Home Blog Page 123

ಸ್ವಿಮ್ಮಿಂಗ್ ಪೂಲ್‌ʼನಲ್ಲಿ ಮಹಿಳೆಯ ಶವ ಪತ್ತೆ: ಪತಿಯಿಂದಲೇ ಕೊಲೆ, ಆರೋಪ

0

ರಾಮನಗರ: ಕನಕಪುರ ತಾಲ್ಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಳನ್ನು ಪ್ರತಿಭಾ (29) ಎಂದು ಗುರುತಿಸಲಾಗಿದೆ.

ಪ್ರತಿಭಾ ಮತ್ತು ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರತಿಭಾ ಬಾಬುಗೆ ಎರಡನೇ ಪತ್ನಿಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇನ್ನೂ ಕೌಟುಂಬಿಕ ಕಲಹ ಮತ್ತು ಗಲಾಟೆ ಹಿನ್ನೆಲೆಯಲ್ಲಿ ಪತಿ ಬಾಬು ಪ್ರತಿಭಾವನ್ನು ಕೊಲೆ ಮಾಡಿದಾಗಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್

0

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ ಪರಿಣಾಮ ಭಕ್ತನೊಬ್ಬ ಮೃತರಾಗಿದ್ದ ಘಟನೆಯ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಮತ್ತು ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ. ಇಂದಿನಿಂದ ಈ ಆದೇಶ ಅನ್ವಯವಾಗಲಿದೆ.

ಜಿಲ್ಲಾಧಿಕಾರಿ ಶ್ರೀ ರೂಪಾ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಪಾದಯಾತ್ರೆ ಮಾಡಬಹುದು. ಇದೇ ವೇಳೆ, ದ್ವಿಚಕ್ರ ವಾಹನಗಳ ಪ್ರವೇಶವೂ ಈ ಸಮಯಕ್ಕೆ ಮಾತ್ರ ಸೀಮಿತವಾಗಲಿದೆ.

ಬುಧವಾರ ಬೆಳಿಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಅವರ ಆತ್ಮಹತ್ಯೆ ಸಂಭವಿಸಿತ್ತು. ಈ ಘಟನೆ ನಂತರ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಮೊದಲು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು.

ಈ ಹೊಸ ನಿಯಮದೊಂದಿಗೆ ಭಕ್ತರ ಸುರಕ್ಷತೆ ದೃಷ್ಟಿಯಿಂದ ಪಾದಯಾತ್ರೆ ಮತ್ತು ವಾಹನ ಸಂಚಾರ ಸಮಯವನ್ನು ನಿಗದಿಪಡಿಸಲಾಗಿದೆ. ಜಿಲ್ಲಾಡಳಿತ ಎಲ್ಲ ಪಾದಯಾತ್ರಿಕರು ಅಧಿಕೃತ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮನವಿ ಮಾಡಿಕೊಂಡಿದೆ.

ವರ್ತೂರು ಶ್ರೀ ಚನ್ನರಾಯಸ್ವಾಮಿ ಜಾತ್ರೆ| 3 ದಿನ ಸಂಚಾರ ಮಾರ್ಗ ಬದಲಾವಣೆ!

0

ಬೆಂಗಳೂರು: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ, ದೀಪೋತ್ಸವ ಹಾಗೂ ಪಲ್ಲಕ್ಕಿ ಕರಗ ಮಹೋತ್ಸವವು ಇಂದಿನಿಂದ 27ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಜಾತ್ರಾ ಸ್ಥಳದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೂರ್ವ ವಿಭಾಗ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು:-

ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಬರುವ ಲಘು ವಾಹನಗಳು ಇಮ್ಮಡಿಹಳ್ಳಿ, ವಾಲೇಪುರ ಸೂರಹುಣಸೆ ರಸ್ತೆಯಿಂದ ಮಧುರನಗರದ ಮೂಲಕ ಹಲಸಹಳ್ಳಿ ಗುಂಜೂರು ಕಡೆಗೆ ಹಾಗೂ ವರ್ತೂರು ಪೊಲೀಸ್ ಠಾಣೆ ಕಡೆಯಿಂದ ಸಂಚರಿಸಬಹುದಾಗಿದೆ.

ಗುಂಜೂರಿನಿಂದ ವೈಟ್‌ ಫೀಲ್ಡ್ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆದು ಹಲಸಹಳ್ಳಿ ರಸ್ತೆಯಿಂದ ಮಧುರನಗರದ ಮೂಲಕ ಸೂರಹುಣಸೆ ಮತ್ತು ವಾಲೇಪುರ ಮೂಲಕ ಹಾಗೂ ವರ್ತೂರು ಕಾಲೇಜು ಮೂಲಕ ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದು.

