Home Blog Page 104

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ನೇಮಕ!

0

ಇರಾನ್/ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಮಧ್ಯಂತರ ಸರ್ವೋಚ್ಚ ನಾಯಕತ್ವಕ್ಕೆ ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ ನೇಮಕಗೊಂಡಿದ್ದಾರೆ.

ಖಮೇನಿಯವರ ಮೃತ್ಯು ಬಳಿಕ ಶಾಶ್ವತ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗುವವರೆಗೆ, ಮಧ್ಯಂತರ ಮಂಡಳಿಯು ರಾಜ್ಯದ ಎಲ್ಲಾ ಅಧಿಕಾರಗಳನ್ನು ಚಲಾಯಿಸುತ್ತಿದೆ. ಈ ಮಂಡಳಿಯು ನ್ಯಾಯಶಾಸ್ತ್ರಜ್ಞ ಸದಸ್ಯರು ಮತ್ತು ಧರ್ಮಗುರುಗಳೊಂದಿಗೆ ದೇಶದ ರಾಜಕೀಯ, ಧಾರ್ಮಿಕ ಹಾಗೂ ಸೈನಿಕ ವ್ಯವಹಾರಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ.

1989ರಿಂದ ಇರಾನ್ ಸರ್ವೋಚ್ಚ ನಾಯಕರಾಗಿ ಅಧಿಕಾರ ಹೊಂದಿದ್ದ 86 ವರ್ಷದ ಖಮೇನಿ ಅಮೆರಿಕ–ಇಸ್ರೇಲ್ ಜಂಟಿ ಏರ್‌ಸ್ಟ್ರೈಕ್‌ನಲ್ಲಿ ಬಲಿಯಾಗಿದ್ದಾರೆ. ಅವರ ಸಾವಿನಿಂದಾಗಿ ದೇಶದ ರಾಜಕೀಯ ಹಾಗೂ ಅಂತಾರಾಷ್ಟ್ರೀಯ ಸ್ಥಿತಿ ತೀವ್ರ ತಳಮಳಕ್ಕೆ ಒಳಗಾಗಿದೆ.

ಮಡಿಕೇರಿಯಲ್ಲಿ ಕಾಡಾನೆ ದಾಳಿ: 17 ವರ್ಷದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಭೀಕರ ಕಾಡಾನೆ ದಾಳಿಗೆ 17 ವರ್ಷದ ವಿದ್ಯಾರ್ಥಿನಿ ಪೂಜಾ ಬಲಿಯಾಗಿದ್ದಾರೆ.

ಮಡಿಕೇರಿ ಸಂತ ಮೈಕೆಲ್ ಶಾಲೆಯ ಪ್ರಥಮ PUC ಯಲ್ಲಿದ್ದ ಪೂಜಾ, ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಬಸ್ಸಿನಿಂದ ಇಳಿದು ದಾರಿಯಲ್ಲಿ ಸಾಗುತ್ತಿದ್ದಾಗ, ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುವತಿಯ ಶವವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿ ಪೂಜಾ ಹತ್ಯೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಾಡಾನೆ ದಾಳಿಯ ಸಂದರ್ಭದಲ್ಲಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.  ಈ ಘಟನೆ ಗ್ರಾಮದಲ್ಲಿ ಭಾರೀ ದುಃಖ, ಆತಂಕ ಮತ್ತು ಆಕ್ರೋಶ ಮೂಡಿಸಿದೆ.

ಕೈಗಾ ಅಣು ವಿದ್ಯುತ್ ಯೋಜನೆ ವಿಸ್ತರಣೆ: 5–6ನೇ ಘಟಕ ಕಾಂಕ್ರೀಟಿಕರಣಕ್ಕೆ ಅಜಿತ್ ಕುಮಾರ್ ಮೊಹಂತಿ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿರುವ ಕೈಗಾ ಅಣು ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದ 5 ಮತ್ತು 6ನೇ ಅಣು ವಿದ್ಯುತ್ ಘಟಕಗಳ ನಿರ್ಮಾಣ ಕಾರ್ಯ ಮುಂದುವರಿದಿದೆ. ಭಾನುವಾರ ಕಾಂಕ್ರೀಟಿಕರಣ ಕಾರ್ಯಕ್ಕೆ ಅಣು ಶಕ್ತಿ ಆಯೋಗದ ಅಧ್ಯಕ್ಷ ಅಜಿತ್ ಕುಮಾರ್ ಮೊಹಂತಿ ಚಾಲನೆ ನೀಡಿದರು.

