Home Blog Page 10

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ನಾಲ್ಕು ಜನ ಮುಸ್ಲಿಮರು ನಿಂತಿದ್ದರು. ಆದರೂ ಕೂಡ ಗೆದ್ದು ಬಂದಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಯಾರಾದರೂ ಶಾಸಕರು ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ ಟಿಕೆಟ್‌ ಕೊಡುವುದು ನಮ್ಮ ಪಕ್ಷದ ಸಂಪ್ರದಾಯ. 2028ಕ್ಕೆ ಯಾರಿಗೆ ಟಿಕೆಟ್‌ ಕೊಡುತ್ತಾರೆ ಎಂಬುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಹತ್ಯೆಗೈದ ತಂದೆ: ಕೇಸ್ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಜರುಗಿದೆ.

ಈ ಹತ್ಯೆ ಮಾರ್ಚ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚೌಡೇಶ್ವರಿ (22) ಹತ್ಯೆಯಾದ ಮಹಿಳೆ. ಮೃತ ಮಹಿಳೆ, ಯುವಕನೊಬ್ಬನ ಜೊತೆ ಪ್ರೇಮ ಸಂಬಂಧ ಹೊಂದಿದ್ದಳು. ಇದಕ್ಕೆ ಆಕೆಯ ಕುಟುಂಬಸ್ಥರ ವಿರೋಧವಿತ್ತು. ಮಾ.4 ರಂದು, ಆಕೆ ಮನೆ ಬಿಟ್ಟು ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ್ದರು.

ಮಾಚೆರ್ಲಾ ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್ ಮಾ.15 ರಂದು ದಂಪತಿಯನ್ನು ಪತ್ತೆಹಚ್ಚಿದ್ದರು. ಬಳಿಕ ಮಹಿಳೆಗೆ ಬೆದರಿಸಿ ಪೋಷಕರ ಮನೆಗೆ ಹಿಂತಿರುಗುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. ಮೂರು ದಿನಗಳ ನಂತರ ಪೋಷಕರ ಮನೆಯಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಳು. ಆರಂಭದಲ್ಲಿ, ಅವರ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿಕೊಂಡಿತ್ತು. ಪೊಲೀಸ್ ಅಧಿಕಾರಿಯ ಸಹಾಯದಿಂದ ಅದನ್ನು ಆತ್ಮಹತ್ಯೆ ಪ್ರಕರಣವೆಂದು ಮುಚ್ಚಿಹಾಕಲು ಕುಟುಂಬಸ್ಥರು ಪ್ರಯತ್ನಿಸಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ದೃಢಪಟ್ಟಿತ್ತು. ಮಹಿಳೆ ಮಲಗಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂದು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆಯ ತಂದೆ ಚಂದ್ರಶ್ರೀನು ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿ ಮಹಿಳೆಯ ಪೋಷಕರಿಂದ ಲಂಚ ಪಡೆದು ಅವರನ್ನು ರಕ್ಷಿಸಲು ಪ್ರಯತ್ನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬ್ಯಾಂಕ್ ದಾಖಲೆಗಳನ್ನು ಮತ್ತು ಕುಟುಂಬದಿಂದ ದೊಡ್ಡ ಪ್ರಮಾಣದ ನಗದು ವಿತ್‌ಡ್ರಾ ಮಾಡಿರುವ ಬಗ್ಗೆ ಪರಿಶೀಲಿಸುತ್ತಿದ್ದಾರೆ ಸರ್ಕಲ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಬೈ ಎಲೆಕ್ಷನ್| ಗ್ಯಾರಂಟಿಗಳು ಜನರಿಗೆ ತಲುಪಿದ್ದರೆ ಪ್ರಚಾರ ಅಗತ್ಯ ಇತ್ತಾ!? ಕಾಂಗ್ರೆಸ್ ವಿರುದ್ಧ ಹೆಚ್ ಡಿಕೆ ಕಿಡಿ

