Home Blog Page 19

ಸಲಿಂಗಿ ಹೇಳಿಕೆಗೆ ಸ್ಪಷ್ಟನೆ: ಕಲಾವಿದರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ – ಪುರುಷೋತ್ತಮ ಬಿಳಿಮಲೆ

0

ಮೈಸೂರು: “ಯಕ್ಷಗಾನ ಕಲಾವಿದರಲ್ಲಿ ಹಲವರು ಸಲಿಂಗಿಗಳು” ಎಂಬ ಮೈಸೂರಿನ ಪ್ರಸಾರಾಂಗ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೌದು  ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿ ಪುರುಷೋತ್ತಮ ಬಿಳಿಮಲೆ ಮಾತನಾಡಿದ್ದಾರೆ.

ಈ ವೇಳೆ, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿದ್ದವು. ಸಲಿಂಗಕಾಮವನ್ನು ಸ್ತ್ರೀವೇಷದ ಕಲಾವಿದ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ನೀಡುತ್ತಿರಲಿಲ್ಲ.

ಮುಂದಿನ ವರ್ಷ ಆ ಕಲಾವಿದರಿಗೆ ಮೇಳ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಆತನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದಿದ್ದಾರೆ.

ನಂತರ ಇದು ತೀವ್ರ ವಿರೋಧ ಹಾಗೂ ಆಕ್ಷೇಪಕ್ಕೆ ಕಾರಣವಾಗಿದೆ. ತಮ್ಮ ಹೇಳಿಕೆಗೆ ವಿರೋಧ ಮತ್ತು ಆಕ್ಷೇಪ ವ್ಯಕ್ತವಾದ ಬಳಿಕ ಡಾ.ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಯಿಂದ ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ವಿಷಾದಿಸುವುದಾಗಿ ತಿಳಿಸಿದ್ದಾರೆ. ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು.

ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶವನ್ನು ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು. ನಾನು ಕಳೆದ 30 ವರ್ಷಗಳಿಂದ ಯಕ್ಷಗಾನವನ್ನು ಮಾಡುತ್ತಾ ಬಂದಿದ್ದೇನೆ. ಈಗಲೂ ತಾಳಮದ್ದಳೆ ಅರ್ಥವನ್ನು ಹೇಳುತ್ತಿದ್ದೇನೆ. ನನಗೆ ಯಕ್ಷಗಾನದ ಬಗ್ಗೆ ಬಹಳಷ್ಟು ಗೌರವವಿದೆ ಎಂದರು.

ವಿಧಾನಸೌಧ ಮುಂದೆ ಯುವಕರ ಪುಂಡಾಟ: ಹಲ್ಲೆ ನಡೆಸಿ ಹಣ, ಮೊಬೈಲ್‌ ಕಸಿದು ಪರಾರಿ

0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಂಡಾಟ ಮಿತಿ ಮೀರಿದೆ. ಗಲಾಟೆ, ದರೋಡೆ, ಹಲ್ಲೆಗಳು ನಡೆಯುತ್ತಲೇ ಇವೆ.

ಇದೀಗ ವಿಧಾನಸೌಧದ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಯುವಕರ ಗುಂಪೊಂದು ಒಬ್ಬ ವಿದ್ಯಾರ್ಥಿ ಮತ್ತು ಅವರ ಸಹೋದರನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದೆ. ಆರೋಪಿಗಳು ವಿದ್ಯಾರ್ಥಿಯಿಂದ ಸುಮಾರು 9,182 ನಗದು ಹಣ ಮತ್ತು ಮೊಬೈಲ್ ಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡಿದ್ದಾರೆ.

ಅಣ್ಣ-ತಮ್ಮ ಇಬ್ಬರೂ ಸಿನಿಮಾ ನೋಡಿ ವಿಧಾನಸೌಧದ ಲೈಟಿಂಗ್ ನೋಡಲು ಬಂದಿದ್ದರು. ಈ ವೇಳೆ ಹೈಕೋರ್ಟ್ ಮುಂಭಾಗ ಇರುವ ಮೆಟ್ರೋ ನಿಲ್ದಾಣದ ಮುಂದೆ ಡಕಾಯಿತಿ ನಡೆದಿದೆ. ಬಿಮಲ್ ಗಿರಿ ಎಂಬಾತನಿಗೆ ಹಲ್ಲೆ ನಡೆಸಿ ಡಕಾಯಿತಿ ಮಾಡಲಾಗಿದೆ. ಮೊದಲಿಗೆ ನಮ್ಮನ್ನು ಹಿಡಿದುಕೊಂಡು ಬೆದರಿಕೆ ಹಾಕಿ ಹಲ್ಲೆ ನಡೆಸಿದರು.

