Home Blog Page 111

ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ: NIA ತನಿಖೆಗೆ ಶ್ರೀರಾಮುಲು ಮನವಿ

0

ಬಾಗಲಕೋಟೆ: ಜಿಲ್ಲೆಯಲ್ಲಿನ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಘಟನೆಯ ವಿವರ

ಫೆಬ್ರವರಿ 19ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೆರವಣಿಗೆಯ ಮೇಲೆ ಚಪ್ಪಲಿ ಎಸೆದು ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಶ್ರೀರಾಮುಲು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ ಎಂದು ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ. ಸತ್ಯಾಸತ್ಯತೆ ಹೊರಬರಲು ಎನ್‌ಐಎ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಘಟನೆಗಳ ಮಾದರಿಯಲ್ಲೇ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು, ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇದರ ನಡುವೆ ಕೆಲ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ವಿಡಿಯೋ ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. “15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ” ಎಂಬ ಅರ್ಥದ ಹೇಳಿಕೆ ಪೋಸ್ಟ್‌ನಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು: ಹೈಕೋರ್ಟ್ ಆದೇಶ

0

ಬೆಂಗಳೂರು: ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕಾಗಿದ್ದು, ಈ ರಜೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸಿಸಿಎಲ್‌ ಕೋರಿ ಬಂದ ಅರ್ಜಿಗಳನ್ನು ಆದ್ಯತೆ ಮೇರೆಗೆ ಮಂಜೂರು ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್‌ನಲ್ಲಿ (ಸಿ-ಡ್ಯಾಕ್) ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ವಡ್ಡೆ ಅವರಿಗೆ ಫೆಬ್ರವರಿ 6ರಿಂದ ಮೇ 20ರವರೆಗೆ ಚೈಲ್ಡ್ ಕೇರ್ ಲೀವ್ ಮಂಜೂರು ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಫೆಬ್ರವರಿ 5ರಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ರಜೆ ಮಂಜೂರು ಮಾಡಲು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಿಎಟಿ ಆದೇಶವನ್ನು ಎತ್ತಿಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದೆ.

ನ್ಯಾಯಪೀಠ ತಿಳಿಸಿದಂತೆ, ಇತರೆ ರಜೆಗಳನ್ನು ಮಂಜೂರು ಮಾಡುವುದು ಅಥವಾ ನಿರಾಕರಿಸುವುದು ಉದ್ಯೋಗದಾತರ ವಿವೇಚನೆಗೆ ಒಳಪಟ್ಟಿರಬಹುದು. ಆದರೆ ಸಿಸಿಎಲ್‌ ವಿಚಾರದಲ್ಲಿ ಅಂತಹ ವಿವೇಚನಾ ಅಧಿಕಾರ ಅನ್ವಯಿಸುವುದಿಲ್ಲ. ಮಕ್ಕಳ ಆರೈಕೆಗೆ ಮೀಸಲಾದ ಈ ರಜೆ ನೀಡಲೇಬೇಕು ಎಂದು ಸ್ಪಷ್ಟಪಡಿಸಿದೆ. ತಾಯಿಗೆ ರಜೆ ನಿರಾಕರಿಸಿದರೆ ಅದು ಮಕ್ಕಳ ಮೇಲೆ ಒತ್ತಡ ಉಂಟುಮಾಡಬಹುದು. ಆದ್ದರಿಂದ ಸಿಸಿಎಲ್‌ ಮಗುವಿನ ಹಕ್ಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವಕೀಲರು, 5 ತಿಂಗಳ ಸಿಸಿಎಲ್‌ ಕೋರಿದ್ದರೂ ಕೇವಲ 18 ದಿನಗಳ ರಜೆ ಮಾತ್ರ ಮಂಜೂರು ಮಾಡಲಾಗಿದೆ. ಇದು ಕೇಂದ್ರ ನಾಗರಿಕ ಸೇವಾ ರಜೆ ನಿಯಮ 43ಸಿ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.
ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗಾಗಿ ತಾಯಿಯ ಆರೈಕೆ ಅಗತ್ಯವಿದೆ. ಪರೀಕ್ಷಾ ಅವಧಿಯಲ್ಲಿರುವ ಮಕ್ಕಳಿಗೆ ತಾಯಿಯ ಬೆಂಬಲ ಮುಖ್ಯವಾಗಿದ್ದು, ರಜೆ ನಿರಾಕರಣೆ ಒತ್ತಡಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. ವಾದ ಆಲಿಸಿದ ಹೈಕೋರ್ಟ್, ಫೆಬ್ರವರಿ 6ರಿಂದ ಮೇ 20ರವರೆಗೆ ಸಿಸಿಎಲ್‌ ರಜೆ ನೀಡುವಂತೆ ಅಂತಿಮ ಆದೇಶ ನೀಡಿದೆ.

