಕೆಲಸ. ಮಹಿಳೆಯರಿಗೆ ಸಣ್ಣ ಅಗೌರವ ಆದರೂ ನಮ್ಮ ಸಮಾಜ‌ ಸಹಿಸಲ್ಲ. ಈ ಲಘುವಾದ , ಅವಮಾನಕರ ಮಾತನ್ನು ನಾವು ತೀವ್ರವಾಗಿ ಖಂಡನೆ ಮಾಡಲೇಬೇಕು. ರವಿ ಕುಮಾರ್ ಅವರಿಗೆ ಆತ್ಮ ಸಾಕ್ಷಿ ಇದ್ದರೆ ಕ್ಷಮೆ ಕೇಳಲಿ. ಅದೂ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಅಪೇಕ್ಷೆ ಪಡುತ್ತೇನೆ. ಇಲ್ಲದಿದ್ದರೆ ಜನರಿಗೆ ಅವಮಾನ ಮಾಡಿದ ಹಾಗೆ ಎಂದರು.

RSS ಬ್ಯಾನ್ ವಿಚಾರಕ್ಕೆ ಹೆಚ್ ಕೆ ಪಾಟೀಲ್ ಹೇಳಿದ್ದೇನು?

ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿ, ಅದನ್ನ ಅವರ ಹತ್ರ ಕೇಳಬೇಕು. ಆರ್ ಎಸ್ ಎಸ್ ಸಂಘಟನೆ ಬಿಜೆಪಿ ಉಪಯೋಗಿಸಿಕೊಂಡು ಸಮಾಜ ವಿಭಜನೆ ಮಾಡ್ತಿದೆ ಅಂತ ಬಿಜೆಪಿ ನಾಯಕರೇ ಹೇಳ್ತಾರೆ. ಅದಕ್ಕಾಗಿ ಆ ಹೇಳಿಕೆ ಕೊಟ್ಟಿರಬಹುದು ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಮಾತಾಡಲ್ಲ:

ಸಿಎಂ ಬದಲಾವಣೆ ವಿಚಾರವಾಗಿ ನನ್ನ ಪ್ರಾರ್ಥನೆ ಫಲಿಸಬಹುದು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇಷ್ಟೇ ಹೇಳ್ತಿನಿ ನಮ್ಮ ಮುಖ್ಯಸ್ಥರು ಮಲ್ಲಿಕಾರ್ಜುನ ಖರ್ಗೆಯವರು. ಸಿಎಂ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಯಾರೂ ಮಾತಾಡತಕ್ಕದಲ್ಲ ಎಂದು ಖರ್ಗೆಯವರು ಹೇಳಿದ್ದಾರೆ. ಅವರ ಮಾತು ನಮಗೆ ಆದೇಶ ಇದ್ದಂತೆ ಎಂದರು.

ದಿವಾಳಿ ಆಗಿರೋದು ನೀವು:

ಕಾಂಗ್ರೆಸ್‌ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲಾಗುತ್ತಿಲ್ಲ ಎಂಬ ಬಿ.ವೈ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಗಾರ ನಿಂತಿದ್ರೆ ಸುಮ್ಮನಿರ್ತಿದ್ರಾ? ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದೆವು. ಆ ಪ್ರದೇಶಕ್ಕೆ ಅಂತಾನೇ 34 ಕೋಟಿ ಮಂಜೂರು ಮಾಡಿದ್ದೆವು. ಇದು ಬಿಜೆಪಿಯವರಿಗೆ ಕಾಣಲ್ಲವಾ? ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎನ್ನುತ್ತೀರಿ. ನೀವು 5000 ಕೋಟಿ ರೂ ಭದ್ರಾ ಕಾಲುವೆ ಅಭಿವೃದ್ಧಿಗೆ ಕೊಡುತ್ತೇವೆಂದು ಬಜೆಟ್ ನಲ್ಲಿ ಹೇಳಿದ್ದೀರಿ, ಆದರೆ ಕೊಡಿಸಿದ್ರಾ? ಕಾನೂನು ಪ್ರಕಾರ ಕೊಟ್ಟರಾ? ದಿವಾಳಿ ನೀವು ಆಗಿದ್ದೀರಿ ಎಂದು ಟೀಕೆ ಮಾಡಿದರು.

