Home Blog Page 128

ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ನೊಂದ ಅಮಾಯಕ ಮಹಿಳೆಯರು ದೂರು ನೀಡಲು ಕಚೇರಿಗೆ ಬಂದರೆ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿಐಜಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ. ಆದರೆ ರಾಮಚಂದ್ರ ರಾವ್ ಅವರನ್ನು ಕೆಲಸದಿಂದ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ, ಗದಗ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.

ಶಿಡ್ಲಘಟ್ಟ ನಗರಸಭೆಯ ಆಯುಕ್ತರಾದ ಅಮೃತಾ ಗೌಡರಿಗೆ ಅವಾಚ್ಯ ಶಬ್ದಗಳಿಂದ ಬೈದು, ನಗರಸಭೆ ಕಚೇರಿಗೆ ಬೆಂಕಿ ಹಾಕುತ್ತೇನೆ ಎಂದು ಹೇಳಿ ಕೊಲೆ ಬೆದರಿಕೆ ಹಾಕಿದ ರಾಜೀವಗೌಡನ ಮೇಲೆ ಎಫ್‌ಐಆರ್ ಆಗಿ 8 ದಿನಗಳೇ ಕಳೆದರೂ ಇನ್ನೂ ಬಂಧಿಸಿಲ್ಲ. ಕೂಡಲೇ ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯ ಮೂಲಕ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ನಿರ್ಮಲಾ ಕೊಳ್ಳಿ, ಜಿಲ್ಲಾ ಉಪಾಧ್ಯಕ್ಷರಾದ ಜಯಶ್ರೀ ಉಗಲಾಟದ, ಜಿಲ್ಲಾ ಕಾರ್ಯದರ್ಶಿ ಅಶೋಕ ಕುಡತಿನಿ, ಮಖಂಡರಾದ ಶ್ರೀಪತಿ ಉಡುಪಿ, ಅಶೋಕ ಸಂಕಣ್ಣವರ, ಗದಗ ನಗರ ಮಂಡಲ ಉಪಾಧ್ಯಕ್ಷರಾದ ಪದ್ಮಿನಿ ಮುತ್ತಲದಿನ್ನಿ, ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿಜಯಲಕ್ಷಿಮೀ ಮಾನ್ವಿ, ಪ್ರಧಾನ ಕಾರ್ಯದರ್ಶಿಗಳಾದ ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ರೇಖಾ ಬಂಗಾರಶೆಟ್ಟರ, ಮಂಜುನಾಥ ಶಾಂತಗೇರಿ, ಗದಗ ನಗರ ಮಂಡಲ ಕಾರ್ಯದರ್ಶಿಯಾದ ಸಿದ್ರಾಮೇಶ ಹಿರೇಮಠ, ಪ್ರಮುಖರಾದ ಅಶ್ವಿನಿ ಜಗತಾಪ್, ವಂದನಾ ವರ್ಣೇಕರ್, ಜಯಶ್ರೀ ಅಣ್ಣಿಗೇರಿ, ನಗರಸಭಾ ಸದಸ್ಯೆ ಲಕ್ಷಿಮೀ ಶಂಕರ ಕಾಕಿ, ಮಾಧುಸಾ ಮೇರವಾಡೆ, ರಾಚಯ್ಯ ಹೊಸಮಠ, ದೇವೆಂದ್ರಪ್ಪ ಹೂಗಾರ, ವಿರೂಪಾಕ್ಷಪ್ಪ ಐಲಿ, ಪ್ರೀತಿ ಶಿವಪ್ಪನಮಠ, ರೇಖಾ ಗೌಳಿ, ರವಿ ಮಾನ್ವಿ, ವಿನೋದ ಹಂಸನೂರ ಮುಂತಾದವರಿದ್ದರು.

ಕಾರ್ಕಳ| ಭೀಕರ ಅಪಘಾತ; ಮೀಯಾರು ಬಳಿ ಮೂವರು ಸಾವು, 8 ಮಂದಿಗೆ ಗಂಭೀರ ಗಾಯ!

