Home Blog Page 1182

ಶಿಷ್ಟಾಚಾರ ಉಲ್ಲಂಘನೆ..?: ಸರ್ಕಾರಿ ಕಾರ್ಯಕ್ರಮದ ಬ್ಯಾನರ್ʼನಲ್ಲಿ ಕಾಂಗ್ರೆಸ್ ಶಾಸಕ‌ನ ಪುತ್ರರ ದರ್ಬಾರ್

ವಿಜಯನಗರ: ಸರ್ಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲಿ ಕಾಂಗ್ರೆಸ್ ಶಾಸಕ‌ನ ಪುತ್ರರ ಫೋಟೋ ಅನಾವರಣ ಗೊಳಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಆಯೋಜನೆಗೊಂಡಿದ್ದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಾಸಕ ಗವಿಯಪ್ಪ ಪುತ್ರರ ಫೋಟೋ ಅನಾವರಣಗೊಂಡಿದೆ. 1.91 ಲಕ್ಷ ವೆಚ್ಚದಲ್ಲಿ ಹೊಸಪೇಟೆ APMC ಯಲ್ಲಿ ಸಿಸಿ ರಸ್ತೆ ಸೇರಿ ವಿವಿಧ ಯೋಜನೆಗೆ ಭೂಮಿ ಪೂಜೆ ಏರ್ಪಡಿಸಲಾಗಿತ್ತು.

ಸರ್ಕಾರಿ ಕಾರ್ಯಕ್ರದಲ್ಲಿ ಸಂವಿಧಾನಿಕ ಹುದ್ದೆಯ ವ್ಯಕ್ತಿಗಳ ಫೋಟೋ ಮಾತ್ರ ಮುದ್ರಿಸಬೇಕಿತ್ತು. ಆದ್ರೆ ಅದರ ಬದಲಾಗಿ ಶಾಸಕ ಗವಿಯಪ್ಪ ಪುತ್ರರಾದ ವಿರೂಪಾಕ್ಷಿ, ಗುರುದತ್ ಫೋಟೋ ಮುದ್ರಣವಾಗಿತ್ತು. ಶಾಸಕರ ಮಕ್ಕಳ ಫೋಟೋಗಳು ಬ್ಯಾನರ್ ನಲ್ಲಿ ಮುದ್ರಿಸಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕರ ಪುತ್ರರ ಫೋಟೋ ಮುದ್ರಣ ಮಾಡಬಾರದು ಎಂದು ಶಾಸಕ ಗವಿಯಪ್ಪ ಪುತ್ರರ ಫೋಟೋ ಮುದ್ರಿಸಿದ್ದಕ್ಕೆ ಸಾರ್ವಜನಿಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮ‌ಕ್ಕೆ ನಿಂದನೆ ಆರೋಪ: ಸತೀಶ್ ಜಾರಕಿಹೊಳಿಗೆ ಸಮನ್ಸ್

ಬೆಂಗಳೂರು: ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಲಾಗಿದೆ. ಹೌದು ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ.

ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ದೂದ್ ಸಾಗರ್ʼನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು..! ಎರಡು ರೈಲುಗಳು ರದ್ದು

ಕಾರವಾರ: ಲೋಂಧ ವಾಸ್ಕೋ ರೈಲು ಮಾರ್ಗದ ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15 ರ ಸಮೀಪ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಬಿದ್ದ ಘಟನೆ ನಡೆದಿದೆ. ಚಾಲನೆ ಮಾಡುತ್ತಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಾಸ್ಕೋದಿಂದ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ಗೂಡ್ಸ್‌ ರೈಲಿನಲ್ಲಿ ಕಲ್ಲಿದ್ದಲು ಸಾಗಿಸಲಾ ಗುತ್ತಿತ್ತು. ಒಂದು ಕಾರ್ಗೋ ಕೋಚ್, 11 ಬೋಗಿಗಳು ರೈಲ್ವೇ ಹಳಿಯಿಂದ ಜಾರಿಬಿದ್ದು, ರೈಲು ಹಳಿ ಮುರಿದು ಬಿದ್ದಿದೆ.

ರಾಯಚೂರು: ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ! ಯಾಕೆ ಗೊತ್ತಾ..?

0

ರಾಯಚೂರು : ನಗರಸಭೆ ಗುತ್ತಿಗೆ ನೌಕರರ ವೇತನ ಪಾವತಿಯಾಗದಿರುವುದರಿಂದ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಂಗಳವಾರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆ ನೌಕರ ಅನ್ಸರ್ ಅಲಿ ಎಂದು ತಿಳಿದು ಬಂದಿದೆ.

ಅನ್ಸರ್ ಅಲಿ ನಗರಸಭೆಯ ವಿದ್ಯುತ್ ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ನೌಕರಾಗಿ ಕೆಲಸ ಮಾಡುತ್ತಿದ್ದು, ಕಳೆದ 7 ತಿಂಗಳಿಂದ ವೇತನ ಪಾವತಿಯಾಗದೇ ಇರುವುದರಿಂದ ಮಾನಸಿಕವಾಗಿ ನೊಂದಿದ್ದ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಡೆಲಿವರಿ ಕೆಲಸ ಮಾಡುತ್ತಾ ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್.!