2000ರಲ್ಲಿ ಸ್ಥಾಪಿತವಾದ ಈ ಕೇಂದ್ರದಲ್ಲಿ ಈಗಾಗಲೇ ನಾಲ್ಕು ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 2,280 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. ವಿದ್ಯುತ್ ಬೇಡಿಕೆ ಹೆಚ್ಚಳದ ಹಿನ್ನೆಲೆ ತಲಾ 700 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಹೊಸ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

2030ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಎನ್‌ಪಿಸಿ ನಿರ್ದೇಶಕ ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹೊಸ ಘಟಕಗಳ ಆರಂಭದಿಂದ ಸ್ಥಳೀಯರಿಗೆ 1400 ರಿಂದ 1600 ಉದ್ಯೋಗಾವಕಾಶಗಳು ಸಿಗುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಸಿಲುಕಿದವರ ರಕ್ಷಣೆಗೆ ಸಹಾಯವಾಣಿ – ಕೋಲಾರ ಜಿಲ್ಲಾಧಿಕಾರಿ ಮಾಹಿತಿ

0

ಕೋಲಾರ: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಹತ್ಯೆಯಾದರೆಂಬ ವರದಿಗಳು ಹೊರಬಿದ್ದಿವೆ. ಮಧ್ಯಪ್ರಾಚ್ಯದಲ್ಲಿ ಯುದ್ಧ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಹಲವೆಡೆ ವಿಮಾನ ಹಾರಾಟ ರದ್ದಾಗಿದೆ.

ಪರಿಣಾಮವಾಗಿ ದುಬೈ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕನ್ನಡಿಗರು ಹಾಗೂ ಭಾರತೀಯರು ಸಿಲುಕಿದ್ದಾರೆ. ಅವರ ರಕ್ಷಣೆಗೆ ಕೋಲಾರ ಜಿಲ್ಲಾಡಳಿತ ಸಹಾಯವಾಣಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

ಕತಾರ್, ಬಹ್ರೇನ್, ಜೋರ್ಡಾನ್, ಇರಾಕ್, ಕುವೈತ್ ಹಾಗೂ ಪ್ಯಾಲೆಸ್ಟೈನ್ ದೇಶಗಳ ಸಹಾಯವಾಣಿ ಸಂಖ್ಯೆಗಳು ಪ್ರಕಟವಾಗಿದ್ದು, ಅಗತ್ಯವಿದ್ದರೆ ಸಂಪರ್ಕಿಸಲು ಮನವಿ ಮಾಡಲಾಗಿದೆ.

ಇದೇ ವೇಳೆ ಕೋಲಾರ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಆರಂಭಿಸಲಾಗಿದ್ದು, 9740050061 ಮತ್ತು 9606241449 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.

ದುಬೈನಲ್ಲಿ ಸಿಲುಕಿರುವ ಬಳ್ಳಾರಿ ಜಿಲ್ಲೆಯ 50ಕ್ಕೂ ಹೆಚ್ಚು ಜನರ ನೆರವಿಗೆ ಮಾಜಿ ಸಚಿವ ಬಿ. ನಾಗೇಂದ್ರ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಕಾಲ್ ಮೂಲಕ ಸಿಲುಕಿದವರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.

ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಕಿರಣ್ ಗೌಡ ಕೂಡ ಸಂಕಷ್ಟದಲ್ಲಿರುವ ಕನ್ನಡಿಗರಿಗೆ ಸಹಾಯಕ್ಕಾಗಿ 971 52 699 5413 ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಭಾರತೀಯರ ಮೇಲೂ ತೀವ್ರವಾಗಿ ತಟ್ಟಿದ್ದು, ಸಿಲುಕಿರುವವರ ಸುರಕ್ಷಿತ ವಾಪಸ್ಸಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಭಾರತದಂತೆಯೇ ಈ ದೇಶಗಳಲ್ಲೂ ಹೋಳಿ ಹಬ್ಬ ಸಂಭ್ರಮದಿಂದ ಆಚರಿಸಲಾಗುತ್ತೆ!