0

ಉಡುಪಿ :-ಜಿಲ್ಲೆಯ ಕಾರ್ಕಳ ತಾಲೂಕಿನ ಮೀಯಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಮತ್ತು ತೂಫಾನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಕಾರ್ಕಳ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಗದಗ| ಪಶು ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಕಂಪ್ಯೂಟರ್ ಸೇರಿ ಮಹತ್ತರ ದಾಖಲೆಗಳು ಸುಟ್ಟು ಭಸ್ಮ!

0

ಗದಗ:- ಶಿರಹಟ್ಟಿ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಇಂದು ಸಂಜೆ 7ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಹಾನಿಯಾಗಿದೆ.

ಜಿಲ್ಲೆಯ ಶಿರಹಟ್ಟಿ ಪಟ್ಟಣದ ಪಶುಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಂಪ್ಯೂಟರ್, ಕಚೇರಿ ಪೀಠೋಪಕರಣ, ದಾಖಲೆ ಸೇರಿ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ.ಕಚೇರಿ ಅವಧಿ ಮುಗಿದ ಬಳಿಕ ಅವಘಡ ಸಂಭವಿಸಿದ್ದು, ಭಾರೀ ದುರಂತ ತಪ್ಪಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಸಮಿತಿಯವರು ಸಮರ್ಪಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ 26ರಂದು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ-ದೋಷಗಳಾಗದಂತೆ ವ್ಯವಸ್ಥಿತವಾಗಿ ಆಚರಿಸಲು ಕಾರ್ಯನಿರ್ವಹಿಸಬೇಕು ಎಂದರು.

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಿಗ್ಗೆ 7.30ರೊಳಗೆ ನೆರವೇರಿಸಿ ಬೆಳಿಗ್ಗೆ 8.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮಕ್ಕೆ ಶಾಲಾ-ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ವ್ಯವಸ್ಥಿತವಾಗಿ ಕರೆತರುವುದು ಹಾಗೂ ಅವರಿಗೆ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದರು.

ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಪರೇಡ್, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ವೇದಿಕೆ ನಿರ್ಮಾಣ, ಅಲ್ಪೋಪಹಾರ, ಸನ್ಮಾನ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎನ್. ತುಂಬರಮಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ್ ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಆದ್ಯತೆ ವಹಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಕಾರ್ಯಕ್ರಮದ ಸ್ಥಳದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಹಬ್ಬ-ಹರಿದಿನಗಳ ತವರೂರು. ಈ ನಾಡಿನಲ್ಲಿ ಯಾವುದೇ ಹಬ್ಬವಿರಲಿ ಅದು ತನ್ನ ವಿಶೇಷತೆ ಹೊಂದಿರುವಂತೆ ಮಕರ ಸಂಕ್ರಾಂತಿ ಕೂಡ ವಿಶಿಷ್ಟ ಹಬ್ಬವಾಗಿದೆ. ನಾವೆಲ್ಲರೂ ಒಂದೇ ಎಂದು ಹೇಳುವುದು ಸಕಲರಿಗೂ ಲೇಸನೆ ಬಯಸುವುದು ನಮ್ಮ ಸಂಸ್ಕೃತಿಯಾಗಿದೆ. ಸಂಕ್ರಾಂತಿಯಂದು ಪುಣ್ಯ ಕ್ಷೇತ್ರಗಳಲ್ಲಿ ಪುಣ್ಯ ಸ್ನಾನ ಮಾಡುವುದು, ಹೊಸ ಬಟ್ಟೆ ಧರಿಸುವುದು ನಮ್ಮಲ್ಲಿ ಸಂಪ್ರದಾಯವಾಗಿ ಬೆಳೆದು ಬಂದಿದೆ. ಹೀಗಾಗಿ ಮಕರ-ಸಂಕ್ರಾಂತಿಯು ಸಮಾನತೆ, ಸಂಸ್ಕೃತಿ, ಸಂಪ್ರದಾಯಗಳ ಸಂಗಮವಾಗಿದೆ ಎಂದು ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ವಿಜಯಲಕ್ಷ್ಮೀ ಆನೆಹೊಸೂರ ಅಭಿಪ್ರಾಯಪಟ್ಟರು.