0

ಬೆಂಗಳೂರು: ಡೆಲಿವರಿ ಕೆಲಸ ಮಾಡುತ್ತಾ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಭಿಜಿತ್ ದಾಸ್ (23) ಬಂಧಿತ ಅರೋಪಿ. ಅಭಿಜಿತ್ ದಾಸ್ ಅಪಾರ್ಟ್ಮೆಂಟ್ಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ವೇಳೆ‌ ಕಳ್ಳತನ ಮಾಡುತ್ತಿದ್ದನು.

ಆರೋಪಿ ನಲ್ಲೂರು ಹಳ್ಳಿ ಭಾಗದ ಅಪಾರ್ಟ್ಮೆಂಟ್ ಗೆ ಖನ್ನ ಹಾಕಿದ್ದನು. ಅಪಾರ್ಟ್‌ಮೆಂಟ್ ಹಿಂಭಾಗದಿಂದ ಹತ್ತಿ, ಸ್ಲೈಡ್ ಡೋರ್ ಸರಿಸಿ ಮನೆಯೊಳಗೆ ನುಗ್ಗಿ ಕಳುವು ಮಾಡಿ ಪರಾರಿಯಾಗುತ್ತಿದ್ದನು.

ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಬಲೆ ಬೀಸಿ ಬಂಧಿಸಿದ್ದಾರೆ. ಆರೋಪಿಯಿಂದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!

0

ಹೊಸನಗರ: ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.

ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ. ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ.

ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ: ಬಸವರಾಜ ರಾಯರೆಡ್ಡಿ

ಮೈಸೂರು: ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದರು.

ರಾಜೀನಾಮೆ ಕೊಡ್ತೇನೆಂದು ಸಿದ್ದರಾಮಯ್ಯ ಬಾಂಡ್​​ಪೇಪರ್​ನಲ್ಲಿ ಬರೆದುಕೊಟಿದ್ದಾರಾ? ಅವರೇ ಇನ್ನೂ ಮೂರೂವರೆ ವರ್ಷ ಸಿಎಂ ಆಗಿರಬೇಕು. ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಸಿಎಂ ಸ್ಥಾನಕ್ಕಾಗಿ ಯಾರು ಸಹ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ವಾರದ ಹಿಂದಷ್ಟೇ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರು ಇನ್ನೂ 3 ವರ್ಷ 10 ತಿಂಗಳು ಜನಪರ ಆಡಳಿತ ನೀಡಲಿ ಎಂಬುದು ನಮ್ಮ ಆಶಯ ಎಂದು ಕೊಪ್ಪಳದಲ್ಲಿ ರಾಯರೆಡ್ಡಿ ಹೇಳಿದ್ದರು. ಇದೀಗ ಜನಾಂದೋಲನ ಸಮಾವೇಶದಲ್ಲೇ ಆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಕದ್ದ ಚಿನ್ನವನ್ನು ವಾಟ್ಸಪ್ ಡಿಪಿಯಲ್ಲಿ ಹಾಕಿ ಸಿಕ್ಕಿಬಿದ್ದ ಖತರ್ನಾಕ್ ಕಳ್ಳಿ..!

0

ಬೆಂಗಳೂರು: ಚಿನ್ನದ ಆಸೆಗೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಕದ್ದ ಚಿನ್ನವನ್ನ ವಾಟ್ಸಾಪ್ ಡಿಪಿ ಹಾಕಿ ಖತರ್ನಾಕ್ ಕಳ್ಳಿ ಸಿಕ್ಕಿಬಿದ್ದಿದ್ದಾಳೆ. ಹೌದು  ಕೆಲಸ ಕೊಟ್ಟ ಮನೆ ಮಾಲೀಕರ ಮನೆಗೇ ಕನ್ನ ಹಾಕುತ್ತಿದ್ದ ಖತರ್ನಾಕ್ ಕಳ್ಳಿ. ಹೊಸಪೇಟೆ ಮೂಲದ ರೇಣುಕಾ (38) ಬಂಧಿತ ಆರೋಪಿಯಾಗಿದ್ದು, ಮಾರತ್ತಹಳ್ಳಿ ಪೂರ್ವ ಪೌಂಟೇನ್ ಅಪಾರ್ಟ್‌ಮೆಂಟ್‌ನ ಎರಡು ಪ್ಲಾಟ್‌ಗಳಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ರೇಣುಕಾ.

