Home Blog Page 153

‘ನಾನು ಇನ್ನು ಸುಮ್ಮನಿರುವುದಿಲ್ಲ’: ನಟ ಗೋವಿಂದ ವಿರುದ್ಧ ಮತ್ತೆ ಮಾತಾಡಿದ ಸುನೀತಾ

ನಟ ಗೋವಿಂದ ಮತ್ತು ಅವರ ಪತ್ನಿ ಸುನೀತಾ ಅಹುಜಾ ನಡುವಿನ ವೈವಾಹಿಕ ಬಿಕ್ಕಟ್ಟು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ವಿವಾಹೇತರ ಸಂಬಂಧದ ಆರೋಪದ ಬಳಿಕ, ಗೋವಿಂದ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದರು. ಆದರೆ ಇದೀಗ ಸುನೀತಾ ಮತ್ತೊಮ್ಮೆ ವ್ಲಾಗ್ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.

“ನಾನು ಯಾವಾಗಲೂ ಸತ್ಯವನ್ನೇ ಹೇಳುತ್ತೇನೆ. ನನ್ನ ಮುಗ್ಧತೆಯನ್ನು ಬಳಸಿಕೊಂಡು ಹಲವರು ಲಾಭ ಪಡೆದಿದ್ದಾರೆ. ಆದರೆ ಈಗ ನಾನು ಬದಲಾಗಿದ್ದೇನೆ. ನನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ಗೋವಿಂದ ಬದಲಾದರೆ ನಾನು ಅವನನ್ನು ಕ್ಷಮಿಸಲು ಸಿದ್ಧಳಿದ್ದೇನೆ. ಆದರೆ ಪ್ರತಿಯೊಂದಕ್ಕೂ ಒಂದು ವಯಸ್ಸು ಇದೆ. ಯೌವನದಲ್ಲಿ ನಾನು ಸಹ ಜೀವನವನ್ನು ಆನಂದಿಸಿದ್ದೇನೆ. ಆದರೆ ಈಗ ಸ್ಥಿರತೆ ಮತ್ತು ಗೌರವ ಬೇಕು” ಎಂದು ಹೇಳಿದ್ದಾರೆ.

ಗೋವಿಂದ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂದು ಸುನೀತಾ ಆರೋಪಿಸಿದ್ದಾರೆ. “ಅವನು ನಗುವ ಮೂಲಕ ವಿಷಯ ತಪ್ಪಿಸುತ್ತಾನೆ. ಅವನ ಸಹವಾಸವೂ ಒಳ್ಳೆಯದಲ್ಲ. ಯಾರೊಂದಿಗಾದರೂ ಸಂಬಂಧ ಹೊಂದಿದ್ದರೆ ಏನಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

40 ವರ್ಷಗಳ ಸಂಬಂಧ ಒಂದು ದಿನದಲ್ಲಿ ಮುರಿಯುವುದಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಗೌರವ ಮತ್ತು ಸ್ಪಷ್ಟತೆ ಬೇಕೆಂದು ಸುನೀತಾ ಸ್ಪಷ್ಟಪಡಿಸಿದ್ದಾರೆ.

ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್; ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಬರ್ತಿದೆ QR ಸ್ಕ್ಯಾನ್!

0

ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಸುರಕ್ಷತೆಯನ್ನು ಹೆಚ್ಚಿಸಲು ಕೆಎಂಎಫ್ ಹೊಸ ಯೋಜನೆ ಜಾರಿಗೆ ತಂದಿದೆ.

ನಕಲಿ ಉತ್ಪನ್ನಗಳ ಹಾವಳಿಗೆ ಬ್ರೇಕ್ ಹಾಕಲು ತುಪ್ಪದ ಪ್ಯಾಕೆಟ್ ಮತ್ತು ಬಾಟಲ್‌ಗಳಲ್ಲಿ QR ಕೋಡ್ ಅಳವಡಿಸಲಾಗಿದೆ. ಗ್ರಾಹಕರು ಕೋಡ್ ಸ್ಕ್ಯಾನ್ ಮಾಡಿದರೆ, OTP ಮೂಲಕ ಉತ್ಪನ್ನದ ಸಂಪೂರ್ಣ ಮಾಹಿತಿ (ತಯಾರಿಕಾ ಸ್ಥಳ, ದಿನಾಂಕ, ಮಾರ್ಕೆಟ್ ಕೋಡ್) ತಮ್ಮ ಫೋನ್‌ನಲ್ಲಿ ಪಡೆಯಬಹುದು. ಈ ಕ್ರಮವು ನಂದಿನಿ ಬ್ರ್ಯಾಂಡ್ ಶ್ರೇಣಿಯನ್ನು ಕಾಪಾಡಲು ಹಾಗೂ ನಕಲಿ ಉತ್ಪನ್ನ ತಡೆಗೆ ಸಹಕಾರಿ ಆಗಲಿದೆ.