ಎಸ್.ವಾಯ್.ಬಿ.ಎಂ.ಎಸ್. ಯೋಗಪಾಠಶಾಲೆಯ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ ಗದಗ ಇವರು ಸಿದ್ಧಲಿಂಗ ನಗರದಲ್ಲಿನ ಬಸವಪ್ರಭೆ ಕ್ಯಾಂಪಸ್‌ನಲ್ಲಿ ನಡೆಸಿದ `ಸಂಕ್ರಾಂತಿ-ಸಂಭ್ರಮ-2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶೇಷ ಆಮಂತ್ರಿತರಾಗಿ ಆಗಮಿಸಿದ ಕುರ್ತಕೋಟಿ ಶ್ರದ್ಧಾ ಜ್ಞಾನ ವಿಕಾಸ ಕೇಂದ್ರದ ತರಬೇತುದಾರರಾದ ಅನಿತಾ ಹೆಬಸೂರಮಠ ಮಾತನಾಡಿ, ಮಹಿಳೆಯರಾದವರು ಕೇವಲ ಹಬ್ಬಗಳನ್ನು ಸಂಭ್ರಮಿಸಿದರೆ ಸಾಲದು, ತಮ್ಮಲ್ಲಿ ಕಲಾ-ಕೌಶಲ್ಯಗಳನ್ನು ಬೆಳೆಸಿಕೊಂಡು ಅವಕಾಶ ದೊರೆತಾಗ ಪ್ರದರ್ಶಿಸಿ ಇತರರಿಗೆ ಮಾದರಿಯಾಗಬೇಕೆಂದರು.

ಕಾರ್ಯಕ್ರಮದಲ್ಲಿ ಲಲಿತಾ ಕಡಗದ, ಗಂಗಾ ಹುಚ್ಚಣ್ಣವರ, ಅಂಬಿಕಾ ರೂಡಗಿ, ಸುಮಾ ಸುರೇಬಾನ, ಜಯಲಕ್ಷ್ಮೀ ಸಜ್ಜನರ, ರೇಖಾ ಗಾಣಿಗೇರ, ಪ್ರಭಾವತಿ ಕುಲಕರ್ಣಿ, ಶೋಭಾ ಭಾಂಡಗೆ, ಕಸ್ತೂರಿ ಮರಿಗೌಡ್ರ, ಅನ್ನಪೂರ್ಣ ಅಸೂಟಿ, ಪುಷ್ಪಾ ಹಿರೇಮಠ, ಮಹಾದೇವಿ ಚರಂತಿಮಠ, ಶಾಂತಾ ಮುಂದಿನಮನಿ, ವೀಣಾ ಅಕ್ಕಿ, ಗಿರಿಜಾ ಅಂಗಡಿ, ಶಕುಂತಲಾ ಬ್ಯಾಳಿ ಮತ್ತು ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ವಿಜಯಾ ಚನ್ನಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಮಕರ ಸಂಕ್ರಾಂತಿ ಪ್ರಯುಕ್ತ ನಡೆಸಿದ ಮನೋಲ್ಲಾಸ ಕ್ರೀಡೆಗಳಾದ ಬಾಹ್ಯಾಂತರಿಕ ಶಕ್ತಿ ಪ್ರದರ್ಶನ ಸ್ಪರ್ಧೆಯಲ್ಲಿ ಅರುಣಾ ಇಂಗಳಳ್ಳಿ-ಪ್ರಥಮ, ಜಯಶ್ರೀ ವಸ್ತ್ರದ-ದ್ವಿತೀಯ, ಸಂಗೀತಾ ನಾಕೋಡ-ತೃತೀಯ ಸ್ಥಾನ ಪಡೆದರು. ಜಾಗೃತ ಜಾಣ್ಮೆ ಸ್ಪರ್ಧೆಯಲ್ಲಿ ವಿಜಯಲಕ್ಷ್ಮೀ ಮೇಕಳಿ-ಪ್ರಥಮ, ಅರುಣಾ ಇಂಗಳಳ್ಳಿ-ದ್ವಿತೀಯ, ಗೌರಿ ಜಿರಂಕಳಿ-ತೃತೀಯ ಸ್ಥಾನ ಪಡೆದರು. ಯೋಗಾಸನದ ಚಿತ್ರ ನೋಡಿ ಆಸನದ ಹೆಸರು ಹೇಳುವ ಸ್ಪರ್ಧೆಯಲ್ಲಿ ಜಯಶ್ರೀ ಡಾವಣಗೇರಿ-ಪ್ರಥಮ, ವೀಣಾ ಮಾಲಿಪಾಟೀಲ-ದ್ವಿತೀಯ, ಗೌರಿ ಜಿರಂಕಳಿ-ತೃತೀಯ ಸ್ಥಾನ ಪಡೆದರು.

