Home Blog Page 113

ಸಂವಿಧಾನ ಉಳಿದರಷ್ಟೇ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ: ಶಾಸಕ ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ಇತ್ತೀಚಿನ ದಿನಗಳಲ್ಲಿ ಸಂವಿಧಾನ ಬದಲಾವಣೆ ಕುರಿತು ಕೆಲವರು ಮಾತನಾಡುತ್ತಾರೆ. ಆದರೆ ಸಂವಿಧಾನ ಉಳಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲಿದೆ ಎಂಬ ಸತ್ಯವನ್ನು ಅವರು ಮರೆತಿದ್ದಾರೆ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ಜಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.

ಅವರು ಸೋಮವಾರ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ವತಿಯಿಂದ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಂವಿಧಾನ ಭಾರತ ದೇಶದ ಅತ್ಯಂತ ದೊಡ್ಡ ಶಕ್ತಿಯಾಗಿದೆ. ಇಡೀ ವಿಶ್ವದಲ್ಲಿ ಭಾರತ ದೇಶದ ಸಂವಿಧಾನ ಮಾದರಿಯಾಗಿದೆ. ಇಂದಿನ ಯುವ ಪೀಳಿಗೆ ಡಾ. ಬಿ.ಆರ್. ಅಂಬೇಡ್ಕರರು ದೇಶದ ಬಗ್ಗೆ ಇಟ್ಟುಕೊಂಡ ಚಿಂತನೆಗಳನ್ನು ಮೆಲುಕು ಹಾಕಬೇಕು. ಮುಖ್ಯವಾಗಿ, ದೇಶದ ಹಿತಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಮಹನೀಯರ ಬಗ್ಗೆ ತಿಳಿದುಕೊಳ್ಳಬೇಕು. ಅಂದಾಗ ಮಾತ್ರ ಸಂವಿಧಾನದ ಮಹತ್ವ ತಿಳಿಯಲಿದೆ ಎಂದರು.

ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸಲಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಉತ್ತಮ ರಸ್ತೆ ಸಂಪರ್ಕ, ಕುಡಿಯುವ ನೀರು, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ರೋಣ, ಗಜೇಂದ್ರಗಡ, ನರೇಗಲ್ಲ ಪಟ್ಟಣಗಳ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನವನ್ನು ನೀಡಲಾಗಿದ್ದು, ರೋಣ ಪಟ್ಟಣಕ್ಕೆ ಡಿಪ್ಲೋಮಾ ಕಾಲೇಜನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ತಹಸೀಲ್ದಾರ ನಾಗರಾಜ ಕೆ ಧ್ವಜಾರೋಹಣ ನೆರವೇರಿಸಿದರು. ತಾ.ಪಂ ಇಒ ಚಂದ್ರಶೇಖರ ಕಂದಕೂರ, ಸಿಪಿಐ ವಿಜಯಕುಮಾರ, ಕೃಷಿ ಇಲಾಖೆಯ ಎಸ್.ಎಫ್. ತಹಸೀಲ್ದಾರ, ಪಿಎಸ್‌ಐ ಪ್ರಕಾಶ ಬಣಕಾರ, ಮುಖ್ಯಾಧಿಕಾರಿ ರಮೇಶ ಹೊಸಮನಿ, ಮಲ್ಲಿಕಾರ್ಜುನ ಹುಣಸಿ, ಬಿಇಒ ಅರ್ಜುನ ಕಂಬೋಗಿ, ಅಕ್ಷರದಾಸೋಹಾಧಿಕಾರಿ ಕೆ.ಎಲ್. ನಾಯಕ, ಸಂಜಯ ದೊಡ್ಡಮನಿ ಸೇರಿದಂತೆ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರೋಣ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. 50 ಕೋಟಿ ರೂಗಳ ವೆಚ್ಚದಲ್ಲಿ ಜೆಟಿಟಿಸಿ ಕಾಲೇಜನ್ನು ಆರಂಭಿಸಲಾಗಿದ್ದು, ಬೃಹತ್ ಕಟ್ಟಡ ನಿರ್ಮಾಣ ಕಾರ್ಯ ನಡೆದಿದೆ. ರೋಣ ತಾಲೂಕು ಅನ್ನದಾತ ರೈತರನ್ನು ಹೆಚ್ಚಾಗಿ ಹೊಂದಿದೆ. ಇದನ್ನು ಮನಗಂಡು ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಮುಂದಾಗಿದ್ದು, ಜಿಗಳೂರ ಕೆರೆಗೆ ನೀರನ್ನು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೆರೆಯ ಅಂದವನ್ನು ಹೆಚ್ಚಿಸಲು 5 ಕೋಟಿ ರೂ ವೆಚ್ಚದಲ್ಲಿ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಹುತಾತ್ಮ ದಿನಾಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಹುತಾತ್ಮ ದಿನಾಚರಣೆ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್, ಶರಣು ಗೋಗೇರಿ ಸೇರಿದಂತೆ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಧ್ವಜರೋಹಣ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜರೋಹಣವನ್ನು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಜಿಲ್ಲಾ ಉಪಾಧ್ಯಕ್ಷೆ ಜಯಶ್ರೀ ಉಗಲಾಟದ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ, ಮಾಜಿ ಅಧ್ಯಕ್ಷೆ ಅಶ್ವಿನಿ ಜಗತಾಪ್, ಪ್ರಮುಖರಾದ ಜಗನ್ನಾಥಸಾ ಭಾಂಡಗೆ, ಸಿದ್ದು ಪಲ್ಲೇದ, ಮಂಜುನಾಥ ಶಾಂತಗೇರಿ, ಗದಗ ನಗರ ಮಂಡಲ ಉಪಾಧ್ಯಕ್ಷೆ ಚನ್ನಮ್ಮ ಹುಳಕಣ್ಣವರ, ಪದ್ಮಿನಿ ಮುತ್ತಲದಿನ್ನಿ, ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ, ಪ್ರಧಾನ ಕಾರ್ಯದರ್ಶಿ ಸ್ವಾತಿ ಅಕ್ಕಿ, ಪುಷ್ಪಾ ಪೂಜಾರ, ರೇಖಾ ಗೌಳಿ, ಅಪ್ಪಣ್ಣ ಟೆಂಗಿನಕಾಯಿ, ಕೆ.ಪಿ. ಕೋಟಿಗೌಡ್ರ, ಮೇಘನಾ ಕೊಟ್ಟೂರ, ದೇವೇಂದ್ರಪ್ಪ ಹೂಗಾರ, ವಿನೋದ ಹಂಸನೂರ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯ ನಿರ್ವಹಣೆಯಲ್ಲಿ ಮಾನವೀಯತೆಯಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ದ್ವಜಾರೋಹಣ ನೆರವೇರಿಸಿ, ಸಂವಿಧಾನದ ಮಹತ್ವ ಮತ್ತು ಸರ್ಕಾರಿ ನೌಕರರ ಕರ್ತವ್ಯಗಳ ಕುರಿತು ಮಹತ್ವದ ಸಂದೇಶ ನೀಡಿದರು.

ನಾವು ಕಾನೂನು ಹಾಕಿಕೊಂಡು ನಡೆಯುತ್ತಿರುವವರು. ನಾವು ಹೇಗೆ ಕಾನೂನಾತ್ಮಕವಾಗಿ ಬದುಕಬೇಕು ಎಂಬುದನ್ನು ಸಂವಿಧಾನ ನಮಗೆ ತಿಳಿಸುತ್ತದೆ. ವೇದಗಳಲ್ಲಿ ಜೀವನದ ಸಾರಾಂಶ ಇರುವಂತೆ, ಸಂವಿಧಾನದಲ್ಲೂ ನಮ್ಮ ಜೀವನದ ಮೌಲ್ಯಗಳು ಅಡಗಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ವ್ಯವಸ್ಥೆಯಲ್ಲಿ ಸರ್ಕಾರದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಕಾರ್ಯಾಂಗದ ಮೇಲಿದೆ. ನಾವು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇವೆ. ಅಧಿಕಾರಿಗಳು ತಮ್ಮ ಕಾರ್ಯನಿರ್ವಹಣೆಯಲ್ಲಿ ಮಾನವೀಯತೆಯನ್ನು ಅಳವಡಿಸಿಕೊಂಡು, ಸಾರ್ವಜನಿಕರಿಗೆ ಸಹಾಯ ಮಾಡಬೇಕು. ನೌಕರಿಯಲ್ಲಿ ಅಹಂ ಹಾಗೂ ಜಂಭ ಬೇಡ. ನಾಗರಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ ಪರಿಹಾರ ಒದಗಿಸುವ ಮನೋಭಾವ ಇರಬೇಕು ಎಂದು ಸಲಹೆ ನೀಡಿದರು.