ಟ್ರಂಪ್‌ಗೆ ಮೀರಿದ ಮೋದಿ ಡಿಜಿಟಲ್ ದಾಪುಗಾಲು: ನೆಸ್ಸೆಟ್ ಗೌರವವೂ ಪ್ರಧಾನಿ ಖಾತೆಗೆ

0

ನವದೆಹಲಿ: ನರೇಂದ್ರ ಮೋದಿ ಅವರ ಜನಪ್ರಿಯತೆ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದೆ. ಇನ್‌ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ಅವರು ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ.

2014ರಲ್ಲಿ ಮೆಟಾ ವೇದಿಕೆಯಾದ ಇನ್‌ಸ್ಟಾಗ್ರಾಂನಲ್ಲಿ ಖಾತೆ ತೆರೆದ ಪ್ರಧಾನಿ ಮೋದಿ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹಿಂದಿಕ್ಕಿದ್ದಾರೆ. ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಲಾ ಡಾ ಸಿಲ್ವಾ 14.4 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದು, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಭಾರತದೊಳಗೆ ಪ್ರಧಾನಿ ಮೋದಿ ನಂತರ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (16.1 ಮಿಲಿಯನ್). ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಮಾರು 12.6 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಕೀನ್ಯಾದ ಯುವ ಶಾಸಕ ಕ್ಯಾಲೆಬ್ ಭಗವದ್ಗೀತೆ ಹಿಡಿದು ಪ್ರಮಾಣವಚನ: ಮೊಂಬಾಸಾದಲ್ಲಿ ಐತಿಹಾಸಿಕ ಕ್ಷಣ

0

ಕೀನ್ಯಾ: ಮೊಂಬಾಸಾ ಕೌಂಟಿಯ ವಿಧಾನಸಭೆಯಲ್ಲಿ ಯುವ ನಾಯಕರೊಬ್ಬರು ಬಲಗೈಯಲ್ಲಿ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಈ ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ.

ಮೊಂಬಾಸಾ ಯುವ ಅಸೆಂಬ್ಲಿಯ ಕಾರ್ಯಕ್ರಮದ ವೇಳೆ, ಸದಸ್ಯರ ಸಮ್ಮುಖದಲ್ಲಿ ಕ್ಯಾಲೆಬ್ ಅವರು ‘ಭಗವದ್ಗೀತೆ ಆಸ್ ಇಟ್ ಇಸ್’ ಗ್ರಂಥವನ್ನು ಎತ್ತಿಹಿಡಿದು ಶಪಥ ಸ್ವೀಕರಿಸಿದರು. ಸಾರ್ವಜನಿಕ ಹುದ್ದೆಗಳು ಸಾಮಾನ್ಯವಾಗಿ ಪ್ರಬಲ ಧಾರ್ಮಿಕ ಸಂಪ್ರದಾಯಗಳೊಂದಿಗೆ ಸಂಬಂಧ ಹೊಂದಿರುವ ದೇಶದಲ್ಲಿ ಈ ನಡೆ ವಿಶೇಷ ಮಹತ್ವ ಪಡೆದುಕೊಂಡಿದೆ.

ಈ ಕುರಿತು ಇಸ್ಕಾನ್ನ ಓಂಕಾರ ಮುಕುಂದ ದಾಸ್ ಪ್ರತಿಕ್ರಿಯಿಸಿ, ಇದು ನಾಟಕೀಯ ನಡೆ ಅಲ್ಲ, ಹೃದಯದಿಂದ ಬಂದ ಭಾವನೆ ಎಂದು ಹೇಳಿದ್ದಾರೆ.