0

ಭಾರತದಲ್ಲಿ ಅತ್ಯಂತ ಸಂಭ್ರಮದ ಹಬ್ಬಗಳಲ್ಲಿ ಹೋಳಿ ಒಂದು. ಈ ವರ್ಷ ಮಾರ್ಚ್ 3 ಮತ್ತು 4ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ.

ಹಬ್ಬದ ಸಮಯದಲ್ಲಿ ಜನರು ಪರಸ್ಪರ ಬಣ್ಣಗಳನ್ನು ಮೈಮೇಲೆ ಹಚ್ಚಿಕೊಂಡು ಸಂತೋಷವನ್ನು ಹಂಚಿಕೊಳ್ಳುತ್ತಾರೆ. ಯಾವುದೇ ಜಾತಿ-ಮತ ಭೇದವಿಲ್ಲದೆ ಜನರು ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಪಾಲ್ಗೊಳ್ಳುತ್ತಾರೆ. ಭಾರತೀಯರಂತೆ, ವಿಶ್ವದ ನಾನಾ ಭಾಗಗಳಲ್ಲಿಯೂ ಹೋಳಿ ಹಬ್ಬವನ್ನು ಉತ್ಸಾಹದಿಂದ ಆಚರಿಸಲಾಗುತ್ತದೆ. ನೇಪಾಳದಲ್ಲಿ ಫಾಗು ಪೂರ್ಣಿಮಾ ಎಂದು ಕರೆಯಲ್ಪಡುವ ಹಬ್ಬವನ್ನು ಹಿಂದೂ ಮತ್ತು ಬೌದ್ಧ ಸಮುದಾಯಗಳು ಆಚರಿಸುತ್ತಾರೆ.

ಬಾಂಗ್ಲಾದೇಶದಲ್ಲಿ ಡೋಲ್ ಪೂರ್ಣಿಮಾ ಅಥವಾ ವಸಂತ ಹಬ್ಬದಂತೆ, ರಾಧಾ-ಕೃಷ್ಣ ಮೆರವಣಿಗೆಗಳು ಮತ್ತು ಸಾಂಪ್ರದಾಯಿಕ ಹಾಡುಗಳು ನಡೆಯುತ್ತವೆ. ಪಾಕಿಸ್ತಾನದಲ್ಲಿ ಸಿಂಧ್ ಪ್ರಾಂತ್ಯದ ಹಿಂದೂ ಸಮುದಾಯ ದೇವಾಲಯಗಳಲ್ಲಿ ಹೋಳಿ ಆಚರಿಸುತ್ತಾರೆ. ಮಾರಿಷಸ್, ಫಿಜಿ, ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಮೂಲದ ಜನರು ಹೋಳಿ ಮೇಳ, ಫಾಗ್ವಾ ಹಬ್ಬ, ನೃತ್ಯ ಮತ್ತು ಸಂಗೀತದೊಂದಿಗೆ ಹಬ್ಬವನ್ನು ಆಚರಿಸುತ್ತಾರೆ.

ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಲಂಡನ್, ಲೀಸೆಸ್ಟರ್ ಮುಂತಾದ ನಗರಗಳಲ್ಲಿ ಹೋಳಿ ಸಂಭ್ರಮದಾಯಕವಾಗಿ ಆಯೋಜಿಸಲಾಗುತ್ತದೆ. ಅಮೆರಿಕ ಮತ್ತು ಕೆನಡಾದಲ್ಲಿಯೂ ಉತಾಹ್, ನ್ಯೂಯಾರ್ಕ್, ಕ್ಯಾಲಿಫೋರ್ನಿಯಾ ಮುಂತಾದ ನಗರಗಳಲ್ಲಿ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಭಾರತೀಯ ಸಮುದಾಯಗಳು ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ, ಬಣ್ಣ, ನೃತ್ಯ ಮತ್ತು ಸಂಸ್ಕೃತಿಯ ಆಕರ್ಷಕ ಮೇಳವನ್ನಾಗಿ ಮಾಡುತ್ತವೆ.