ಗುಂಜೂರು ಕಡೆಯಿಂದ ಬರುವ ವಾಹನ ಸವಾರರು ಕುಂದಲಹಳ್ಳಿ ಮತ್ತು ಮಾರತ್ ಹಳ್ಳಿ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರು ಕೆ.ಎಫ್.ಸಿ ರಸ್ತೆ, ಪಣತ್ತೂರು ರೈಲ್ವೆ ಬ್ರಿಜ್ ಮೂಲಕ ಹಾಗೂ ವಿಬ್ ಗಯಾರ್ ಕಡೆಯಿಂದ ಸಂಚರಿಸವಂತೆ ಸಂಚಾರ ಪೊಲೀಸರು ಕೋರಿದ್ದಾರೆ.

ಮತದಾರರಾಗುವ ಕ್ಷಣವನ್ನು ಸಂಭ್ರಮಿಸಿ; ಯುವಜನತೆಗೆ ಪ್ರಧಾನಿ ಮೋದಿ ಕರೆ

0

ದೆಹಲಿ: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಭಾಗಗಳಲ್ಲಿರುವ ಮೈ-ಭಾರತ್ ಸ್ವಯಂಸೇವಕರು ಹಾಗೂ ಯುವಜನತೆಗೆ ಪತ್ರ ಬರೆದು, ಮತದಾರರಾಗುವ ಕ್ಷಣವನ್ನು ಸಂಭ್ರಮದಿಂದ ಆಚರಿಸುವಂತೆ ಕರೆ ನೀಡಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾರರಾಗಿರುವುದು ಅತ್ಯಂತ ಮಹತ್ವದ ಹಕ್ಕು ಹಾಗೂ ದೊಡ್ಡ ಹೊಣೆಗಾರಿಕೆಯಾಗಿದೆ ಎಂದು ಅವರು ಒತ್ತಿ ಹೇಳಿದ್ದು, ವಿದ್ಯಾರ್ಥಿಗಳು ಮತದಾರರಾಗುವ ಸಂದರ್ಭವನ್ನು ಶಿಕ್ಷಣ ಸಂಸ್ಥೆಗಳು ವಿಶೇಷವಾಗಿ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರತವನ್ನು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂದು ಕರೆಯಲಾಗುತ್ತದೆ ಎಂಬುದು ಸತ್ಯವಾಗಿದ್ದು, ಶತಮಾನಗಳ ಪ್ರಜಾಸತ್ತಾತ್ಮಕ ಮೌಲ್ಯಗಳ ಮೂಲಕ ಭಾರತಕ್ಕೆ ‘ಪ್ರಜಾಪ್ರಭುತ್ವದ ತಾಯಿ’ ಎಂಬ ಹೆಮ್ಮೆಯೂ ಇದೆ ಎಂದು ಮೋದಿ ತಿಳಿಸಿದ್ದಾರೆ. 1951ರಲ್ಲಿ ಆರಂಭಗೊಂಡ ಮೊದಲ ಸಾರ್ವತ್ರಿಕ ಚುನಾವಣೆಯ 75 ವರ್ಷಗಳನ್ನು ಈ ವರ್ಷ ಸ್ಮರಿಸಲಾಗುತ್ತಿದ್ದು, ಮತದಾನವು ಪವಿತ್ರ ಸಂವಿಧಾನಾತ್ಮಕ ಹಕ್ಕು ಹಾಗೂ ಭಾರತದ ಭವಿಷ್ಯ ನಿರ್ಮಾಣದಲ್ಲಿ ಸಕ್ರಿಯ ಭಾಗವಹಿಸುವುದರ ಸಂಕೇತವಾಗಿದೆ. ಮತದಾನದ ವೇಳೆ ಬೆರಳಿಗೆ ಹಾಕುವ ಮಸಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಜೀವಂತತೆ ಮತ್ತು ಗೌರವದ ಗುರುತಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ರಾಜೀವ್‌ ಗೌಡ ತಪ್ಪಿಸಿಕೊಂಡರೂ ಬಿಡಲ್ಲ; ಶೀಘ್ರವೇ ಬಂಧಿಸಲಾಗತ್ತೆ, ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ!