ಕ್ಯಾಲೆಬ್ ಹರೇ ಕೃಷ್ಣ ಸಮುದಾಯದ ಭಕ್ತರಾಗಿದ್ದು, ತಮ್ಮ ಅಣ್ಣನ ಮೂಲಕ ಇಸ್ಕಾನ್ ಸಂಘಟನೆಯೊಂದಿಗೆ ಸೇರಿಕೊಂಡಿದ್ದಾರೆ. 2021ರಲ್ಲಿ ಸ್ಥಾಪಿತವಾದ ‘ದಿ ಬೆಟರ್ ಯು ಕ್ಲಬ್’ ಎಂಬ ವಿಶ್ವವಿದ್ಯಾಲಯ ಆಧಾರಿತ ಉಪಕ್ರಮದ ಅಧ್ಯಕ್ಷರಾಗಿ 180ಕ್ಕೂ ಹೆಚ್ಚು ಸದಸ್ಯರನ್ನು ಒಗ್ಗೂಡಿಸಿದ್ದಾರೆ.

ರಾತ್ರಿ ಮಲಗುವ ಮುನ್ನ 2 ಲವಂಗ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು..?

0

ಲವಂಗವು ಶಕ್ತಿಯುತ ಉತ್ಕರ್ಷಣ ನಿರೋಧಕ (antioxidant) ಗುಣಗಳನ್ನು ಹೊಂದಿದ್ದು, ಜೀವಕೋಶಗಳ ಹಾನಿ ತಡೆಯಲು ಸಹಾಯ ಮಾಡುತ್ತದೆ ಮತ್ತು ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಪುರುಷರ ಆರೋಗ್ಯಕ್ಕೆ ಅದರ ವಿಶೇಷ ಪ್ರಯೋಜನಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ:

  1. ಅಕಾಲಿಕ ಸ್ಖಲನ ನಿಯಂತ್ರಣ: ಕೆಲ ಪುರುಷರು ಸಂಭೋಗದ ವೇಳೆ ಅಕಾಲಿಕ ಸ್ಖಲನದಿಂದ ತೊಂದರೆ ಅನುಭವಿಸುತ್ತಾರೆ. ನಿಯಮಿತ ಲವಂಗ ಸೇವನೆ ಈ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  2. ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆ ತಡೆಯುವುದು: ಲವಂಗದ ಸಕ್ರಿಯ ಪದಾರ್ಥಗಳು ರಕ್ತ ಪರಿಚಲನೆಯನ್ನು ಸುಧಾರಿಸಿ, ಖಾಸಗಿ ಅಂಗಗಳ ಆರೋಗ್ಯಕ್ಕೆ ಉತ್ತಮವಾಗಿದೆ.
  3. ವೀರ್ಯದ ಗುಣಮಟ್ಟ ಸುಧಾರಣೆ: ಕಡಿಮೆ ವೀರ್ಯಾಣು ಸಂಖ್ಯೆಯ ಪುರುಷರಿಗೆ ಲವಂಗವು ಸಹಾಯ ಮಾಡಿ, ವೀರ್ಯದ ಸಂಖ್ಯೆಯನ್ನು ಮತ್ತು ಚಟುವಟಿಕೆಯನ್ನು ಹೆಚ್ಚಿಸುತ್ತದೆ.
  4. ಬ್ಲಡ್ ಶುಗರ್ ನಿಯಂತ್ರಣ: ಲವಂಗದಲ್ಲಿ ಇರುವ ಯುಜೆನಾಲ್ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಸಮತೋಲಗೊಳಿಸಲು ನೆರವಾಗುತ್ತದೆ, ಇದರಿಂದ ಮಧುಮೇಹ ನಿಯಂತ್ರಣ ಸಾಧ್ಯ.
  5. ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು: ಲವಂಗದ ಆಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಕಾರಿ.
  6. ಹಲ್ಲಿನ ಆರೋಗ್ಯ: ಹಲ್ಲು ನೋವು ಇರುವ ಸಂದರ್ಭದಲ್ಲಿ ಲವಂಗವನ್ನು ಬಳಸುವದು ತ್ವರಿತ ಪರಿಹಾರ ನೀಡುತ್ತದೆ.
  7. ಜೀರ್ಣಕ್ರಿಯೆ ಸುಧಾರಣೆ: ಲವಂಗವು ಆಹಾರ ಜೀರ್ಣವಾಗಲು ಸಹಾಯಮಾಡುತ್ತದೆ.
  8. ಬಾಯಿ ದುರ್ವಾಸನೆ ನಿವಾರಣೆ: ಬಾಯಿಯ ದುರ್ವಾಸನೆ ತಡೆಯಲು ಲವಂಗವು ಪರಿಣಾಮಕಾರಿ.
  9. ರೋಗನಿರೋಧಕ ಶಕ್ತಿ: ಲವಂಗವು ದೇಹದ ರೋಗಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಸೇವಿಸುವ ವಿಧಾನ:
ಪ್ರತಿದಿನ 2–3 ಲವಂಗವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಊಟದ ನಂತರ ಹಾಲು ಅಥವಾ ಬೆಚ್ಚಗಿನ ನೀರಿನೊಂದಿಗೆ ಸೇವಿಸಬಹುದು. ಲವಂಗವನ್ನು ಚೆನ್ನಾಗಿ ಅಗಿದು ನುಂಗಬೇಕು.