ಫ್ಲೈಟ್ ರದ್ದು, ಕನ್ನಡಿಗರ ಪರದಾಟ: ದುಬೈನಲ್ಲಿ ಸಿಲುಕಿದವರಿಗೆ ಸಹಾಯ ಹಸ್ತ ಚಾಚಿದ ಒಕ್ಕಲಿಗರ ಸಂಘ

0

ಹಾಸನ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮ ದುಬೈ ಹಾಗೂ ಅಬುಧಾಬಿಯಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 50ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ದುಬೈ ಒಕ್ಕಲಿಗರ ಸಂಘ ತುರ್ತು ನೆರವಿಗಾಗಿ ಮುಂದಾಗಿದ್ದು, ಸಂಘದ ಅಧ್ಯಕ್ಷ ಯತೀಶ್ ಸಹಾಯಕ್ಕಾಗಿ +971555114205 ಸಂಖ್ಯೆಗೆ ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.

ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯ ಪ್ರವಾಸಿಗರು ವಾಪಸ್ಸಾಗಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. 20 ಮಹಿಳೆಯರು ಮತ್ತು 30 ಪುರುಷರು ದುಬೈನಲ್ಲಿ ಉಳಿದಿದ್ದಾರೆ.

ಬಾಗಲಕೋಟೆಯ ಬೀಳಗಿ ಮೂಲದ ಗಿರೀಶ್ ಕೆರೂರು ಪ್ಯಾರಿಸ್‌ಗೆ ತೆರಳುವ ವೇಳೆ ಅಬುಧಾಬಿಯಲ್ಲಿ ಸಿಲುಕಿದ್ದು, ತಮ್ಮ ಸ್ಥಿತಿಗತಿಯನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಹಾಗೂ ನಗರ ಶಾಸಕ ನಾರಾ ಭರತ್ ರೆಡ್ಡಿ ಈ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಮಾರ್ಚ್ 2ರವರೆಗೆ ವಿಮಾನ ಹಾರಾಟ ಇರುವುದಿಲ್ಲ ಎಂಬ ಮಾಹಿತಿ ದೊರೆತಿದೆ.

ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮ ಕನ್ನಡಿಗರ ಮೇಲೂ ತೀವ್ರವಾಗಿ ತಟ್ಟಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ.

ಚುನಾವಣೆಗೆ ಮುನ್ನ ಪುದುಚೇರಿಯಲ್ಲಿ 2,700 ಕೋಟಿ ಯೋಜನೆಗಳಿಗೆ ಚಾಲನೆ: ಡಿಎಂಕೆ–ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

0

ಪುದುಚೇರಿ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆ ಜೋರಾಗಿರುವ ನಡುವೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಭೇಟಿ ನೀಡಿ ₹2,700 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಎಂಕೆ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದ ಅವಧಿಯಲ್ಲಿ ಪುದುಚೇರಿಯ ಜನರು ಭ್ರಷ್ಟಾಚಾರ, ಅಪರಾಧ ಮತ್ತು ಯಾತನೆ ಅನುಭವಿಸಿದರು. ಗೂಂಡಾಗಳು ಮತ್ತು ಮಾದಕವಸ್ತು ಮಾಫಿಯಾಗಳು ಬೀದಿಗಳನ್ನು ಆಳುತ್ತಿದ್ದವು,” ಎಂದು ಆರೋಪಿಸಿದರು.

“ಕಾಂಗ್ರೆಸ್ ಪುದುಚೇರಿಯನ್ನು ದೆಹಲಿಯ ಒಂದು ಕುಟುಂಬಕ್ಕೆ ಎಟಿಎಂ ಆಗಿ ಪರಿವರ್ತಿಸಿತು. ಡಿಎಂಕೆ ಹಗರಣಗಳ ಸುದೀರ್ಘ ಪಟ್ಟಿ ಹೊಂದಿದೆ. ಈ ಎರಡೂ ಪಕ್ಷಗಳು ಪುದುಚೇರಿಯ ಅಭಿವೃದ್ಧಿಗೆ ಅಡ್ಡಿಯಾಗಿವೆ,” ಎಂದು ಹೇಳಿದರು.

ಪುದುಚೇರಿ ಮತ್ತೆ ಭ್ರಷ್ಟಾಚಾರ ಮತ್ತು ಅಪರಾಧದ ಯುಗಕ್ಕೆ ಮರಳಬೇಕೇ? ಜನರು ಅದನ್ನು ಬಯಸುವುದಿಲ್ಲ ಎಂದು ಅವರು ಹೇಳಿದರು. 2047ರೊಳಗೆ ಭಾರತ ಮತ್ತು ಪುದುಚೇರಿಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ ಎಂದರು.