0

ಬೆಂಗಳೂರು: ರಾಜೀವ್‌ ಗೌಡ ಬಂಧನಕ್ಕೆ ಮೊದಲ ದಿನವೇ ಆದೇಶ ನೀಡಲಾಗಿತ್ತು. ಆದರೆ ಬಂಧಿಸುವಷ್ಟರಲ್ಲಿ ಅವರು ತಪ್ಪಿಸಿಕೊಂಡು ಹೋಗಿದ್ದಾರೆ. ಎಷ್ಟು ದಿನ ಅಡಗಿ ಕುಳಿತರೂ ಖಂಡಿತವಾಗಿಯೂ ಅವರನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀವ್‌ ಗೌಡನನ್ನು ತಕ್ಷಣ ಬಂಧಿಸಲಾಗುವುದು, ಯಾವುದೇ ಮುಲಾಜಿಲ್ಲ, ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ನಡೆದ 400 ಕೋಟಿ ರೂ. ರಾಬರಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಪೊಲೀಸರು ತನಿಖೆಗೆ ಸಹಕಾರ ಕೋರಿ ನಮ್ಮ ಪೊಲೀಸರಿಗೆ ಪತ್ರ ಬರೆದಿದ್ದಾರೆ. ತನಿಖೆ ಇನ್ನೂ ಪ್ರಾರಂಭಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ರಾಜ್ಯ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಗಣರಾಜ್ಯೋತ್ಸವದ ವೇಳೆ ರಾಜ್ಯಪಾಲರು ಭಾಷಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇಂದು ಸಂಜೆಯೊಳಗೆ ಸ್ಪಷ್ಟತೆ ಸಿಗಲಿದೆ, ಭಾಷಣದ ಪ್ರತಿಯನ್ನು ನಾನು ಇನ್ನೂ ನೋಡಿಲ್ಲ, ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದು ತಿಳಿಯಲಿದೆ ಎಂದು ಹೇಳಿದರು.

ಲ್ಯಾಂಬೋರ್ಗಿನಿ ಕಾರು ಪ್ರಕರಣಕ್ಕೆ ಹೈಕೋರ್ಟ್ ತಡೆ: ಸಮುದಾಯ ಸೇವೆಗೆ ಸಿದ್ಧರಾಗಲು ಸೂಚನೆ

0

ಬೆಂಗಳೂರು: ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಅಜಾಗರೂಕವಾಗಿ ಚಾಲನೆ ಮಾಡಿದುದು ಹಾಗೂ ನಿಗದಿತ ಡೆಸಿಬಲ್ ಮಿತಿಗಿಂತ ಹೆಚ್ಚು ಶಬ್ದ ಹೊರಸೂಸುವ ಸೈಲೆನ್ಸರ್ ಅಳವಡಿಸಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಅರ್ಜಿದಾರರು ಸಮುದಾಯ ಸೇವೆಗೆ ಸಿದ್ಧರಾಗುವಂತೆ ಸೂಚಿಸಿದೆ. ಈ ಸಂಬಂಧ ಬೆಂಗಳೂರು ಸಿ.ವಿ.ರಾಮನ್ ನಗರದ ನಿವಾಸಿ ಬಿ.ಆರ್. ಚಿರಂತನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಸೈಲೆನ್ಸರ್ ಅನ್ನು ಈಗಾಗಲೇ ಬದಲಾಯಿಸಿದ್ದು, ಶಬ್ದ ಮಾಲಿನ್ಯ ಮತ್ತು ವೇಗ ಚಾಲನೆಗೆ ಸಂಬಂಧಿಸಿದ ದಂಡವನ್ನೂ ಪಾವತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ವಿಚಾರಣೆಯವರೆಗೆ ತಡೆ ನೀಡಲಾಗಿದೆ. ಸಮುದಾಯ ಸೇವೆಗೆ ಸಂಬಂಧಿಸಿದಂತೆ ಪ್ರಕರಣದ ಅಂತಿಮ ಇತ್ಯರ್ಥದ ವೇಳೆ ಸೂಕ್ತ ಆದೇಶ ನೀಡಲಾಗುವುದು ಎಂದು ಪೀಠ ತಿಳಿಸಿದೆ. ಜೊತೆಗೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಫೆಬ್ರವರಿ 6ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2025ರ ಡಿಸೆಂಬರ್ 14ರಂದು ಮಡಿಕೇರಿಯಲ್ಲಿ ಲ್ಯಾಂಬೋರ್ಗಿನಿ ಶೋರೂಂ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ 13 ಲ್ಯಾಂಬೋರ್ಗಿನಿ ಕಾರುಗಳು ತೆರಳುತ್ತಿದ್ದವು. ಈ ಸಂದರ್ಭ ಬೆಂಗಳೂರು–ಮೈಸೂರು ರಸ್ತೆಯ ರಾಜರಾಜೇಶ್ವರ ನಗರ ಸಮೀಪ ವೇಗ ಚಾಲನೆಯ ಆರೋಪ ಸಂಬಂಧ ಎಕ್ಸ್‌ನಲ್ಲಿ ವಿಡಿಯೋ ವೈರಲ್ ಆಗಿತ್ತು. ಆದರೆ ಆ ವಾಹನಗಳ ಪೈಕಿ ಅರ್ಜಿದಾರರ ಕಾರು ಕೊನೆಯದಾಗಿತ್ತು. ಸಾರ್ವಜನಿಕರೊಬ್ಬರು ಸೆರೆಹಿಡಿದ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ, ಬೆಂಗಳೂರು ಸಂಚಾರ ದಟ್ಟಣೆಯಲ್ಲಿ ಗಂಟೆಗೆ 200 ಕಿಲೋಮೀಟರ್ ವೇಗದಲ್ಲಿ ವಾಹನ ಚಾಲನೆ ಮಾಡುವುದು ಅಸಾಧ್ಯ. ವಿಡಿಯೋ ವೈರಲ್ ಆದ ಸುಮಾರು ಒಂದೂವರೆ ತಿಂಗಳ ಬಳಿಕ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವಕೀಲರು ವಾದಿಸಿದರು.