ಆರ್ಥಿಕವಾಗಿ ಅನುಕೂಲತೆಯಿಂದ ನಡೆದಿದ್ದೇವೆ. ಬಿಜೆಪಿಯವರಿಗೆ ಅಸೂಯೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಬಲ್ಲಿದರ ಬಡತನದ ಬೇರನ್ನು ಕಿತ್ತು ಹಾಕುತ್ತಿದ್ದೇವೆ. ಬಡವರನ್ನು ಜಿರೋ ಪರ್ಸೆಂಟ್ ಮಾಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಸುಮಾರು 98.5 % ಜನರಿಗೆ ನಮ್ಮ ಯೋಜನೆಗಳ ಪ್ರತಿಫಲ ಮುಟ್ಟಿದೆ ಎಂದು ಎಚ್ ಕೆ ಪಾಟೀಲ್ ಹೇಳಿದರು.

ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ;

ರಾಜ್ಯದಲ್ಲಿ 2026ಕ್ಕೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದರು.

ಸರ್ಕಾರದ ಬಹಳಷ್ಟು ಕೇಸ್ ಗಳಿಗೆ ಸೋಲು:

ಇನ್ನೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಸರ್ಕಾರದ ಪರವಾಗಿ ಸಮರ್ಥ ವಾದ ನಡೆಯುತ್ತಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಸಿಎಂ ಹಾಗೂ ಅಡಿಷನಲ್ ಅಡ್ವೊಕೇಟ್ ಜನರಲ್ ಚರ್ಚೆ ಮಾಡ್ತಿದ್ದೀವಿ. ಈ ಬಗ್ಗೆ ಗಂಭೀರವಾಗಿ ಪರಿಗಣನೆ ಮಾಡಿದ್ದೇವೆ. ಸರ್ಕಾರದ ಬಹಳಷ್ಟು ಕೇಸ್ ಗಳು ಸೋಲು ಆಗ್ತಿದೆ ಎಂಬ ಅಂಶಗಳು ಬಂದಿದೆ. ಖಂಡಿತವಾಗಿ ಈ ಬಗ್ಗೆ ಒಂದು ನಿರ್ಧಾರ ತಗೊಳ್ತೀವಿ ಎಂದರು.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಯನ್ನು ಬಂಧಿಸಿದ NIA

ಮಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬಂಧಿಸಿದೆ.

ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕತಾರ್‌ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಘಟನೆ ವಿವರ:

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರು 2022ರ ಜುಲೈ 26ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ದೆಹಲಿ ಕಚೇರಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದ ಎನ್‌ಐಎ ಓರ್ವ ಪ್ರಮುಖ ಆರೋಪಿ ಅತೀಖ್‌ ಅಹ್ಮದ್‌ ಸೇರಿ 22 ಆರೋಪಿಗಳನ್ನ ಬಂಧಿಸಿತ್ತು. ಒಟ್ಟು 28 ಆರೋಪಿಗಳ ವಿರುದ್ಧ ಜಾರ್ಜ್‌ ಶೀಟ್‌ ಸಲ್ಲಿಸಿದ್ದ ಎನ್‌ಐಎ ಉಳಿದ 6 ಆರೋಪಿಗಳಿಗೆ ತೀವ್ರ ಹುಡುಕಾಟ ನಡೆಸಿತ್ತು.

ಪ್ರಕರಣದ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ವಿದೇಶಕ್ಕೆ ಹಾರಿದ್ದ ಅಬ್ದುಲ್‌ ರಹಿಮಾನ್‌ ನನ್ನು ಇಂದು NIA ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆಸಕ್ತಿಯಿಂದ ಮತ ಚಲಾಯಿಸಿದ ವಿದ್ಯಾರ್ಥಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಗಶಹರದ ಆ್ಯಂಗ್ಲೋ ಉರ್ದು ಬಾಲಕರ/ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಾಯೋಗಿಕವಾಗಿ ತಿಳಿಸಲು ಚುನಾವಣೆಯನ್ನು ಮೊಬೈಲ್ ಇವಿಎಂ ಬಳಸಿ ಮತದಾನ ಪ್ರಕ್ರಿಯೆ ನಡೆಸಲಾಯಿತು.

ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವ ಸಲುವಾಗಿ ಶಾಲೆಯಲ್ಲಿ ಶಾಲಾ ಸಂಸತ್ತು ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳು ಮತದಾನ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಸಂತಸಪಟ್ಟರು.