ಕಾನೂನು ಜಾರಿ ಮಾಡುವವರು ನಾವೇ ಆಗಿರುವುದರಿಂದ, ಕಾನೂನಿಗೆ ಮಾನವೀಯತೆಯ ನೆಲೆ ಸೇರಿಸಿ ಕಾರ್ಯನಿರ್ವಹಿಸಬೇಕು. ನಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಂಡು ಜನಸೇವೆ ಮಾಡೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಮ್ಮಿ-ಡ್ಯಾಡಿ ಸಂಸ್ಕೃತಿಯನ್ನು ಹೊಡೆದೋಡಿಸಿ: ದಿಲೀಪ್ ವರ್ಣೇಕರ್

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಾರತದ ಪ್ರತಿ ಮನೆಮನೆಯಲ್ಲಿಯೂ ಸ್ವದೇಶಿ ಮಂತ್ರ ರಿಂಗಣಿಸುತ್ತಿರಬೇಕು. ಇದರಿಂದ ಭಾರತದ ಉದ್ಧಾರವಾಗಲು ಸಾಧ್ಯ. ಇಲ್ಲವಾದರೆ ಎಲ್ಲವನ್ನೂ ಪರದೇಶಕ್ಕೆ ಕೊಟ್ಟು ಒಂದಿನ ನಾವು ಪಾಪರ್‌ಗಳಾಗಬೇಕಾಗುತ್ತದೆ ಎಂದು ಧರ್ಮ ಜಾಗರಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ದಿಲೀಪ್ ವರ್ಣೇಕರ್ ಹೇಳಿದರು.

ಪಟ್ಟಣದ ಹಿರೇಮಠ ಸಭಾಭವನದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮುಖ್ಯ ವಕ್ತಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಹಿಂದೂಗಳ ಸಂಖ್ಯೆ ಕ್ಷೀಣಿಸಲು ಹಿಂದೂಗಳೇ ಕಾರಣ. ನಮಗೆ ಒಬ್ಬರು-ಇಬ್ಬರು ಮಕ್ಕಳು ಸಾಕೆಂದು ನಿರ್ಧರಿಸುತ್ತ ಹೋದರೆ ಒಂದು ದಿನ ನಾವೇ ಈ ದೇಶದಲ್ಲಿ ಅಲ್ಪಸಂಖ್ಯಾತರಾಗಬೇಕಾಗುತ್ತದೆ. ಈ ಎಚ್ಚರಿಕೆ ಎಲ್ಲರಲ್ಲಿಯೂ ಇರಲಿ. ಆದ್ದರಿಂದ ಹಿಂದೂಗಳು ಕನಿಷ್ಠ ಮೂರು-ನಾಲ್ಕು ಮಕ್ಕಳನ್ನಾದರೂ ಪಡೆಯಬೇಕು. ಇದರಿಂದ ನಮ್ಮ ಹಿಂದೂಸ್ತಾನವನ್ನು ನಮ್ಮದನ್ನಾಗಿ ಉಳಿಸಿಕೊಳ್ಳಲು ಸಾಧ್ಯ ಎಂದರು.

ದೂರದರ್ಶನದಲ್ಲಿ ಬರುವ ಜಾಹೀರಾತುಗಳನ್ನು ನೋಡಿ ನಾವೇನಾದರೂ ವಿದೇಶಿ ವಸ್ತುಗಳ ಖರೀದಿಗೆ ಮುಗಿಬಿದ್ದರೆ ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗಿಳಿಯುತ್ತದೆ. ಆದ್ದರಿಂದ ನಾವೆಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸುವತ್ತ ಹೆಚ್ಚಿನ ಗಮನ ನೀಡಬೇಕು. ನಮ್ಮ ದೇಶವನ್ನು ಶ್ರೀಮಂತಿಕೆಯ ರಾಷ್ಟ್ರ ಮಾಡಬೇಕು. ಮಹಿಳೆಯರು ಕ್ರಿಯಾಶೀಲರಾದರೆ ಹಿಂದೂ ಸಮಾಜವನ್ನು ಕಟ್ಟಲು ಯಾವುದೇ ತೊಂದರೆಯಿಲ್ಲ. ಜಗತ್ತಿನ 40 ದೇಶಗಳಲ್ಲಿ ಸಂಘದ ಶಾಖೆಗಳಿವೆ. ಹಿಂದೂಗಳನ್ನು ಒಟ್ಟುಗೂಡಿಸಲು ಹೋರಾಡಿ ಯಶಸ್ವಿಯಾದವರು ಡಾ. ಹೆಡಗೆವಾರರು ಎಂದು ಹೇಳಿದರು.

