Home Blog Page 16

ಸಾಧು-ಸಂತರ ಹಿತೋಪದೇಶದಿಂದ ಜೀವನ್ಮುಕ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನಲ್ಲಿ ಸಾಧು-ಸಂತರು, ದಾರ್ಶನಿಕರು ತತ್ವ–ಸಂದೇಶಗಳನ್ನು ನೀಡುವ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಕಾರಣರಾಗಿದ್ದಾರೆ. ಧರ್ಮದ ಸನ್ಮಾರ್ಗದಲ್ಲಿ ಮುನ್ನಡೆಯುವ ಮೂಲಕ ನಿಜವಾದ ಧರ್ಮಗುರುಗಳನ್ನು, ಸಾಧು-ಸಂತರ ಹಿತೋಪದೇಶಗಳನ್ನು ಆಲಿಸಿ ಜೀವನ್ಮುಕ್ತಿ ಹೊಂದಬೇಕೆಂದು ಅಖಿಲ ಭಾರತ ಭಾವಸಾರ ಕ್ಷತ್ರಿಯ ವಾರಕರ ಮಂಡಳಿಯ ರಾಜ್ಯ ಅಧ್ಯಕ್ಷ ಬಂಕಾಪೂರದ ಭಾನುದಾಸ ಮಹಾರಾಜರು ಹೇಳಿದರು.

ಅವರು ಗದುಗಿನ ವಿಠ್ಠಲ ಮಂದಿರದಲ್ಲಿ ಗದಗ ಭಾವಸಾರ ಕ್ಷತ್ರಿಯ ಸಮಾಜದಿಂದ ಸಂತ ಜ್ಞಾನೇಶ್ವರ ಮಹಾರಾಜರ ಸಂಜೀವಿನಿ ಸಮಾಧಿ ನಿಮಿತ್ತ ಏರ್ಪಡಿಸಿದ್ದ ಸೋಹಳಾ ಉತ್ಸವದಲ್ಲಿ ಮಾತನಾಡಿದರು.

ವಾರಕರ ಸಂಪ್ರದಾಯದಲ್ಲಿ ಜಾತಿ, ಮತ, ಬೇಧ ಎಂಬುದು ಇಲ್ಲ. ಎಲ್ಲರನ್ನು ಸಮಭಾವದಿಂದ ಕಾಣುವ ಸೌಹಾರ್ದ, ಸಹಿಷ್ಣುತೆಯ ಸಮುದಾಯವಾಗಿದೆ. ಧರ್ಮಪರಂಪರೆಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಿಕೊಂಡು ಬಂದವರು. ಈ ಪರಂಪರೆ ಸಂಪ್ರದಾಯ ಹೀಗೆಯೇ ಮುಂದುವರೆಯಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಧರ್ಮಮಾರ್ಗದಲ್ಲಿ ಮುನ್ನಡೆಸಲು ಪಾಲಕ-ಪೋಷಕರು ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗದಗ ಭಾವಸಾರ ಕ್ಷತ್ರಿಯ ಸಮಾಜ ಉತ್ಸವ ಸಮಿತಿ, ಮಹಿಳಾ ಸಮಿತಿ, ಯುವಕ ಮಂಡಳಿ ಹಾಗೂ ಸಂತ ಮಂಡಳಿಯವರು ಸೇರಿದಂತೆ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

 

ಕಲಾಶ್ರಿ ಸ್ಪರ್ಧೆಯಲ್ಲಿ ವೈಷ್ಣವಿ ಷಡಕ್ಷರಿ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರದ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಗದಗ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆ-2025ರಲ್ಲಿ ನಗರದ ಪ್ರತಿಷ್ಠಿತ ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಷಡಕ್ಷರಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಭಾಗವಹಿಸಿ ಸಮಾಧಾನಕರ ಬಹುಮಾನವನ್ನು ಗಳಿಸಿದ್ದಾರೆ.

ಸಾಧಕ ವಿದ್ಯಾರ್ಥಿನಿಗೆ ಮಾರ್ಗದರ್ಶನ ಮಾಡಿದ ಅವರ ತಂದೆ ಡಾ. ಷಡಾಕ್ಷರಿ ಟಿ.ವಿ, ತಾಯಿ ಜ್ಯೋತಿಶ್ರೀ ಎಮ್.ಎಲ್, ಪ್ರಾಂಶುಪಾಲರಾದ ವಿಜಯಲಕ್ಷ್ಮೀ ಪುರಾಣಿಕ್, ಉಪ ಪ್ರಾಂಶುಪಾಲರಾದ ಶೋಭಾ ಮಾಲಿಪಾಟೀಲ ಮುಂತಾದವರು ಅಭಿನಂದಿಸಿದ್ದಾರೆ.

