Home Blog Page 19

ಹಿಂದಿಯಲ್ಲಿ 2.19 ಕೋಟಿ ವೀಕ್ಷಣೆ – ‘ಟಾಕ್ಸಿಕ್’ ಟೀಸರ್‌ಗೆ ಪ್ಯಾನ್ ಇಂಡಿಯಾ ಕ್ರೇಜ್!

ಯಶ್ ಅಭಿನಯದ ಟಾಕ್ಸಿಕ್ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ ಭಾರೀ ಸದ್ದು ಮಾಡಿದೆ. ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಈ ಟೀಸರ್ ಒಟ್ಟು 5 ಕೋಟಿ ವೀಕ್ಷಣೆಗಳನ್ನು ದಾಟಿದೆ.

ಅತ್ಯಧಿಕ ಪ್ರತಿಕ್ರಿಯೆ ಹಿಂದಿ ಆವೃತ್ತಿಗೆ ಲಭಿಸಿದ್ದು, 2.19 ಕೋಟಿಗೂ ಹೆಚ್ಚು ಜನ ವೀಕ್ಷಿಸಿದ್ದಾರೆ. ತೆಲುಗು ಟೀಸರ್ 1.10 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಎರಡನೇ ಸ್ಥಾನದಲ್ಲಿದೆ. ಕನ್ನಡ ಟೀಸರ್ 74 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು ಹೊಸ ದಾಖಲೆ ನಿರ್ಮಿಸಿದೆ.

ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಮಾಡಿದ ಈ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಮಿಂಚಲಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದು, ಮಾನ್ಸ್ಟರ್ ಮೈಂಡ್ಸ್ ಸಹಭಾಗಿತ್ವ ಹೊಂದಿದೆ.

‘ಟಾಕ್ಸಿಕ್’ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ.

ಕಾಲೇಜು ಸ್ಟೇಜ್‌ನಿಂದ ‘ಟಾಕ್ಸಿಕ್’ ವರೆಗೆ – ಯಶ್ ಡಾನ್ಸ್ ಸ್ಟೆಪ್ ವೈರಲ್!

ಯಶ್ ಅಭಿನಯದ ಟಾಕ್ಸಿಕ್ ಟೀಸರ್ ರಿಲೀಸ್ ಆಗುತ್ತಿದ್ದಂತೆಯೇ ಮಿಲಿಯನ್ ವೀಕ್ಷಣೆ ದಾಟಿ ದೂಳೆಬ್ಬಿಸಿದೆ. 4 ವರ್ಷಗಳ ಬಳಿಕ ತೆರೆಗೆ ಮರಳಿದ ಯಶ್ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

ಟೀಸರ್ ಹಿಟ್ ಆಗುತ್ತಿದ್ದಂತೆಯೇ ಯಶ್ ಅವರ ಹಳೆಯ ಕಾಲೇಜು ವಿಡಿಯೋ ಮತ್ತೆ ಟ್ರೆಂಡ್ ಆಗುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ವೇದಿಕೆಯಲ್ಲಿ ಕುಣಿದಿದ್ದ ಸ್ಟೆಪ್‌ನ್ನು ಯಶ್ ಈಗ ‘ಟಾಕ್ಸಿಕ್’ ಟೀಸರ್‌ನಲ್ಲೂ ಬಳಸಿರುವುದು ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ಟೀಸರ್ ಕೊನೆಯಲ್ಲಿ ಯಂಗ್ ಲುಕ್‌ನಲ್ಲಿ ಕಾಣಿಸಿಕೊಂಡ ಯಶ್ ತಮ್ಮದೇ ಸ್ಟೈಲ್‌ನಲ್ಲಿ ಡಾನ್ಸ್ ಮಾಡುವ ದೃಶ್ಯ ವಿಶೇಷ ಗಮನ ಸೆಳೆದಿದೆ. ಇದು ಕಥೆಯೊಂದಿಗಿನ ಸಂಕೇತವೇ ಎಂಬ ಕುತೂಹಲ ಹೆಚ್ಚಾಗಿದೆ.

ಅಪ್ಪ–ಮಗನ ಶೇಡ್ ತೋರಿಸುವ ಈ ಟೀಸರ್‌ನಲ್ಲಿ “ಡ್ಯಾಡಿ ಆ್ಯಮ್ ಹೋಮ್” ಡೈಲಾಗ್ ಹೊಸ ಟ್ವಿಸ್ಟ್ ನೀಡಿದೆ. ಒಟ್ಟಿನಲ್ಲಿ ‘ಟಾಕ್ಸಿಕ್’ ಈಗ ಇಂಟರ್ನೆಟ್ ಲೋಕವನ್ನೇ ಆವರಿಸಿಕೊಂಡಿದೆ.