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸತ್ಯಾಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಬಿಜೆಪಿಯು ಜಾರಿಗೆ ತಂದ ಅಪಾಯಕಾರಿ ಕೃಷಿ ಕಾಯ್ದೆಗಳನ್ನು ರದ್ದು ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಜ. 28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶಂಕರಗೌಡ ಜಯನಗೌಡರ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಕೊಡುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮಾತಿಗೆ ತಪ್ಪಿದ್ದಾರೆ. ಇವರನ್ನು ಎಚ್ಚರಿಸಲು ವಿಧಾನಸಭೆಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಜಿಲ್ಲೆಯ ಕಪ್ಪತ್ತಗುಡ್ಡದ ಅಂಚಿನಲ್ಲಿರುವ ಅರಣ್ಯ ಒತ್ತುವರಿದಾರ ರೈತರಿಗೆ ಸರ್ಕಾರದಿಂದ ಪಟ್ಟಾ ದೊರಕಿಸಿಕೊಡಬೇಕು, ರೈತರ ಹೊಲಗಳಲ್ಲಿ ಹಾವು, ಚೇಳು ಕಡಿದು, ಟ್ರ್ಯಾಕ್ಟರ್‌ಗಳಿಂದ ಬಿದ್ದು ಸಾವನ್ನಪ್ಪಿರುತ್ತಾರೆ. ಆದ್ದರಿಂದ, ಕಟ್ಟಡ ಕೂಲಿ ಕಾರ್ಮಿಕರಂತೆ ಮಂಡಳಿಯಿಂದ ಬರುವ ಸೌಲಭ್ಯಗಳನ್ನು ಕೃಷಿ ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಸಹಾಯಧನವನ್ನು ಒದಗಿಸಿಕೊಡಬೇಕು ಹಾಗೂ ಜಿಲ್ಲೆಯ ಹುಲಿಗುಡ್ಡದ ಏತ ನೀರಾವರಿ ಅಪೂರ್ಣವಾಗಿದ್ದು, ಇಡೀ ಗದಗ ಜಿಲ್ಲೆಯಾದ್ಯಂತ ರೈತರಿಗೆ ಸರಿಯಾಗಿ ನೀರು ಸಿಗುತ್ತಿಲ್ಲ. ಆದ್ದರಿಂದ ಪ್ರತಿ ರೈತರ ಹೊಲಗಳಿಗೆ ಚಿಟಕಾಲುವೆ ಮತ್ತು ಪೈಪ್‌ಲೈನ್ ಮುಖಾಂತರ ಸಂಪೂರ್ಣ ನೀರಾವರಿ ಒದಗಿಸಿಕೊಡಬೇಕು, ಜಿಲ್ಲೆಯ ಜಾಲವಾಡಗಿ ಏತ ನೀರಾವರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬರುವ ಬಜೆಟ್‌ನಲ್ಲಿ ಸರ್ಕಾರದಿಂದ ಹಣ ನಿಗದಿ ಮಾಡಬೇಕು ಇತ್ಯಾದಿ ಇನ್ನೂ ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ನವಲಗುಂದ, ದೃವಕುಮಾರ ಹೂಗಾರ, ಮಂಜುನಾಥ ವಡ್ಡರ, ವೀರೇಶ ಮಾಂಡ್ರೆ, ಶಾಂತಪ್ಪ ಹೊಳ್ಳೆಣ್ಣವರ, ಎಂ.ಪಿ. ಶಾಲಾವಾಡಿ, ಮಂಜುನಗೌಡ ರಾಮನಗೌಡ್ರು, ಗಿರೀಶ ಹೊಸಮನಿ ಇತರರು ಇದ್ದರು.