ಬೇರೆ ಧರ್ಮದವರು ಯಾರೇ ಭಾರತವನ್ನು ಆಳಿದರೂ ಅವರಿಗೆ ಭಾರತವನ್ನು ತಮ್ಮ ಧರ್ಮದ ದೇಶವನ್ನಾಗಿಸಲು ಸಾಧ್ಯವಾಗಿಲ್ಲ. ಯಾಕೆಂದರೆ ಹಿಂದುತ್ವ ಈ ದೇಶದಲ್ಲಿ ಅಷ್ಟೊಂದು ಗಟ್ಟಿಯಾಗಿದೆ. ಮಮ್ಮಿ-ಡ್ಯಾಡಿ ಸಂಸ್ಕೃತಿಯನ್ನು ಹೊಡೆದೋಡಿಸಿ ಅಪ್ಪ-ಅಮ್ಮ ಸಂಸ್ಕೃತಿಯನ್ನು ಜಾರಿಗೆ ತಂದರೆ ದೇಶದ ಸಂಸ್ಕೃತಿ ಇನ್ನಷ್ಟು ಹೆಚ್ಚುತ್ತದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿ, ಸಂಘದ ನೂರು ವರ್ಷಗಳ ಕಾರ್ಯಕ್ರಮ ಶ್ಲಾಘನೀಯ. ಮುಖ್ಯ ವಕ್ತಾರರ ವಿಚಾರಗಳನ್ನು ನಾವು ಅಳವಡಿಸಿಕೊಳ್ಳಲು ಪ್ರಯತ್ನಿಸೋಣ. ಹಿಂಸೆಯಿಂದ ದೂರವಿದ್ದು ಅಹಿಂಸೆಯಿಂದ ಜೀವನ ನಡೆಸುವವನೇ ನಿಜವಾದ ಹಿಂದೂ. ಯಾರೇ ಈ ದೇಶವನ್ನು ನಾಶ ಮಾಡಲು, ಮತಾಂತರ ಮಾಡಲು ಯತ್ನಿಸಿದರೆ ಅದು ಸಾಧ್ಯವಾಗುವುದಿಲ್ಲ. ಏಕೆಂದರೆ ಭಾರತೀಯರು ಭೋಗ ಜೀವಿಗಳಲ್ಲ, ಅವರು ತ್ಯಾಗ ಜೀವಿಗಳು ಮತ್ತು ಯೋಗ ಜೀವಿಗಳು. ಮನುಸ್ಮೃತಿ ಆಗಿನ ಕಾಲಕ್ಕೆ ಸೂಕ್ತವಾಗಿತ್ತು. ಅದರಲ್ಲಿನ ಅನೇಕ ಉತ್ತಮೋತ್ತಮ ಅಂಶಗಳು ಇಂದಿಗೂ ಪ್ರಸ್ತುತವಾಗಿವೆ. ಸುಮ್ಮನೆ ಅದನ್ನು ಟೀಕಿಸುವುದು ಬೇಡ ಎಂದರು.

ಕಾರ್ಯಕ್ರಮದಲ್ಲಿ ರವಿ ದಂಡಿ, ಉಮೇಶ ಪಾಟೀಲ, ಆರ್.ಜಿ. ಪಾಟೀಲ, ಉಮೇಶ ಸಂಗನಾಳಮಠ, ಮುತ್ತಣ್ಣ ಪಲ್ಲೇದ, ರಾಜಶೇಖರ ವಂಕಲಕುಂಟಿ, ಹೇಮಗಿರೀಶ ಹಾವನಾಳ, ಸುತ್ತಲಿನ ಗ್ರಾಮಗಳ ಪ್ರಮುಖರನೇಕರು ಪಾಲ್ಗೊಂಡಿದ್ದರು. ಗೀತಾ ಭೋಪಳಾಪೂರ ಪ್ರಾರ್ಥಿಸಿದರು. ಜಗದೀಶ ಸಂಕನಗೌಡ್ರ ಸ್ವಾಗತಿಸಿದರು. ಅರ್ಚನಾ ಕೊಂಡಿ ಸಮಿತಿಯ ಸದಸ್ಯರನ್ನು ಪರಿಚಯಿಸಿದರು. ಸಮಿತಿ ಅಧ್ಯಕ್ಷ ಬಸವರಾಜ ವಂಕಲಕುಂಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಘುನಾಥ ಕೊಂಡಿ ನಿರೂಪಿಸಿದರು. ಡಾ. ಆರ್.ಕೆ. ಗಚ್ಚಿನಮಠ ವಂದಿಸಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರೂ ಸಹ ಸಂಘದ ಧೋರಣೆಗಳನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಸಂಘವು ಜಾತಿ-ಜಾತಿಗಳಲ್ಲಿನ ವ್ಯತ್ಯಾಸವನ್ನು ಹೊಡೆದೋಡಿಸಲು ಪ್ರಯತ್ನಿಸುತ್ತಿದೆ. ಹಿಂದೂ ಧರ್ಮಕ್ಕೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಮಹತ್ವವಿದೆ. ಸ್ವಾಮಿ ವಿವೇಕಾನಂದರು ವಿಶ್ವಧರ್ಮಸಮ್ಮೇಳನದಲ್ಲಿ ಮಾತನಾಡಿ ಹಿಂದೂ ಧರ್ಮದ ಪ್ರತಿಪಾದನೆ ಮಾಡಿದ್ದು ಇದಕ್ಕೆ ಕಾರಣ. ಇನ್ನಾದರೂ ನಾವು ಒಗ್ಗಟ್ಟಾಗದಿದ್ದರೆ ಬಿಕ್ಕಟ್ಟನ್ನು ಸೃಷ್ಟಿಸಿ ಹಿಂದೂ ರಾಷ್ಟ್ರವನ್ನು ಛಿದ್ರಛಿದ್ರ ಮಾಡಲು ದುಷ್ಟ ಶಕ್ತಿಗಳು ಕಾಯುತ್ತಿವೆ. ಅದಕ್ಕಾಗಿ ಹಿಂದೂಗಳೆಲ್ಲರೂ ಎಚ್ಚರವಾಗಿರಬೇಕೆಂದು ದಿಲೀಪ್ ಹೇಳಿದರು.

ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿ ಸೂಸೈಡ್; ವರದಕ್ಷಣಿ ಕಿರುಕುಳ ಕಾರಣವಾ?

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಯಡಿಯೂರಿನಲ್ಲಿ ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಿಣೆ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಕೀರ್ತಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತಕೀರ್ತಿ ಶ್ರೀ ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವಳು. 2023 ರ ನವೆಂಬರ್‌ನಲ್ಲಿ ಗುರುಪ್ರಸಾದ್ ಅವರೊಂದಿಗೆ ಮದುವೆಯಾಗಿದ್ದರು. ಕುಟುಂಬದವರ ಆರೋಪದ ಪ್ರಕಾರ, ಮದುವೆಗೆ ಸುಮಾರು 35 ಲಕ್ಷ ರೂ. ವೆಚ್ಚದ 400 ಗ್ರಾಂ ಚಿನ್ನ ಮತ್ತು 5 ಲಕ್ಷ ರೂ. ನಗದು ನೀಡಲಾಗಿತ್ತು. ಆದರೂ, ಕೀರ್ತಿ ಶ್ರೀ ಮೇಲೆ ಗಂಡನ ಮತ್ತು ಅವರ ಮನೆಯವರು ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಕೀರ್ತಿ ಶ್ರೀ ತಂದೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿ ತನಿಖೆ ನಡೆಸಲು ವಿನಂತಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದಾವಣಗೆರೆ| 2028ಕ್ಕೆ ಸಿಎಂ ಆಗುವ ಹಗಲು ಕನಸು ಕಾಣ್ತಿದ್ದಾರೆ ಕುಮಾರಸ್ವಾಮಿ; ಜಮೀರ್ ವ್ಯಂಗ್ಯ

0

ದಾವಣಗೆರೆ:- ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ ಎಂದು ಹೇಳುವ ಮೂಲಕ 2028 ಕ್ಕೆ ನಾನೇ ಸಿಎಂ ಆಗ್ತೀನಿ ಎಂಬ ಹೆಚ್‌ಡಿಕೆ ಹೇಳಿಕೆಗೆ ಜಮೀರ್ ಅಹಮದ್ ಟಾಂಗ್‌ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣುತ್ತಾರೆ. 2013, 2019 ಹಾಗೂ 2023 ರಲ್ಲಿ ನಾವೇ ಬರುತ್ತೇವೆ ಅಂದ್ರು ಬರಲಿಲ್ಲ. ಜೆಡಿಎಸ್‌ನಲ್ಲಿ ಸಿದರಾಮಯ್ಯ ಇದ್ದಾಗ 59 ಸೀಟ್‌ ಗೆದ್ದಿದ್ದರು. ಅದನ್ನು ಕೂಡ ಕುಮಾರಸ್ವಾಮಿ ರೀಚ್ ಆಗಲಿಲ್ಲ. 2023ರ ಚುನಾವಣೆಯಲ್ಲಿ 19ಕ್ಕೆ ಬಂದ್ರು, ಅವರು ಸಿಎಂ ಆಗುವ ಹಗಲುಗನಸು ಕಾಣುತ್ತಾರೆ.