ಈ ನಡುವೆ ಅರ್ಜಿದಾರರು ಶಬ್ದ ಮಾಲಿನ್ಯ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿ 8,500 ರೂ. ದಂಡ ಪಾವತಿಸಿ, ಸೈಲೆನ್ಸರ್ ಬದಲಿಸಿದ್ದಾರೆ. ವೇಗ ಚಾಲನೆಗೆ ಗರಿಷ್ಠ 1,000 ರೂ. ದಂಡ ವಿಧಿಸುವುದಷ್ಟೇ ಕಾನೂನಿನಲ್ಲಿ ಅವಕಾಶವಿದೆ ಎಂದು ಅವರು ಹೇಳಿದರು. ಲ್ಯಾಂಬೋರ್ಗಿನಿ ಕಾರು ಎಂಬ ಕಾರಣಕ್ಕೆ ಮಾತ್ರ ಪ್ರಕರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂಬ ವಾದವನ್ನೂ ಮಂಡಿಸಿದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, “ರಾಜರಾಜೇಶ್ವರಿ ನಗರದ ಟ್ರಾಫಿಕ್ ಸ್ಥಿತಿಯಲ್ಲಿ ವೇಗವಾಗಿ ಕಾರು ಚಾಲನೆ ಮಾಡುವುದು ಹೇಗೆ ಸಾಧ್ಯ?” ಎಂದು ಪ್ರಾಸಿಕ್ಯೂಷನ್‌ಗೆ ಪ್ರಶ್ನಿಸಿದರು. ಇದಕ್ಕೆ ಸರ್ಕಾರಿ ವಕೀಲರು ವಿಡಿಯೋವನ್ನು ಪೀಠಕ್ಕೆ ಪ್ರದರ್ಶಿಸಿದರು.

ಅಲ್ಲದೆ, ಅರ್ಜಿದಾರರ ಲ್ಯಾಂಬೋರ್ಗಿನಿ ಕಾರು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿದ್ದು, ಹೊರ ರಾಜ್ಯ ನೋಂದಣಿ ಹಿನ್ನೆಲೆಯಲ್ಲಿ 2025ರ ಸೆಪ್ಟೆಂಬರ್‌ನಲ್ಲಿ 1.05 ಕೋಟಿ ರೂ. ಮೋಟಾರು ವಾಹನ ತೆರಿಗೆ ಪಾವತಿಸಲಾಗಿದೆ ಎಂದು ಸರ್ಕಾರಿ ವಕೀಲರು ತಿಳಿಸಿದರು.

ಬೆಳಗಾವಿ| ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ನಗದು ದರೋಡೆ; ಇದು ದೇಶದ ಅತಿದೊಡ್ಡ ರಾಬರಿ ಕೇಸ್!