ಮಕ್ಕಳಿಗೆ ಶಾಲೆಯ ವತಿಯಿಂದ ಚುನಾವಣಾ ಆಯೋಗ ನೀಡುವ ರೀತಿಯಲ್ಲೇ ಗುರುತಿನ ಚೀಟಿ ನೀಡಲಾಗಿತ್ತು. ಇದಕ್ಕೂ ಮೊದಲು ವಿಜ್ಞಾನ ಶಿಕ್ಷಕ ಇಸ್ಮಾಯಿಲ್ ಆರಿ ಮೊಬೈಲ್ ಇವಿಎಂ ಮೂಲಕ ಮತದಾನದ ಪ್ರಕ್ರಿಯೆ ಮತ್ತು ಮಾಹಿತಿಯನ್ನು ಒದಗಿಸಿದರು. ವಿದ್ಯಾರ್ಥಿಗಳು ಮತದಾನದ ತಿಳುವಳಿಕೆಯನ್ನು ಪಡೆದುಕೊಂಡು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರೆ, ಮಕ್ಕಳು ತಮ್ಮ ಹಕ್ಕು ಚಲಾಯಿಸಿದರು. ಇದಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಲು ಮಕ್ಕಳು ಮುಖ್ಯ ಚುನಾವಣಾ ಅಧಿಕಾರಿ ಎಂ.ಎಂ ಪೀರಜಾದೆ ಹಾಗೂ ಟಿ.ಐ. ಕಾಲೇಖಾನ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಬಾಲಕರು 7 ಅಭ್ಯರ್ಥಿಗಳು, ಬಾಲಕಿಯರು 4 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡರು. ನಂತರ ಶಾಲಾ ಮುಖ್ಯ ಚುನಾವಣಾಧಿಕಾರಿ ಎಂ.ಎಂ. ಪೀರಜಾದೆ ಮತ್ತು ಟಿ.ಐ. ಕಾಲೇಖಾನ ಮತ ಪೆಟ್ಟಿಗೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ನೀಡಿದರು. ಮತದಾನ ಮಾಡುವ ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಯಿತು. ಬಾಲಕರ ಶಾಲೆಯಲ್ಲಿದ್ದ ಒಟ್ಟು 120 ಮಕ್ಕಳಲ್ಲಿ 110 ಮಕ್ಕಳು ಮತದಾನ ಮಾಡಿದರು. ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮಾಡಲಾಗಿ, ಒಟ್ಟು 7 ಅಭ್ಯರ್ಥಿಗಳ ಪೈಕಿ 2 ಮಂದಿ ಬಹುಮತದಿಂದ ಶಾಲಾ ಸಂಸತ್ತಿಗೆ ಆಯ್ಕೆಯಾದರು. ಬಾಲಕಿಯರ ಶಾಲೆಯಲ್ಲಿದ್ದ ಒಟ್ಟು 192 ಮಕ್ಕಳಲ್ಲಿ 147 ಮಕ್ಕಳು ಮಾತದಾನ ಮಾಡಿದರು. ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮಾಡಲಾಯಿತು. 4 ಅಭ್ಯರ್ಥಿಗಳು 2 ವಿದ್ಯಾರ್ಥಿಗಳು ಬಹುಮತದಿಂದ ಶಾಲಾ ಸಂಸತ್ತಿಗೆ ಆಯ್ಕೆಯಾದರು.

ಮಕ್ಕಳಿಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲು ನಡೆಸಿದ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದಲೇ ಭಾಗಿಯಾಗಿ ಹೊಸ ಅನುಭವ ಪಡೆದುಕೊಂಡರು. 10ನೇ ತರಗತಿಯ ವಿದ್ಯಾರ್ಥಿ ಎಸ್.ಕೆ. ಬಾಗೇವಾಡೆ ಪ್ರದಾನ ಮಂತ್ರಿಯಾಗಿ, 10ನೇ ತರಗತಿ ವಿದ್ಯಾರ್ಥಿ ಎ.ಡಿ. ಉಳ್ಳಗಡ್ಡಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೀನಾಜ್ ಕಲ್ಲಿಪಣ್ಣವರ ಪ್ರಧಾನ ಮಂತ್ರಿ, ತನ್ನಜಿಮ್ ಕೊಪ್ಪಳ ಉಪಪ್ರಧಾನಿಯಾಗಿ ಆಯ್ಕೆಯಾದರು.

