Home Blog Page 2

ಶೀಘ್ರವೇ ಇರಾನ್ ವಿರುದ್ಧದ ಯುದ್ಧ ಅಂತ್ಯವಾಗಲಿದೆ: ಡೊನಾಲ್ಡ್ ಟ್ರಂಪ್

0

ವಾಷಿಂಗ್ಟನ್: ಮುಂದಿನ 2-3 ವಾರಗಳಲ್ಲಿ ಇರಾನ್ ವಿರುದ್ಧದ ಯುದ್ಧ ಅಂತ್ಯವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇಂಧನ ಬೆಲೆ ಏರಿಕೆ ಪರಿಣಾಮ ಕುರಿತು ಮಾತನಾಡಿದ ಟ್ರಂಪ್, ಇರಾನ್ ವಿರುದ್ಧದ ಯುದ್ಧ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯಗೊಳ್ಳಲಿದೆ. ನಾವು ನಮ್ಮ ಕೆಲಸವನ್ನು ಮುಗಿಸುತ್ತಿದ್ದೇವೆ. ಬಹುಶಃ ಎರಡು ಅಥವಾ ಮೂರು ವಾರಗಳಲ್ಲಿ ನಾವು ಮುಗಿಸಲಿದ್ದೇವೆ. ನಾವು ಬೇಗನೇ ಇರಾನ್ ಬಿಟ್ಟು ಹೋಗಬೇಕಿದೆ. ಇರಾನ್‌ನಲ್ಲಿ ಕಾರ್ಯಾಚರಣೆಯನ್ನು ಶೀಘ್ರದಲ್ಲೇ ಕೊನೆಗೊಳಿಸಲಾಗುವುದು. ಇರಾನ್ ಸೋಲಿನ ಸನಿಹದಲ್ಲಿದೆ ಎಂದು ಹೇಳಿದ್ದಾರೆ.

ಅಮೆರಿಕದ ಕಾರ್ಯಾಚರಣೆಯ ಅಂತ್ಯವು ಇರಾನ್‌ನ ಜೊತೆ ಯಾವುದೇ ಒಪ್ಪಂದ ಅವಲಂಬಿಸಿಲ್ಲ. ಅವರು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕಿಲ್ಲ. ಇರಾನ್‌ಗೆ ಅಣ್ವಸ್ತ್ರ ತಯಾರಿಸಲು ಸಾಧ್ಯವಾಗುವುದಿಲ್ಲ ಎಂದು ಭಾವಿಸಿದಾಗ ನಾವು ಹೊರಡುತ್ತೇವೆ. ಒಂದು ವೇಳೆ ರಾಜತಾಂತ್ರಿಕವಾಗಿ ಪರಿಹಾರ ದೊರಕಿದರೆ ಯುದ್ಧ ಇನ್ನೂ ಬೇಗನೇ ಕೊನೆಗೊಳ್ಳಬಹುದು. ಅವರು ಸಹ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ನಮಗಿಂತಲೂ ಹೆಚ್ಚಾಗಿ ಅವರೇ ಬಯಸುತ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರಿಗರಿಗೆ ಬಿಗ್ ಶಾಕ್: ಇಂದಿನಿಂದ ನೀರಿನ ಶುಲ್ಕ ಶೇ.3% ಹೆಚ್ಚಳ

ಬೆಂಗಳೂರು: ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಶುಲ್ಕ ಶೇ.3% ರಷ್ಟು ಹೆಚ್ಚಳವಾಗಲಿದ್ದು, ಸಿಟಿ ಮಂದಿಗೆ ಮತ್ತಷ್ಟು ಹೊರೆಯಾಗಲಿದೆ.

ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಈ ನಿರ್ಧಾರ ಕೈಗೊಂಡಿದೆ. ಪ್ರತಿ ವರ್ಷದಂತೆ ಆರ್ಥಿಕ ಸಮತೋಲನವನ್ನ ಸರಿದೂಗಿಸಲು ಶೇ.3 ರಷ್ಟು ನೀರಿನ ಶುಲ್ಕ ಹೆಚ್ಚಿಸಿದೆ. ಈ ತಿಂಗಳ ಬಿಲ್‌ನಿಂದಲೇ ದರ ಅನ್ವಯವಾಗಲಿದೆ. ಪರಿಣಾಮ ಏಪ್ರಿಲ್‌ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ ಸರಾಸರಿ 20 ರಿಂದ 30 ರೂ. ಹೆಚ್ಚುವರಿ ನೀರಿನ ಬಿಲ್‌ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪರಿಷ್ಕೃತ ದರ ಹಿನ್ನೆಲೆ ಗೃಹ ಬಳಕೆದಾರರಿಗೆ ಸ್ಲ್ಯಾಬ್ ಗಳ ಆಧಾರದಡಿ ಸುಮಾರು ಪ್ರತಿ ಲೀಟರ್ ಗೆ 0.15 ಪೈಸೆಯಿಂದ 1 ಪೈಸೆವರೆಗೆ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ 1.90 ಪೈಸೆ ಏರಿಕೆ ಆಗಲಿದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ನೀರು ಬಳಕೆ ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ ಏಪ್ರಿಲ್‌ ತಿಂಗಳಿನಿಂದ ಅನ್ವಯವಾಗುವಂತೆ ಮತ್ತೆ ಶೇ.3ರಷ್ಟು ನೀರಿನ ಬಿಲ್‌ ಹೆಚ್ಚಳ ಮಾಡಲಾಗುತ್ತಿದೆ.

ಗೃಹ ಬಳಕೆದಾರರ ದರಸಂಶೋಧನೆ:

  • 8,000 ಲೀಟರ್ ಒಳಗಿನ ಬಳಕೆ: ಲೀಟರ್ ಗೆ 0.15 ಪೈಸೆ
  • 8,000–25,000 ಲೀಟರ್ ಬಳಕೆ: ಲೀಟರ್ ಗೆ 0.30 ಪೈಸೆ
  • 25,000–50,000 ಲೀಟರ್ ಬಳಕೆ: ಲೀಟರ್ ಗೆ 0.80 ಪೈಸೆ
  • 50,000–1 ಲಕ್ಷ ಲೀಟರ್ ಬಳಕೆ: ಲೀಟರ್ ಗೆ 1 ಪೈಸೆ

ವಾಣಿಜ್ಯ ಬಳಕೆದಾರರ ದರಸಂಶೋಧನೆ:

  • 10,000 ಲೀಟರ್ ಒಳಗಿನ ಬಳಕೆ: ಲೀಟರ್ ಗೆ 1 ಪೈಸೆ
  • 10,000–25,000 ಲೀಟರ್ ಬಳಕೆ: ಲೀಟರ್ ಗೆ 1.30 ಪೈಸೆ
  • 25,000–50,000 ಲೀಟರ್ ಬಳಕೆ: ಲೀಟರ್ ಗೆ 1.50 ಪೈಸೆ
  • 50,000–75,000 ಲೀಟರ್ ಬಳಕೆ: ಲೀಟರ್ ಗೆ 1.90 ಪೈಸೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ! ಇಂದಿನ ಹವಾಮಾನ ವರದಿ ಹೀಗಿದೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯ ತೀವ್ರತೆ ಹೆಚ್ಚುತ್ತಿದೆ.