ನ.20ರಿಂದ ಜಾತ್ರಾ ಮಹೋತ್ಸವ, ಪುರಾಣ ಮಂಗಲೋತ್ಸವ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಹೋಬಳಿಯ ಸುಕ್ಷೇತ್ರ ಜಂತಲಿ-ಶಿರೂರ ಶ್ರೀ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ, ಕಲಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಮಂಗಲೋತ್ಸವ, ಕುಂಭೋತ್ಸವ, 1008 ದೀಪೋತ್ಸವ, ಸಾಮೂಹಿಕ ವಿವಾಹ ಮಹೋತ್ಸವವು ನ.20, 21ರಂದು ಜರುಗಲಿದೆ.

ನ.20ರಂದು ಮುಂಜಾನೆ 7.30 ಗಂಟೆಗೆ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ, 8 ಗಂಟೆಗೆ ಹಿರೇವಡ್ಡಟ್ಟಿಯ ಶ್ರೀ ಪೂಜ್ಯ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಅವರಿಂದ ಕುಂಭೋತ್ಸವ ಜರುಗುವದು.

ಸಂಜೆ 5 ಗಂಟೆಗೆ ಶರಣ ಬಳಗದವರಿಂದ ಕೆರಿಕೋಡಿ ಶ್ರೀ ಬಸವೇಶ್ವರ ದೇವಸ್ಥಾನದಿಂದ ರಥದ ಕಳಸ ಆಗಮಿಸುವದು. ಸಂಜೆ 6 ಗಂಟೆ ಲಘು ರಥೋತ್ಸವ ಹಾಗೂ 1008 ದೀಪೋತ್ಸವ ಜರುಗಲಿದೆ. ರಾತ್ರಿ 7.30ಕ್ಕೆ ನಡೆಯುವ ಭಕ್ತಹಿತ ಚಿಂತನಗೋಷ್ಠಿ ಕಾರ್ಯಕ್ರಮದ ಸಾನ್ನಿಧ್ಯವನ್ನು ಜಂತಲಿ-ಶಿರೂರ ಬಳಗಾನೂರನ ಪೂಜ್ಯಶ್ರೀ ಶಿವಶಾಂತವೀರ ಶರಣರು, ಹರ್ಲಾಪೂರ ಅಭಿನವ ಡಾ. ಕೊಟ್ಟೂರೇಶ್ವರ ಮಹಾಸ್ವಾಮಿಗಳು ವಹಿಸುವರು. ಹಿರೇವಡ್ಡಟ್ಟಿ ಹಿರೇಮಠ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸಮ್ಮುಖ ವಹಿಸಿಕೊಳ್ಳುವರು.

ನ. 21ರಂದು ಮುಂಜಾನೆ 5 ಗಂಟೆಗೆ ಶ್ರೀ ಚನ್ನವೀರ ಶರಣರ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿಯು ವೇ.ಮೂ. ಶ್ರೀ ಚನ್ನವೀರಯ್ಯ ಶಾಸ್ತ್ರಿ, ಹಾಲಯ್ಯಸ್ವಾಮಿ ಹಿರೇಮಠ, ಮಲ್ಲಯ್ಯಸ್ವಾಮಿ ಹಿರೇಮಠ, ಶ್ರೀ ಶರಣರ ಅಂಧರ ಕಲ್ಯಾಣಾಶ್ರಮ ಹುಬ್ಬಳ್ಳಿ ಹಾಗೂ ಬಳಗದವರಿಂದ ಜರುಗುವುದು.

ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಮಂಗಲ ನುಡಿಯುವರು. ಸಂಗೀತ ಸೇವೆಯನ್ನು ಬಾಗೇಶಕುಮಾರ ಗವಾಯಿ ನೀಡಲಿದ್ದು, ತಬಲಾ ಸಾಥ್ ಶಶಿಕುಮಾರ ಗುಲಬರ್ಗಾ ಅವರು ನೆರವೇರಿಸಲಿದ್ದಾರೆ. ದಾನಿಗಳಾದ ಕೊಪ್ಪಳದ ಅನ್ನಪೂರ್ಣಮ್ಮ ಹನಮಂತಪ್ಪ ಹಾಸಗಲ್ಲ ಅವರಿಂದ ಸಂಜೆ 5 ಗಂಟೆಗೆ ಶರಣರ ತುಲಾಭಾರ ನಡೆಯುವುದು. ರಾತ್ರಿ ಕೇರಿಕೋಡಿ ಬಸವೇಶ್ವರ ನಾಟ್ಯ ಸಂಘದಿಂದ `ಮಗ ಹೋದರೂ ಮಾಂಗಲ್ಯ ಬೇಕು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ನ. 22ರಂದು ಸಂಜೆ 5 ಗಂಟೆಗೆ ಕಡಬಿನ ಕಾಳಗ, ಶ್ರೀ ಶರಣರ ಬೆಳ್ಳಿ ಮೂರ್ತಿ ಉತ್ಸವ ಜರುಗಲಿದೆ. ಹಿರೇವಡ್ಡಟ್ಟಿ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಗವಿಸಿದ್ಧಯ ಹಳ್ಳಿಕೆರಿಮಠ, ಶರಣು ಯಮನೂರ ಅವರಿಂದ ಜನಪದ ಹಾಸ್ಯ ಕಾರ್ಯಕ್ರಮ, ರಾತ್ರಿ 9 ಗಂಟೆಗೆ ಸಿಡಿಮದ್ದು ಪ್ರದರ್ಶನ ಜರುಗಲಿದೆ ಎಂದು ಜಾತ್ರಾ ಸಮಿತಿಯ ಪ್ರಕಟಣೆ ತಿಳಿಸಿದೆ.

ನ. 21ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ ಮತ್ತು ಸಾಮೂಹಿಕ ವಿವಾಹ ಕಲ್ಯಾಣೋತ್ಸವ, ಪುರಾಣ ಮಹಾಮಂಗಲ, ಶರಣ ಚಿಂತನ ಗೋಷ್ಠಿ ಹಾಗೂ 343ನೇ ಶಿವಾನುಭವದ ಕಾರ್ಯಕ್ರಮದ ಪಾವನ ಸಾನ್ನಿಧ್ಯವನ್ನು ಹೊಸಹಳ್ಳಿಯ ಪೂಜ್ಯ ಶ್ರೀಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಮಹಾಸ್ವಾಮಿಗಳು, ಹೂವಿನಶಿಗ್ಲಿ ವಿರಕ್ತಮಠದ ಪೂಜ್ಯ ಚನ್ನವೀರ ಮಹಾಸ್ವಾಮಿಗಳು, ಸುಕ್ಷೇತ್ರ ಜಂತಲಿ-ಶಿರೂರ ಬಳಗಾನೂರ ಪೂಜ್ಯಶ್ರೀ ಶಿವಶಾಂತವೀರ ಶರಣರು, ಕಣಗಿನಹಾಳ-ಜಂತಲಿ-ಶಿರೂರ ಧರ್ಮರಮಠದ ಧರ್ಮರಾಜ ಅಜ್ಜನವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಂತಲಿ-ಶಿರೂರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

 

ಸಹಕಾರಿ ಸಂಘಗಳು ರೈತರ ಹಿತಕ್ಕಾಗಿ ದುಡಿಯುತ್ತಿವೆ: ಮಿಥುನ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪ್ರತಿ ಗ್ರಾಮದಲ್ಲಿರುವ ಕೃಷಿ ಉತ್ಪನ್ನ ಸಹಕಾರಿ ಸಂಘಗಳು ರೈತರ ಹಿತಕ್ಕಾಗಿ ದುಡಿಯುತ್ತಿವೆ. ಇವುಗಳ ಸಹಕಾರದಿಂದ ರೈತರು ತಮ್ಮ ಬದುಕನ್ನು ಹಸನು ಮಾಡಿಕೊಳ್ಳುತ್ತಿದ್ದಾರೆ ಎಂದು ರೋಣ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಹೇಳಿದರು.