ಎಚ್ಚರಿಕೆ:
ಹೆಚ್ಚು ಪ್ರಮಾಣದಲ್ಲಿ ಸೇವನೆ ಮಾಡಿದರೆ ಹೊಟ್ಟೆ ಕಿರಿಕಿರಿ ಅಥವಾ ಉಸಿರಾಟದ ತೊಂದರೆಗಳು ಉಂಟಾಗಬಹುದು. ಶಿಫಾರಸು ಮಾಡಿದ ಪ್ರಮಾಣವನ್ನು ಮೀರಿ ಸೇವಿಸಬಾರದು.

ಅಧಿಕೃತವಾಗಿ ಸತಿ-ಪತಿಯಾದ ರಶ್ಮಿಕಾ, ವಿಜಯ್; ಅದ್ದೂರಿ ನಡೆದ ವಿವಾಹ!

0

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ಕುಟುಂಬಸ್ಥರು ಮತ್ತು ಆಪ್ತರ ಮಾತ್ರ ಆಹ್ವಾನಿತರಾಗಿದ್ದರು. ಹಲವು ವರ್ಷಗಳಿಂದ ಪ್ರೀತಿಸುತ್ತಾ ಬಂದ ಈ ಜೋಡಿ, ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಮದುವೆ ವೇಳೆ ರಶ್ಮಿಕಾ ಕುಟುಂಬದ ಕೊಡವ ಸಂಪ್ರದಾಯ ಮತ್ತು ವಿಜಯ್ ಕುಟುಂಬದ ಆಂಧ್ರ ಸಂಪ್ರದಾಯಗಳನ್ನು ಗೌರವಿಸಲು ವಿಭಿನ್ನ ಆಚರಣೆಗಳು ಆಯೋಜಿಸಲ್ಪಟ್ಟಿದ್ದು, ಹಳದಿ ಶಾಸ್ತ್ರ, ಮೆಹಂದಿ, ಸಂಗೀತ ಕಾರ್ಯಕ್ರಮಗಳು ಪೂರ್ಣವಾಗಿ ಪ್ಲ್ಯಾನ್ ಆಗಿ ನಡೆದವು. ಮದುವೆಗೆ ಸಾಂದರ್ಭಿಕವಾಗಿ ರವಿತೇಜ್, ಸಂದೀಪ್ ರೆಡ್ಡಿ ವಂಗಾ, ಆಶಿಕಾ ರಂಗನಾಥ್ ಹಾಗೂ ರಶ್ಮಿಕಾ ಗೆಳತಿಯರು ಉಪಸ್ಥಿತರಿದ್ದರು.

ದೇವರಕೊಂಡ ಸಮುದಾಯದ ಸಂಪ್ರದಾಯದಂತೆ ಮುಂಜಾನೆ ಮುಹೂರ್ತದಲ್ಲಿ ಮದುವೆ ನೆರವೇರಿದ್ದು, ಬಳಿಕ ಸಂಜೆ ರಶ್ಮಿಕಾ ಕುಟುಂಬದ ಸಂಪ್ರದಾಯದಂತೆ ಕೊಡವ ಆಚರಣೆಗೂ ಜೋಡಿ ಭಾಗಿಯಾಗಲಿದೆ. ಮಾರ್ಚ್ 4 ರಂದು ಮದುವೆಯ ಆರತಕ್ಷತೆ ನಡೆಯಲಿದ್ದು, ಕನ್ನಡ ಸಿನಿಮಾ ರಂಗದ ಹಲವರು, ಸ್ಯಾಂಡಲ್‌ವುಡ್‌ನ ಶಿವರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್ ಕುಟುಂಬ, ಗಣೇಶ್, ಧ್ರುವ ಸರ್ಜಾ, ಯಶ್, ಕಿಚ್ಚ ಸುದೀಪ್ ಸೇರಿದಂತೆ, ಆಹ್ವಾನಿತರಾಗಿದ್ದಾರೆ.