0

ಬೆಳಗಾವಿ:- ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ ಪ್ರಕರಣವು ಅಂತರರಾಜ್ಯ ಮಟ್ಟದ ಭಾರೀ ನಗದು ದರೋಡೆಯಾಗಿದ್ದು, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪೊಲೀಸರನ್ನು ತೀವ್ರ ಅಚ್ಚರಿಗೆ ಗುರಿಮಾಡಿದೆ. ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ ಹಣ ಇದಾಗಿದ್ದು, ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಕಂಟೇನರ್‌ಗಳು ಏಕಾಏಕಿ ನಾಪತ್ತೆಯಾಗಿದ್ದವು ಎಂಬುದು ತನಿಖೆಯಿಂದ ಗೊತ್ತಾಗಿದೆ.

ಈ ದರೋಡೆ ಪ್ರಕರಣ ಹಲವು ತಿಂಗಳುಗಳು ಗುಪ್ತವಾಗಿಯೇ ಉಳಿದಿದ್ದು, ನಾಸಿಕ್ ಮೂಲದ ಸಂದೀಪ್ ಪಾಟೀಲ ಎಂಬಾತನ ಅಪಹರಣ ಪ್ರಕರಣದ ದೂರಿನ ಮೂಲಕ ಸಂಪೂರ್ಣ ಬಹಿರಂಗವಾಗಿದೆ.

ಕಂಟೇನರ್ ಹೈಜಾಕ್ ಆದ ಕೆಲ ದಿನಗಳ ಬಳಿಕ, ಕಿಶೋರ್ ಶೇಟ್ ಅವರ ಸಹಚರರು ಸಂದೀಪ್ ಪಾಟೀಲನನ್ನು ಗನ್ ಪಾಯಿಂಟ್‌ನಲ್ಲಿ ಅಪಹರಿಸಿ, ಸುಮಾರು ಒಂದೂವರೆ ತಿಂಗಳ ಕಾಲ ಅಕ್ರಮ ಬಂಧನದಲ್ಲಿಟ್ಟು 400 ಕೋಟಿ ರೂ. ಹಣ ಕೊಡದಿದ್ದರೆ ಜೀವ ಉಳಿಯೋದಿಲ್ಲ ಎಂದು ಬೆದರಿಕೆ ಹಾಕಿ ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿದ್ದರು. ನಂತರ ಅಪಹರಣಕಾರರಿಂದ ತಪ್ಪಿಸಿಕೊಂಡ ಸಂದೀಪ್, 2026ರ ಜನವರಿ 1ರಂದು ನಾಸಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕವೇ ಈ ಭಾರೀ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.

ದೂರು ಆಧರಿಸಿ ತಕ್ಷಣ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಇಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಬಂಧನದ ನಂತರವೇ ಕಂಟೇನರ್‌ಗಳು ಹಾಗೂ ನಗದು ಹಣ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದ ಗಂಭೀರತೆಯನ್ನು ಗಮನಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ವಿಶೇಷ ತನಿಖಾ ತಂಡ (SIT) ರಚಿಸುವಂತೆ ಆದೇಶಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ಹಣ ಬಳಕೆಯಾಗಿದೆ ಎಂಬ ಅನುಮಾನವೂ ತನಿಖಾಧಿಕಾರಿಗಳಲ್ಲಿ ಮೂಡಿದ್ದು, ಈ ಪ್ರಕರಣ ರಾಜಕೀಯ ಹಾಗೂ ಆರ್ಥಿಕ ವಲಯಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 8.76 ಲಕ್ಷ ದಂಡ!

0

ಬೆಳಗಾವಿ:- ಬೆಳಗಾವಿಯಲ್ಲಿ ಅಪ್ರಾಪ್ತೆಗೆ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

ಪ್ರಕರಣವನ್ನು ಕೇವಲ 8 ತಿಂಗಳಲ್ಲಿ ಇತ್ಯರ್ಥಗೊಳಿಸಿದ ನ್ಯಾಯಾಲಯ, ಸಾಕೀಬ್ ನಿಜಾಮಿ (22) ಹಾಗೂ ರವಿ ನಾಯ್ಯೋಡಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 8.76 ಲಕ್ಷ ರೂ. ದಂಡ ವಿಧಿಸಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್ ಮತ್ತು ಅಶುತೋಷ್ ಪಾಟೀಲ್‌ಗೆ ತಲಾ 20 ವರ್ಷ ಜೈಲು ಶಿಕ್ಷೆ ಮತ್ತು 6 ಲಕ್ಷ ರೂ. ದಂಡ ವಿಧಿಸಲಾಗಿದೆ.