ಸಮೀಪದ ಹಾಲಕೆರೆ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳು ಸಮರ್ಪಕವಾಗಿ ನಡೆಯಲು ಸರಕಾರದ ಸಹಾಯಹಸ್ತ ಅವಶ್ಯಕವಿದೆ. ಗ್ರಾಮಗಳ ಸಹಕಾರಿ ಸಂಘಗಳನ್ನು ಇನ್ನೂ ಉತ್ತಮ ದರಜೆಗೆರಿಸಲು ಸರಕಾರವು ಎಲ್ಲ ಸಂಘಗಳಿಗೆ ಅನುದಾನ ರೂಪದಲ್ಲಿ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿಕೊಡಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಅಂದಾನಗೌಡ ಪಾಟೀಲ ಮಾತನಾಡಿ, ಇಂದಿನ ದಿನಗಳಲ್ಲಿ ಸಹಕಾರಿ ಸಂಘಗಳು ಅತ್ಯಂತ ತೊಂದರೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರೈತರಿಗೆ ಐದು ಲಕ್ಷ ರೂ.ಗಳವರೆಗೆ ಬಡ್ಡಿರಹಿತ ಸಾಲ ನೀಡಬೇಕೆಂದರೂ ನಮ್ಮ ಬಳಿಯಲ್ಲಿ ಅಷ್ಟೊಂದು ಹಣಕಾಸಿನ ಅನುಕೂಲವಿಲ್ಲ. ನಮ್ಮ ಸಿಬ್ಬಂದಿಯವರಿಗೂ ನಾವು ತಿಂಗಳ ಸಂಬಳ ನೀಡಲು ಹೆಣಗಾಡುತ್ತಿದ್ದೇವೆ. ಇಂತಹ ಬೆಲೆಯೇರಿಕೆ ದಿನಗಳಲ್ಲಿ ಅವರು ಜೀವನ ನಡೆಸುವುದಾದರೂ ಹೇಗೆ? ಇದನ್ನೆಲ್ಲ ಅಧಿಕಾರಿಗಳು ಸರಕಾರದ ಗಮನಕ್ಕೆ ತಂದು ಸಿಬ್ಬಂದಿ ವೇತನಕ್ಕಾದರೂ ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಬೇಕೆಂದು ಕೇಳಿದರು.

ಸಹಕಾರಿ ಸಂಘಗಳಿಂದ ಸರಕಾರಕ್ಕೆ ಸಹಕಾರವೇನೋ ಬೇಕು. ಆದರೆ ಸಹಕಾರಿ ಸಂಘಗಳು ಅಸ್ತಿತ್ವದಲ್ಲಿರುವಂತೆ ಅವುಗಳಿಗೆ ಹಣಕಾಸಿನ ಸಹಾಯ ನೀಡಬೇಕೆಂಬ ಯೋಚನೆ ಸರಕಾರಕ್ಕೆ ಬರುತ್ತಿಲ್ಲ. ನಮ್ಮ ಸಿಬ್ಬಂದಿಯವರು ಹಗಲಿರುಳೆನ್ನದೆ ಕಾರ್ಯ ನಿರ್ವಹಿಸುತ್ತಾರೆ. ಸರಕಾರ ಅವರ ಜೀವನಕ್ಕೊಂದು ಆಧಾರ ಮಾಡಬೇಕೆಂದು ಸರಕಾರಕ್ಕೆ ತಾವು ಆಗ್ರಹಿಸುವುದಾಗಿ ಹೇಳಿದ ಪಾಟೀಲ, ಬರೀ ಭಾಷಣಗಳಿಂದ, ಸಹಕಾರಿ ಸಪ್ತಾಹದ ಆಚರಣೆಗಳಿಂದ ಈ ಸಮಸ್ಯೆಗೆ ಪರಿಹಾರ ದೊರಕುವುದಿಲ್ಲ ಎಂಬುದು ಮನವರಿಕೆಯಾಗಿದೆ. ಆದ್ದರಿಂದ ಹೋರಾಟವೊಂದೇ ಇದಕ್ಕೆ ದಾರಿ ಎಂದರು.

ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮುಧೋಳ ಮಾತನಾಡಿ, ಸಹಕಾರಿ ಸಂಘಗಳ ನೋವಿನ ಅರಿವು ನಮಗಿದೆ. ನಿಮ್ಮ ತೊಂದರೆಯನ್ನು ಸರಕಾರದ ಗಮನಕ್ಕೆ ತಂದು ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸುರೇಶಗೌಡ ಪಾಟೀಲ, ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ರಮೇಶ ಪಲ್ಲೇದ, ಹಾಲಕೆರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಹೊಕ್ಕಳದ, ಗದಗ ಸಹકારી ಸಂಘಗಳ ನಿಬಂಧಕಿ ಪುಷ್ಪಾ ಕಡಿವಾಳ, ಲೆಕ್ಕ ಪರಿಶೋಧನಾ ಇಲಾಖೆಯ ಪಿ.ಎಲ್. ಹಳೇಮನಿ, ಕೆಸಿಸಿ ಬ್ಯಾಂಕಿನ ಜಿಲ್ಲಾ ನಿಯಂತ್ರಣ ಅಧಿಕಾರಿ ಎಸ್.ಎಂ. ಚಿಕ್ಕಮಠ, ಬ್ಯಾಂಕ್ ನಿರೀಕ್ಷಕರು, ವಿಸ್ತೀರ್ಣ ಅಧಿಕಾರಿ ಜಿ.ಸಿ. ನಾಗಲೋಟಿಮಠ, ಮಲ್ಲಿಕಾರ್ಜುನ ಉಣಚಗೇರಿ, ಮಲ್ಲಪ್ಪ ಪ್ರಭಣ್ಣವರ, ಉಮಾದೇವಿ ಅಂಗಡಿ ಮುಂತಾದವರು ಉಪಸ್ಥಿತರಿದ್ದರು. ವಿ.ಎಸ್. ನವಲಗುಂದ ಸ್ವಾಗತಿಸಿದರು. ಚಂದ್ರಶೇಖರ ಕರಿಯಪ್ಪನವರ ನಿರೂಪಿಸಿದರು.