ಗುಟ್ಟಿನ ಮದುವೆಗೆ ಕಟ್ಟು ನಿಟ್ಟಿನ ಭದ್ರತೆ: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಿವಾಹಕ್ಕೆ ವಿದೇಶಿ ಸೆಕ್ಯೂರಿಟಿ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ಖಾಸಗಿ ಜೀವನದ ಬಗ್ಗೆ ಸದಾ ಮೌನವಾಗಿದ್ದರೂ, ಇದೀಗ ಅವರ ಮದುವೆ ಸುದ್ದಿ ಭಾರೀ ಸಂಚಲನ ಸೃಷ್ಟಿಸಿದೆ. ಫೆಬ್ರವರಿ 26ರಂದು ಉದಯಪುರ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಶಾಸ್ತ್ರಗಳು ನೆರವೇರಲಿವೆ ಎಂದು ಹೇಳಲಾಗುತ್ತಿದೆ.

ಮದುವೆ ಆಹ್ವಾನ ಪತ್ರಿಕೆ ಲೀಕ್ ಆದ ಹಿನ್ನೆಲೆಯಲ್ಲಿ, ಜೋಡಿ ವಿದೇಶಿ ಭದ್ರತಾ ಸಂಸ್ಥೆಯನ್ನು ನೇಮಿಸಿಕೊಂಡಿದೆ. ಮದುವೆ ಸ್ಥಳದಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಆಯ್ದ ಅತಿಥಿಗಳಿಗೆ ಮಾತ್ರ ಪ್ರವೇಶ, ಸಿಬ್ಬಂದಿಗಳಿಂದ ಎನ್‌ಡಿಎ ಒಪ್ಪಂದ—ಎಲ್ಲವೂ ಕಟ್ಟು ನಿಟ್ಟಿನ ವ್ಯವಸ್ಥೆಯ ಭಾಗವಾಗಿದೆ.

ಮಾರ್ಚ್ 4ರಂದು ತಾಜ್ ಕೃಷ್ಣ ನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದ್ದು, ತೆಲುಗು ಹಾಗೂ ಬಾಲಿವುಡ್ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರೂ ಭಾಗವಹಿಸುವ ಸಾಧ್ಯತೆ ಇದೆ.

ಗೀತ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಮೂಲಕ ಪ್ರೇಕ್ಷಕರ ಮನ ಗೆದ್ದ ಈ ಜೋಡಿ, ಈಗ ನಿಜ ಜೀವನದಲ್ಲೂ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದೆ.

ಎಟಿಎಂಗೆ 3.40 ಕೋಟಿ ಹಣ ಹಾಕದೇ ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಪ್ರಕರಣ ದಾಖಲು

0

ಹಾಸನ: ಎಟಿಎಂಗಳಿಗೆ ಹಣ ಹಾಕದೇ ವಂಚನೆ ಮಾಡಿದ ಆರೋಪದಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬೂವನಹಳ್ಳಿ ಗ್ರಾಮದ ನಂದೀಶ್ ಬಿ.ಎಲ್ ಹಾಗೂ ದಾಸರಕೊಪ್ಪಲಿನ ಮಧುಕುಮಾರ್ ಎಂ.ಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು, 3,40,28,200 ರೂ. ಹಣವನ್ನು ಹದಿನೈದು ಎಟಿಎಂಗಳಿಗೆ ಹಂಚದೆ ದುರುಪಯೋಗ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಸಂಬಂಧ ಬಿಎನ್‌ಎಸ್ 316(4), 318(4), 3(5) ಅಡಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಕೈಗೊಂಡಿದ್ದಾರೆ.

ಏಪ್ರಿಲ್ 1ರಿಂದ ಟೋಲ್‌ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ!

0

ನವದೆಹಲಿ:- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಟೋಲ್‌ ಪ್ಲಾಜಾಗಳಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಯೋಜನೆ ಮಾಡುತ್ತಿದೆ.