ದೇವೇಗೌಡ್ರು ನೂರು ವರ್ಷ ಅರೋಗ್ಯವಾಗಿ ಇರಲಿ. ನಾನು ಈಗ ಕಾಂಗ್ರೆಸ್‌ನಲ್ಲಿ ಇರಬಹುದು, ಆದರೆ ಅವರು ನನ್ನ ರಾಜಕೀಯ ಗುರುಗಳು. ಇನ್ನೂ, ಪ್ರಾದೇಶಿಕ ಪಕ್ಷಕ್ಕೆ ಅಷ್ಟೋ ಇಷ್ಟೋ ಶಕ್ತಿ ಇದೆ. ಬಿಜೆಪಿ ಸೇರಿ ಅದನ್ನು ಕೂಡ ಕಳ್ಕೊಂಡಿದ್ದಾರೆ. ಬಿಜೆಪಿ ಜೊತೆ ಸೇರಿದ್ರೆ ಏನು ಆಗುತ್ತೆ ಅಂತಾ ಮುಂದೆ ನೋಡೋಣ ಎಂದಿದ್ದಾರೆ.

ದುಡಿದು ತಿನ್ನುವ ರೂಢಿಯನ್ನು ಬೆಳೆಸಿಕೊಳ್ಳಿ: ಅಕ್ಕಿಮಠದ ಗುರುಲಿಂಗ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಗದಗ: ರೈತರು ಮತ್ತು ಅವಿದ್ಯಾವಂತರಿಗಿಂತ ವಿದ್ಯಾವಂತರಲ್ಲಿಯೇ ಕೌಟುಂಬಿಕ ಕಲಹಗಳು, ವಿವಾಹ ವಿಚ್ಛೇದನಗಳು ಹೆಚ್ಚುತ್ತಿವೆ. ಬೆಲೆಬಾಳುವ ನಾಯಿಯನ್ನು ಸಾಕುವ ಜನ, ತಂದೆ-ತಾಯಿಯನ್ನು ಸಾಕದಿರುವುದು ನೋವಿನ ಸಂಗತಿ ಎಂದು ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹೇಳಿದರು.

ಭಾನುವಾರ ತಾಲೂಕಿನ ಬಳಗಾನೂರ ಗ್ರಾಮದ ಚಿಕೇನಕೊಪ್ಪದ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ, ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ, ಶರಣಶ್ರೀ ಪ್ರಶಸ್ತಿ ಪ್ರದಾನ, ಭಕ್ತಿ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಂಡು ಗುರು-ಹಿರಿಯರನ್ನು ಗೌರವ, ಶ್ರದ್ಧೆಯಿಂದ ಕಾಣುವುದು ಇಂದಿನ ಅಗತ್ಯವಾಗಿದೆ. ಇಂದು ಅತಿಯಾದ ಮೊಬೈಲ್ ಬಳಕೆಯು ನಮಗೆ ಹೆಚ್ಚು ತೊಂದರೆದಾಯಕವಾಗಿದ್ದು, ದುಡಿದು ತಿನ್ನುವ ರೂಢಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಶಿವಶಾಂತವೀರ ಶರಣರು ಮಾತನಾಡಿ, ಶ್ರೀಮಠದ ಜಾತ್ರೆ ಮನುಷ್ಯನ ಬದುಕನ್ನು ಖಾತ್ರಿಪಡಿಸುವ ಜಾತ್ರೆಯಾಗಿದೆ. ಇಲ್ಲಿ ಭಕ್ತ ಹಿತಚಿಂತನೆ ಮೂಲಕ ಜನರಲ್ಲಿ ಸದ್ಭಾವನೆ, ಸದ್ವಿಚಾರ ಬೆಳೆಸುವುದಾಗಿದೆ. ಸಮಾಜಮುಖಿಯಾಗಿ ಕಾರ್ಯಚಟುವಟಿಕೆ ಆಯೋಜಿಸುವುದು ಅವುಗಳ ಸದುಪಯೋಗ ಪಡೆದುಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳುವುದಾಗಿದೆ ಎಂದರು.