ಹಂತ ಹಂತವಾಗಿ ಇತರ ಉತ್ಪನ್ನಗಳ ಮೇಲೆಯೂ ಈ ವ್ಯವಸ್ಥೆಯನ್ನು ಜಾರಿಗೆ ತರಲು ಕೆಎಂಎಫ್ ಯೋಚನೆ ಮಾಡುತ್ತಿದೆ ಎನ್ನಲಾಗಿದೆ.

ಪ್ರಿಯಕರನಿಗಾಗಿ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ; ಖತರ್ನಾಕ್ ಆಂಟಿ ಅರೆಸ್ಟ್!

0

ಬೆಂಗಳೂರು: ಪ್ರಿಯಕರನ ಸಾಲ ತೀರಿಸೋಕೆ ತಾನೂ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಮಹಿಳೆಯೋರ್ವಳು ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ಜರುಗಿದೆ.

ಪ್ರಮೀಳಾ ಬಂಧಿತ ಆರೋಪಿತೆ. ಆಕೆಯ ಪ್ರಿಯಕರನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಚಿನ್ನಾಭರಣವನ್ನು ಕದ್ದು, ಅದನ್ನು ಮಾರಾಟ ಮಾಡಿದ ಹಣವನ್ನು ಪ್ರಿಯಕರನಿಗೆ ನೀಡಿದ್ದಳು ಎಂದು ತಿಳಿದುಬಂದಿದೆ.

ಪ್ರಮೀಳಾಗೆ ಮದುವೆಯಾಗಿ ಗಂಡ ಬಿಟ್ಟಿದ್ದು, ಪ್ರಿಯಕರನಿಗೆ ಮದುವೆಯಾಗಿ ಎರಡು ಮಕ್ಕಳಿದ್ದವು. ಬೊಮ್ಮನಹಳ್ಳಿಯ ಗಾರ್ಮೆಂಟ್ಸ್ನಲ್ಲಿ ಇಬ್ಬರು ಕೆಲಸ ಮಾಡುವಾಗ ಪರಿಚಯವಾಗಿ ಪ್ರೀತಿಯಾಗಿತ್ತು. ಬಳಿಕ ಅಲ್ಲಿ ಕೆಲಸ ಬಿಟ್ಟು ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಮನೆಕೆಲಸ ಮಾಡುತ್ತಿದ್ದಳು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಸುಧಾರಕ್ ಪ್ರಮೀಳಾಗೆ ಸಾಲ ತೀರಿಸೋಕೆ 20 ಸಾವಿರ ರೂ. ಕೇಳಿದ್ದ. ಆಗ ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ, ಮಾರಾಟ ಮಾಡಿ ಪ್ರಿಯಕರನಿಗೆ ಹಣ ಕೊಟ್ಟಿದ್ದಳು.

ಒಂದು ತಿಂಗಳ ಬಳಿಕ ಮನೆ ಮಾಲೀಕರಿಗೆ ಚಿನ್ನ ಕಳ್ಳತನದ ವಿಷಯ ಗೊತ್ತಾಗಿತ್ತು. ನಂತರ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರು ದಾಖಲಿಸಿ ಪೊಲೀಸರು ಮನೆಕೆಲಸದಾಕೆ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಅರೋಪಿತೆ ಕಳ್ಳತನ ಮಾಡಿರುವುದಾಗಿ ಬಾಯಿಬಿಟ್ಟಿದ್ದಾಳೆ.