ಬಳಿಕ ನಮ್ಮ ಬಳಿಯಿದ್ದ ಹಣ ಮತ್ತು ಮೊಬೈಲ್ ಅನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತರು ದೂರು ನೀಡಿದ್ದಾರೆ. ಹಲ್ಲೆ ಮಾಡಿ ಮೂವತ್ತು ಸಾವಿರದ ಮೊಬೈಲ್ ಫೋನ್, 9,182 ರೂ. ಹಣ ಕಸಿದು ಪರಾರಿಯಾಗಿದ್ದಾರೆಂದು ದೂರಲಾಗಿದೆ. ಘಟನೆ ಸಂಬಂಧಿಸಿ ವಿಧಾಸೌಧದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಡಕಾಯಿತಿ ಎಂದು ಕೇಸ್ ದಾಖಲು ಮಾಡಿಕೊಂಡು ವಿಧಾನಸೌಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದೇ ಸ್ಥಳದಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ನೇಪಾಳ ಮೂಲದ ಸುಮಾರು 40 ರಿಂದ 50 ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಾಠಿ ಬೀಸಿ ಗುಂಪನ್ನು ಚದುರಿಸಿದ್ದಾರೆ.

 

ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ..??

0

ಸಾಮಾನ್ಯವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುವುದು ಸಹಜವಾಗಿದ್ದು ಇದು ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗುತ್ತಿರುತ್ತದೆ. ಇತ್ತೀಚೆಗೆ ಕೆಲವು ರಾಷ್ಟ್ರಗಳಿಂದ ಚಿನ್ನದ ಖರೀದಿ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದಲೇ ಚಿನ್ನದ ದರ ಏರುತ್ತಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಲು ಇದು ಅತಿ ಉತ್ತಮ ಸಮಯ ಎಂದು ಹಲವು ಪರಿಣಿತರು ವಿಶ್ಲೇಷಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಲವು ತೀವ್ರತರವಾದ ವಿದ್ಯಮಾನಗಳು ಜರುಗುತ್ತಿದ್ದು ಒಂದೆಡೆ ಕೆಲವು ದೇಶಗಳು ತಮ್ಮ ಚಿನ್ನ ಖರೀದಿಯನ್ನು ಹೆಚ್ಚಿಸುತ್ತಿವೆ.

ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 3 ರೂ ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 11,335 ರೂನಿಂದ 11,445 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,486 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 165 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 173 ರೂ ಇದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,364 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,445 ರೂ
  • ಚೆನ್ನೈ: 11,500 ರೂ
  • ಮುಂಬೈ: 11,445 ರೂ
  • ದೆಹಲಿ: 11,460 ರೂ
  • ಕೋಲ್ಕತಾ: 11,445 ರೂ
  • ಕೇರಳ: 11,445 ರೂ
  • ಅಹ್ಮದಾಬಾದ್: 11,450 ರೂ
  • ಜೈಪುರ್: 11,460 ರೂ
  • ಲಕ್ನೋ: 11,460 ರೂ
  • ಭುವನೇಶ್ವರ್: 11,445 ರೂ

ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ: ಬಿ.ವೈ ವಿಜಯೇಂದ್ರ

0

ದಕ್ಷಿಣ ಕನ್ನಡ: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಕಟಿಸಿದರು.

ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ; ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಅಭೂತಪೂರ್ವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗಿದೆ ಎಂದರು. ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲವೆಂದು ಆಕ್ಷೇಪಿಸಿ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

 

10ನೇ ಬಾರಿಗೆ ಬಿಹಾರ ಸಿಎಂ ಆಗಿ ನಾಳೆ ನಿತೀಶ್​ ಕುಮಾರ್ ಪ್ರಮಾಣವಚನ!