ಶಾಲಾ ಸಂಸತ್ತು ಚುನಾವಣಾ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಶಾಲಾ ಆಡಳಿತ ಮಂಡಳಿ ಸದಸ್ಯ ಎ.ಎಂ. ಮುಲ್ಲಾ ಮಾತನಾಡಿದರು. ಸಯ್ಯದ್‌ಇಸ್ಮಾಯಿಲ್ ಬಿಜಾಪೂರ, ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಲ್.ಆರ್. ಇಟಗಿ, ಎಂ.ಎ. ರಿಕಾರ್ಟಿ, ಪೈರೋಜ ಡಲಾಯಿತ, ಎಂ.ಎಂ ಪೀರಜಾದೆ, ಎಂ.ಜಿ. ಪಟೇಲ್, ಎನ್.ಕೆ. ಕರಡಿ, ಎಂ.ಎ. ಕಮಾನಗಾರ, ಎಸ್.ಐ. ನದಾಫ್, ಝಡ್.ಎ. ಮುಲ್ಲಾ, ಟಿ.ಐ. ಕಾಲೇಖಾನ, ಎಂ.ಎಚ್. ಜಮಾಲಸಾಬನವರ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

“ಶಾಲಾ ಸಂಸತ್ತು ರಚನೆ ಮಾಡಲು ಪ್ರಸ್ತುತ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಮತದಾನದ ಹ್ಕಕ್ಕನ್ನು ಪಾರದರ್ಶಕವಾಗಿ ಅಳವಡಿಸಲಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಮತದಾನದ ಪ್ರಕ್ರಿಯೆ ಮತ್ತು ಅವರ ಮಾಹಿತಿಯನ್ನು ಒದಗಿಸಿದರೆ ಮುಂದಿನ ಚುನಾವಣೆಗಳಲ್ಲಿ ಎಲ್ಲರೂ ಆಸಕ್ತಿಯಿಂದ ಮತದಾನ ಮಾಡಲು ಮುಂದಾಗುತ್ತಾರೆ. ಇವಿಎಂ ಮೊಬೈಲ್ ಆ್ಯಪ್ ಮೂಲಕ ಸಿಯು, ಬಿಯು, ಪಿವಿವಿಪಿಎಟ್ ಬಗ್ಗೆ ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಲಾಗಿದೆ”

– ಇಸ್ಮಾಯಿಲ್ ಆರಿ.

ಬಾಲಕರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ.

ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ತಡೆಗಟ್ಟಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ತಾಲೂಕಾಧ್ಯಕ್ಷ ಇಸ್ಮಾಯಿಲ್ ಉಮಚಗಿ ಮಾತನಾಡಿ, ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟ ನಿರಂತರ ನಡೆಯುತ್ತಿದ್ದು, ಅವಳಿ ನಗರದಲ್ಲಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ. ಅಕ್ರಮ ಅಕ್ಕಿ ಸಾಗಾಟ ತಡೆಯಬೇಕಾದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಮತ್ತು ಅಕ್ರಮ ಪಡಿತರ ಅಕ್ಕಿ ಸಾಗಾಟಗಾರ ಜೊತೆಗೆ ಕೈಜೋಡಿಸಿದ್ದಾರೆ.

ಈ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಬಡವರ ಹೊಟ್ಟೆ ತುಂಬಿಸುವ ಯೋಜನೆಯ ಉದ್ದೇಶ ಸಾಕಾರವಾಗಬೇಕು ಎಂದರು.

ಈ ಸಂದರ್ಭದಲ್ಲಿ ಖಾಜಾಸಾಬ ಕೊಪ್ಪಳ, ಅಸ್ಲಮ್ ಮಾಲದಾರ, ಸಾಧಿಕ ಚಿತವಾಡಗಿ, ಅನ್ವರ ಕೊಪ್ಪಳ, ಸಲೀಂ ಶಹಪೂರ, ಫಾರುಕ ದಂಡಿನ, ಸತೀಶ ರೋಣ, ಹೈದರಲಿ ಸವಣೂರ, ಮಹಮ್ಮದ ಅಲಿ, ಶಬೀರ ದ್ಯಾಪೂರ, ಹಮಾಯತ್, ಆಸಿಫ್ ಮಾಲದಾರ, ನೌವೀದ ಕಂಪ್ಲಿ, ರಸೂಲ ಬೇಪಾರಿ ಸೋಯಲ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!