ಇದೀಗ ಆರೋಪಿತೆಯಿಂದ ಒಟ್ಟು 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಪರಾರಿಯಾಗಿರುವ ಪ್ರಮೀಳಾ ಪ್ರಿಯಕರ ಸುಧಾಕರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಂಗಳೂರಿಗಿಂತ ಮಂಗಳೂರು ವಾಯುಮಟ್ಟ ತೀವ್ರ ಕುಸಿತ; ತಜ್ಞರ ಎಚ್ಚರಿಕೆ

0

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಮಂಗಳೂರಿನ ವಾಯು ಗುಣಮಟ್ಟ ತೀವ್ರ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಎಸ್, ರಾಜ್ಯದ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ (AQI) 135 ಆಗಿ “ಕಳಪೆ” ಮಟ್ಟವನ್ನು ತಲುಪಿದ್ದು, ಮಂಗಳೂರಿನಲ್ಲಿ 194 ರೊಂದಿಗೆ “ಅನಾರೋಗ್ಯಕರ” ಮಟ್ಟವಾಗಿದೆ. ಮೈಸೂರು 156, ಬೆಳಗಾವಿ 170, ಕಲಬುರ್ಗಿ 146, ಶಿವಮೊಗ್ಗ 179, ಬಳ್ಳಾರಿ 152, ಹುಬ್ಬಳ್ಳಿ 159, ಉಡುಪಿ 179, ವಿಜಯಪುರ 146 ರಂತೆ ಇತರ ನಗರಗಳಲ್ಲೂ ವಾಯು ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

WHO ಮಾನದಂಡದ ಪ್ರಕಾರ, ಈ ಮಟ್ಟದ ವಾಯು ಉಸಿರಾಡುವುದು ದೀರ್ಘಕಾಲ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸಾರ್ವಜನಿಕರಿಗೆ ಹೊರಗೆ ಹೆಚ್ಚು ಸಮಯ ಕಳೆದರೆ ಮಾಸ್ಕ್ ಧರಿಸುವುದು, ಗಾಳಿ ಶುದ್ಧೀಕರಣ ಉಪಕರಣಗಳನ್ನು ಬಳಸುವುದು ಮತ್ತು ವಾಯು ಮಾಲಿನ್ಯ ಇರುವ ಪ್ರದೇಶವನ್ನು ತಪ್ಪಿಸುವುದು ಸೂಕ್ತ ಎಂದು ತಜ್ಞರು ಸೂಚಿಸಿದ್ದಾರೆ

ಕೇರಳ ಸ್ಟೋರಿ 2 ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ವಿಜಯನ್‌ ಕರೆ

ತಿರುವನಂತಪುರಂ: ಚುನಾವಣೆ ಹೊಸ್ತಿಲಲ್ಲಿರುವ ಕೇರಳದಲ್ಲಿ ಕೇರಳ ಸ್ಟೋರಿ 2 ಸಿನಿಮಾ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದ್ದು, ಚಿತ್ರ ಫೆ.27ರಂದು ಬಿಡುಗಡೆಯಾಗಲಿದೆ. ಆದರೆ ಸಿನಿಮಾ ಬಿಡುಗಡೆಯ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕಾವು ಹೆಚ್ಚಾಗಿದೆ.

ಚಿತ್ರದಲ್ಲಿ ಕೇರಳದ ಜಾತ್ಯತೀತ ಮೌಲ್ಯಗಳಿಗೆ ಧಕ್ಕೆ ತರುವ ಮತ್ತು ಧಾರ್ಮಿಕ ಸೌಹಾರ್ದತೆಗೆ ವಿರೋಧಿಯಾದ ಅಂಶಗಳಿವೆ ಎಂದು ಆರೋಪಿಸಿರುವ ಸಿಎಂ ಪಿಣರಾಯಿ ವಿಜಯನ್, ಜನತೆ ಚಿತ್ರವನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಈ ಹೇಳಿಕೆ ಮತ್ತಷ್ಟು ಸಂಚಲನ ಮೂಡಿಸಿದೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಜನತೆಗೆ ಕರೆ ನೀಡುವ ಬದಲು ನ್ಯಾಯಾಲಯದ ಮೆಟ್ಟಿಲೇರುವುದು ಸೂಕ್ತ ಎಂದು ಪ್ರತಿಕ್ರಿಯಿಸಿದೆ. ಸರ್ಕಾರ ಸಿನಿಮಾ ತಡೆಯಲು ಬಯಸಿದರೆ ಕಾನೂನು ಮಾರ್ಗ ಅನುಸರಿಸಬೇಕು ಎಂದು ಒತ್ತಾಯಿಸಿದೆ.