ಹೊಸ ನಿಯಮ ಜಾರಿಯಾದರೆ, ಟೋಲ್ ಪಾವತಿ ಸಂಪೂರ್ಣ ಡಿಜಿಟಲ್ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಜಾರಿಗೆ ಬರುತ್ತದೆ. ಫಾಸ್ಟ್‌ಟ್ಯಾಗ್ ಇಲ್ಲದ ಬಳಕೆದಾರರು ಯುಪಿಐ ಮೂಲಕ ಪಾವತಿಸಿದರೆ 1.25% ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಈ ಹೊಸ ಕ್ರಮವು ದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಟೋಲ್ ವಹಿವಾಟಿನಲ್ಲಿ ಹೆಚ್ಚು ಪಾರದರ್ಶಕತೆ ಮತ್ತು ಸುಗಮತೆ ಒದಗಿಸುವುದಾಗಿ NHAI ತಿಳಿಸಿದೆ. ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಮೂಲಕ ಹೆದ್ದಾರಿ ಬಳಕೆದಾರರಿಗೆ ಸುಗಮ, ವೇಗದ ಪ್ರಯಾಣಕ್ಕೆ ಸಹಾಯಕವಾಗಲಿದೆ.

ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ!

0

ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ರಾತ್ರಿ ವೇಳೆ ಯಾರು ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ ಅಳವಡಿಸಿತ್ತು. ಇದೀಗ ಶಿವರಾತ್ರಿ ಜಾತ್ರೆ ಕೂಡ ಮುಕ್ತಾಯವಾದ ಹಿನ್ನೆಲೆ ಪಾದಯಾತ್ರೆಯ ಮೂಲಕ ಹೋಗುವವರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ.

ಅನೈತಿಕ ಸಂಬಂಧ ಶಂಕೆ; ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದ ಗಂಡ!

0

ರಾಮನಗರ:- ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಜರುಗಿದೆ.

21 ವರ್ಷದ ಸಿಂಚನ ಕೊಲೆಯಾದ ಮಹಿಳೆ. ರೇಣುಕಯ್ಯ ಕೊಲೆಗೈದ ಪಾಪಿ ಪತಿ. ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ ಗಲಾಟೆ ನಡೆಸಿ ಮನೆಮುಂದೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ; ಇಂದಿನ ಹವಾಮಾನ ವರದಿ ಹೀಗಿದೆ!

0

ಬೆಂಗಳೂರು: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಆದರೆ ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ| ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು

0

ಬಾಗಲಕೋಟೆ:– ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಜರುಗಿದೆ.

ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಮೃತರು. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಸಚಿವರದ್ದು ಎನ್ನಲಾದ ಆಡಿಯೋ ವೈರಲ್ – “ಪರಿಶೀಲನೆ ಆಗಲಿ” ಎಂದ ಡಾ.ಎಂ.ಸಿ.ಸುಧಾಕರ್

0

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ಹಿನ್ನೆಲೆ, ಆಡಿಯೋ ನಿಜವಾಗಿಯೂ ತಮ್ಮದೇನಾ ಅಥವಾ ಅಲ್ಲವಾ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಿಡ್ಲಘಟ್ಟದಲ್ಲಿ ಉಚ್ಛಾಟಿತ ಕಾಂಗ್ರೆಸ್ ಮುಖಂಡ ರಾಜೀವಗೌಡ ಹಾಗೂ ಅವರ ಬೆಂಬಲಿಗರು ಆಡಿಯೋವನ್ನು ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಇತ್ತೀಚೆಗೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಜೈಲು ಸೇರಿ ಬಂದಿದ್ದ ರಾಜೀವಗೌಡ ಅವರ ಹೆಸರು ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಇದೇ ಹಿನ್ನೆಲೆ ಸಚಿವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆಡಿಯೋದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡುವ ವೇಳೆ ಮಹಿಳಾ ಅಧಿಕಾರಿಗೆ ನಿಂದನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ.ಎಂ.ಸಿ. ಸುಧಾಕರ್, “ಆಡಿಯೋ ನನ್ನದೋ ಅಲ್ಲವೋ ಎಂಬುದನ್ನು ತಾಂತ್ರಿಕವಾಗಿ ಪರಿಶೀಲಿಸಬೇಕು. ಯಾರಾದರೂ ನನ್ನ ಘನತೆಗೆ ಕುಂದು ತರುವ ಉದ್ದೇಶದಿಂದ ಹಂಚಿಕೆ ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿ ಸಚಿವರ ಬೆಂಬಲಿಗರು ಕೂಡ ಆಡಿಯೋ ವೈರಲ್ ಮಾಡಿ ಸಚಿವರ ಗೌರವಕ್ಕೆ ಧಕ್ಕೆ ತಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪ್ರಕರಣವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

error: Content is protected !!