0

ಪಾಟ್ನಾ: ಬುದ್ಧನ ನಾಡು ಬಿಹಾರದಲ್ಲಿ ಜಗಜಟ್ಟಿಗಳ ಮತ ಕದನದ ತೀರ್ಪು ಹೊರಬಿದ್ದಿದೆ. ನಿಮೋ ಆಟಕ್ಕೆ ಮಹಾಘಟಬಂಧನ ಛಿದ್ರವಾಗಿದೆ. ಗ್ಯಾರಂಟಿ ಎಂಬ ಉಚಿತಗಳ ಅಲೆಯಲ್ಲಿ ಕುರ್ಚಿ ಖಚಿತದ ಕನಸು ಕಂಡಿದ್ದ ಕಾಂಗ್ರೆಸ್​-ಆರ್​ಜೆಡಿ ಧೂಳೀಪಟವಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಪ್ರಚಂಡ ಜಯ ಸಾಧಿಸಿದ ಬೆನ್ನಲ್ಲೇಹೊಸ ಸರ್ಕಾರ ರಚನೆಗಾಗಿ ಅವರು ಎನ್‌ಡಿಎಯ ಎಲ್ಲಾ ಮೈತ್ರಿಕೂಟದ ಪಾಲುದಾರರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಲಿದ್ದಾರೆ. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಎನ್‌ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು, ಸಚಿವ ಸಂಪುಟ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ, ಲಾಲು ಪ್ರಸಾದ್ ಯಾದವ್ ಕುಟುಂಬದೊಳಗಿನ ಬಿರುಕು ರಾಜಕೀಯ ವಲಯವನ್ನು ಬಿಸಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್​ಡಿಎಯ ಹಲವು ಪ್ರಮುಖ ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಾಖಲೆಯ 10 ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲು, ನವೆಂಬರ್ 19 ರಂದು ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗುವುದು ಎಂದು ಜೆಡಿಯು ಮೂಲಗಳು ತಿಳಿಸಿವೆ.

ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯಶ್ ತಾಯಿ ಪುಷ್ಪಾ: ಕಾರಣವೇನು?

ಯಶ್ ಅಮ್ಮ ಪುಷ್ಪಾ ಅರುಣ್‌ಕುಮಾರ್ ಅವರು ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ದ ಎಫ್‌ ಐ ಆರ್‌ ದಾಖಲಿಸಿದ್ದಾರೆ. ಪುಷ್ಪ ಅರುಣ್‌ ಕುಮಾರ್‌ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಪ್ರಮೋಟ್ ಮಾಡಲು ಹಣ ಪಡೆದು ಡೀ ಪ್ರಮೋಟ್ ಮಾಡಿದ ಆರೋಪವನ್ನು ಮಾಡಿ ದೂರು ದಾಖಲಿಸಿದ್ದಾರೆ.