ಅದರಂತೆ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

ಇದರ ಜೊತೆಗೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ಕಲಬುರ್ಗಿ, ಬೀದರ್, ಗದಗ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ-ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

 

 

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ! ನಾಳೆಯ ಹವಾಮಾನ ಹೀಗಿದೆ

ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ನಾಳೆ ರಾಜ್ಯದ ಹಲವೆಡೆ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲು–ಮಳೆಯ ಮಿಶ್ರ ವಾತಾವರಣ ಮುಂದುವರಿಯಲಿದ್ದು, ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 30-40 ಕಿಮೀ ಇರಬಹುದು ಎಂದು ಅಂದಾಜಿಸಲಾಗಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿದರೂ, ಬಳ್ಳಾರಿ, ದಾವಣಗೆರೆ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21-22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮುಂದಿನ ಕೆಲ ದಿನಗಳವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಮಳೆಯ ಸಾಧ್ಯತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ನಟ-ರಾಜಕಾರಣಿ ವಿಜಯ್ ವಿರುದ್ಧ ದಾಖಲಾಯ್ತು ಕೇಸ್! ಮಾಡಿದ ತಪ್ಪೇನು?

0

ಚೆನ್ನೈ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ಹಾಗೂ ಟಿವಿಕೆ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಟಿವಿಕೆ ಮುಖ್ಯಸ್ಥ ವಿಜಯ್ ಸೋಮವಾರ ಚೆನ್ನೈನ ಪೆರಂಬೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ಹಾಗೂ ಬೆಂಬಲಿಗರು ಸೇರಿಕೊಂಡು ಅವರ ವಾಹನವನ್ನು ಹಿಂಬಾಲಿಸಿದ ಪರಿಣಾಮ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಅಸೌಕರ್ಯ ಉಂಟಾಯಿತು.

ಚುನಾವಣಾ ಪ್ರಚಾರಕ್ಕಾಗಿ ಅಧಿಕಾರಿಗಳು ನಿಗದಿಪಡಿಸಿದ್ದ ಸಮಯಕ್ಕಿಂತ ಮುಂಚೆಯೇ ಕಾರ್ಯಕರ್ತರು ಗುಂಪುಗೂಡಿದ್ದು, ಇದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ಮಾದರಿ ನೀತಿ ಸಂಹಿತೆ 2023 ಅಡಿಯಲ್ಲಿ ವಿವಿಧ ಕಲಂಗಳನ್ನು ಬಳಸಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಕ್ಸ್‌ಪ್ರೆಸ್‌ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಪಕ್ಕದ ರಸ್ತೆಗೆ ಉರುಳಿಬಿದ್ದ ವಾಹನ!

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ, ಕಾರು ಪಕ್ಕದ ರಸ್ತೆಗೆ ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ನಡೆದಿದೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ವೇಳೆ, ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಉರುಳಿಬಿದ್ದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌: ಸೈಬರ್ ಕ್ರೈಂ ಪೊಲೀಸರಿಂದ ಸುಮೋಟೋ ಕೇಸ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

‘ಹಿಂದೂ ಜಾಗೃತನಾಗು’ ಎಂಬ ಎಕ್ಸ್ ಖಾತೆಯಿಂದ ಗೃಹಸಚಿವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ. ಪೋಸ್ಟ್ ಗೃಹಸಚಿವರ ಕುರಿತು ಮಾತ್ರವಲ್ಲದೆ, ಎರಡು ಧರ್ಮದವರ ನಡುವೆ ನಾಗರಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಮತ್ತು ದ್ವೇಷಪೂರಿತವಾಗಿ ಆಘಾತವನ್ನುಂಟುಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರ ಅನ್ವಯ IT Act ಹಾಗೂ BNS ಸೆಕ್ಷನ್ 299 ಅಡಿಯಲ್ಲಿ ಈ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ತಂದೆಯ ಈ ತಪ್ಪುಗಳು ಮಗಳ ಭವಿಷ್ಯ ಹಾಳು ಮಾಡಬಹುದು: ಚಾಣಕ್ಯರ ಸಲಹೆ ಪಾಲಿಸಿ!

0

ತಂದೆಯ ತಪ್ಪುಗಳು ಮಗಳ ಭವಿಷ್ಯವನ್ನು ನಾಶ ಮಾಡಬಾರದು. ಮಗಳು ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಆಗಿದ್ದು, ಅವಳನ್ನು ಸರಿಯಾಗಿ ಬೆಳೆಸುವ ಹೊಣೆ ತಂದೆಯ ಮೇಲೆ ಬಹಳ ದೊಡ್ಡದಾಗಿದೆ.