ಕೇಂದ್ರವು ನಗರ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. ಪ್ರವಾಸೋದ್ಯಮ ಪುದುಚೇರಿಯ ಶಕ್ತಿ ಎಂದು ಬಣ್ಣಿಸಿದ ಪ್ರಧಾನಿ, ಆಧ್ಯಾತ್ಮಿಕ, ಪರಿಸರ ಹಾಗೂ ಆರೋಗ್ಯ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸಲಾಗುತ್ತಿದೆ ಎಂದು ತಿಳಿಸಿದರು.

ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಹಿಂಸಾಚಾರ: ಕರಾಚಿಯಲ್ಲಿ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು

0

ಕರಾಚಿ: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಪ್ರೀಂ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಕರಾಚಿಯಲ್ಲಿರುವ ರಾಯಭಾರಿ ಕಚೇರಿ ಮೇಲೆ ನೂರಾರು ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಕೈಯಲ್ಲಿ ಕೋಲು ಹಾಗೂ ಕಲ್ಲುಗಳನ್ನು ಹಿಡಿದು ಕಚೇರಿಯತ್ತ ನುಗ್ಗಿದ ಗುಂಪು ಕಲ್ಲು ತೂರಾಟ ನಡೆಸಿದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಖಮೇನಿ ಹತ್ಯೆಗೆ ಅಮೆರಿಕವೇ ಕಾರಣ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಪಡೆಗಳು ಓಪನ್ ಫೈರಿಂಗ್ ನಡೆಸಿದವು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಅಮೆರಿಕ ಮಿತ್ರ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸುತ್ತಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ಸಂದೇಶ ರವಾನಿಸಿದ್ದು, “ಮಿತ್ರ ರಾಷ್ಟ್ರಗಳ ಮೇಲೆ ದಾಳಿ ನಡೆದರೆ ತೀವ್ರ ಪ್ರತಿಕ್ರಿಯೆ ನೀಡಲಾಗುವುದು” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಹಲವೆಡೆ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಕರಾಚಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ಕ್ರಮಗಳ ವಿರುದ್ಧ ಪ್ರತಿಭಟನೆಗಳು ಮುಂದುವರಿದಿವೆ. ಅಮೆರಿಕ–ಇಸ್ರೇಲ್ ದಾಳಿಯಲ್ಲಿ 200 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಪ್ರತಿಯಾಗಿ ಇರಾನ್ ಬಲವಾದ ಪ್ರತ್ಯುತ್ತರ ನೀಡುವುದಾಗಿ ಘೋಷಿಸಿದೆ. ಪ್ರದೇಶದಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ಉತ್ತರಾಧಿಕಾರಿಗಳ ಪೈಕಿ ಖಮೇನಿ ಅವರ ಎರಡನೇ ಪುತ್ರ ಮೊಜ್ತಬಾ ಖಮೇನಿ ಪ್ರಮುಖ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. 1969ರಲ್ಲಿ ಜನಿಸಿದ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಾಗೂ ಇರಾನ್ ಧಾರ್ಮಿಕ ವ್ಯವಸ್ಥೆಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.

ದುಬೈನಲ್ಲಿ ಕನ್ನಡಿಗರು ಸಂಪರ್ಕಕ್ಕೆ ಸಿಗುತ್ತಿಲ್ಲ: ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ – ಡಿಕೆ ಶಿವಕುಮಾರ್

ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ, ವಿಶೇಷವಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಮ್ಮ ಇಬ್ಬರು ಶಾಸಕರಾದ ಭೋಜೇಗೌಡ ಹಾಗೂ ಎ.ಸಿ. ಶ್ರೀನಿವಾಸ ಕೂಡ ದುಬೈನಲ್ಲಿ ಇದ್ದಾರೆ. ನಾನು ವೈಯಕ್ತಿಕವಾಗಿ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕಕ್ಕೆ ಸಿಗುತ್ತಿಲ್ಲ,” ಎಂದು ತಿಳಿಸಿದ್ದಾರೆ.