ಜೊತೆಗೆ ಸಂತ್ರಸ್ತೆಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. 2025 ಮೇ 10ರಂದು ಸಾವಗಾಂವ್‌ನ ಫಾರ್ಮ್‌ಹೌಸ್‌ನಲ್ಲಿ ನಡೆದ ಈ ಕೃತ್ಯದ ಕುರಿತು ಸಂತ್ರಸ್ತೆಯ ಪೋಷಕರು ದೂರು ದಾಖಲಿಸಿದ್ದು, ಸರ್ಕಾರದ ಪರ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ್ ವಕಾಲತ್ತು ನಡೆಸಿದರು.

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಾಳಿ; 23 ವರ್ಷದ ಯುವಕ ಸಜೀವ ದಹನ!

0

ಢಾಕಾ;- ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಸರಣಿ ಹತ್ಯೆ ಮುಂದುವರಿದಿದೆ.

ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಅವರನ್ನು ಗ್ಯಾರೇಜ್ ಒಳಗೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಅಮಾನುಷ ಘಟನೆ ನಡೆದಿದೆ.

ಕೆಲಸದ ನಿಮಿತ್ತ ನರಸಿಂಗ್ಡಿಯಲ್ಲಿ ವಾಸವಿದ್ದ ಚಂಚಲ್, ಶುಕ್ರವಾರ ತಡರಾತ್ರಿ ಗ್ಯಾರೇಜ್‌ನಲ್ಲಿ ಮಲಗಿದ್ದ ವೇಳೆ ಕಿಡಿಗೇಡಿಗಳು ಹೊರಗಿನಿಂದ ಶಟರ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ವೇಗವಾಗಿ ವ್ಯಾಪಿಸಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿ ಪೂರ್ವನಿಯೋಜಿತ ಕೃತ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿ ಹಚ್ಚಿದ ದೃಶ್ಯ ವೈರಲ್ ಆಗಿದೆ.

ಅಗ್ನಿಶಾಮಕ ದಳ ಒಂದು ಗಂಟೆಯ ಪರಿಶ್ರಮದ ಬಳಿಕ ಬೆಂಕಿ ನಂದಿಸಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಒನ್ ವೇ ಸವಾರರೇ ಟಾರ್ಗೆಟ್: ಸಿಕ್ಕಿಬಿದ್ದೋರ ಡಿಎಲ್ ಕ್ಯಾನ್ಸಲ್; ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ಲ್ಯಾನ್!

0

ಬೆಂಗಳೂರು:- ನಗರದಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದಕ್ಕೆ ಸವಾರರ ಅವೈಜ್ಞಾನಿಕ ಒನ್‌ವೇ ಸಂಚಾರವೇ ಪ್ರಮುಖ ಕಾರಣ ಎಂಬುದು ಸಂಚಾರಿ ಪೊಲೀಸರ ಆಂತರಿಕ ಸಮೀಕ್ಷೆಯಿಂದ ಬಹಿರಂಗವಾಗಿದೆ.

50–100 ಮೀಟರ್ ಮಾತ್ರವೆಂದು ನಿಯಮ ಉಲ್ಲಂಘಿಸಿ ಒನ್‌ವೇಗಳಲ್ಲಿ ನುಗ್ಗುವ ಸವಾರರಿಂದ ಎದುರುಬರುವ ವಾಹನಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ಇದರಿಂದ ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆ ಟ್ರಾಫಿಕ್ ಹತೋಟಿಗೆ ಮೊದಲ ಹೆಜ್ಜೆಯಾಗಿ ಬೆಂಗಳೂರು ಸಂಚಾರಿ ಪೊಲೀಸರು ಆರ್‌ಟಿಓ ಜೊತೆ ಕೈಜೋಡಿಸಿ ಒನ್‌ವೇ ಸವಾರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷ ತಂಡಗಳನ್ನು ರಚಿಸಿ ನಿಯಮ ಉಲ್ಲಂಘಿಸುವ ಸವಾರರನ್ನು ಪತ್ತೆಹಚ್ಚಿ, ಅವರ ಚಾಲನಾ ಪರವಾನಗಿಗಳನ್ನು ಆರ್‌ಟಿಓಗೆ ರವಾನೆ ಮಾಡಲಾಗುತ್ತಿದ್ದು, ಪೊಲೀಸರ ಶಿಫಾರಸಿನ ಮೇರೆಗೆ ಇಂತಹ ಡಿಎಲ್‌ಗಳನ್ನು ಮೂರು ತಿಂಗಳ ಕಾಲ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

error: Content is protected !!