ಚಾಣಕ್ಯರ ಪ್ರಕಾರ, ತಂದೆಯಾದವನಿಗೆ ಮಗಳ ಕನಸುಗಳನ್ನು ನಿರ್ಬಂಧಿಸುವ ತಪ್ಪು ಮಾಡಬಾರದು; ಹುಡುಗಿ ಎಂಬ ಕಾರಣದಿಂದ ಅವಳ ಶಿಕ್ಷಣ ಅಥವಾ ವೃತ್ತಿಜೀವನದ ಅವಕಾಶಗಳನ್ನು ಕಡಿಮೆ ಮಾಡಬಾರದು. ಮಗಳು ತನ್ನ ಪ್ರತಿಭೆಯನ್ನು ಬೆಳಸಲು ಮತ್ತು ಸಾಧನೆ ಮಾಡಲು ಪ್ರತಿಯೊಂದು ಅವಕಾಶವನ್ನು ಪಡೆಯಬೇಕು.

ಅತಿಯಾದ ನಿಯಂತ್ರಣವು ಸಹ ತಪ್ಪು; ಮಕ್ಕಳು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವಾತಂತ್ರ್ಯ ಹೊಂದದೇ ಇದ್ದರೆ, ಭವಿಷ್ಯದಲ್ಲಿ ಅವರ ಆತ್ಮವಿಶ್ವಾಸ ಕುಂಠಿತವಾಗುತ್ತದೆ ಮತ್ತು ಸವಾಲುಗಳನ್ನು ಎದುರಿಸಲು ಸಾಧ್ಯವಾಗುವುದಿಲ್ಲ. ಇದೇ ರೀತಿಯಾಗಿ, ತಂದೆಯ ಕೆಟ್ಟ ನಡವಳಿಕೆಗಳು, ಅಸಮರ್ಪಕ ನಡೆಗಳು ಮಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಹೀಗಾಗಿ, ತಂದೆ ಪ್ರಾಮಾಣಿಕ, ಜವಾಬ್ದಾರಿಯುತ ಮತ್ತು ತಿಳುವಳಿಕೆಯುಳ್ಳ ವ್ಯಕ್ತಿಯಾಗಿರಬೇಕು.

ಮದುವೆ ವಿಷಯದಲ್ಲಿ ಕೂಡ ತಪ್ಪು ಮಾಡಬಾರದು: ಹೆಚ್ಚಿನ ತಂದೆಯಂದಿರು ಮಗಳ ಮದುವೆಯನ್ನು ತಾನು ನಿರ್ಧರಿಸುತ್ತಾರೆ, ಅವಳ ಅಭಿಪ್ರಾಯವನ್ನು ಕೇಳದೆ, ಇದರಿಂದ ಭವಿಷ್ಯದಲ್ಲಿ ಆಕೆ ಅನಾಹುತಗಳನ್ನು ಎದುರಿಸಬೇಕಾಗುತ್ತದೆ. ಚಾಣಕ್ಯರ ಪ್ರಕಾರ, ಮಗಳಿಗೆ ತನ್ನ ಶಿಕ್ಷಣ ಪೂರ್ಣಗೊಳ್ಳಲು, ಸ್ವಂತ ಜೀವನದಲ್ಲಿ ಸ್ಥಿರತೆ ಪಡೆಯಲು ಅವಕಾಶ ನೀಡಬೇಕು, ಬದಲಿಗೆ ಶೀಘ್ರ ಮದುವೆ ಮಾಡಿಸುವುದು ಹಿತಕರವಲ್ಲ.