ಈ ಕುರಿತು ದೆಹಲಿಯ ರೆಸಿಡೆಂಟ್ ಕಮಿಷನರ್ ಸಂಪರ್ಕದಲ್ಲಿರಲು ಸೂಚಿಸಲಾಗಿದೆ ಎಂದು ತಿಳಿಸಿದ ಅವರು, ಎಲ್ಲ ನಾಗರಿಕರ ರಕ್ಷಣೆ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು. ಮಧ್ಯಪ್ರಾಚ್ಯದಲ್ಲಿ ಲಕ್ಷಾಂತರ ಭಾರತೀಯರು, ಅದರಲ್ಲೂ ಕರ್ನಾಟಕ ಹಾಗೂ ಕೇರಳ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಬೇಕು ಎಂದು ಒತ್ತಾಯಿಸಿದರು.

ನಡೆಯುತ್ತಿರುವ ದಾಳಿಗಳನ್ನು ಖಂಡಿಸಿದ ಡಿಸಿಎಂ, ಮಕ್ಕಳ ಶಾಲೆಗಳ ಮೇಲಿನ ದಾಳಿಗಳು ಖಂಡನೀಯ ಎಂದರು. “ನಮ್ಮ ದೇಶ ಶಾಂತಿಯನ್ನು ನಂಬುತ್ತದೆ. ಇಂತಹ ದಾಳಿಗಳು ಸರಿಯಲ್ಲ. ಆದರೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ,” ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರದಿಂದ ಪ್ರತ್ಯೇಕ ಹೆಲ್ಪ್‌ಲೈನ್ ಆರಂಭಿಸುವ ಸಾಧ್ಯತೆ ಇಲ್ಲ. ಯಾವುದೇ ಅಧಿಕೃತ ಮಾಹಿತಿ ವಿದೇಶಾಂಗ ಇಲಾಖೆಯಿಂದಲೇ ಬರಬೇಕು ಎಂದು ಸ್ಪಷ್ಟಪಡಿಸಿದ ಅವರು, ವಿದೇಶದಲ್ಲಿರುವ ಕನ್ನಡಿಗರಿಗೆ ಆತ್ಮಸ್ಥೈರ್ಯ ತುಂಬಲು ಕನ್ನಡ ಸಂಘಟನೆಗಳು ಮುಂದಾಗಬೇಕು ಎಂದು ಮನವಿ ಮಾಡಿದರು.

ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ದುಬೈನಲ್ಲಿ ಲಾಕ್: ವಿಡಿಯೋ ಮೂಲಕ ಪರಿಸ್ಥಿತಿ ವಿವರಿಸಿದ ಡಾಲು ರವಿ!

ಮಂಡ್ಯ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ಇರಾನ್ ನಡೆಸುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ದುಬೈನಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಈ ತಾತ್ಕಾಲಿಕ ಸ್ಥಗಿತದಿಂದಾಗಿ ಹಲವು ಪ್ರಯಾಣಿಕರು ಅಲ್ಲೇ ಸಿಲುಕಿಕೊಂಡಿದ್ದಾರೆ. ಅಂತಹ ಪ್ರಯಾಣಿಕರಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ದುಬೈಗೆ ತೆರಳಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಮತ್ತು ಚಲನಚಿತ್ರ ಮನ್ ಮುಲ್ ನಿರ್ದೇಶಕ ಡಾಲು ರವಿ ಕೂಡ ಕೂಡ ಒಬ್ಬರು..

ಅವರು ದುಬೈನ ಖಾಸಗಿ ಹೋಟೆಲ್‌ನಲ್ಲಿ ಸುರಕ್ಷಿತವಾಗಿ ಉಳಿದಿದ್ದಾರೆ ಎಂದು ಸ್ಥಳದಿಂದ ವೀಡಿಯೋ ಸಂದೇಶ ಮೂಲಕ ಮಾಹಿತಿ ನೀಡಿದ್ದಾರೆ. ಡಾಲು ರವಿ ಹೇಳುವಂತೆ, ಯುದ್ಧದ ಪರಿಣಾಮ ಮತ್ತು ವಿಮಾನ ಸಂಚಾರ ಸ್ಥಗಿತದ ಕಾರಣವಾಗಿ ಸ್ಥಳದಲ್ಲಿ ಜನರ ನಡುವೆ ಆತಂಕವಾಗಿದೆ, ಆದರೆ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸುರಕ್ಷಿತರಾಗಿದ್ದೇವೆ ಎಂದು ಸ್ಥಳದ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.

error: Content is protected !!