ಬಾಗಲಕೋಟೆ:- ರಾಜ್ಯದಲ್ಲಿ ಉಪ ಚುನಾವಣೆ ಕಾವು ರಂಗೇರಿದೆ. ಅದರಂತೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಬಾಗಲಕೋಟೆಗೆ ಆಗಮಿಸಿದರು. ಈ ವೇಳೆ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ಮಾಡಿದ್ದಾರೆ. ಈ ಎರಡೂ ಚುನಾವಣಾ ಫಲಿತಾಂಶಕ್ಕಾಗಿ ಕಾಂಗ್ರೆಸ್ ನಾಯಕರು, ವಿಧಾನಸೌಧವನ್ನು ಬಿಕೋ ಎನ್ನುವಂತೆ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿಗಳು ಜನರಿಗೆ ತಲುಪಿದ್ದರೆ ಇಷ್ಟೊಂದು ಪ್ರಚಾರ ಮಾಡುವ ಅಗತ್ಯ ಏನು ಎಂದು ಪ್ರಶ್ನಿಸಿದರು.

ನೀವು 2018 ರಲ್ಲಿ ಬಾದಾಮಿಯಿಂದ ಕೆಲವೇ ಮತಗಳಿಂದ ಗೆದ್ದಿದ್ದೀರಿ. ಗೆದ್ದ ನಂತರ ಬಾದಾಮಿಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದಿರಿ. ಭರವಸೆ ಮಾತ್ರ ನೀಡಿ ಯಾವುದೇ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ದೂರಿದರು. ರಾಜ್ಯ ಸರ್ಕಾರ ಗ್ಯಾರಂಟಿ ಖರ್ಚಿಗಿಂತ ಸಾಲ ಹೆಚ್ಚು ಮಾಡಿದ್ದಾರೆ. ಖಜಾನೆ ತುಂಬಿಸುತ್ತೇನೆ ಎಂದು ಗ್ಯಾರಂಟಿಗೆ ಹಣ ನೀಡಿದ್ದಾರೆ. ಈ ದೇಶದ ಇತಿಹಾಸದಲ್ಲಿ ಈ ರೀತಿಯ ಬಜೆಟ್‌ ಯಾರೂ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

183 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆಲಕಾಲ ಆತಂಕದ ವಾತಾವರಣ!

ಬೆಂಗಳೂರು: 183 ಪ್ರಯಾಣಿಕರಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜರುಗಿದೆ.

ಕೂಡಲೇ ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಫೀಸ್ ಮಿಯಾನ್ನವರ್ ಗೆ 14 ದಿನ ನ್ಯಾಯಾಂಗ ಬಂಧಿಸಿ ಕೋರ್ಟ್ ಆದೇಶಿಸಿದೆ.

ಎಸ್, ಆರೋಪಿ ಮುಸ್ಲಿಂ ಯುವಕ ಮುಫೀಸ್ ಮಿಯಾನ್ನವರ್ ಹಿಂದೂ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಆಗಲು ತಯಾರಿ ನಡೆಸಿದ್ದ. ಅಷ್ಟರಲ್ಲಿ ವಿಷಯ ತಿಳಿದ ಯುವತಿ ಕುಟುಂಬಸ್ಥರು ಮದುವೆ ನಿಲ್ಲಿಸಿದ್ದಾರೆ. ಇದಾದ ಬಳಿಕ ಮುಫೀಸ್ ಯುವತಿಗೆ ಬ್ಲ್ಯಾಕ್ ಮೇಲ್ ಮಾಡೋಕೆ ಶುರು ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ, ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ.

ಈ ವಿಷಯ ಯಾರಿಗಾದ್ರೂ ತಿಳಿಸಿದ್ರೆ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಫೀಸ್ ಮಿಯಾನ್ನವರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿ ಮುಫೀಸ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ರೆಕ್ಕಿಂಗ್ ಗೆ ಹೋದ ಕೇರಳದ ಮಹಿಳೆ ಮಿಸ್ಸಿಂಗ್: 4ನೇ ದಿನವೂ ಶೋಧ, ಪತ್ತೆಯಾಗದ ಶರಣ್ಯ!