ಮಗಳು ಭಯದಿಂದ ಬದುಕಬಾರದು: ಮನೆಯ ವಾತಾವರಣದಲ್ಲಿ ಭಯ  ಇದ್ದರೆ, ಅವಳು ಮುಕ್ತವಾಗಿ ಬೆಳೆಯಲು ಸಾಧ್ಯವಿಲ್ಲ, ತನ್ನ ಸಮಸ್ಯೆಗಳನ್ನು ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲ. ತಂದೆ ಮಗಳ ಸ್ನೇಹಿತನಂತೆ ಇರಬೇಕು, ಅವಳೊಂದಿಗೆ ಮಾತನಾಡಬೇಕು. ಜೊತೆಗೆ, ಮಗಳನ್ನು ಸ್ವಾವಲಂಬಿ ಜೀವನಕ್ಕೆ ಸಿದ್ಧಪಡಿಸುವುದು ಕೂಡ ಅತ್ಯಂತ ಮುಖ್ಯ; ನಿರ್ಧಾರಗಳನ್ನು ಸ್ವತಃ ತೆಗೆದುಕೊಳ್ಳಲು, ಸವಾಲುಗಳನ್ನು ಎದುರಿಸಲು ಕಲಿಸಿದರೆ ಮಾತ್ರ ಆಕೆ ಸದೃಢಳಾಗಿ ಬೆಳೆಯುತ್ತಾಳೆ.

ಚಾಣಕ್ಯರ ಅಭಿಪ್ರಾಯದಲ್ಲಿ, ಈ ತಪ್ಪುಗಳನ್ನು ತಪ್ಪಿಸಿಕೊಳ್ಳುವುದರಿಂದ ಮಾತ್ರ ಮಗಳು ಆತ್ಮವಿಶ್ವಾಸಿ, ಶಕ್ತಿಶಾಲಿ ಮತ್ತು ಯಶಸ್ವಿ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ. ತಂದೆಯ ಜವಾಬ್ದಾರಿಯು ಮಗಳ ಭವಿಷ್ಯದ ದಾರಿಯನ್ನು ರೂಪಿಸುವುದರಲ್ಲಿ ಬಹುಮುಖವಾಗಿದೆ, ಮತ್ತು ಪೋಷಕರು ಈ ಜವಾಬ್ದಾರಿಯನ್ನು ಸತತವಾಗಿ ಪೂರೈಸಬೇಕು ಎಂದು ಅವರು ಎಚ್ಚರಿಸಿದ್ದಾರೆ.

 

ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳ ಬಾಕಿ ವಸೂಲಿ ಶುರು!

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗೂ ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ದರ ಏರಿಕೆಯ ಹೊರೆ ಬೀಳಲಿದೆ. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟವನ್ನು ಪೂರೈಸುವ ಉದ್ದೇಶದಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆಗೆ ಅನುಮತಿ ನೀಡಿದ್ದು, ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ಬರಲಿದೆ.

ಈ ದರ ಏರಿಕೆಯು 2025-26ನೇ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಜಾರಿಗೊಳಿಸಲಾಗಿದ್ದು, ಏಪ್ರಿಲ್ 2025ರಿಂದ ಮಾರ್ಚ್ 2026ರವರೆಗೆ ಬಳಸಿದ ವಿದ್ಯುತ್‌ಗೆ ಹೆಚ್ಚುವರಿ ಶುಲ್ಕವನ್ನು ಈಗ ವಸೂಲಿ ಮಾಡಲಾಗುತ್ತದೆ. ಈ ಬಾಕಿ ಮೊತ್ತವನ್ನು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳು 2026-27ರ ಬಿಲ್ಲುಗಳಲ್ಲಿ ಸೇರಿಸಲಿವೆ.