ಪಿಯುಸಿ ಪರೀಕ್ಷೆಗೂ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟ ಪೋಸ್ಟ್: ವಿದ್ಯಾರ್ಥಿಗಳಲ್ಲಿ ಆತಂಕ

0

ಬೆಂಗಳೂರು: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡುವುದಾಗಿ ಪೋಸ್ಟ್ ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ.

‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ” ಎಂದು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲೆ ಅನುಮಾನ ಹುಟ್ಟಿಸಿದೆ.

ಆದರೆ, ಯಾವ ವಿಷಯದ ಪ್ರಶ್ನೆ ಪತ್ರಿಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ಪರೀಕ್ಷಾ ಸಮಯದಲ್ಲಿ ಹಳೆಯ ಅಥವಾ ನಕಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಹಣ ಮಾಡುವ ಉದ್ದೇಶದಿಂದ ಇಂತಹ ಮೋಸಗಳು ನಡೆಯುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬಾರದು ಮತ್ತು ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಜನವರಿ 6, 2026ರಂದು ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ವಾಟ್ಸಾಪ್ ಮೂಲಕ ಹರಿದಾಡಿತ್ತು. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆ ತುಮಕೂರು ಜಿಲ್ಲೆಯಲ್ಲೂ ಪತ್ತೆಯಾಗಿತ್ತು.

ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿಸುತ್ತೇನೆಂದು 82 ಗ್ರಾಂ ಚಿನ್ನ ದೋಚಿದ ಶಿಕ್ಷಕ? ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ

0

ಧಾರವಾಡ: ವಿದ್ಯಾರ್ಥಿ ಜೀವನದ ಪ್ರಮುಖ ಹಂತವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪಾಸ್ ಮಾಡಿಸುತ್ತೇನೆಂದು ಹೇಳಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಮೋಸ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಧಾರವಾಡದಲ್ಲಿ ನಡೆದಿದೆ.

ನಗರದ ಶಿವನಗರ ನಿವಾಸಿ 10ನೇ ತರಗತಿ ವಿದ್ಯಾರ್ಥಿ ಅಭಿಷೇಕ್‌ಗೆ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್ ಪ್ರಶ್ನೆಪತ್ರಿಕೆ ಲೀಕ್ ಮಾಡಿ ಪಾಸ್ ಮಾಡಿಸುತ್ತೇನೆಂದು ನಂಬಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ತನ್ನ ಮಗನ ಕಾಲೇಜು ಫೀಸ್ ಕಟ್ಟಬೇಕಿದೆ, ಮನೆಯಲ್ಲಿರುವ ಬಂಗಾರವನ್ನು ತಂದುಕೊಡು ಎಂದು ಶಿಕ್ಷಕ ಕೇಳಿದ್ದಾನೆ ಎನ್ನಲಾಗಿದೆ.

ಮೊದಲಿಗೆ ನಿರಾಕರಿಸಿದ್ದ ವಿದ್ಯಾರ್ಥಿ, ಬಳಿಕ ಶಿಕ್ಷಕನ ಮಾತಿಗೆ ಮಣಿದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಡಿಯೋ ಕಾಲ್ ಮೂಲಕ ಅಲ್ಮೇರಾದಲ್ಲಿ ಇಟ್ಟಿದ್ದ 82 ಗ್ರಾಂ ಬಂಗಾರವನ್ನು ತೆಗೆದುಕೊಂಡು ಶಿಕ್ಷಕನಿಗೆ ನೀಡಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಷಯ ತಿಳಿದ ನಂತರ ಆತಂಕಗೊಂಡ ಅಭಿಷೇಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅವನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿ ಬಳಿ ಚಿನ್ನ ಪಡೆದು ಬ್ಯಾಂಕ್‌ನಲ್ಲಿ ಅಡವಿಟ್ಟಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ತೋರಿಸಿದರೂ ಪ್ರಕರಣ ದಾಖಲಿಸಲು ಧಾರವಾಡ ಉಪನಗರ ಪೊಲೀಸರು ಹಿಂದೇಟು ಹಾಕಿದ್ದಾರೆ ಎಂಬುದು ಪೋಷಕರ ಆರೋಪ.