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ ಕೇರಳದ ಮಹಿಳೆ ಶರಣ್ಯ (36) ಇನ್ನೂ ಪತ್ತೆಯಾಗಿಲ್ಲ. ಈ ಪ್ರಕರಣದ ಶೋಧ ಕಾರ್ಯವು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ರಾತ್ರಿಯಿಂದಲೇ ಹುಡುಕಾಟ ನಡೆಸುತ್ತಿದ್ದಾರೆ.

ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಒಬ್ಬರೇ ಟ್ರೆಕ್ಕಿಂಗ್‌ಗೆ ಹೋಗಿದ್ದರು. ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ವಾಪಸ್ ಆಗದ ಕಾರಣ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಶೋಧ ಕಾರ್ಯವನ್ನು ನಾಪೋಕ್ಲು ಎಸ್‌ಐ ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ, 2 ಪೊಲೀಸ್ ತಂಡಗಳು ಮತ್ತು 3 ಅರಣ್ಯ ಸಿಬ್ಬಂದಿ ತಂಡಗಳೊಂದಿಗೆ ಗ್ರಾಮಸ್ಥರು ಶೋಧ ನಡೆಸುತ್ತಿದ್ದಾರೆ. ಡ್ರೋನ್ ಹಾಗೂ ಶ್ವಾನದಳ ಸಹ ಕಾರ್ಯಾಚರಣೆಗೆ ಬಳಸಲಾಗುತ್ತಿದೆ.

ಕೇರಳದಲ್ಲಿಯೇ ಉದ್ಯೋಗ ಮಾಡುತ್ತಿದ್ದ ಶರಣ್ಯರ ಕುಟುಂಬಕ್ಕೆ ಈ ಘಟನೆ ಕುರಿತ ಮಾಹಿತಿ ನೀಡಲಾಗಿದೆ. ಶೋಧ ಕಾರ್ಯ ಮುಂದುವರಿದರೂ ಈವರೆಗೆ ಶರಣ್ಯರ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ಕೊಡಗು ಎಸ್ಪಿ ಬಿಂದುಮಣಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಪ್ರಯಾಣಿಕರು ಸಾವು, 20 ಮಂದಿಗೆ ಗಾಯ

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಓವರ್‌ಟೇಕ್ ಮಾಡುವ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಘಟನೆ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ತೆರಳುತ್ತಿತ್ತು. ಇತ್ತ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ತೆರಳುತ್ತಿತ್ತು. ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಪರಿಣಾಮ, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಘಟನೆ ಸಂಬಂಧ ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RCB Vs CSK ಐಪಿಎಲ್ ಟಿಕೆಟ್ ವಂಚನೆ! 1.46 ಲಕ್ಷ ಕಳೆದುಕೊಂಡ ಟೆಕ್ಕಿ

0

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ RCB vs CSK ಐಪಿಎಲ್ ಪಂದ್ಯ ಪಡೆಯಲು ಹೋಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ವಂಚನೆಗೆ ಒಳಗಾಗಿರುವ ಘಟನೆ ಮಹದೇವಪುರದಲ್ಲಿ ಜರುಗಿದೆ.

ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ಅನ್ನು ಟೆಕ್ಕಿ ನೋಡಿದ್ದಾರೆ. ಆ ಪೋಸ್ಟ್ ನೋಡಿ ಆಮಿಷಕ್ಕೆ ಒಳಗಾದ ಅವರು, ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು ವಿಐಪಿ ಸೌಲಭ್ಯಗಳನ್ನು ಹೊಂದಿರುವ ಟಿಕೆಟ್‌ಗಳನ್ನು ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ತಾನು ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ಪಾವತಿಸಿದ್ದಾರೆ.