ಶರಣಶ್ರೀ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಮಾತನಾಡಿ, ರೈತ ಬೆಳೆಗಳನ್ನು ಬೆಳೆಯಲು ಕೇವಲ ಬೆವರು ಸುರಿಸುವುದಷ್ಟೇ ಅಲ್ಲ, ರಕ್ತವನ್ನೂ ಸುರಿಸುತ್ತಾನೆ ಎಂಬುದನ್ನು ಮನಗಾಣಬೇಕಾಗಿದೆ. ಬಿಸಿಲು-ಚಳಿ-ಮಳೆ ಎನ್ನದೇ ನಿರಂತರವಾಗಿ ದುಡಿದು ಬೆಳೆದ ಬೆಳೆಗೆ ಬೆಲೆ ನಿಗದಿ ಮಾಡುವ ಅವಕಾಶ ಸಮಾಜ, ಸರ್ಕಾರ ನೀಡಿಲ್ಲ. ರೈತರು ಋತುಮಾನಾಧಾರಿತ ಬೆಳೆ ಪದ್ಧತಿಯನ್ನು ರೂಢಿಸಿಕೊಂಡು ಸಮಾಜದಲ್ಲಿ ಯಾರಿಗೂ ಕಡಿಮೆ ಇರದ ರೀತಿಯಲ್ಲಿ ಜೀವನ ಮಟ್ಟವನ್ನು ರೂಪಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ನೂತನವಾಗಿ ಶ್ರೀಮಠದಲ್ಲಿ ಹರಕೆಯ ತೇರನ್ನು ಲೋಕಾರ್ಪಣೆಗೊಳಿಸಲಾಯಿತು. 36 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬಳೂಟಗಿಯ ಹಿರೇಮಠದ ಶಿವಕುಮಾರ ಸ್ವಾಮೀಜಿ, ರಬಕವಿಯ ಗುರುಸಿದ್ಧ ಸ್ವಾಮೀಜಿ, ಕಂಪಸಾಗರ ಅಭಿನವ ನಾಗಭೂಷಣ ಸ್ವಾಮೀಜಿ, ಹೆಬ್ಬಾಳದ ಪ್ರಕಾಶ ಶರಣರು, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ ಇದ್ದರು.

ಬೆಂಗಳೂರಿನ ಗಾಯಕ ಕಡುಬಗೆರೆಯ ಮುನಿರಾಜು ಹಾಗೂ ತಂಡದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು. ಹನುಮಂತ ಅಲ್ಕೋಡ ಹಾಗೂ ತಂಡದಿಂದ ಭಕ್ತಿ ಸಂಗೀತ ಜರುಗಿತು. ಬಿ.ವೈ. ಡೊಳ್ಳಿನ ಶರಣಶ್ರೀ ಪ್ರಶಸ್ತಿ ವಾಚನ ಮಾಡಿದರು. ಸವಿತಾ ಶಿವಕುಮಾರ ಸ್ವಾಗತಿಸಿ, ನಿರೂಪಿಸಿದರು. ಶಿವಲಿಂಗ ಶಾಸ್ತ್ರಿಗಳು ಸಿದ್ದಾಪುರ ನಿರೂಪಿಸಿದರು.