ಇದೀಗ ಪ್ರಕರಣ ನ್ಯಾಯಾಲಯದ ಅಂಗಳಕ್ಕೇರಿದೆ. ಕಣ್ಣೂರು ಮೂಲದ ಶ್ರೀದೇವ್ ನಂಬೂದಿರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ, ಚಿತ್ರದ ಟ್ರೇಲರ್‌ನಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸಿರುವ ಅಂಶಗಳಿವೆ ಎಂದು ಆರೋಪಿಸಿದ್ದಾರೆ. ಕೋಮು-ಪ್ರಾದೇಶಿಕ ಸಂಘರ್ಷಕ್ಕೆ ಎಡೆಮಾಡಿಕೊಡುವ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಅಂಶಗಳಿರುವುದರಿಂದ ಫಿಲ್ಮ್ ಸರ್ಟಿಫಿಕೇಟ್ ರದ್ದುಪಡಿಸಿ, ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಬಿಎಫ್‌ಸಿಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಫೆ.24ರಂದು ವಿಚಾರಣೆ ನಡೆಯಲಿದೆ. ವಿಚಾರಣೆ ಫಲಿತಾಂಶವೇ ಚಿತ್ರ ಬಿಡುಗಡೆ ಭವಿಷ್ಯವನ್ನು ನಿರ್ಧರಿಸಲಿದೆ.

ಕೊಪ್ಪಳ ಗ್ಯಾಂಗ್ ರೇಪ್ ಪ್ರಕರಣ: 3 ಅಪರಾಧಿಗಳಿಗೆ ಮರಣದಂಡನೆ, ಕುಟುಂಬಗಳು ಬೀದಿಗೆ!

0

ಕೊಪ್ಪಳ: ಕುಡಿದ ಅಮಲಿನಲ್ಲಿ, ಗಾಂಜಾ ಮತ್ತಿನಲ್ಲಿ 100 ರೂ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆಸಿ, ಓರ್ವನನ್ನು ಕೊಲೆ ಮಾಡಿದ ಭೀಕರ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಕೊಪ್ಪಳದಲ್ಲಿ ನಡೆದ ವಿದೇಶಿ ಮಹಿಳೆ ಮೇಲಿನ ಈ ದುರಂತ ಪ್ರಕರಣಕ್ಕೆ ಗಂಗಾವತಿ ನ್ಯಾಯಾಲಯ ಕಠಿಣ ತೀರ್ಪು ನೀಡಿದ್ದು, 3 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಮಾ.06ರಂದು ನಡೆದ ಈ ಅಮಾನವೀಯ ಘಟನೆಯಲ್ಲಿ ಸಂತ್ರಸ್ತರಿಗೆ ನ್ಯಾಯ ದೊರೆತಿದೆ. ಆದರೆ ಅಪರಾಧಿಗಳ ಕುಟುಂಬಗಳು ಮಾತ್ರ ಸಂಕಷ್ಟದಲ್ಲಿ ಮುಳುಗಿವೆ. ಬಳ್ಳಾರಿ ಜೈಲಿನಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ನೋಡಲು ಹೋಗುವ ಸ್ಥಿತಿಯಲ್ಲೂ ಅವರ ಕುಟುಂಬಸ್ಥರು ಇಲ್ಲದಂತಾಗಿದೆ.

ಶಿಕ್ಷೆ ಘೋಷಣೆಯಾದ ಬಳಿಕ ಶರಣಬಸವ ತಂದೆ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅಕ್ಕಪಕ್ಕದವರು ಕಾಪಾಡಿದರೆಂದು ಶರಣಬಸವ ತಾಯಿ ಕಣ್ಣೀರಿಡುತ್ತಿದ್ದಾರೆ.