ಹಣ ಪಾವತಿಯ ನಂತರ, ವಂಚಕನು ಟೆಕ್ಕಿಗೆ ಸ್ಟೇಡಿಯಂನ ಗೇಟ್ ಸಂಖ್ಯೆ 10ರ ಬಳಿ ಬರಲು ಸೂಚಿಸಿದ್ದಾನೆ. ಅಲ್ಲಿಗೆ ತಲುಪಿದಾಗ, ಟೆಕ್ಕಿ ಕನಿಷ್ಠ ದರದ ಟಿಕೆಟ್‌ಗಳನ್ನು ಕೇಳಿದ್ದಾರೆ. ಆದರೆ, ವಂಚಕನು ಕೂಪನ್‌ಗಳು ಮತ್ತು ಭದ್ರತಾ ಠೇವಣಿ ಹೆಸರಿನಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದ್ದಾನೆ.

ವಂಚನೆಗೆ ಒಳಗಾಗಿರುವುದನ್ನು ಅರಿತ ಟೆಕ್ಕಿ, ತಕ್ಷಣವೇ ಸೈಬರ್ ಕಂಟ್ರೋಲ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನಿ ಪ್ಲಾಂಟ್ ಅನ್ನು ಹೊರಗೆ ಅಥವಾ ಉಡುಗೊರೆಯಾಗಿ ನೀಡಬೇಡಿ! ದಾರಿದ್ರ್ಯ ಬರಬಹುದು

0

ಮನೆಯಲ್ಲಿ ಮನಿ ಪ್ಲಾಂಟ್ ಇಡುವುದು ಶುಭಕರವಾಗಿದೆ. ಇದು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಉಂಟುಮಾಡಿ, ಅದೃಷ್ಟ ಮತ್ತು ಆರ್ಥಿಕ ಸಮೃದ್ಧಿಗೆ ಸಹಾಯ ಮಾಡುತ್ತದೆ.

ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಮನಿ ಪ್ಲಾಂಟ್ ಇಡುವ ಸ್ಥಳ ಮತ್ತು ದಿಕ್ಕು ಬಹುಮುಖ್ಯ.

ವಾಸ್ತು ಸಲಹೆಗಳು:

  1. ದಿಕ್ಕು: ಮನಿ ಪ್ಲಾಂಟ್ ಅನ್ನು ಸದಾ ಆಗ್ನೇಯ ದಿಕ್ಕಿನಲ್ಲಿ ಇಡುವುದು ಉತ್ತಮ. ಈ ದಿಕ್ಕು ವಿಘ್ನೇಶ್ವರನ ನೆಚ್ಚಿನ ದಿಕ್ಕು ಎಂದು ಪರಿಗಣಿಸಲಾಗಿದೆ. ಈಶಾನ್ಯ ಭಾಗದಲ್ಲಿ ಇಡಬಾರದು; ಇಟ್ಟರೆ ಆರ್ಥಿಕ ನಷ್ಟ ಮತ್ತು ಮನೆ ನಕಾರಾತ್ಮಕವಾಗಿ ಪರಿಣಾಮ ಬೀರುತ್ತದೆ.
  2. ಸ್ಥಾನ: ಗಿಡವು ನೆಲವನ್ನು ಮುಟ್ಟದಂತೆ, ಬಳ್ಳಿಗಳನ್ನು ಹೆಣೆದು ಮೇಲಕ್ಕೆ ಬೆಳೆದಂತೆ ನಿರ್ವಹಿಸಬೇಕು. ಒಣಗಿದ ಅಥವಾ ಹಳದಿ ಎಲೆಗಳನ್ನು ಕತ್ತರಿಸಿ ತೆಗೆದುಹಾಕಬೇಕು. ಮನಿ ಪ್ಲಾಂಟ್‌ಗಳನ್ನು ಯಾವಾಗಲೂ ಮನೆಯ ಒಳಗೆ ಇಡುವುದು ಶುಭ.
  3. ಪೋಷಣೆ: ಮನಿ ಪ್ಲಾಂಟ್‌ಗಳಿಗೆ ಹೆಚ್ಚು ಸೂರ್ಯ ಬೆಳಕು ಬೇಕಾಗಿಲ್ಲ. ನೀರಿನ ಪಾತ್ರೆ ಅಥವಾ ಬಾಟಲಿಯಲ್ಲಿ ನೆಟ್ಟು, ಪ್ರತಿದಿನ ನೀರು ಹಾಕಿ ಗಿಡವನ್ನು ತಾಜಾ ಮಾಡಬೇಕು.
  4. ಬಿಸಿಲಿನಲ್ಲಿ ಅಥವಾ ಮನೆ ಹೊರಗೆ: ಮನಿ ಪ್ಲಾಂಟ್ ಅನ್ನು ಬಿಸಿಲಿನಲ್ಲಿ ಅಥವಾ ಮನೆಯ ಹೊರಗೆ ಇಡುವುದು ವಾಸ್ತು ದೋಷ ಎಂದು ಪರಿಗಣಿಸಲಾಗಿದೆ.
  5. ಉಡುಗೊರೆ ನೀಡುವುದು: ಮನಿ ಪ್ಲಾಂಟ್‌ಗಳನ್ನು ಮತ್ತೊಬ್ಬರಿಗೆ ಉಡುಗೊರೆಯಾಗಿ ನೀಡಬಾರದು, ಏಕೆಂದರೆ ಶುಕ್ರ ಗ್ರಹ ಕೋಪಗೊಂಡರೆ ಆರ್ಥಿಕ ಹಾನಿ ಸಂಭವಿಸಬಹುದು.
  • ಮನಿ ಪ್ಲಾಂಟ್ ಮನೆಗೆ ಶಕ್ತಿ, ಅದೃಷ್ಟ ಮತ್ತು ಸಂಪತ್ತು ತರುತ್ತದೆ.
  • ಗಿಡವು ಆರೋಗ್ಯವಾಗಿರಲು ನೀರು ಹಾಕಿ, ಒಣಗಿದ ಎಲೆಗಳನ್ನು ತೆಗೆದುಹಾಕಿ.
  • ದಿಕ್ಕು, ಸ್ಥಳ, ಬೆಳಕು, ಮತ್ತು ಬಳ್ಳಿಗಳ ಮೇಲ್ದರ್ಜೆ ಸರಿಯಾಗಿ ನೋಡಿಕೊಳ್ಳಬೇಕು.
  • ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಧನ ಮತ್ತು ಶುಭ ಶಕ್ತಿಯು ಹೆಚ್ಚಾಗುತ್ತದೆ.

ಮನಿ ಪ್ಲಾಂಟ್‌ಗಳು ಲಕ್ಷ್ಮಿ ದೇವಿಯ ಅಭಿವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಸೂಕ್ತ ರೀತಿಯಲ್ಲಿ ಬೆಳೆದರೆ, ಮನೆಯಲ್ಲಿನ ಹಣಕಾಸು ಸ್ಥಿತಿ ಸುಧಾರಿಸಲು ಸಹಾಯವಾಗುತ್ತದೆ.

ಯುವಕರ ಅಪಾಯಕಾರಿ ಬೈಕ್ ಸ್ಟಂಟ್ ಹೆಚ್ಚಳ: 3 ವರ್ಷಗಳಲ್ಲಿ 1,805 ಪ್ರಕರಣಗಳು, ₹1.77 ಕೋಟಿ ದಂಡ

ಬೆಂಗಳೂರು:- ಇತ್ತೀಚೆಗೆ ಯುವಕರು ಬೈಕ್ ಸ್ಟಂಟ್ ಹಾಗೂ ಅಪಾಯಕಾರಿ ರೀತಿಯ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸುತ್ತಿವೆ.

ಲಭ್ಯವಿರುವ ಅಂಕಿ-ಅಂಶಗಳು ಆಘಾತ ಮೂಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ವಾಹನ ಅಪಘಾತಗಳಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅಪಘಾತಗಳಿಗೆ ಸಂಬಂಧಿಸಿದಂತೆ ಅಪ್ರಾಪ್ತರು ಮತ್ತು ಅವರ ಪೋಷಕರ ವಿರುದ್ಧ 1,805 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇವರಿಂದ ಬರೋಬ್ಬರಿ ₹1.77 ಕೋಟಿ ದಂಡ ವಸೂಲಾಗಿದೆ.