ಸಹಕಾರಿ ಸಂಘಗಳಿಂದ ಸರಕಾರಕ್ಕೆ ಸಹಕಾರವೇನೋ ಬೇಕು. ಆದರೆ ಸಹಕಾರಿ ಸಂಘಗಳು ಅಸ್ತಿತ್ವದಲ್ಲಿರುವಂತೆ ಅವುಗಳಿಗೆ ಹಣಕಾಸಿನ ಸಹಾಯ ನೀಡಬೇಕೆಂಬ ಯೋಚನೆ ಸರಕಾರಕ್ಕೆ ಬರುತ್ತಿಲ್ಲ. ನಮ್ಮ ಸಿಬ್ಬಂದಿಯವರು ಹಗಲಿರುಳೆನ್ನದೆ ಕಾರ್ಯ ನಿರ್ವಹಿಸುತ್ತಾರೆ. ಸರಕಾರ ಅವರ ಜೀವನಕ್ಕೊಂದು ಆಧಾರ ಮಾಡಬೇಕೆಂದು ಸರಕಾರಕ್ಕೆ ತಾವು ಆಗ್ರಹಿಸುವುದಾಗಿ ಹೇಳಿದ ಪಾಟೀಲ, ಬರೀ ಭಾಷಣಗಳಿಂದ, ಸಹಕಾರಿ ಸಪ್ತಾಹದ ಆಚರಣೆಗಳಿಂದ ಈ ಸಮಸ್ಯೆಗೆ ಪರಿಹಾರ ದೊರಕುವುದಿಲ್ಲ ಎಂಬುದು ಮನವರಿಕೆಯಾಗಿದೆ. ಆದ್ದರಿಂದ ಹೋರಾಟವೊಂದೇ ಇದಕ್ಕೆ ದಾರಿ ಎಂದು ಅಂದಾನಗೌಡ ಪಾಟೀಲ ಅಭಿಪ್ರಾಯ ಪಟ್ಟರು.

 

ಸಹಕಾರ ಸಂಘಗಳಿಂದ ಸಮಗ್ರ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಸಹಕಾರ ಸಂಘಗಳ ಮೂಲಕ ಸ್ವಾವಲಂಬಿ, ಸಮೃದ್ಧ, ಸ್ವಾಭಿಮಾನದ ರಾಷ್ಟ್ರವಾಗಿ ಭಾರತ ದೇಶ ಹೊರಹೊಮ್ಮಲಿದೆ. ಇದಕ್ಕಾಗಿ ದೇಶದಾದ್ಯಂತ ಚಳುವಳಿಗಳು ನಡೆದಿವೆ. ಸಹಕಾರ ಸಂಘಗಳಿಂದ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಬುಧವಾರ ಜೆ.ಸಿ. ನಗರದ ಮುನ್ಸಿಪಲ್ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್, ಕೆ.ಸಿ.ಸಿ ಬ್ಯಾಂಕ್ ಧಾರವಾಡ, ಹುಬ್ಬಳ್ಳಿ ತಾಲೂಕಿನ ಎಲ್ಲ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಆರ್ಥಿಕವಾಗಿ ಸಬಲರಾದವರು ಸಹಕಾರ ಸಂಘಗಳಲ್ಲಿ ಗುರುತಿಸಿಕೊಳ್ಳುತ್ತಿದ್ದರು. ಸಹಕಾರ ಸಂಘಗಳು ಬಲಿಷ್ಠವಾಗಿ ಮುಂದುವರೆಯಲು ಪ್ರತಿಯೊಬ್ಬರೂ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸಂಘ-ಸಂಸ್ಥೆಗಳ ಬಗ್ಗೆ ಪ್ರೀತಿ, ಕಾಳಜಿಯನ್ನು ಹೊಂದಿರಬೇಕು. ಸಹಕಾರ ರಂಗದಲ್ಲಿ ಹೆಚ್ಚು ಹೆಚ್ಚು ಕೆಲಸಗಳಾಗಬೇಕು. ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಹಿರಿದಾಗಿದೆ ಎಂದರು.

ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಉಮೇಶ ಆರ್.ಹೆಬಸೂರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಹಕಾರ ರತ್ನ ಪುರಸ್ಕೃತರಾದ ಚಂಬಣ್ಣ, ಸುರೇಶ ಬಂಡಿ, ಫಕ್ಕೀರಗೌಡ ಕಲ್ಲನಗೌಡ್ರ, ಉತ್ತಮ ಸಹಕಾರ ಸಂಸ್ಥೆಗಳಾದ ಪ್ರಾಥಮಿಕ ಸಹಕಾರ ಪತ್ತಿನ ಸಂಘ ಛಬ್ಬಿ, ಬ್ಯಾಹಟ್ಟಿ ಮತ್ತು ಕೋಳಿವಾಡ, ಹಾಲು ಉತ್ಪಾದಕ ಸಂಘ ಗಿರಿಯಾಲ, ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್, ಮಹಿಳಾ ಸ್ವ-ಸಹಾಯ ಸಂಘ, ಮಹಾಲಕ್ಷ್ಮೀ ಸಂಘ ಹುಬ್ಬಳ್ಳಿ, ಶ್ರೀ ಗಜಾನನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಹುಬ್ಬಳ್ಳಿ ಮತ್ತು ಅದರೊಂದಿಗೆ ನಿವೃತ್ತ ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಗಂಗಪ್ಪ ಗುರಕ್ಕನವರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಸಿಸಿ ಬ್ಯಾಂಕ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಕಾಸ್ಕಾರ್ಡ್ ಬ್ಯಾಂಕಿನ ಉಪಾಧ್ಯಕ್ಷ ಉಳವಪ್ಪ ದಾಸನೂರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಸುರೇಶ ಬಣವಿ, ಹುಬ್ಬಳ್ಳಿ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷ ವಿಕ್ರಮ ಶಿರೂರ, ಶ್ರೀ ಗಜಾನನ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಹಿತೇಶಕುಮಾರ ಮೋದಿ, ಮಹಾರಾಜಾ ಅಗ್ರಸೇನಾ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಮಿತ ಮಹಾಜನ, ಕೆಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್.ವಿ. ಹೂಗಾರ, ಜಿಲ್ಲಾ ಉಸ್ತುವಾರಿ ಅಧಿಕಾರಿ ಎಂ.ಬಿ. ಪೂಜಾರ, ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಎಸ್. ರೇಣುಕಾ, ವಿ.ಜಿ. ಕುಲಕರ್ಣಿ, ಮಲ್ಲಿಕಾರ್ಜುನ ಸಾವುಕಾರ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು, ಸಂಘಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಡಾ. ರಾಮು ಮೂಲಗಿ ಅವರು ನಾಡಗೀತೆ, ಜಾನಪದ ಹಾಡು ಹಾಡಿದರು. ಈಶ್ವರ ಮತ್ತು ತಂಡದವರು ಡೊಳ್ಳಿನ ಪದ ಪ್ರಸ್ತುತಪಡಿಸಿದರು. ಕೆಸಿಸಿ ಬ್ಯಾಂಕ್‌ನ ಉಪಾಧ್ಯಕ್ಷರಾದ ನಿಂಗನಗೌಡ ಮರಿಗೌಡ್ರ ಸ್ವಾಗತಿಸಿದರು.

ಧಾರವಾಡ ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಮಲ್ಲಿಕಾರ್ಜುನ ಹೊರಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರ ಸಂಘಗಳ ಸ್ಥಾಪನೆಗೆ ಮುನ್ನುಡಿ ಬರೆದ ಕೀರ್ತಿ ಧಾರವಾಡ ಜಿಲ್ಲೆಗೆ ಸಲ್ಲುತ್ತದೆ. ಆಡುಮುಟ್ಟದ ಸೊಪ್ಪಿಲ್ಲ, ಸಹಕಾರ ಸಂಘವಿಲ್ಲದ ರಂಗವಿಲ್ಲ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ವಿವರಿಸಿದರು.

 

ನ.21ರಂದು ಬಸವರಾಜ ಶ್ರೀಗಳ ಬೆಳ್ಳಿ ಮಹೋತ್ಸವ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೆಳ್ಳಟ್ಟಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದಾಸೋಹಮಠದ ಬಸವರಾಜ ಸ್ವಾಮೀಜಿಗಳ 25ನೇ ವರ್ಷದ ಪಟ್ಟಾಧಿಕಾರದ ಪ್ರಯುಕ್ತ ಬೆಳ್ಳಿ ಮಹೋತ್ಸವ ಕಾರ್ಯಕ್ರಮವು ನ.21ರಂದು ನಡೆಯಲಿದೆ.