ಶರಣರ ಮಠ ಹಾಗೂ ನವಲಗುಂದದ ಸಿದ್ಧಲಿಂಗನಗೌಡ ಜಂಗ್ಲೆಪ್ಪಗೌಡ್ರ ಮೆಮೋರಿಯಲ್ ಉಮಾ ವಿದ್ಯಾಶ್ರೀ ಟ್ರಸ್ಟ್ ಸಹಯೋಗದಲ್ಲಿ ಕೃಷಿ ಸಾಧಕಿ ರಾಯಚೂರಿನ ಕವಿತಾ ಮಿಶ್ರಾ, ಜಾನಪದ ಕಲಾವಿದ ಕಡುಬಗೆರೆ ಮುನಿರಾಜ, ಐಐಟಿ ಸಂಶೋಧನಾರ್ಥಿ ಅನ್ನಪೂರ್ಣ ಬಸಯ್ಯ ಬಳೂಲಮಠರಿಗೆ ಅವರಿಗೆ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಉಡಚಮ್ಮದೇವಿ ಗುಡಿ ಓಣಿಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ದೇವಸ್ಥಾನದ ಆವರಣದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ವಾಸುದೇವ ಎಸ್. ಲಕ್ಷ್ಮೇಶ್ವರ, ಮಂಜುನಾಥ ಸುಣಗಾರ, ಪ್ರಕಾಶ ಪೂಜಾರ, ರವಿಕುಮಾರ ಸವಣೂರ, ಕುಮಾರ ಪೂಜಾರ, ಅರ್ಜುನ ಪೂಜಾರ, ಶ್ರೀಧರ ಸುಣಗಾರ, ನೀಲಕಂಠ ಗುಡಿಸಾಗರ, ಚಾಮರಾಜ ಪೂಜಾರ, ಶ್ರೀಕಾಂತ ಪೂಜಾರ, ಪರಶುರಾಮ ಹಿತ್ತಲಮನಿ, ಉಮಣ್ಣ ಪೂಜಾರ, ರಾಮಣ್ಣ ಲಕ್ಷ್ಮೇಶ್ವರ, ಪ್ರವೀಣ ಲಕ್ಕಣ್ಣವರ, ಸಂಜು ಪೂಜಾರ, ಮಂಜುನಾಥ ಪೂಜಾರ, ಪ್ರಶಾಂತ ಲಕ್ಕಣ್ಣವರ, ಪ್ರಸನ್ನ ಲಕ್ಕಣ್ಣವರ, ಮಹೇಶ ಪೂಜಾರ, ಮಂಜುನಾಥ ಪೂಜಾರ, ಶ್ರೀಕಾಂತ ಪೂಜಾರ, ಗೋಪಾಲ ಲಕ್ಷ್ಮೇಶ್ವರ, ಮಲ್ಲೇಶ ಲಕ್ಷ್ಮೇಶ್ವರ, ಶಿವಾನಂದ ಲಕ್ಷ್ಮೇಶ್ವರ, ಬಸವರಾಜ ಜಿಗಳೂರ, ಮಧುಸೂದನ ಪೂಜಾರ, ಪುಷ್ಪಾ ಪೂಜಾರ, ಲಕ್ಷ್ಮಿ ಪೂಜಾರ, ನಾಗವ್ವ ಜಿಗಳೂರ, ಪ್ರೇಮಾ ಲಕ್ಷ್ಮೇಶ್ವರ, ಪಾರವ್ವ ಪೂಜಾರ, ಅನ್ನಪೂರ್ಣ ಸವಣೂರ, ರತ್ನಾ ಲಕ್ಷ್ಮೇಶ್ವರ, ಲಕ್ಷ್ಮಿ ಲಕ್ಷ್ಮೇಶ್ವರ, ಲಕ್ಷ್ಮಿ ಪೂಜಾರ, ಚನ್ನಮ್ಮ ಪೂಜಾರ, ಮಹಾದೇವಿ ಹಿರೇಮಠ, ಶೋಭಾ ಬಾರಕೇರ, ಲಲಿತಾ ಲಕ್ಷ್ಮೇಶ್ವರ, ಸುಜಾತಾ ಸುಣಗಾರ, ರೇಣುಕಾ ಪೂಜಾರ, ಗೌರಮ್ಮ ಮರಿನಾಯಕರ, ಮಂಗಳಾ ಲಕ್ಕಣ್ಣವರ, ಲಕ್ಷ್ಮಿ ಪಾ.ಪೂಜಾರ, ಗೀತಾ ಶಿ.ಪೂಜಾರ, ಲಲಿತಾ ಪೂಜಾರ, ಸುವರ್ಣ ಪೂಜಾರ, ಕಮಲವ್ವ ಪೂಜಾರ, ಗಿರಿಜಾ ಪೂಜಾರ, ಶೋಭಾ ಹಿತ್ತಲಮನಿ, ಶರಣಮ್ಮ ಪೂಜಾರ, ಶಶಿಕಲಾ ಉ.ಪೂಜಾರ ಉಪಸ್ಥಿತರಿದ್ದರು.

ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್‌ ಅವರಿಗೆ ರಾಜ್ಯಪಾಲರಿಂದ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಳಗಾವಿ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಇವರನ್ನು ಆಯ್ಕೆ ಮಾಡಲಾಗಿದ್ದು, ರವಿವಾರ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಸಭಾಂಗಣದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಡಾ. ದುರಗೇಶ್ ಕೆ.ಆರ್ ಅವರು ತಮ್ಮ ಸೇವಾವಧಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ, ಶಿಸ್ತಿನಿಂದ ಹಾಗೂ ಯಶಸ್ವಿಯಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮತದಾರರ ಜಾಗೃತಿ, ಶಾಂತಿಯುತ ಚುನಾವಣೆ ಹಾಗೂ ಸುಸೂತ್ರ ನಿರ್ವಹಣೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಚುನಾವಣಾ ಆಯೋಗವು ಈ ಗೌರವ ನೀಡಿದೆ. ಗದಗ ಜಿಲ್ಲೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಆಡಳಿತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.

error: Content is protected !!