ಬೆಂಗಳೂರು ನಗರದಲ್ಲಿ ಅಕ್ರಮ ಚಾಲನೆ ಪ್ರಕರಣಗಳು ಹೆಚ್ಚಾಗಿದ್ದು, ಮೈಸೂರು, ತುಮಕೂರು, ಕೊಡಗು ಮೊದಲಾದ ಜಿಲ್ಲೆಗಳು ನಂತರ ಸ್ಥಾನಗಳಲ್ಲಿ ಬರುತ್ತವೆ.

ಅಂಕಿ-ಅಂಶಗಳು:

ಬೆಂಗಳೂರು:

* 2023: 240 ಪ್ರಕರಣ – ₹18.31 ಲಕ್ಷ ದಂಡ
* 2024: 378 ಪ್ರಕರಣ – ₹16.99 ಲಕ್ಷ ದಂಡ
* 2025: 632 ಪ್ರಕರಣ – ₹15.65 ಲಕ್ಷ ದಂಡ

ಮೈಸೂರು:

* 2023: ಅಪ್ರಾಪ್ತರ ವಿರುದ್ಧ 21, ಪೋಷಕರ ವಿರುದ್ಧ 15 – ₹13.55 ಲಕ್ಷ ದಂಡ
* 2024: ಅಪ್ರಾಪ್ತರ ವಿರುದ್ಧ 27, ಪೋಷಕರ ವಿರುದ್ಧ 33 – ₹1.21 ಲಕ್ಷ ದಂಡ
* 2025: ಅಪ್ರಾಪ್ತರ ವಿರುದ್ಧ 19, ಪೋಷಕರ ವಿರುದ್ಧ 34 – ₹1.37 ಲಕ್ಷ ದಂಡ

ತುಮಕೂರು:

* 2023: 21 ಪ್ರಕರಣ (ಪೋಷಕರ ವಿರುದ್ಧ 8) – ₹78,000 ದಂಡ
* 2024: 35 ಪ್ರಕರಣ (ಪೋಷಕರ ವಿರುದ್ಧ 13) – ₹95,500 ದಂಡ
* 2025: 21 ಪ್ರಕರಣ (ಪೋಷಕರ ವಿರುದ್ಧ 6) – ₹1.50 ಲಕ್ಷ ದಂಡ

ಅಪ್ರಾಪ್ತ ಚಾಲನೆ ತಡೆಗಾಗಿ ಭಾರತೀಯ ನ್ಯಾಯಸಂಹಿತೆ ಮತ್ತು ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣಗಳು ದಾಖಲಿಸಲಾಗುತ್ತಿದ್ದು, ಸಂಬಂಧಿತ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಪ್ರಮಾಣಿತ ವಾಹನ ನೋಂದಣಿಗಳನ್ನು ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಶಿಫಾರಸು ಮಾಡಲಾಗಿದೆ.

ಪ್ರತಿವರ್ಷ ಜನವರಿಯಲ್ಲಿ ರಸ್ತೆ ಸುರಕ್ಷತಾ ತಿಂಗಳಂದು ವಿಶೇಷ ಅಭಿಯಾನಗಳು ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತವೆ. ಬೆಂಗಳೂರು ನಗರದಲ್ಲಿ ವೀಲಿ ಸ್ಟಂಟ್‌ಗಳನ್ನು ತಡೆಯಲು 37 ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ, ಕಠಿಣ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಸುರಕ್ಷತೆಯನ್ನು ಗಮನಿಸಿ ವಾಹನ ಚಾಲನೆ ಮಾಡುವಂತೆ ಪೊಲೀಸ್ ಇಲಾಖೆ ಎಚ್ಚರಿಸಿದೆ.

error: Content is protected !!