ಪ್ರಮುಖ ಆರೋಪಿ ಮಲ್ಲಯ್ಯ ಅಲಿಯಾಸ್ ಹಂದಿ ಮಲ್ಲನ ಪರಿಸ್ಥಿತಿ ಇನ್ನಷ್ಟು ದಯನೀಯವಾಗಿದೆ. ಈತನಿಗೆ 4 ತಿಂಗಳ ಮಗು ಇದೆ. ಪತ್ನಿ ತನ್ನ ತಾಯಿಯೊಂದಿಗೆ ಗುಡಿಸಲಿನಲ್ಲಿ ವಾಸವಿದ್ದು, 4 ತಿಂಗಳ ಮಗುವಿನ ಜೊತೆ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ.

ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗಿದೆ. ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗುವ ಅವಕಾಶವಿದೆ. ಆದರೆ ಕೂಲಿ ಕೆಲಸ ಮಾಡಿದರೆ ಮಾತ್ರ ಹೊಟ್ಟೆ ತುಂಬುವ ಪರಿಸ್ಥಿತಿಯಲ್ಲಿರುವ ಕುಟುಂಬಗಳಿಗೆ ಇದೀಗ ನರಕ ದರ್ಶನವಾಗಿದೆ. ಕುಡಿತ ಮತ್ತು ಗಾಂಜಾ ಮತ್ತದಲ್ಲಿ ಮಾಡಿದ 1 ಕೃತ್ಯದಿಂದ 3 ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಪ್ರೇಮಕ್ಕೆ ಬಲಿಯಾದ ಮನೆಕೆಲಸದಾಕೆ: 20 ಸಾವಿರ ಸಾಲಕ್ಕಾಗಿ 3.4 ಲಕ್ಷ ಚಿನ್ನ ಕಳವು!

0

ಬೆಂಗಳೂರು: ಪ್ರಿಯಕರನ ಸಾಲ ತೀರಿಸಲು ಆಂಟಿಯೇ ಕಳ್ಳಿಯಾಗಿ 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿತೆಯನ್ನು ಪ್ರಮೀಳಾ ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯಕರ ಸುಧಾಕರ್ ಪರಾರಿಯಾಗಿದ್ದಾನೆ. ಕಳವು ಮಾಡಿದ ಚಿನ್ನಾಭರಣವನ್ನು ಮಾರಾಟ ಮಾಡಿ ಬಂದ ಹಣವನ್ನು ಪ್ರಿಯಕರನಿಗೆ ನೀಡಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮೀಳಾಗೆ ಮದುವೆಯಾಗಿ ಗಂಡ ಬಿಟ್ಟಿದ್ದರೆ, ಸುಧಾಕರ್‌ಗೆ ಮದುವೆಯಾಗಿ 2 ಮಕ್ಕಳಿದ್ದಾರೆ. ಬೊಮ್ಮನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಇಬ್ಬರು ಕೆಲಸ ಮಾಡುವಾಗ ಪರಿಚಯವಾಗಿ ಪ್ರೀತಿಯಾಗಿತ್ತು. ನಂತರ ಪ್ರಮೀಳಾ ಗಾರ್ಮೆಂಟ್ಸ್ ಕೆಲಸ ಬಿಟ್ಟು ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಮನೆಕೆಲಸಕ್ಕೆ ಸೇರಿದ್ದಳು.

ಸಂಕ್ರಾಂತಿ ಹಬ್ಬದ ವೇಳೆ ಸುಧಾಕರ್ 20 ಸಾವಿರ ರೂ. ಸಾಲ ತೀರಿಸಲು ಕೇಳಿದ್ದ. ಪ್ರಿಯಕರನಿಗಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ, ಅದನ್ನು ಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಮಾರಾಟ ಮಾಡಿ ಹಣ ನೀಡಿದ್ದಳು.

ಸುಮಾರು 1 ತಿಂಗಳ ಬಳಿಕ ಮನೆ ಮಾಲೀಕರಿಗೆ ಚಿನ್ನ ಕಳವು ಆಗಿರುವುದು ಗೊತ್ತಾಗಿ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದರು. ಆರಂಭದಲ್ಲಿ ತನಗೇನು ಗೊತ್ತಿಲ್ಲವೆಂದು ಪ್ರಮೀಳಾ ನಾಟಕವಾಡಿದ್ದಳು. ಆದರೆ ಪೊಲೀಸ್ ವಿಚಾರಣೆಯ ವೇಳೆ ಅಸಲಿ ಸತ್ಯ ಬಾಯಿಬಿಟ್ಟಿದ್ದಳು.