ಕೊತ್ತಲವಾಡಿ ಸಿನಿಮಾ ಪ್ರಮೋಟ್ ಮಾಡಲು ಹಣ ಪಡೆದು ಕೆಲವರು ಡಿ-ಪ್ರಮೋಟ್ ಮಾಡಿದ್ದಾರೆ ಎಂದು ಪುಷ್ಪ ಅವರು ಬೆಂಗಳೂರಿನ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯಶ್ ತಾಯಿ ಪುಷ್ಪ ಅವರು ಹರೀಶ್ ಅರಸು, ಮನು, ನಿತಿನ್, ಮಹೇಶ್ ಗುರು, ಸ್ವರ್ಣ ಲತಾ ಎಂಬುವವರ ಮೇಲೆ FIR ದಾಖಲು ಮಾಡಿದ್ದಾರೆ. ಕೊತ್ತಲವಾಡಿ ಸಿನಿಮಾ ಪ್ರಮೋಶನ್ ಹಿನ್ನೆಲೆಯಲ್ಲಿ ಈ ಮೇಲಿನ ವ್ಯಕ್ತಿಗಳು ತಮ್ಮಿಂದ ಒಟ್ಟು 64 ಲಕ್ಷ ರೂಪಾಯಿ ಹಣ ಪಡೆದು ಡಿಪ್ರಮೋಟ್ ಮಾಡಿರುವ ಆರೋಪವನ್ನು ಪುಷ್ಪ ಅವರು ಮಾಡಿದ್ದಾರೆ. ಇತ್ತೀಚೆಗೆ ಬೆದರಿಕೆ ಕರೆಗಳು ಬರುತ್ತಿರೋದಾಗಿ ದೂರು ದಾಖಲಿಸಿರುವ ಯಶ್ ತಾಯಿ ಪುಷ್ಪಾ ಅವರು ಇದರ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಈಗಾಗಲೇ 64 ಲಕ್ಷ ಹಣ ಪಡೆದುಕೊಂಡು ಸಿನಿಮಾವನ್ನು ಪ್ರಮೋಟ್ ಮಾಡದೇ ಇರುವುದೂ ಅಲ್ಲದೇ, ಡಿ ಪ್ರಮೋಟ್ ಕೂಡ ಮಾಡಿದ್ದಾರೆ. ಅಷ್ಟೇ ಅಲ್ಲ, ಇದೀಗ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದಾರೆ. ಹೆಚ್ಚಿನ ಹಣ ಕೊಡದೆ ಇದ್ದಲ್ಲಿ ಮನೆ ಬಳಿ ಬಂದು ಗಲಾಟೆ ಮಾಡೋದಾಗಿ ಅವರೆಲ್ಲಾ ಬೆದರಿಸುತ್ತಿದ್ದಾರೆ ಎಂದು ಪುಷ್ಪಾ ಅಟರುಣ್‌ಕುಮಾರ್ ಅವರು ಆರೋಪ ಮಾಡಿ, ಇದೀಗ ಪ್ರಕರಣ ದಾಖಲಿಸಿದ್ದಾರೆ.

ಪುಷ್ಪಾ ಅವರು ದೂರು ಕೊಟ್ಟ ಬಳಿಕ ಹೈ ಗ್ರೌಂಡ್ ಪೊಲೀಸರು ಆ ಆರೋಪಿಗಳಿಗೆ ನೋಟಿಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಮೊದಲು ಕೂಡ ಕೊತ್ತಲವಾಡಿ ಸಿನಿಮಾಗೆ ಸಂಬಂಧಪಟ್ಟಂತೆ ‘ಪೇಮೆಂಟ್ ಇಶ್ಯೂ’ ಸಾಕಷ್ಟು ಸುದ್ದಿ ಮಾಡಿತ್ತು. ಕೊತ್ತಲವಾಡಿ ಸಿನಿಮಾ ತಂಡದಿಂದ ತಮಗೆ ಸಂಭಾವನೆ ಬಂದಿಲ್ಲ ಅಂದು ಕೆಲವರು ಆರೋಪಿಸಿ, ಮಾಧ್ಯಮಗಳ ಮುಂದೆ ಬಂದು ಮಾತನ್ನಾಡಿದ್ದರು.

ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ಪ್ರಕರಣ: ವಿಜಯಲಕ್ಷ್ಮಿ ಹೆಸರು ಹೇಳಿದ ದರ್ಶನ್‌ ಆಪ್ತ ನಟ ಧನ್ವೀರ್

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾತಿಥ್ಯವಾಗಿ ಮದ್ಯಪಾರ್ಟಿ ನಡೆಸುತ್ತಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಿಚಾರಣೆ ವೇಳೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಯ ಹೆಸರು ಉಲ್ಲೇಖವಾಗಿದ್ದು, ಅವರನ್ನು ವಿಚಾರಣೆಗೆ ಕರೆಸಬಹುದಾದ ಸಾಧ್ಯತೆ ಇದೆ.