ಭೂಸುಧಾರಣೆ ಕಾಯ್ದೆ 2020 ಹಾಗೂ ಭೂಸ್ವಾಧೀನ ಕಾಯ್ದೆ 2013ಕ್ಕೆ ತಂದಿರುವ ತಿದ್ದುಪಡಿ ರದ್ದು ಮಾಡಬೇಕು, ಎಂಎಸ್‌ಪಿ ಕನಿಷ್ಠ ಬೆಂಬಲ ಬೆಲೆ ನಿಗದಿ, ಕೃಷಿ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರವನ್ನು ತೆರೆದಿರಲು ಬೇಕಾದ ಸಂಪನ್ಮೂಲ ಕನಿಷ್ಠ 10 ಸಾವಿರ ಕೋಟಿ ಅರವತ ನಿಧಿ ಮೀಸಲಿಡಬೇಕು, ಭೂಸ್ವಾಧೀನ ಕಾಯ್ದೆ 2013ಕ್ಕೆ ವಿರುದ್ಧವಾಗಿ ರೈತರ ಭೂಮಿಯನ್ನು ಬಲವಂತದಿಂದ ಕಿತ್ತುಕೊಳ್ಳುವುದನ್ನು ಕೂಡಲೇ ಕೈಬಿಡಬೇಕು ಇತ್ಯಾದಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಂಕರಗೌಡ ಜಯನಗೌಡರ ಹೇಳಿದರು.

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅಪ್ರಾಪ್ತರು ವಾಹನವನ್ನು ಚಾಲನೆ ಮಾಡಬಾರದು. ಇದನ್ನು ಉಲ್ಲಂಘಿಸಿದರೆ 25 ಸಾವಿರ ರೂ ದಂಡ ತೆರಬೇಕಾಗುತ್ತದೆ. ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ವಾಹನದ ಎಲ್ಲ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಪ್ರತಿ ಶಾಲೆಗಳಲ್ಲಿಯೂ ಸಹ ಈ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು. ಪ್ರತಿಯೊಬ್ಬರೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಿ ಅಪಘಾತಗಳು ಸಂಭವಿಸದಂತೆ ಎಚ್ಚರವಾಗಿರಬೇಕು ಎಂದು ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಲಕ್ಷ್ಮೇಶ್ವರದ ನ್ಯಾಯಾಧೀಶ ಸತೀಶ ಎಂ ಹೇಳಿದರು.

ಅವರು ಶುಕ್ರವಾರ ಶಿರಹಟ್ಟಿ ಪಟ್ಟಣದಲ್ಲಿಯ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಪಘಾತದ ಪ್ರಮಾಣವನ್ನು ಕಡಿಮೆ ಮಾಡುವುದು ಹಾಗೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸುವುದಕ್ಕಾಗಿ ಸಾರ್ವಜನಿಕರಿಗೆ ಇಂತಹ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದ್ದು, ಇದನ್ನು ಎಲ್ಲರೂ ಪಾಲಿಸಿ ಜೀವ ರಕ್ಷಣೆಗೆ ಆದ್ಯತೆ ನೀಡಬೇಕೆಂದು ಹೇಳಿದರು.