ಪೊಲೀಸರು ಆರೋಪಿತೆಯಿಂದ ಒಟ್ಟು 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಪರಾರಿಯಾಗಿರುವ ಸುಧಾಕರ್ ಬಂಧನಕ್ಕಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ವಿದ್ಯುತ್‌ ವ್ಯತ್ಯಯ; ಈ ಏರಿಯಾಗಳಲ್ಲಿ 8 ತಾಸು ಇರಲ್ಲ ಪವರ್‌!

0

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಪವರ್ ಕಟ್ ಇರಲಿದೆ. ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಶನಲ್ ಸ್ಕೂಲ್, ಕಾಗೆನ್‌ಅಡ್ಯಾನ್‌ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ,

ತಿರುಮಲ ನಗರ, ಅತ್ತೂರು ಬಡಾವಣೆ 1ನೇ ಅಡ್ಡರಸ್ತೆಯಿಂದ 10ನೇ ಅಡ್ಡರಸ್ತೆ, ಎಸ್ಕಾರ್ಟ್ಸ್ ಬಡಾವಣೆ, ದೊಡ್ಡಬೆಟ್ಟಹಳ್ಳಿ, ಟಿಪ್ಪು ವೃತ್ತ, ಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮನಗರ, ಎಎಂಎಸ್ ಬಡಾವಣೆ, ವ್ಯತ್ಯಾಸ ಬಡಾವಣೆ, ಜೆಲ್ಲಿ ಯಂತ್ರ, ಎಂ.ಎಸ್. ಪಾಳ್ಯ, ಶಿಕ್ಷಕರ ಬಡಾವಣೆ, ಬೆಲ್ 6ನೇ ಬ್ಲಾಕ್, ಎಚ್‌ಎಂಟಿ 3ನೇ ಬ್ಲಾಕ್, ಎಚ್‌ಎಂಟಿ 4ನೇ ಬ್ಲಾಕ್, ಎಚ್‌ಎಂಟಿ 6ನೇ ಬ್ಲಾಕ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ; ಇಂದಿನ ಹವಾಮಾನ ವರದಿ ಹೀಗಿದೆ!

0

ಬೆಂಗಳೂರು:- ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು-ಚಪ್ಪಲಿ ತೂರಾಟ; ಬಾಗಲಕೋಟೆಯಲ್ಲಿ ಉದ್ವಿಗ್ನ ಸ್ಥಿತಿ!

0

ಬಾಗಲಕೋಟೆ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಹಳೆಯ ಕಿಲ್ಲಾ ಓಣಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು-ಚಪ್ಪಲಿ ತೂರಾಟ ನಡೆದಿದೆ.

ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ತಲೆಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಈ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ.

ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸಿ, ವ್ಯಾಪಾರಿಗಳಿಗೆ ಸಹಾಯ ಮಾಡಿದ್ದಾರೆ. ವ್ಯಾಪಾರಿ ಜನ್ನತಬಿ ದೊಡ್ಡಮನಿ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಕಲ್ಲೆಸೆದವರ ಬಂಧನ ಮತ್ತು ಐಜಿಪಿ ಆಗಮಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಸಿ ಪ್ರತಿಭಟನೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ದುರಂತದ ಬಳಿಕ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಪ್ರದೇಶಗಳಲ್ಲಿ ನಿನ್ನೆ ಮಧ್ಯರಾತ್ರಿ–ಇಂದು ಮಧ್ಯರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಆದೇಶದಂತೆ, ಸಾರ್ವಜನಿಕ ಸ್ಥಳದಲ್ಲಿ 4 ಕ್ಕಿಂತ ಹೆಚ್ಚು ಜನ ಸೇರಿ ಓಡಾಡಲು, ಅಪಾಯಕಾರಿ ಶಸ್ತ್ರಾಸ್ತ್ರ ಬಳಕೆ, ಅನುಮತಿ ಇಲ್ಲದೆ ಸಭೆ/ಧರಣಿ ನಡೆಸಲು ನಿಷೇಧಿಸಲಾಗಿದೆ.

error: Content is protected !!