ಎರಡೂ ಮನೆಗಳಲ್ಲೂ ಬರೋಬ್ಬರಿ 100 ಗ್ರಾಮ್ ಚಿನ್ನ ಕದ್ದು ಕೈಚಳಕ ತೋರಿಸಿದ್ದ ರೇಣುಕಾ. ಮನೆ ಮಾಲೀಕೆಯ ತಾಳಿಯನ್ನು ಬಿಡದೇ ಕದ್ದು ಬಳಿಕ ತನಗೇನೂ ಗೊತ್ತಿಲ್ಲ ಅಂತಾ ನಾಟಕವಾಡಿದ್ದಳು. ಈ ಬಗ್ಗೆ ಮಾಲೀಕರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಬಳಿಕ ಪೊಲೀಸರು ರೇಣುಕಾಳನ್ನು ಕರೆಸಿ ವಿಚಾರಣೆ ನಡೆಸಿದ್ದರು. ಪೊಲೀಸರ ಮುಂದೆ ಅಮಾಯಕಳಂತೆ ನಟಿಸಿದ್ದ ಕಳ್ಳಿ. ಪಾಪದ ಹೆಣ್ಣು ಅಂದುಕೊಂಡು ಪೊಲೀಸರು ಬಿಟ್ಟು ಕಳಿಸಿದ್ದರು.

ಬಳಿಕ ಪೊಲೀಸರು ಏನೂ ಮಾಡೋದಿಲ್ಲ ಅಂತಾ ಗೊತ್ತಾಗಿ ಕದ್ದ ನೆಕ್ಲೆಸ್ ಧರಿಸಿ ಫೋಟೊ ತೆಗೆಸಿಕೊಂಡಿದ್ದ ರೇಣುಕಾ ಆ ಫೋಟೊವನ್ನು ತನ್ನ ವಾಟ್ಸಪ್ ಡಿಪಿ ಹಾಕಿ ತಗಲಾಕ್ಕೊಂಡ ಕಳ್ಳಿ. ಮೊದಲೇ ರೇಣುಕಾ ನಂಬರ್ ಪೊಲೀಸರು, ಮನೆ ಮಾಲೀಕರ ಮೊಬೈಲ್‌ನಲ್ಲಿ ಸೇವ್ ಆಗಿದ್ದರಿಂದ ವಾಟ್ಸಪ್ ಡಿಪಿಯಲ್ಲಿ ರೇಣುಕಾ ಕೊರಳಲ್ಲಿ ನೆಕ್ಲೆಸ್ ಇರೋ ಫೋಟೊ ನೋಡಿದ್ದಾರೆ. ಚಿನ್ನ ಕದ್ದ ಕಳ್ಳಿ ಇವಳೆ ಎಂಬುದು ಗೊತ್ತಾಗಿದೆ. ಬಳಿಕ ರೇಣುಕಾಳನ್ನು ಬಂಧಿಸಿದ ಪೊಲೀಸರು. ಬಂಧನ ಬಳಿಕ ತಪ್ಪೊಪ್ಪಿಕೊಂಡ ಕಳ್ಳಿ. ಸದ್ಯ ಬಂಧಿತಳಿಂದ 80 ಗ್ರಾಮ್ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು

0

ಶಿವಮೊಗ್ಗ: ಬೈಕ್​ ಹಾಗೂ ಟಿಪ್ಪರ್​ ನಡುವೆ ಭೀಕರ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಬಳಿ ನಡೆದಿದೆ. ಸಚಿನ್ (19) ಮೃತ ಬೈಕ್ ಸವಾರನಾಗಿದ್ದು, ಸಾಗರ ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಕಟ್ಟಿನಕಾರು ಗ್ರಾಮದ ಬೈಕ್‌ ಸವಾರ ಸಚಿನ್ ತೀವ್ರವಾಗಿ ಗಾಯಗೊಂಡಿದ್ದ. ಜೊತೆಗೆ ಹಿಂಬದಿ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಆ ಕೂಡಲೇ ಸ್ಥಳೀಯರು ಸಚಿನ್​ನನ್ನು ಶಿವಮೊಗ್ಗ ಆಸ್ಪತ್ರೆ ರವಾನಿಸಿದ್ದಾರೆ. ಜೊತೆಗೆ ಮತ್ತೊಬ್ಬ ಸವಾರ ಸುಮಂತ್ ಕುಂದಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಚಿನ್ ಮೃತಪಟ್ಟಿದ್ದಾನೆ.

ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರದಲ್ಲಿದೆ ಕಾದುನೋಡಿ: ಯಡಿಯೂರಪ್ಪ ವ್ಯಂಗ್ಯ!

ಮೈಸೂರು:- ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರದಲ್ಲಿದೆ ಕಾದುನೋಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಬಿಎಸ್​ ಯಡಿಯೂರಪ್ಪನವರು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಸಿದ್ದರಾಮಯ್ಯ ಈಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಗುಡುಗಿದರು.

ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ‌ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ‌ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಇದೇ ವೇಳೆ ಯಡಿಯೂರಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಸಿದ್ದರಾಮಯ್ಯ ಅವರು ಹೇಳಬೇಕು ಪಾಪ. ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನ್ ಆಗ್ತಾರೆ ಅನ್ನೊದು ಮುಂದೆ ಗೊತ್ತಾಗುತ್ತದೆ.

ಪೊಕ್ಸೋ ಕೇಸ್‌ನಲ್ಲಿ ನಾಳೆ ಕೋರ್ಟ್‌ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಈಗ ಮನಬಂದಂತೆ ಮಾತಾಡುತ್ತಿದ್ದಾರೆ ಮಾತಾಡಲಿ. ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.

error: Content is protected !!