ಎನ್. ಶಶಿಕುಮಾರ್ ಪೊಲೀಸ್ ಕಮಿಷನರ್ ಪ್ರಕರಣ ದಾಖಲಿಸಲು ಸೂಚನೆ ನೀಡುವುದಾಗಿ ತಿಳಿಸಿದ್ದಾರೆ. ಸದ್ಯ ಪೋಷಕರು ಉಪನಗರ ಠಾಣೆಗೆ ದೂರು ನೀಡಿದ್ದಾರೆ.

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್: ಕಾನ್ಫಿಡೆಂಟ್ ಗ್ರೂಪ್‌ ಒಡೆಯನಿಗೆ ಮುಳುವಾಯ್ತಾ 500 ಕೋಟಿ ಮಿಸ್‌ಮ್ಯಾಚ್ ಹಣ

0

ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಂದಿದೆ. ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥರಾಗಿದ್ದ ರಾಯ್ ಅವರ ಸಾವಿಗೆ ಬರೋಬ್ಬರಿ 500 ಕೋಟಿ ರೂಪಾಯಿ ಹವಾಲಾ ವ್ಯವಹಾರ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.

ಹವಾಲಾ ಹಣದ ಲೆಕ್ಕ ನೀಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ರಾಯ್, ಐಟಿ ಇಲಾಖೆಯ ತನಿಖೆಯ ಒತ್ತಡಕ್ಕೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ಕೇರಳದ ಕೊಚ್ಚಿ ಪ್ರಾಜೆಕ್ಟ್ ಹಿನ್ನೆಲೆ ಡಿಸೆಂಬರ್‌ನಲ್ಲೇ ಐಟಿ ಇಲಾಖೆ 500 ಕೋಟಿ ರೂಪಾಯಿ ವ್ಯವಹಾರದ ಬಗ್ಗೆ ವಿವರ ಕೇಳಿತ್ತು ಎನ್ನಲಾಗಿದೆ.

ಈ ಹಿನ್ನೆಲೆ ರಾಯ್ ದುಬೈಯಿಂದ ಭಾರತಕ್ಕೆ ಮರಳುವುದನ್ನು ವಿಳಂಬಗೊಳಿಸಿದ್ದರೆಂದು ತಿಳಿದುಬಂದಿದೆ. ಐಟಿ ದಾಳಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದರೂ, ನಂತರ ತಮ್ಮ ಪಾರ್ಟ್ನರ್ ಮತ್ತು ಸಿಎ ಸಲಹೆ ಮೇರೆಗೆ ಅರ್ಜಿಯನ್ನು ವಾಪಸ್ ಪಡೆದಿದ್ದರು. ಭಾರತಕ್ಕೆ ವಾಪಸ್ ಬಂದ ಬಳಿಕ 500 ಕೋಟಿ ರೂ. ಮೂಲ ಮತ್ತು ಲೆಕ್ಕದ ಕುರಿತು ಐಟಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳಿದ್ದರು.

ಈ ಒತ್ತಡದಿಂದ ರಾಯ್ ಮಾನಸಿಕವಾಗಿ ಕುಗ್ಗಿಹೋಗಿದ್ದರು ಎನ್ನಲಾಗುತ್ತಿದೆ. ಆತ್ಮಹತ್ಯೆ ದಿನ ಐಟಿ ಅಧಿಕಾರಿಗಳಿಗೆ ಉತ್ತರಿಸುವುದಾಗಿ ಹೇಳಿದ್ದರೂ, ಮಾನಸಿಕ ಖಿನ್ನತೆಗಾಗಿ ಬಳಸುತ್ತಿದ್ದ ಔಷಧಿಯನ್ನು ಸೇವಿಸಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ 500 ಕೋಟಿ ಹವಾಲಾ ಹಣದ ಮೂಲ, ಅದರ ಹಾದಿ ಹಾಗೂ ಯಾರಿಗೆ ಸಂಬಂಧಪಟ್ಟದ್ದು ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ.

ನೇಣಿಗೆ ಕೊರಳೊಡ್ಡಿದ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ!

0

ಕೋಲಾರ:- ಕೋಲಾರ ತಾಲ್ಲೂಕು ಖಾದ್ರಿಪುರ ಗ್ರಾಮದಲ್ಲಿ ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

36 ವರ್ಷದ ಮೊನೀಶ್ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಇವರು ಕೋಲಾರದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ.

ಪತ್ನಿ ವೇದವತಿ ಕೆಲಸಕ್ಕೆ ಹೋಗಿದ್ದ ವೇಳೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

error: Content is protected !!