ಇತ್ತೀಚೆಗೆ ಅಧಿಕಾರಿಗಳು ನಟ ಧನ್ವೀರ್ ಅವರನ್ನು 2ನೇ ನೋಟಿಸ್ ಮೂಲಕ ವಿಚಾರಣೆ ನಡೆಸಿದ್ದರು. ಈ ವೇಳೆ ಧನ್ವೀರ್ ವಿಜಯಲಕ್ಷ್ಮಿಯ ಹೆಸರನ್ನು ಪ್ರಸ್ತಾಪಿಸಿ, “ನಾನು ಲಾಯರ್ ಮೂಲಕ ಈ ವಿಡಿಯೋ ಪಡೆದಿದ್ದೆ, ಅದನ್ನು ವಿಜಯಲಕ್ಷ್ಮಿಗೆ ಕಳಿಸಿದ್ದೆ. ಆದರೆ ವಿಡಿಯೋ ವೈರಲ್ ಮಾಡಿದ್ದು ನಾನು ಅಲ್ಲ, ಹೇಗಾಯ್ತೋ ಗೊತ್ತಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಹಿರಿಯ ಅಧಿಕಾರಿಗಳು ಧನ್ವೀರ್ ಸತ್ಯವಿಚಾರಣೆ ನೀಡದಿದ್ದರೆ, ವಿಜಯಲಕ್ಷ್ಮಿಯನ್ನು ವಿಚಾರಣೆಗಿಳಿಸುವಂತೆ ಸೂಚಿಸಿದ್ದಾರೆ. ಇನ್ನೊಂದು ಕಡೆ, ವಿಡಿಯೋ ಅಪ್ಲೋಡ್ ಮಾಡಲಾದ ಖಾತೆಗಳ ಪತ್ತೆಗೆ ಮೆಟಾ ತನಿಖಾಧಿಕಾರಿಗಳು ಪತ್ರವನ್ನೂ ಬರೆದಿದ್ದಾರೆ. 2023ರಲ್ಲಿ ಕೈದಿಗಳಿಂದ ಜೈಲಿನ ಮೇಲಿನ ಮೊಬೈಲ್ ವಶಪಡಿಸಿಕೊಂಡಿದ್ದು, ವಿಡಿಯೋ ಹೇಗೆ ವೈರಲ್ ಆಗಿದೆ ಎಂಬುದು ಇನ್ನೂ ಅಜ್ಞಾನದಲ್ಲಿದೆ. ಕೈದಿಗಳಿಂದ ವಿಚಾರಣೆ ವೇಳೆ ಈ ಮಾಹಿತಿಯನ್ನು ಪೋಲಿಸರಿಗೆ ನೀಡಲಾಗಿದೆ.

 

ಹಾವೇರಿ ಜಿಲ್ಲಾಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನವಾಜಾತ ಶಿಶು ಸಾವು; ವೈದ್ಯರು, ನರ್ಸ್ ಮೇಲೆ ಗಂಭೀರ ಆರೋಪ!

0

ಹಾವೇರಿ:- ಹಾವೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವ ಆರೋಪ ಕೇಳಿಬಂದಿದೆ.

ಹೆರಿಗೆಗೆ ಬಂದ ಮಹಿಳೆಯನ್ನು 1 ಒಂದು ತಾಸು ನೆಲದ ಮೇಲೆ ಕೂರಿಸಿ ನಿರ್ಲಕ್ಷ್ಯ ತೋರಿದ್ದಾರೆ. ಸೂಕ್ತ ಚಿಕಿತ್ಸೆ ನೀಡದೀರೋದ್ರಿಂದ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರೂಪಾ (30)
ಮಂಗಳವಾರ ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಗೆ ಕರೆ ತರಲಾಗಿತ್ತು. ಹೆರಿಗೆ ನೋವಿನಿಂದ ಒದ್ದಾಡ್ತಿದ್ದ ಗರ್ಭಿಣಿ ರೂಪಾಗೆ ಬೆಡ್ ಕೂಡ ನೀಡದೆ ನೆಲದ ಮೇಲೆ ಕೂರಿಸಿದ್ರು ಎಂದು ಆರೋಪಿಸಿದ್ದಾರೆ. ಸೂಕ್ತ ಚಿಕಿತ್ಸೆ ಕೊಡದೇ ವೈದ್ಯರು, ನರ್ಸ್‍ಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಶೌಚಾಲಯಕ್ಕೆಂದು ಮಹಿಳೆ ಹೋಗುವಾಗ ಮಾರ್ಗದಲ್ಲೇ ಹೆರಿಗೆಯಾಗಿ, ಮಗುವಿಗೆ ಪೆಟ್ಟಾಗಿ ಮೃತಪಟ್ಟಿದೆ. ನಮಗಾದ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಕುಟುಂಬಸ್ಥರ ಆರೋಪವನ್ನು ಜಿಲ್ಲಾಸ್ಪತ್ರೆಯ ವೈದ್ಯ ಡಾ. ಪಿ.ಆರ್ ಹಾವನೂರ ತಳ್ಳಿಹಾಕಿದ್ದಾರೆ. ನಮ್ಮ ವೈದ್ಯರು ತಪಾಸಣೆ ನಡೆಸಿದಾಗ ನಿನ್ನೆಯಿಂದ ಮಗುವಿನ ಮೂಮೆಂಟ್ ಇಲ್ಲ ಎಂದು ಮಹಿಳೆ ಹೇಳಿದ್ದಾರೆ. ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು ಎಂದಿದ್ದಾರೆ.

ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ!

0

ಹಾಸನ:– ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ, ಹೆಂಟಗೆರೆ ವಾರ್ಡ್. ನಂ.17 ರಲ್ಲಿ ಜರುಗಿದೆ.

ಗಾಯಗೊಂಡವರನ್ನು ಅಲೀಂ ಬೇಗಂ (23), ರೋಹಿತ್ ಖಾತನ್ (19), ಇಸ್ತಾರ್ ಉಲ್ಲಾ (23), ಅಹಿಸ್ಲಮ್ (25) ಎಂದು ಗುರುತಿಸಲಾಗಿದೆ. ಹೆಂಟಿಗೆರೆ ಗ್ರಾಮದ ದೊಡ್ಡೇಗೌಡ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದು ಬೆಳಿಗ್ಗೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡಿದೆ.

ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಕಾರ್ಮಿಕರ ಕೈ ಕಾಲುಗಳು ಸಂಪೂರ್ಣ ಸುಟ್ಟು ಹೋಗಿವೆ. ಅಲ್ಲದೇ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿವೆ. ಗಾಯಾಳುಗಳಿಗೆ ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಈ ಭಾಗದಲ್ಲಿ ಇಂದು ಹೆವಿ ಟ್ರಾಫಿಕ್, ಬದಲಿ ಮಾರ್ಗ ಇಲ್ಲಿದೆ ನೋಡಿ!

0

ಬೆಂಗಳೂರು:- ಬೆಂಗಳೂರಿನ ಈ ಮಾರ್ಗದಲ್ಲಿ ಇಂದು ಹೆವಿ ಟ್ರಾಫಿಕ್ ಇರಲಿದ್ದು, ವಾಹನ ಸವಾರರು ಸಹಕರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಪ್ಯಾಲೆಸ್ ಗ್ರೌಂಡ್ಸ್‌ನ ಕೃಷ್ಣ ವಿಹಾರ ಗೇಟ್ ಸಂಖ್ಯೆ 01ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗೋಲ್ಡನ್ ಜೂಬಿಲಿ ಕಾರ್ಯಕ್ರಮ ಇಂದು ನಡೆಯಲಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಗಣ್ಯಾತಿ ಗಣ್ಯರು ಸೇರಿ ಸಾವಿರಾರು ಜನ ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಸಂಚಾರ ದಟ್ಟಣೆ ಉಂಟಾಗಲಿರುವ ಕಾರಣ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ.

ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಕೇಂದ್ರ ಮತ್ತು ರಾಜ್ಯ ಸಚಿವರು, ಗಣ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೇರಿ ಸುಮಾರು 80,000 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಸುಮಾರು 2,305 ವಾಹನಗಳು ಸ್ಥಳಕ್ಕೆ ಆಗಮಿಸಲಿದ್ದು, ಸುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್​ ಆಗಲಿದೆ. ಕೃಷ್ಣ ವಿಹಾರ ಗೇಟ್ (ಪ್ಯಾಲೆಸ್ ಗ್ರೌಂಡ್ಸ್), ಬಳ್ಳಾರಿ ರಸ್ತೆ, ಸಿ.ವಿ. ರಾಮನ್​ ರಸ್ತೆ ಮತ್ತು ಜಯಮಹಲ್ ರಸ್ತೆಗಳಲ್ಲಿ ಭಾರಿ ವಾಹನದಟ್ಟಣೆ ನಿರೀಕ್ಷೆ ಇದೆ ಎನ್ನಲಾಗಿದೆ.