ಕಾರ್ಯಕ್ರಮದ ನಿಮಿತ್ತ ನ. 23ರಿಂದ ಸತತ 60 ದಿನಗಳ ಕಾಲ ನಡೆದ ಬಸವ ಪುರಾಣದ ಮಂಗಲೋತ್ಸವ ನಡೆಯಲಿದೆ. ಪಕ್ಕದ ನಾರಾಯಣಪುರದ ಶ್ರೀ ಬಸವೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಮತ್ತು ಸಕಲ ವಾದ್ಯಗಳೊಂದಿಗೆ ಬಸವ ಪುರಾಣ ಗ್ರಂಥ ಹಾಗೂ ಬಸವರಾಜ ಸ್ವಾಮೀಜಿಗಳ ಭವ್ಯ ಮೆರವಣಿಗೆ ನಡೆಯಲಿದೆ.

ನ. 22ರ ಬೆಳಿಗ್ಗೆ 8 ಗಂಟೆಗೆ ಸಕಲ ವೈಭವದೊಂದಿಗೆ ನಾಡಿನ 25 ಪೂಜ್ಯರಿಗೆ ಮಂಟಪ ಪೂಜಾಕಾರ್ಯ ನೆರವೇರಲಿದೆ. ಸಂಜೆ ಶಿರಹಟ್ಟಿಯ ಜ.ಫ. ಸಿದ್ದರಾಮ ಸ್ವಾಮೀಜಿ, ನಾಗಭೂಷಣ ಸ್ವಾಮೀಜಿ, ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಬನ್ನಿಕೊಪ್ಪದ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಪ್ರಭುಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಪುರಾಣ ಮಂಗಲೋತ್ಸವ ನಡೆಯಲಿದೆ. ಸಮಾರೋಪ ಮತ್ತು ಕರ್ಪೂರದ ಕಾರ್ತಿಕೋತ್ಸವದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

 

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುತ್ತಾರಾ ಡಿಕೆ ಶಿವಕುಮಾರ್!? ಬೇಸರದಲ್ಲೇ ಡಿಸಿಎಂ ಹೇಳಿದ್ದೇನು?

0

ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ಕೊಟ್ಟಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಇಂದಿರಾ ಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸಾರಥಿ ತೊರೆಯುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ನಾನು ಅಧಿಕಾರಿದಲ್ಲಿ ಇರ್ತಿನೋ ಇರಲ್ವೋ ಗೊತ್ತಿಲ್ಲ. ಆದ್ರೆ,ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು.

ನಾನು ಪರ್ಮನೆಂಟ್ ಆಗಿ ಇರೋದಕ್ಕೆ ಆಗಲ್ಲ. ಆಗ್ಲೇ ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಆಯ್ತು. ಡಿಸಿಎಂ ಆದ ತಕ್ಷಣವೇ ಬಿಡಬೇಕು ಅಂತ ಇದ್ದೆ. ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಮುಂದುವರಿಯಿರಿ ಅಂತ ಹೇಳಿದ್ರು. ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಬರಬಾರದು‌ ಎಂದು ಹೇಳುವ ಮೂಲಕ ಅಧಿಕಾರ ತೊರೆಯುವ ಬಗ್ಗೆ ಡಿಕೆಶಿ ಬೇಸರದಲ್ಲೇ ಸುಳಿವು ಕೊಟ್ಟಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್, ಆಡಳಿತ ಸಂಪೂರ್ಣ ಕುಸಿದಿದೆ: BY ವಿಜಯೇಂದ್ರ ಟೀಕೆ

0

ಬೆಂಗಳೂರು:- ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಜೋರಾಗಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಟೀಕೆ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ.

ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನ ಈಡೇರಿಸಿಲ್ಲ, ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

 ನ. 20ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ಪಶ್ಚಿಮ ಪದವೀಧರರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಪದವೀಧರರ ಹೆಸರನ್ನು ನೋಂದಾಯಿಸುವ ಹಾಗೂ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವ ಕುರಿತು ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನ. 20ರಂದು ಸಂಜೆ 4.30ಕ್ಕೆ ಸಭೆ ಜರುಗಲಿದೆ.