ಇದಕ್ಕೂ ಮುನ್ನ ತಹಸೀಲ್ದಾರ ಕಚೇರಿಯಿಂದ ಜಾಥಾ ಪ್ರಾರಂಭವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲೂಕು ಪಂಚಾಯತ್ ಸಭಾಭವನದವರೆಗೆ ತಲುಪಿತು. ಈ ಸಂದರ್ಭದಲ್ಲಿ ವಿವಿಧ ಶಾಲೆಯ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್‌ಐ ಈರಪ್ಪ ರಿತ್ತಿ, ಉಪ ತಹಸೀಲ್ದಾರ ವಿ.ಎ. ಮುಳಗುಂದಮಠ, ಬಿಇಓ ಎಚ್.ನಾಣಕಿನಾಯ್ಕ, ಸರ್ಕಾರಿ ಸಹಾಯಕ ಅಭಿಯೋಜಕಿ ಎಚ್.ಎ. ಗುಂಜಾಳ, ಎನ್.ಸಿ. ಪಾಟೀಲ, ಅರುಣ ಎಫ್.ಕಟ್ಟಿಮನಿ, ರಾಜು ನಾಯಕ ಮುಂತಾದವರು ಉಪಸ್ಥಿತರಿದ್ದರು.

ಬೆಳ್ಳಟ್ಟಿಯಲ್ಲಿ ವಿಜೃಂಭಣೆಯ ಹಿಂದೂ ಸಮ್ಮೇಳನ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಹೋಬಳಿ ಮಟ್ಟದ ಹಿಂದೂ ಸಮ್ಮೇಳನವು ಸಡಗರ ಸಂಭ್ರಮದಿಂದ ಜರುಗಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿಯ ಬೃಹತ್ ಭಾವಚಿತ್ರ ಮೆರವಣಿಗೆಯ ಮೂಲಕ ಶೋಭಾಯಾತ್ರೆ ಹಾಗೂ ಸಂಜೆ 5 ಗಂಟೆಗೆ ಶ್ರೀ ಭೀಮರಡ್ಡಿ ಸರ್ಕಲ್‌ನಲ್ಲಿ ಬೃಹತ್ ಸಮಾವೇಶ ನಡೆಯಿತು.

ಸಮಾವೇಶದ ಸಾನ್ನಿಧ್ಯ ವಹಿಸಿದ್ದ ಬನ್ನಿಕೊಪ್ಪದ ಸುಜ್ಞಾನದೇವ ಸ್ವಾಮೀಜಿ, ಬೆಳ್ಳಟ್ಟಿಯ ಬಸವರಾಜ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ರಾಜೇಂದ್ರಕುಮಾರ ಹಲಗಲಿ ವಹಿಸಿ ಮಾತನಾಡಿದರು. ದಿಕ್ಸೂಚಿ ಭಾಷಣವನ್ನು ನಾಗಪುರದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಭಾರತೀಯ ಶಿಕ್ಷಣ ಮಂಡಲದ ಶಂಕರಾನಂದಜಿ ನೀಡಿದರು.

ಜ. 26ರಂದು ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಸಮಾರಂಭ, ಸಾಂಸ್ಕೃತಿಕ ಸಂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗಜೇಂದ್ರಗಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ವತಿಯಿಂದ ಜ. 26ರಂದು ಬೆಳಗಾವಿಯ ನಂದಗಡದಲ್ಲಿ ರಾಜ್ಯ ಮಟ್ಟದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಸಮಾರಂಭ ಹಾಗೂ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಹೆಚ್.ಎಸ್. ಸೋಂಪೂರ ಹೇಳಿದರು.

ಶುಕ್ರವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಧಾರವಾಡದ ರೇವಣಸಿದ್ದೇಶ್ವರ ಪೀಠದ ಶ್ರೀ ಬಸವರಾಜ ದೇವರು, ರಾಜಗುರು ಮಡಿವಾಳ ಮಹಾಸ್ವಾಮಿಗಳು, ಚನ್ನವೀರ ದೇವರು ದಿವ್ಯ ಸಾನ್ನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಭುವನೇಶ್ವರಿ ಭಾವಚಿತ್ರ ಅನಾವರಣಗೊಳಿಸುವರು, ವಿಧಾನ ಪರಿಷತ್ ಶಾಸಕ ಚನ್ನರಾಜ ಹಟ್ಟಿಹೊಳಿ ತಾಯಿ ಚನ್ನಮ್ಮ ಭಾವಚಿತ್ರ ಅನಾವರಣಗೊಳಿಸುವರು. ಶಾಸಕ ದೊಡ್ಡನಗೌಡ ಪಾಟೀಲ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಅನಾವರಣಗೊಳಿಸುವರು ಎಂದು ತಿಳಿಸಿದರು.

ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳ್ಳಿ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ಪ್ರತಿಷ್ಠಾನದಿಂದ ಕಳೆದ 16 ವರ್ಷಗಳಿಂದ ರಾಯಣ್ಣ ಹುತಾತ್ಮ ದಿನಾಚರಣೆ ಆಚರಿಸುತ್ತಾ ಬಂದಿದ್ದು, ಈ ವರ್ಷ ಇನ್ನೂ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಹಿಂದಿನ ಸರ್ಕಾರ ಆದೇಶ ಹೊರಡಿಸಿದಂತೆ ಆಗಸ್ಟ್ 15 ಹಾಗೂ ಜನವರಿ 26ರಂದು ಎಲ್ಲ ಜಿಲ್ಲೆಯ ಪ್ರಮುಖ ವೃತ್ತಗಳಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಲಾಗಿತ್ತು. ಅದು ಕಡ್ಡಾಯವಾಗಿ ಜಾರಿಯಾಗಬೇಕು ಎಂದು ಹೇಳಿದರು.

ಅಹಿಂದ ನಾಯಕಿ ಭಾಗ್ಯಶ್ರೀ ಬಾಬಣ್ಣ ಮಾತನಾಡಿ, ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲೆಯಿಂದ ಹೆಚ್ಚಿನ ಜನರು ಆಗಮಿಸಬೇಕೆಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶೇಖಣ್ಣ ಕಾಳೆ, ಹೇಮಂತ, ನಾಗರಾಜು ಮುಂತಾದವರಿದ್ದರು.

ಇದೇ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಜ್ಞರ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿಗಳಾದ ಬಿ.ಎಸ್. ಪಾಟೀಲರಿಗೆ ರಾಜ್ಯ ಮಟ್ಟದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರಶಸ್ತಿ ನೀಡಲಾಗುವುದು ಎಂದು ಹೆಚ್.ಎಸ್. ಸೋಂಪೂರ ತಿಳಿಸಿದರು.

ಜ.25ರಂದು ಶ್ರೀ ಹೊಳಲಮ್ಮದೇವಿಯ ಪ್ರಾಣ ಪ್ರತಿಷ್ಠಾಪನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಶ್ರೀಮಂತಗಡದ ಶ್ರೀ ಹೊಳಲಮ್ಮದೇವಿ ದೇವಸ್ಥಾನದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರಿಂದ ಗರ್ಭಗುಡಿಯನ್ನು ಮುಚ್ಚಲಾಗಿತ್ತು.

ಇದೀಗ ಶ್ರೀ ಹೊಳಲಮ್ಮದೇವಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ನಿಮಿತ್ತ ಜ.23ರ ಶುಕ್ರವಾರ ಸಾಯಂಕಾಲ 5.30ಕ್ಕೆ ಗೋಮಾತಾ ಪೂಜೆ, ಮುತ್ತೈದೆಯರಿಂದ ಪೂರ್ಣಕುಂಭ ಪೂಜಾ ಪ್ರವೇಶ ಕಾರ್ಯಕ್ರಮ ನೆರವೇರಿದ್ದು, ಜ.24ರಂದು ದೇವತಾ ಶಾಂತಿ ಪೂಜಾ ಕಾರ್ಯಕ್ರಮ ಜರುಗಲಿದೆ. ಜ.25ರಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಹೊಳಲಮ್ಮ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವತಾ ಶಾಂತಿಹೋಮ, ಗೋ ಹೋಮ, ಪೂರ್ಣಾಹುತಿ ಕಾರ್ಯಕ್ರಮ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳು ಬನ್ನಿಕೊಪ್ಪದ ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳ್ಳಟ್ಟಿಯ ಬಸವರಾಜ ಸ್ವಾಮೀಜಿ ಇವರ ಅಮೃತ ಹಸ್ತದಿಂದ ನೆರವೇರಲಿದೆ ಎಂದು ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!