ಬದಲಿ ಮಾರ್ಗಗಳು ಇಲ್ಲಿದೆ:

ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಹೋಗುವವರು:-

ಮಾರ್ಗ 1: ಹೆಬ್ಬಾಳ – ಎಡಕ್ಕೆ ತಿರುಗಿಕೆ – ನಾಗವಾರ ಜಂಕ್ಷನ್‌ನಲ್ಲಿ ಬಲದ ಕಡೆ – ಬಂಬೂ ಬಜಾರ್ – ಕ್ವೀನ್ಸ್ ರಸ್ತೆ – ನಗರ

ಮಾರ್ಗ 2: ಹೆಬ್ಬಾಳ ರಿಂಗ್ ರಸ್ತೆ – ಕುವೆಂಪು ವೃತ್ತ – ಗೊರ್ಗುಂಟೆ ಪಾಳ್ಯ ಜಂಕ್ಷನ್ – ಎಡಕ್ಕೆ – ಡಾ.ರಾಜ್ ಕುಮಾರ್ ರಸ್ತೆ – ನಗರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವವರು:

ಬಳ್ಳಾರಿ ರಸ್ತೆಯ ಬದಲು ಓಲ್ಡ್ ಹೈ ಗ್ರೌಂಡ್ಸ್ ಜಂಕ್ಷನ್ – ಕಲ್ಪನಾ ಜಂಕ್ಷನ್ – ಉದಯ ಟಿವಿ ಓಲ್ಡ್ ಜಂಕ್ಷನ್ – ಕ್ಯಾಂಟೋನ್ಮೆಂಟ್ ರೈಲ್ವೆ ಸ್ಟೇಷನ್ – ಟ್ಯಾನರಿ ರಸ್ತೆ – ನಾಗವಾರ – ವಿಮಾನ ನಿಲ್ದಾಣ

ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ:

ಮತ್ತಿಕೆರೆ ರಸ್ತೆ – ಬಿಇಎಲ್ ಸರ್ಕಲ್‌ನಲ್ಲಿ ಬಲಕ್ಕೆ – ರಿಂಗ್ ರೋಡ್ ಮೂಲಕ ವಿಮಾನ ನಿಲ್ದಾಣ

ಯಶವಂತಪುರದಿಂದ ನಗರ ಕಡೆ:

ಡಾ.ರಾಜ್ ಕುಮಾರ್ ರಸ್ತೆ ಮೂಲಕ ಮಧ್ಯ ಬೆಂಗಳೂರು ಪ್ರವೇಶಿಸಬಹುದು

ಬಳ್ಳಾರಿ ರಸ್ತೆಯ ಕಡೆಗೆ ಭಾರೀ ವಾಹನಗಳಿಗೆ ಅನುಮತಿ ಇಲ್ಲದ ಕಾರಣ ಔಟರ್ ರಿಂಗ್ ರೋಡ್ ಬಳಸಬೇಕು. ಓಲ್ಡ್ ಹೈ ಗ್ರೌಂಡ್ಸ್ ಪೊಲೀಸ್ ಸ್ಟೇಷನ್ ಜಂಕ್ಷನ್ ಕಡೆಯಿಂದ ಬರುವ ವಾಹನಗಳನ್ನು ಕಲ್ಪನಾ ಜಂಕ್ಷನ್- ಉದಯ ಟಿವಿ ಓಲ್ಡ್ ಜಂಕ್ಷನ್ – ಕ್ಯಾಂಟೋನ್ಮೆಂಟ್ ರೈಲ್ವೆ ಸ್ಟೇಷನ್ – ಟ್ಯಾನರಿ ರಸ್ತೆ – ನಾಗವಾರ ಕಡೆಗೆ ತೆರಳಬೇಕು. ಸಿ.ವಿ. ರಮಾನ ರಸ್ತೆಯ ಕಡೆಗೆ ಹೋಗುವ ರಸ್ತೆಯಲ್ಲೂ ಭಾರೀ ವಾಹನಗಳಿಗೆ ನಿಷೇಧ ಇರಲಿದೆ.

error: Content is protected !!