ಗದಗ ಜಿಲ್ಲಾ ಮೂಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಗದಗ-ಬೆಟಗೇರಿ ನಗರ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ಜಿ.ಪಂ & ತಾ.ಪಂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್.ಸಿ-ಎಸ್.ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ, ಸಾಮಾಜಿಕ ಜಾಲತಾಣ, ಮಾಜಿ ಸೈನಿಕರ ವಿಭಾಗ, ಮೀನುಗಾರರ ವಿಭಾಗ, ಕಾರ್ಮಿಕರ ವಿಭಾಗ, ಅಸಂಘಟಿತ ಕಾರ್ಮಿಕರ ವಿಭಾಗ, ಐ.ಎನ್.ಟಿ.ಯು.ಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ ಮತ್ತು ಖೇತ್ ಮಜದೂರ ವಿಭಾಗ, ವೈದ್ಯರ ವಿಭಾಗ, ಪದವೀಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರಿಫಾರ್ಮ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆಯ ವಿಭಾಗಗಳ ಅಧ್ಯಕ್ಷರು ಮತ್ತು ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ನೇತೃತ್ವದಲ್ಲಿ ಜರುಗುವ ಸಭೆಯಲ್ಲಿ ಗದಗ-ಬೆಟಗೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ ಅಧ್ಯಕ್ಷತೆ ವಹಿಸುವರು.

ಗದುಗಿನ ಜನತೆ ತೋರಿದ ಪ್ರೀತಿ ದೊಡ್ಡದು: ಮಹಾಂತ ಸಹದೇವಾನಂದ ಗಿರಿಜಿ ಮಹಾರಾಜರು

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ನಡೆದ ಅತಿರುದ್ರ ಮಹಾಯಾಗ ಮತ್ತು ಕಿರಿಯ ಕುಂಭಮೇಳವನ್ನು ಗದುಗಿನ ಜನತೆ ಅತ್ಯಂತ ಭಕ್ತಿಪೂರ್ವಕವಾಗಿ ಯಶಸ್ವಿಗೊಳಿಸಿದ್ದಾರೆ. ಈ ಸೇವಾಕಾರ್ಯದ ಫಲದಿಂದ ಲೋಕಲ್ಯಾಣವಾಗಲಿದೆ ಎಂದು ನಾಗಾಸಾಧು ಮಹಾಂತ ಸಹದೇವಾನಂದ ಗಿರಿಜಿ ಮಹಾರಾಜರು ಹೇಳಿದರು.

ನಗರದಲ್ಲಿ ಅತಿರುದ್ರಯಾಗವನ್ನು ಯಶಸ್ವಿಗೊಳಿಸಿದ ಗುರೂಜಿ ಅವರನ್ನು ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಗರದಲ್ಲಿ ಅತಿರುದ್ರಯಾಗ ಯಶಸ್ವಿಯಾಗಲು ಇಲ್ಲಿನ ಜನತೆ ಹಾಗೂ ಸೇವಾಕಾರ್ಯಕರ್ತರು ತನು-ಮನ-ಧನದಿಂದ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ವ್ಯರ್ಥವಾಗುವದಿಲ್ಲ. ಈ ಮಹಾಯಜ್ಞದಲ್ಲಿ ಕಳೆದ ಎಂಟು ದಿನಗಳವರೆಗೆ ನಡೆದ ಮಹಾಯಾಗದ ಭಸ್ಮವನ್ನು 60 ದಿನಗಳ ನಂತರ ಪ್ರಯಾಗರಾಜದಲ್ಲಿ, ತುಂಗಭದ್ರ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು ಮತ್ತು ಗದುಗಿನ ಜನತೆಗೂ ಸಹ ನೀಡಲಾಗುವುದು ಎಂದು ಹೇಳಿದರು.

ಇಲ್ಲಿ ಜರುಗಿದ ಮಹಾಯಾಗ ಮತ್ತು ಭಕ್ತರು ತೋರಿದ ಪ್ರೀತಿಯು ನನ್ನನ್ನು ಕಟ್ಟಿ ಹಾಕಿರುವದರಿಂದ ಗದಗ ನಗರವನ್ನು ಬಿಟ್ಟು ಹೋಗಲು ಮನಸ್ಸಿಲ್ಲ. ಆದರೂ ದೈವೀ ಇಚ್ಛೆಯಂತೆ ಮುಂದಿನ ಸೇವಾಕಾರ್ಯಗಳನ್ನು ನಡೆಸಬೇಕಾಗಿರುವುದರಿಂದ ನಾನು ಹೋಗುವದು ಅನಿವಾರ್ಯವಾಗಿದೆ. ಕಳೆದ 10 ವರ್ಷಗಳಿಂದ ನಾನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ಮಠವನ್ನು ನಿರ್ಮಿಸಿ ನೆಲೆಸಿದ್ದೇನೆ. ಭಕ್ತರು ನಮ್ಮನ್ನು ಭೇಟಿಯಾಗಲು ಅಲ್ಲಿಗೆ ಬರಬಹುದು ಎಂದು ಹೇಳಿದರು.

error: Content is protected !!