ಕೈಗಾರಿಕೆಗಳು, ಹೋಟೆಲ್‌ಗಳು ಹಾಗೂ ಸಿನೆಮಾ ಮಂದಿರಗಳಂತಹ ವಾಣಿಜ್ಯ ಘಟಕಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ದರ ಏರಿಕೆ ಮಾಡಲಾಗಿದೆ. ಇದರಿಂದ ಉತ್ಪಾದನಾ ವೆಚ್ಚ ಮತ್ತು ಸೇವಾ ಶುಲ್ಕಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇತ್ತೀಚಿನ ವರದಿಗಳ ಪ್ರಕಾರ ರಾಜ್ಯದಲ್ಲಿ ವಿದ್ಯುತ್ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಬಳಕೆ ಹೆಚ್ಚು ದಾಖಲಾಗಿದ್ದು, ಈ ತಿಂಗಳು ರಾಜ್ಯದ ಒಟ್ಟು ಬಳಕೆ 373.6 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ. ಬೆಂಗಳೂರು ನಗರವೊಂದೇ ಒಂದು ಸಣ್ಣ ರಾಜ್ಯದಷ್ಟು ವಿದ್ಯುತ್ ಬಳಸುತ್ತಿದೆ ಎನ್ನಲಾಗಿದೆ. ನಗರದ ಪೀಕ್ ಬೇಡಿಕೆ 2,000ರಿಂದ 2,500 ಮೆಗಾವ್ಯಾಟ್ ಮಟ್ಟ ತಲುಪಿದೆ.

ಮಾರ್ಚ್ ತಿಂಗಳಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಎಸಿ ಬಳಕೆ ಹೆಚ್ಚಾದುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಪಂಪ್‌ಸೆಟ್‌ಗಳ ನಿರಂತರ ಬಳಕೆ ವಿದ್ಯುತ್ ಬೇಡಿಕೆ ಹೆಚ್ಚಲು ಪ್ರಮುಖ ಕಾರಣಗಳಾಗಿವೆ. ಜೊತೆಗೆ ಅಡುಗೆ ಅನಿಲದ ಕೊರತೆಯಿಂದ ಮನೆಗಳು ಹಾಗೂ ಹೋಟೆಲ್‌ಗಳು ಇಂಡಕ್ಷನ್ ಸ್ಟೌವ್, ಹೀಟರ್‌ಗಳಿಗೆ ಮೊರೆ ಹೋಗುವ ಸಾಧ್ಯತೆ ಇದ್ದು, ಇದರಿಂದ ಗ್ರಿಡ್ ಮೇಲೆ ಇನ್ನೂ 400ರಿಂದ 500 ಮೆಗಾವ್ಯಾಟ್ ಹೆಚ್ಚುವರಿ ಒತ್ತಡ ಬೀಳುವ ಆತಂಕ ವ್ಯಕ್ತವಾಗಿದೆ.

1.5 ಕೋಟಿ ರೂ.ತೆರಿಗೆ ಬಾಕಿ : ತ.ನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆ ಜಪ್ತಿ!

0

ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ನಿವಾಸವನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಹಲವು ವರ್ಷಗಳಿಂದ ಸುಮಾರು 1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿದಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಪಾವತಿಸಲು ಅನೇಕ ಬಾರಿ ನೋಟಿಸ್ ನೀಡಿದ್ದರೂ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ ಕಾಲೊನಿಯ ಈ ಆಸ್ತಿ 2017ರಿಂದಲೇ ಬಾಕಿದಾರರ ಪಟ್ಟಿಯಲ್ಲಿ ಇದ್ದು, ಫೆಬ್ರವರಿಯಲ್ಲಿ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಮನೆಯನ್ನು ಹಿಂದೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಬಾಡಿಗೆಗೆ ನೀಡಲಾಗಿತ್ತು. ಆ ಅವಧಿಯಿಂದಲೇ ತೆರಿಗೆ ಬಾಕಿ ಹೆಚ್ಚಾಗತೊಡಗಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಮಾರ್ಚ್ 31ರೊಳಗೆ ಪ್ರಮುಖ ಆಸ್ತಿ ತೆರಿಗೆ ಬಾಕಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು GHMC ಆಯುಕ್ತರು ತಿಳಿಸಿದ್ದಾರೆ.

error: Content is protected !!